Ukraine Crisis ಹೆರಿಗೆ ಆಸ್ಪತ್ರೆ ಸೇರಿ ಕಂಡ ಕಂಡಲ್ಲಿ ದಾಳಿ ನಡೆಸುತ್ತಿದೆ ರಷ್ಯಾ!

Ukraine Crisis ಹೆರಿಗೆ ಆಸ್ಪತ್ರೆ ಸೇರಿ ಕಂಡ ಕಂಡಲ್ಲಿ ದಾಳಿ ನಡೆಸುತ್ತಿದೆ ರಷ್ಯಾ!

Published : Mar 11, 2022, 05:47 PM IST

ಭೀಕರವಾಗುತ್ತಿದೆ ಹದಿನಾರನೇ ದಿನದ ಉಕ್ರೇನ್ ರಷ್ಯಾ ಯುದ್ಧ. ಉಕ್ರೇನ್‌ನಲ್ಲಿ ಕಂಡ ಕಂಡಲ್ಲಿ ರಷ್ಯಾದ ಕ್ಷಿಪಣಿ ದಾಳಿ ನಡೆಯುತ್ತಿದೆ. ಇಲ್ಲಿ ಆಸ್ಪತ್ರೆಗಳನ್ನೂ ಪುಟಟಿನ್ ಪಡೆ ಟಾರ್ಗೆಟ್ ಮಾಡುತ್ತಿದೆ. ಶಾಲೆ, ಕಾಲೇಜು, ಆಸ್ಪತ್ರೆ ಸೇರಿದಂತೆ ಎಲ್ಲವೂ ರಷ್ಯಾ ಸೇನೆ ಧ್ವಂಸಗೊಳಿಸುತ್ತಿದೆ.

ಕೀವ್(ಮಾ.11): ಭೀಕರವಾಗುತ್ತಿದೆ ಹದಿನಾರನೇ ದಿನದ ಉಕ್ರೇನ್ ರಷ್ಯಾ ಯುದ್ಧ. ಉಕ್ರೇನ್‌ನಲ್ಲಿ ಕಂಡ ಕಂಡಲ್ಲಿ ರಷ್ಯಾದ ಕ್ಷಿಪಣಿ ದಾಳಿ ನಡೆಯುತ್ತಿದೆ. ಇಲ್ಲಿ ಆಸ್ಪತ್ರೆಗಳನ್ನೂ ಪುಟಟಿನ್ ಪಡೆ ಟಾರ್ಗೆಟ್ ಮಾಡುತ್ತಿದೆ. ಶಾಲೆ, ಕಾಲೇಜು, ಆಸ್ಪತ್ರೆ ಸೇರಿದಂತೆ ಎಲ್ಲವೂ ರಷ್ಯಾ ಸೇನೆ ಧ್ವಂಸಗೊಳಿಸುತ್ತಿದೆ.

ಮರಿಯುಪೋಲ್‌ ನಗರದ ಹೆರಿಗೆ ಆಸ್ಪತ್ರೆಯೊಂದರ ಮೇಲೆ ರಷ್ಯಾ ವೈಮಾನಿಕ ದಾಳಿ ನಡೆಸಿದೆ. ಈ ವೇಳೆ ಇನ್ನೇನು ಹೆರಿಗೆಗೆ ಒಳಗಾಗುತ್ತಿದ್ದ ಮಹಿಳೆಗೆ ತೀವ್ರ ಗಾಯಗಳಾಗಿವೆ. ಸ್ಫೋಟ ಎಷ್ಟುತೀವ್ರವಾಗಿತ್ತು ಎಂದರೆ ಅನೇಕ ಮೈಲಿ ದೂರದವರೆಗೆ ಶಬ್ದ ಕೇಳಿಸಿದೆ. ಅಕ್ಕಪಕ್ಕದ ಕಟ್ಟಡಗಳು ಸ್ಫೋಟದ ರಭಸಕ್ಕೆ ನಡುಗಿ ಹೋಗಿವೆ. ಇನ್ನು ಕೀವ್‌ ಸಮೀಪದ ಝೈತೋಮಿರ್‌ ಎಂಬ ನಗರದ 2 ಆಸ್ಪತ್ರೆಗಳ ಮೇಲೂ ರಷ್ಯಾ ಬಾಂಬ್‌ ಮಳೆಗರೆದಿದೆ. ಇದರಲ್ಲಿ ಒಂದು ಮಕ್ಕಳ ಆಸ್ಪತ್ರೆಯಾಗಿದೆ. ಸುದೈವವಶಾತ್‌ ಇಲ್ಲಿ ಸಾವು ನೋವು ಸಂಭವಿಸಿಲ್ಲ. ಮರಿಯುಪೋಲ್‌ ಆಸ್ಪತ್ರೆ ಮೇಲಿನ ದಾಳಿಯಲ್ಲಿ 17 ಮಂದಿ ಗಾಯಗೊಂಡಿದ್ದು ಮಾತ್ರ ಖಚಿತವಾಗಿದೆ.

ರಷ್ಯಾ ಈ ರೀತಿ ದಾಳಿ ನಡೆಸುತ್ತಿರುವುದಕ್ಕೆ ಉಕ್ರೇನ್‌ ತೀವ್ರ ಖಂಡನೆ ವ್ಯಕ್ತಪಡಿದೆ. ‘ಮಕ್ಕಳ ಆಸ್ಪತ್ರೆ ಮೇಲೂ ದಾಳಿ ನಡೆಸುವಷ್ಟುರಷ್ಯಾ ನಿಷ್ಕರುಣಿಯಾಗಿದೆ. ಇದೊಂದ ದೊಡ್ಡ ಅಪರಾಧ’ ಎಂದು ರಷ್ಯಾ ಅಧ್ಯಕ್ಷ ವೊಲೊದಿಮಿರ್‌ ಜೆಲೆನ್‌ಸ್ಕಿ ಹಾಗೂ ಉಕ್ರೇನ್‌ ಅಧಿಕಾರಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ. ರಷ್ಯಾ ಮೇಲೆ ಪಾಶ್ಚಾತ್ಯ ದೇಶಗಳು ಇನ್ನಷ್ಟುಕಠಿಣ ನಿರ್ಬಂಧಗಳನ್ನು ಹೇರಬೇಕು. ಇದು ನರಮೇಧವಲ್ಲದೇ ಮತ್ತಿನ್ನೇನು ಎಂದು ಕಿಡಿಕಾರಿದ್ದಾರೆ.

24:25ಭಾರತದ ಬಳಿಯೂ ಇದೆ ಮಲಕ್ಕಾ ಜಲಸಂಧಿ ಮುಚ್ಚಿದ್ರೆ ಕೆಲ ದೇಶದ ಕತೆ ಗೋವಿಂದ
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
23:34ಕೇರಳ ಎಲೆಕ್ಷನ್ ಗ್ರೌಂಡ್ ರಿಪೋರ್ಟ್: ಕನ್ನಡಿಗರೇ ಹೆಚ್ಚಿರುವ ಮಂಜೇಶ್ವರದ ಜನ ಹೇಳೋದೇನು?
20:04Suvarna Focus: ಕೆಂಪು ರಕ್ಕಸ ಕೋಟೆ ಧೂಳಿಪಟ, ಭಾರತ ಈಗ ನಕ್ಸಲ್ ಮುಕ್ತ! 59 ವರ್ಷಗಳ ರಕ್ಕಸನಿಗೆ ಶಾಶ್ವತ ಅಂತ್ಯಕ್ರಿಯೆ
53:2759 ವರ್ಷಗಳ ನಕ್ಸಲ್ ಯುಗಾಂತ್ಯ? ಅಮಿತ್ ಶಾ ಮಹತ್ವದ ಘೋಷಣೆ! 59 ವರ್ಷದ ಬಳಿಕ ಭಾರತ ನಿರಾಳ!
16:00ನೆತನ್ಯಾಹು ಹೆಣೆದ 'ಹೆಕ್ಸಾಗನ್' ವ್ಯೂಹಕ್ಕೆ ಮೋದಿ ಸಾರಥಿ: ಇಸ್ರೇಲ್ ಭೇಟಿಯಿಂದ ಜಾಗತಿಕ ರಾಜಕಾರಣದಲ್ಲಿ ಹೊಸ ಸಂಚಲನ!
18:19ಸರ್ಕಾರಿ ನೌಕರರ ಮೇಲೆ ಯೋಗಿ ಕಟ್ಟು ನಿಟ್ಟಿನ ಆಕ್ಷನ್​: ವೇತನ ಬೇಕಿದ್ದವರು ನಿಯಮ ಪಾಲಿಸಿ.. ಏನಿದು ರೂಲ್ಸ್..?
18:27ಒಂದೇ ಒಂದು ಫೋನ್ ಕಾಲ್. ಬದಲಾಯ್ತು ಭಾರತ-ಅಮೆರಿಕ ನಂಟು! ಚೀನಾಕ್ಕೆ ಶಾಕ್, ಭಾರತಕ್ಕೆ ಲಕ್!
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
Read more