Ukraine Crisis ಹೆರಿಗೆ ಆಸ್ಪತ್ರೆ ಸೇರಿ ಕಂಡ ಕಂಡಲ್ಲಿ ದಾಳಿ ನಡೆಸುತ್ತಿದೆ ರಷ್ಯಾ!

Ukraine Crisis ಹೆರಿಗೆ ಆಸ್ಪತ್ರೆ ಸೇರಿ ಕಂಡ ಕಂಡಲ್ಲಿ ದಾಳಿ ನಡೆಸುತ್ತಿದೆ ರಷ್ಯಾ!

Published : Mar 11, 2022, 05:47 PM IST

ಭೀಕರವಾಗುತ್ತಿದೆ ಹದಿನಾರನೇ ದಿನದ ಉಕ್ರೇನ್ ರಷ್ಯಾ ಯುದ್ಧ. ಉಕ್ರೇನ್‌ನಲ್ಲಿ ಕಂಡ ಕಂಡಲ್ಲಿ ರಷ್ಯಾದ ಕ್ಷಿಪಣಿ ದಾಳಿ ನಡೆಯುತ್ತಿದೆ. ಇಲ್ಲಿ ಆಸ್ಪತ್ರೆಗಳನ್ನೂ ಪುಟಟಿನ್ ಪಡೆ ಟಾರ್ಗೆಟ್ ಮಾಡುತ್ತಿದೆ. ಶಾಲೆ, ಕಾಲೇಜು, ಆಸ್ಪತ್ರೆ ಸೇರಿದಂತೆ ಎಲ್ಲವೂ ರಷ್ಯಾ ಸೇನೆ ಧ್ವಂಸಗೊಳಿಸುತ್ತಿದೆ.

ಕೀವ್(ಮಾ.11): ಭೀಕರವಾಗುತ್ತಿದೆ ಹದಿನಾರನೇ ದಿನದ ಉಕ್ರೇನ್ ರಷ್ಯಾ ಯುದ್ಧ. ಉಕ್ರೇನ್‌ನಲ್ಲಿ ಕಂಡ ಕಂಡಲ್ಲಿ ರಷ್ಯಾದ ಕ್ಷಿಪಣಿ ದಾಳಿ ನಡೆಯುತ್ತಿದೆ. ಇಲ್ಲಿ ಆಸ್ಪತ್ರೆಗಳನ್ನೂ ಪುಟಟಿನ್ ಪಡೆ ಟಾರ್ಗೆಟ್ ಮಾಡುತ್ತಿದೆ. ಶಾಲೆ, ಕಾಲೇಜು, ಆಸ್ಪತ್ರೆ ಸೇರಿದಂತೆ ಎಲ್ಲವೂ ರಷ್ಯಾ ಸೇನೆ ಧ್ವಂಸಗೊಳಿಸುತ್ತಿದೆ.

ಮರಿಯುಪೋಲ್‌ ನಗರದ ಹೆರಿಗೆ ಆಸ್ಪತ್ರೆಯೊಂದರ ಮೇಲೆ ರಷ್ಯಾ ವೈಮಾನಿಕ ದಾಳಿ ನಡೆಸಿದೆ. ಈ ವೇಳೆ ಇನ್ನೇನು ಹೆರಿಗೆಗೆ ಒಳಗಾಗುತ್ತಿದ್ದ ಮಹಿಳೆಗೆ ತೀವ್ರ ಗಾಯಗಳಾಗಿವೆ. ಸ್ಫೋಟ ಎಷ್ಟುತೀವ್ರವಾಗಿತ್ತು ಎಂದರೆ ಅನೇಕ ಮೈಲಿ ದೂರದವರೆಗೆ ಶಬ್ದ ಕೇಳಿಸಿದೆ. ಅಕ್ಕಪಕ್ಕದ ಕಟ್ಟಡಗಳು ಸ್ಫೋಟದ ರಭಸಕ್ಕೆ ನಡುಗಿ ಹೋಗಿವೆ. ಇನ್ನು ಕೀವ್‌ ಸಮೀಪದ ಝೈತೋಮಿರ್‌ ಎಂಬ ನಗರದ 2 ಆಸ್ಪತ್ರೆಗಳ ಮೇಲೂ ರಷ್ಯಾ ಬಾಂಬ್‌ ಮಳೆಗರೆದಿದೆ. ಇದರಲ್ಲಿ ಒಂದು ಮಕ್ಕಳ ಆಸ್ಪತ್ರೆಯಾಗಿದೆ. ಸುದೈವವಶಾತ್‌ ಇಲ್ಲಿ ಸಾವು ನೋವು ಸಂಭವಿಸಿಲ್ಲ. ಮರಿಯುಪೋಲ್‌ ಆಸ್ಪತ್ರೆ ಮೇಲಿನ ದಾಳಿಯಲ್ಲಿ 17 ಮಂದಿ ಗಾಯಗೊಂಡಿದ್ದು ಮಾತ್ರ ಖಚಿತವಾಗಿದೆ.

ರಷ್ಯಾ ಈ ರೀತಿ ದಾಳಿ ನಡೆಸುತ್ತಿರುವುದಕ್ಕೆ ಉಕ್ರೇನ್‌ ತೀವ್ರ ಖಂಡನೆ ವ್ಯಕ್ತಪಡಿದೆ. ‘ಮಕ್ಕಳ ಆಸ್ಪತ್ರೆ ಮೇಲೂ ದಾಳಿ ನಡೆಸುವಷ್ಟುರಷ್ಯಾ ನಿಷ್ಕರುಣಿಯಾಗಿದೆ. ಇದೊಂದ ದೊಡ್ಡ ಅಪರಾಧ’ ಎಂದು ರಷ್ಯಾ ಅಧ್ಯಕ್ಷ ವೊಲೊದಿಮಿರ್‌ ಜೆಲೆನ್‌ಸ್ಕಿ ಹಾಗೂ ಉಕ್ರೇನ್‌ ಅಧಿಕಾರಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ. ರಷ್ಯಾ ಮೇಲೆ ಪಾಶ್ಚಾತ್ಯ ದೇಶಗಳು ಇನ್ನಷ್ಟುಕಠಿಣ ನಿರ್ಬಂಧಗಳನ್ನು ಹೇರಬೇಕು. ಇದು ನರಮೇಧವಲ್ಲದೇ ಮತ್ತಿನ್ನೇನು ಎಂದು ಕಿಡಿಕಾರಿದ್ದಾರೆ.

24:50ಮಹಾರಾಕ್ಷಸ El Nino ಜನ್ಮ ರಹಸ್ಯ ; 2027ರ ಬೇಸಿಗೆಯ ಎಚ್ಚರಿಕೆ ನೀಡದ ವಿಜ್ಞಾನಿಗಳು
20:322029ರ ಮಹಾಭಾರತ: ಜಿರಳೆಗಳೇ ಕಿಂಗ್ ಮೇಕರ್..! Gen Zಗಳಿಗೆ ಕನೆಕ್ಟ್ ಆಗಲು ಹೇಗಿದೆ ರಾಜಕೀಯ ನಾಯಕರ ಪ್ರಯತ್ನ..?
23:17ಪ್ಲಾಸ್ಟಿಕ್ ನೋಟ್‌ಗೆ ಹಣಕಾಸು ಸಚಿವಾಲಯ ಗ್ರೀನ್​​ ಸಿಗ್ನಲ್​​​ ! ಹರಿಯಲ್ಲ, ನೆನೆಯಲ್ಲ, ಕಳ್ಳನೋಟು ಸಾಧ್ಯವಿಲ್ಲ, ಹೇಗಿರುತ್ತೆ ಹೊಸ ಕರೆನ್ಸಿ..?
20:56Suvarna Focus: ಜಂತರ್ ಮಂತರ್‌ನಲ್ಲಿ ನಡೆದಿದ್ದೇನು? ಬೆಚ್ಚಿಬೀಳಿಸಿದ ರಿಪೋರ್ಟ್! ಆಪರೇಷನ್ 2873 ಅಸಲಿ ಸೀಕ್ರೆಟ್?
50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
Read more