Mar 18, 2021, 11:10 AM IST
ನವದೆಹಲಿ(ಮಾ.18): ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಭಾರತದ ಪ್ರಜಾಪ್ರಭುತ್ವ ವ್ಯವಸ್ಥೆಯನ್ನೇ ಅಣಕ ಮಾಡುವಂತೆ ಮಾತನಾಡಿದ್ದಾರೆ. ಸದ್ದಾಂ ಹುಸೇನ್, ಗಡಾಫಿ ಕೂಡಾ ಚುನಾವಣೆ ಗೆಲ್ಲುತ್ತಿದ್ದರು. ಪ್ರಜಾಪ್ರಭುತ್ವ ವ್ಯವಸ್ಥೆ ಇನ್ನಷ್ಟು ಅವನತಿ ಕಡೆ ಸಾಗಲಿದೆ ಎಂದು ಅವರು ನೀಡಿರುವ ಹೇಳಿಕೆ ಸದ್ಯ ಭಾರೀ ವಿವಾದ ಸೃಷ್ಟಿಸಿದೆ.
ರಾಹುಲ್ ಗಾಂಧಿ ಭಾರತದ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಲಿಬಿಯಾ ಹಾಗೂ ಇರಾಕ್ಗೆ ಹೋಲಿಕೆ ಮಾಡಿದರಾ? ಚುನಾವಣೆ ಗೆಲ್ಲಲಾಗದ್ದಕ್ಕೆ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಗೇಲಿ ಮಾಡಿದರಾ? ಎಂಬ ಪ್ರಶ್ನೆಗಳೂ ಮೂಡಿವೆ. ಈ ಕುರಿತಾದ ಒಂದು ವರದಿ ಇಲ್ಲಿದೆ ನೋಡಿ