Ukraine Crisis ಹೆರಿಗೆ ಆಸ್ಪತ್ರೆ ಸೇರಿ ಕಂಡ ಕಂಡಲ್ಲಿ ದಾಳಿ ನಡೆಸುತ್ತಿದೆ ರಷ್ಯಾ!

Ukraine Crisis ಹೆರಿಗೆ ಆಸ್ಪತ್ರೆ ಸೇರಿ ಕಂಡ ಕಂಡಲ್ಲಿ ದಾಳಿ ನಡೆಸುತ್ತಿದೆ ರಷ್ಯಾ!

Published : Mar 11, 2022, 05:47 PM IST

ಭೀಕರವಾಗುತ್ತಿದೆ ಹದಿನಾರನೇ ದಿನದ ಉಕ್ರೇನ್ ರಷ್ಯಾ ಯುದ್ಧ. ಉಕ್ರೇನ್‌ನಲ್ಲಿ ಕಂಡ ಕಂಡಲ್ಲಿ ರಷ್ಯಾದ ಕ್ಷಿಪಣಿ ದಾಳಿ ನಡೆಯುತ್ತಿದೆ. ಇಲ್ಲಿ ಆಸ್ಪತ್ರೆಗಳನ್ನೂ ಪುಟಟಿನ್ ಪಡೆ ಟಾರ್ಗೆಟ್ ಮಾಡುತ್ತಿದೆ. ಶಾಲೆ, ಕಾಲೇಜು, ಆಸ್ಪತ್ರೆ ಸೇರಿದಂತೆ ಎಲ್ಲವೂ ರಷ್ಯಾ ಸೇನೆ ಧ್ವಂಸಗೊಳಿಸುತ್ತಿದೆ.

ಕೀವ್(ಮಾ.11): ಭೀಕರವಾಗುತ್ತಿದೆ ಹದಿನಾರನೇ ದಿನದ ಉಕ್ರೇನ್ ರಷ್ಯಾ ಯುದ್ಧ. ಉಕ್ರೇನ್‌ನಲ್ಲಿ ಕಂಡ ಕಂಡಲ್ಲಿ ರಷ್ಯಾದ ಕ್ಷಿಪಣಿ ದಾಳಿ ನಡೆಯುತ್ತಿದೆ. ಇಲ್ಲಿ ಆಸ್ಪತ್ರೆಗಳನ್ನೂ ಪುಟಟಿನ್ ಪಡೆ ಟಾರ್ಗೆಟ್ ಮಾಡುತ್ತಿದೆ. ಶಾಲೆ, ಕಾಲೇಜು, ಆಸ್ಪತ್ರೆ ಸೇರಿದಂತೆ ಎಲ್ಲವೂ ರಷ್ಯಾ ಸೇನೆ ಧ್ವಂಸಗೊಳಿಸುತ್ತಿದೆ.

ಮರಿಯುಪೋಲ್‌ ನಗರದ ಹೆರಿಗೆ ಆಸ್ಪತ್ರೆಯೊಂದರ ಮೇಲೆ ರಷ್ಯಾ ವೈಮಾನಿಕ ದಾಳಿ ನಡೆಸಿದೆ. ಈ ವೇಳೆ ಇನ್ನೇನು ಹೆರಿಗೆಗೆ ಒಳಗಾಗುತ್ತಿದ್ದ ಮಹಿಳೆಗೆ ತೀವ್ರ ಗಾಯಗಳಾಗಿವೆ. ಸ್ಫೋಟ ಎಷ್ಟುತೀವ್ರವಾಗಿತ್ತು ಎಂದರೆ ಅನೇಕ ಮೈಲಿ ದೂರದವರೆಗೆ ಶಬ್ದ ಕೇಳಿಸಿದೆ. ಅಕ್ಕಪಕ್ಕದ ಕಟ್ಟಡಗಳು ಸ್ಫೋಟದ ರಭಸಕ್ಕೆ ನಡುಗಿ ಹೋಗಿವೆ. ಇನ್ನು ಕೀವ್‌ ಸಮೀಪದ ಝೈತೋಮಿರ್‌ ಎಂಬ ನಗರದ 2 ಆಸ್ಪತ್ರೆಗಳ ಮೇಲೂ ರಷ್ಯಾ ಬಾಂಬ್‌ ಮಳೆಗರೆದಿದೆ. ಇದರಲ್ಲಿ ಒಂದು ಮಕ್ಕಳ ಆಸ್ಪತ್ರೆಯಾಗಿದೆ. ಸುದೈವವಶಾತ್‌ ಇಲ್ಲಿ ಸಾವು ನೋವು ಸಂಭವಿಸಿಲ್ಲ. ಮರಿಯುಪೋಲ್‌ ಆಸ್ಪತ್ರೆ ಮೇಲಿನ ದಾಳಿಯಲ್ಲಿ 17 ಮಂದಿ ಗಾಯಗೊಂಡಿದ್ದು ಮಾತ್ರ ಖಚಿತವಾಗಿದೆ.

ರಷ್ಯಾ ಈ ರೀತಿ ದಾಳಿ ನಡೆಸುತ್ತಿರುವುದಕ್ಕೆ ಉಕ್ರೇನ್‌ ತೀವ್ರ ಖಂಡನೆ ವ್ಯಕ್ತಪಡಿದೆ. ‘ಮಕ್ಕಳ ಆಸ್ಪತ್ರೆ ಮೇಲೂ ದಾಳಿ ನಡೆಸುವಷ್ಟುರಷ್ಯಾ ನಿಷ್ಕರುಣಿಯಾಗಿದೆ. ಇದೊಂದ ದೊಡ್ಡ ಅಪರಾಧ’ ಎಂದು ರಷ್ಯಾ ಅಧ್ಯಕ್ಷ ವೊಲೊದಿಮಿರ್‌ ಜೆಲೆನ್‌ಸ್ಕಿ ಹಾಗೂ ಉಕ್ರೇನ್‌ ಅಧಿಕಾರಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ. ರಷ್ಯಾ ಮೇಲೆ ಪಾಶ್ಚಾತ್ಯ ದೇಶಗಳು ಇನ್ನಷ್ಟುಕಠಿಣ ನಿರ್ಬಂಧಗಳನ್ನು ಹೇರಬೇಕು. ಇದು ನರಮೇಧವಲ್ಲದೇ ಮತ್ತಿನ್ನೇನು ಎಂದು ಕಿಡಿಕಾರಿದ್ದಾರೆ.

45:25ಸಾಮಾನ್ಯ ಜನರ ಜೇಬಿಗೆ ಕೈ ಹಾಕಿದ ಮೋದಿ ಸರ್ಕಾರ: ಮುಂದೈತಾ ಮಾರಿಹಬ್ಬ?
20:46ಕನಸಿಗೆ ಎದುರಾಯ್ತು ಚತುರ್ಮುಖ ಕಂಟಕ! ಭಾರತದ ಖಜಾನೆ ಖಾಲಿ, ಬಂಗಾರವೇ ವಿಲನ್!
22:50ದಳಪತಿ ಹೊಡೆತಕ್ಕೆ ಅಮ್ಮನ ಕೋಟೆ ಛಿದ್ರ, ವಿಜಯ್‌ಗೆ ಜೈ ಎಂದ ಜಯಲಲಿತಾ ಪಕ್ಷದ 30 ಶಾಸಕರು
21:28ಸಾಲ ಮಾಡಿ ತುಪ್ಪ ತಿನ್ನಿಸಬೇಕಾ ಮುಖ್ಯಮಂತ್ರಿ ವಿಜಯ್? ಏನ್ ಮಾಡ್ತಾರೆ ದಳಪತಿ ?
19:23₹10 ಲಕ್ಷ ಕೋಟಿ ಸಾಲದ ಬೆಟ್ಟ.. ಹೊಸ ಸರ್ಕಾರಕ್ಕೆ ಬಿಗ್ ಚಾಲೆಂಜ್: ವಿಜಯ್ ವಿಜಯ ತಂತ್ರವೇನು?
19:54ಮುಖ್ಯಮಂತ್ರಿ ವಿಜಯ್ ಫಸ್ಟ್ ಡೇ ಫಸ್ಟ್ ಶೋ: ಭರವಸೆಗಳ ಬೆಟ್ಟ, ಖಜಾನೆಗೆ ಭಾರಿ ಹೊರೆ!
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
24:25ಭಾರತದ ಬಳಿಯೂ ಇದೆ ಮಲಕ್ಕಾ ಜಲಸಂಧಿ ಮುಚ್ಚಿದ್ರೆ ಕೆಲ ದೇಶದ ಕತೆ ಗೋವಿಂದ
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
Read more