Ukraine Crisis ಹೆರಿಗೆ ಆಸ್ಪತ್ರೆ ಸೇರಿ ಕಂಡ ಕಂಡಲ್ಲಿ ದಾಳಿ ನಡೆಸುತ್ತಿದೆ ರಷ್ಯಾ!

Ukraine Crisis ಹೆರಿಗೆ ಆಸ್ಪತ್ರೆ ಸೇರಿ ಕಂಡ ಕಂಡಲ್ಲಿ ದಾಳಿ ನಡೆಸುತ್ತಿದೆ ರಷ್ಯಾ!

Published : Mar 11, 2022, 05:47 PM IST

ಭೀಕರವಾಗುತ್ತಿದೆ ಹದಿನಾರನೇ ದಿನದ ಉಕ್ರೇನ್ ರಷ್ಯಾ ಯುದ್ಧ. ಉಕ್ರೇನ್‌ನಲ್ಲಿ ಕಂಡ ಕಂಡಲ್ಲಿ ರಷ್ಯಾದ ಕ್ಷಿಪಣಿ ದಾಳಿ ನಡೆಯುತ್ತಿದೆ. ಇಲ್ಲಿ ಆಸ್ಪತ್ರೆಗಳನ್ನೂ ಪುಟಟಿನ್ ಪಡೆ ಟಾರ್ಗೆಟ್ ಮಾಡುತ್ತಿದೆ. ಶಾಲೆ, ಕಾಲೇಜು, ಆಸ್ಪತ್ರೆ ಸೇರಿದಂತೆ ಎಲ್ಲವೂ ರಷ್ಯಾ ಸೇನೆ ಧ್ವಂಸಗೊಳಿಸುತ್ತಿದೆ.

ಕೀವ್(ಮಾ.11): ಭೀಕರವಾಗುತ್ತಿದೆ ಹದಿನಾರನೇ ದಿನದ ಉಕ್ರೇನ್ ರಷ್ಯಾ ಯುದ್ಧ. ಉಕ್ರೇನ್‌ನಲ್ಲಿ ಕಂಡ ಕಂಡಲ್ಲಿ ರಷ್ಯಾದ ಕ್ಷಿಪಣಿ ದಾಳಿ ನಡೆಯುತ್ತಿದೆ. ಇಲ್ಲಿ ಆಸ್ಪತ್ರೆಗಳನ್ನೂ ಪುಟಟಿನ್ ಪಡೆ ಟಾರ್ಗೆಟ್ ಮಾಡುತ್ತಿದೆ. ಶಾಲೆ, ಕಾಲೇಜು, ಆಸ್ಪತ್ರೆ ಸೇರಿದಂತೆ ಎಲ್ಲವೂ ರಷ್ಯಾ ಸೇನೆ ಧ್ವಂಸಗೊಳಿಸುತ್ತಿದೆ.

ಮರಿಯುಪೋಲ್‌ ನಗರದ ಹೆರಿಗೆ ಆಸ್ಪತ್ರೆಯೊಂದರ ಮೇಲೆ ರಷ್ಯಾ ವೈಮಾನಿಕ ದಾಳಿ ನಡೆಸಿದೆ. ಈ ವೇಳೆ ಇನ್ನೇನು ಹೆರಿಗೆಗೆ ಒಳಗಾಗುತ್ತಿದ್ದ ಮಹಿಳೆಗೆ ತೀವ್ರ ಗಾಯಗಳಾಗಿವೆ. ಸ್ಫೋಟ ಎಷ್ಟುತೀವ್ರವಾಗಿತ್ತು ಎಂದರೆ ಅನೇಕ ಮೈಲಿ ದೂರದವರೆಗೆ ಶಬ್ದ ಕೇಳಿಸಿದೆ. ಅಕ್ಕಪಕ್ಕದ ಕಟ್ಟಡಗಳು ಸ್ಫೋಟದ ರಭಸಕ್ಕೆ ನಡುಗಿ ಹೋಗಿವೆ. ಇನ್ನು ಕೀವ್‌ ಸಮೀಪದ ಝೈತೋಮಿರ್‌ ಎಂಬ ನಗರದ 2 ಆಸ್ಪತ್ರೆಗಳ ಮೇಲೂ ರಷ್ಯಾ ಬಾಂಬ್‌ ಮಳೆಗರೆದಿದೆ. ಇದರಲ್ಲಿ ಒಂದು ಮಕ್ಕಳ ಆಸ್ಪತ್ರೆಯಾಗಿದೆ. ಸುದೈವವಶಾತ್‌ ಇಲ್ಲಿ ಸಾವು ನೋವು ಸಂಭವಿಸಿಲ್ಲ. ಮರಿಯುಪೋಲ್‌ ಆಸ್ಪತ್ರೆ ಮೇಲಿನ ದಾಳಿಯಲ್ಲಿ 17 ಮಂದಿ ಗಾಯಗೊಂಡಿದ್ದು ಮಾತ್ರ ಖಚಿತವಾಗಿದೆ.

ರಷ್ಯಾ ಈ ರೀತಿ ದಾಳಿ ನಡೆಸುತ್ತಿರುವುದಕ್ಕೆ ಉಕ್ರೇನ್‌ ತೀವ್ರ ಖಂಡನೆ ವ್ಯಕ್ತಪಡಿದೆ. ‘ಮಕ್ಕಳ ಆಸ್ಪತ್ರೆ ಮೇಲೂ ದಾಳಿ ನಡೆಸುವಷ್ಟುರಷ್ಯಾ ನಿಷ್ಕರುಣಿಯಾಗಿದೆ. ಇದೊಂದ ದೊಡ್ಡ ಅಪರಾಧ’ ಎಂದು ರಷ್ಯಾ ಅಧ್ಯಕ್ಷ ವೊಲೊದಿಮಿರ್‌ ಜೆಲೆನ್‌ಸ್ಕಿ ಹಾಗೂ ಉಕ್ರೇನ್‌ ಅಧಿಕಾರಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ. ರಷ್ಯಾ ಮೇಲೆ ಪಾಶ್ಚಾತ್ಯ ದೇಶಗಳು ಇನ್ನಷ್ಟುಕಠಿಣ ನಿರ್ಬಂಧಗಳನ್ನು ಹೇರಬೇಕು. ಇದು ನರಮೇಧವಲ್ಲದೇ ಮತ್ತಿನ್ನೇನು ಎಂದು ಕಿಡಿಕಾರಿದ್ದಾರೆ.

50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
23:56ಹಾರ್ಮುಜ್ ಬಿಕ್ಕಟ್ಟಿನ ನಂತರ ಭಾರತದ ಭವಿಷ್ಯವೇನು? ಬಂಗಾರ ₹50,000 ಕುಸಿತ..! ಅಗ್ಗವಾಗುತ್ತಾ ಪೆಟ್ರೋಲ್ ದರ? ಮೋದಿ ಹೊಸ ಲೆಕ್ಕಾಚಾರ!
39:28ಅಯೋಧ್ಯೆ ರಾಮಮಂದಿರ: ಪ್ರಾಜೆಕ್ಟ್ ಚೀಫ್ ನೃಪೇಂದ್ರ ಮಿಶ್ರಾ ಜೊತೆ ಎಕ್ಸ್‌ಕ್ಲೂಸಿವ್ ಸಂದರ್ಶನ
22:49ವಿಧಾನಸಭೆಯಲ್ಲೂ ಸಿಎಂ ವಿಜಯ್ ಪಂಚಿಂಗ್ ಡೈಲಾಗ್, ದ್ರಾವಿಡ ನಾಡಿನಲ್ಲಿ ರಾಜಕೀಯ ರಂಗು ಬದಲು
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
19:59Suvarna Focus: ರುದ್ರಪ್ರಯಾಗದಲ್ಲಿ ನಿಹಾಂಗ್ ಯೋಧರ ರಣಕಹಳೆ; ಮತ್ತೆ ಕಾಡುತ್ತಿದೆ 1984ರ ‘ಆಪರೇಷನ್ ಬ್ಲ್ಯೂ ಸ್ಟಾರ್’ ಕರಾಳ ನೆನಪು!
Read more