Ukraine Crisis ಹೆರಿಗೆ ಆಸ್ಪತ್ರೆ ಸೇರಿ ಕಂಡ ಕಂಡಲ್ಲಿ ದಾಳಿ ನಡೆಸುತ್ತಿದೆ ರಷ್ಯಾ!

Ukraine Crisis ಹೆರಿಗೆ ಆಸ್ಪತ್ರೆ ಸೇರಿ ಕಂಡ ಕಂಡಲ್ಲಿ ದಾಳಿ ನಡೆಸುತ್ತಿದೆ ರಷ್ಯಾ!

Published : Mar 11, 2022, 05:47 PM IST

ಭೀಕರವಾಗುತ್ತಿದೆ ಹದಿನಾರನೇ ದಿನದ ಉಕ್ರೇನ್ ರಷ್ಯಾ ಯುದ್ಧ. ಉಕ್ರೇನ್‌ನಲ್ಲಿ ಕಂಡ ಕಂಡಲ್ಲಿ ರಷ್ಯಾದ ಕ್ಷಿಪಣಿ ದಾಳಿ ನಡೆಯುತ್ತಿದೆ. ಇಲ್ಲಿ ಆಸ್ಪತ್ರೆಗಳನ್ನೂ ಪುಟಟಿನ್ ಪಡೆ ಟಾರ್ಗೆಟ್ ಮಾಡುತ್ತಿದೆ. ಶಾಲೆ, ಕಾಲೇಜು, ಆಸ್ಪತ್ರೆ ಸೇರಿದಂತೆ ಎಲ್ಲವೂ ರಷ್ಯಾ ಸೇನೆ ಧ್ವಂಸಗೊಳಿಸುತ್ತಿದೆ.

ಕೀವ್(ಮಾ.11): ಭೀಕರವಾಗುತ್ತಿದೆ ಹದಿನಾರನೇ ದಿನದ ಉಕ್ರೇನ್ ರಷ್ಯಾ ಯುದ್ಧ. ಉಕ್ರೇನ್‌ನಲ್ಲಿ ಕಂಡ ಕಂಡಲ್ಲಿ ರಷ್ಯಾದ ಕ್ಷಿಪಣಿ ದಾಳಿ ನಡೆಯುತ್ತಿದೆ. ಇಲ್ಲಿ ಆಸ್ಪತ್ರೆಗಳನ್ನೂ ಪುಟಟಿನ್ ಪಡೆ ಟಾರ್ಗೆಟ್ ಮಾಡುತ್ತಿದೆ. ಶಾಲೆ, ಕಾಲೇಜು, ಆಸ್ಪತ್ರೆ ಸೇರಿದಂತೆ ಎಲ್ಲವೂ ರಷ್ಯಾ ಸೇನೆ ಧ್ವಂಸಗೊಳಿಸುತ್ತಿದೆ.

ಮರಿಯುಪೋಲ್‌ ನಗರದ ಹೆರಿಗೆ ಆಸ್ಪತ್ರೆಯೊಂದರ ಮೇಲೆ ರಷ್ಯಾ ವೈಮಾನಿಕ ದಾಳಿ ನಡೆಸಿದೆ. ಈ ವೇಳೆ ಇನ್ನೇನು ಹೆರಿಗೆಗೆ ಒಳಗಾಗುತ್ತಿದ್ದ ಮಹಿಳೆಗೆ ತೀವ್ರ ಗಾಯಗಳಾಗಿವೆ. ಸ್ಫೋಟ ಎಷ್ಟುತೀವ್ರವಾಗಿತ್ತು ಎಂದರೆ ಅನೇಕ ಮೈಲಿ ದೂರದವರೆಗೆ ಶಬ್ದ ಕೇಳಿಸಿದೆ. ಅಕ್ಕಪಕ್ಕದ ಕಟ್ಟಡಗಳು ಸ್ಫೋಟದ ರಭಸಕ್ಕೆ ನಡುಗಿ ಹೋಗಿವೆ. ಇನ್ನು ಕೀವ್‌ ಸಮೀಪದ ಝೈತೋಮಿರ್‌ ಎಂಬ ನಗರದ 2 ಆಸ್ಪತ್ರೆಗಳ ಮೇಲೂ ರಷ್ಯಾ ಬಾಂಬ್‌ ಮಳೆಗರೆದಿದೆ. ಇದರಲ್ಲಿ ಒಂದು ಮಕ್ಕಳ ಆಸ್ಪತ್ರೆಯಾಗಿದೆ. ಸುದೈವವಶಾತ್‌ ಇಲ್ಲಿ ಸಾವು ನೋವು ಸಂಭವಿಸಿಲ್ಲ. ಮರಿಯುಪೋಲ್‌ ಆಸ್ಪತ್ರೆ ಮೇಲಿನ ದಾಳಿಯಲ್ಲಿ 17 ಮಂದಿ ಗಾಯಗೊಂಡಿದ್ದು ಮಾತ್ರ ಖಚಿತವಾಗಿದೆ.

ರಷ್ಯಾ ಈ ರೀತಿ ದಾಳಿ ನಡೆಸುತ್ತಿರುವುದಕ್ಕೆ ಉಕ್ರೇನ್‌ ತೀವ್ರ ಖಂಡನೆ ವ್ಯಕ್ತಪಡಿದೆ. ‘ಮಕ್ಕಳ ಆಸ್ಪತ್ರೆ ಮೇಲೂ ದಾಳಿ ನಡೆಸುವಷ್ಟುರಷ್ಯಾ ನಿಷ್ಕರುಣಿಯಾಗಿದೆ. ಇದೊಂದ ದೊಡ್ಡ ಅಪರಾಧ’ ಎಂದು ರಷ್ಯಾ ಅಧ್ಯಕ್ಷ ವೊಲೊದಿಮಿರ್‌ ಜೆಲೆನ್‌ಸ್ಕಿ ಹಾಗೂ ಉಕ್ರೇನ್‌ ಅಧಿಕಾರಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ. ರಷ್ಯಾ ಮೇಲೆ ಪಾಶ್ಚಾತ್ಯ ದೇಶಗಳು ಇನ್ನಷ್ಟುಕಠಿಣ ನಿರ್ಬಂಧಗಳನ್ನು ಹೇರಬೇಕು. ಇದು ನರಮೇಧವಲ್ಲದೇ ಮತ್ತಿನ್ನೇನು ಎಂದು ಕಿಡಿಕಾರಿದ್ದಾರೆ.

24:09ದೀದಿ ಕೋಟೆಯಲ್ಲಿ ಮಹಾಬಿರುಕು.. ಏನು ಕಾರಣ? ಗಜಕೇಸರಿ ವ್ಯೂಹ.. ದೀದಿ ದಿಗ್ಬಂಧನ.. ಏನಿದರ ಗುಟ್ಟು?
24:26ಪ್ಲಾಸ್ಟಿಕ್ ನೋಟು... ಕರೆನ್ಸಿ ಕ್ರಾಂತಿ! ಕಾಗದದ ನೋಟುಗಳ ಆಯಸ್ಸು ಖತಂ, ಮತ್ತೆ ಡಿಮಾನಟೈಸೇಶನ್..?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
24:48ಬೆಂಗಳೂರಲ್ಲೂ ಮೊಳಗುತ್ತಾ ವಿಜಯ್ ವಿಸಿಲ್ ಸದ್ದು? ತಮಿಳು ಮತದಾರರು ಹೆಚ್ಚಿರುವ ವಾರ್ಡ್​ಗಳಲ್ಲಿ ಸ್ಪರ್ಧಿಸುತ್ತಾ ಟಿವಿಕೆ?
18:54ಐದೇ ದಿನಕ್ಕೆ 2 ಕೋಟಿ ಜಿರಳೆ ಸೈನಿಕರು, ಜೆನ್‌ಝೀ ಅಕ್ರೋಶವೋ, ಕ್ರಾಂತಿಯ ಕಿಚ್ಚೋ?
30:39‘ದೇಶಕ್ಕೆ ಆರ್ಥಿಕ ತೂಫಾನ್ ಬರಲಿದೆ.. ದೇಶ ಮಾರಿದ್ದಾರೆ’ ಪ್ರಧಾನಿ ಮೋದಿ ದೇಶದ್ರೋಹಿ ಎಂದು ರಾಹುಲ್ ವಿವಾದ!
21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
47:39ಸೋಷಿಯಲ್ ಮೀಡಿಯಾದಲ್ಲಿ 'ಕಾಕ್ರೋಚ್ ಜನತಾ ಪಾರ್ಟಿ' ಕೋಲಾಹಲ: GenZ ಹೋರಾಟವೋ, ಬರೀ ಕ್ರೇಜೋ?
20:58ರಾಜೀವ್ ಗಾಂಧಿ ಹತ್ಯೆ ಮಾಡಿದ್ದ LTTE ಪ್ರಭಾಕರನ್ ಸ್ಮರಿಸಿದ ತಮಿಳುನಾಡು ಸಿಎಂ ವಿಜಯ್: ಕಾಂಗ್ರೆಸ್‌ಗೆ ಇಕ್ಕಟ್ಟು!
45:25ಸಾಮಾನ್ಯ ಜನರ ಜೇಬಿಗೆ ಕೈ ಹಾಕಿದ ಮೋದಿ ಸರ್ಕಾರ: ಮುಂದೈತಾ ಮಾರಿಹಬ್ಬ?
Read more