News Hour: ಇಂಡಿ ಒಕ್ಕೂಟವನ್ನು ಹಿಂಡಿ ಹಿಪ್ಪೆ ಮಾಡ್ತಾರಾ ಅಖಿಲೇಶ್‌ ಯಾದವ್‌?

News Hour: ಇಂಡಿ ಒಕ್ಕೂಟವನ್ನು ಹಿಂಡಿ ಹಿಪ್ಪೆ ಮಾಡ್ತಾರಾ ಅಖಿಲೇಶ್‌ ಯಾದವ್‌?

Published : Oct 20, 2023, 11:43 PM IST

ಇಂಡಿ ಒಕ್ಕೂಟಕ್ಕೆ ಬಂಡಾಯದ ಬಿಸಿ ಎದುರಾಗಿದೆ. ಆಪ್‌ ಬಳಿಕ ಕಾಂಗ್ರೆಸ್‌ ನಾಯಕರಿಗೆ ಅಖಿಲೇಶ್‌ ಯಾದವ್‌ ಆಘಾತ ನೀಡಿದ್ದಾರೆ. ಮಧ್ಯಪ್ರದೇಶದಲ್ಲಿ ಬಿಕ್ಕಟ್ಟು ಎದುರಾಗಿರುವ ನಡುವೆ ಇಂಡಿ ಒಕ್ಕೂಟದಿಂದ ಸಮಾಜವಾದಿ ಪಕ್ಷ ಹೊರನಡೆಯಲಿದೆಯೇ ಎನ್ನುವ ಅನುಮಾನ ವ್ಯಕ್ತವಾಗಿದೆ. 

ಬೆಂಗಳೂರು (ಅ. 20):  2024ರ ಮಹಾಭಾರತಕ್ಕೆ ಪಂಚರಾಜ್ಯ ಚುನಾವಣೆಯೇ ಸೆಮಿಫೈನಲ್. ಎನ್ಡಿಎ V/S ಇಂಡಿ ಒಕ್ಕೂಟದ ಯುದ್ಧ ಈಗಲೇ ಶುರುವಾಗಿದೆ. ಆದರೆ, ಮಧ್ಯ ಪ್ರದೇಶದಲ್ಲಿ ಕಾಂಗ್ರೆಸ್ ಪಟ್ಟಿ ಬಿಡುಗಡೆ ಬಳಿಕ ಇಂಡಿಯಾ ಮೈತ್ರಿಕೂಟದಲ್ಲಿ ಭಿನ್ನಮತ ಸ್ಫೋಟಗೊಂಡಿದೆ.

ಉತ್ತರ ಪ್ರದೇಶ ಬಿಟ್ಟರೆ ಮಧ್ಯಪ್ರದೇಶದಲ್ಲೇ ಸಮಾಜವಾದಿ ಪಕ್ಷ ತನ್ನದೇ ಆದ ಮತ ಬ್ಯಾಂಕ್ ಹೊಂದಿದೆ.. 2018ರ ಮಧ್ಯಪ್ರದೇಶದ 52 ಕ್ಷೇತ್ರಗಳಲ್ಲಿ ಸ್ಪರ್ಧಿಸಿ ಒಂದೇ ಸ್ಥಾನದಲ್ಲಿ ಗೆದ್ದಿತ್ತು. ಆದರೆ, ಈ ಬಾರಿ ಇಂಡಿಯಾ ಮೈತ್ರಿ ರಚನೆ ಬಳಿಕ ಕಾಂಗ್ರೆಸ್ ಜತೆಗೂಡಿ ಕನಿಷ್ಠ 12 ಸ್ಥಾನ ಬಿಟ್ಟು ಕೊಡಲು ಬೇಡಿಕೆ ಇಟ್ಟಿತ್ತು. ಆದರೆ ಒಂದೂ ಸ್ಥಾನ ಬಿಟ್ಟು ಕೊಡದೇ, ಇಂಡಿಯಾ ಮೈತ್ರಿ ಲೋಕಸಭೆಗೆ ಮಾತ್ರ ಎಂಬ ಮಧ್ಯ ಪ್ರದೇಶ ಮಾಜಿ ಸಿಎಂ ಕಮಲನಾಥ್ ಹೇಳಿಕೆ ಅಖಿಲೇಶ್ ಯಾದವ್ ಪಿತ್ತ ನೆತ್ತಿಗೇರಿಸಿದೆ.

'ದೇಶಭಕ್ತ ಎನಿಸಿಕೊಳ್ಳಲು ನೆರೆಯ ದೇಶವನ್ನು ವಿರೋಧಿಸಲೇಬೇಕು ಅಂತೇನಿಲ್ಲ..', ಬಾಂಬೆ ಹೈಕೋರ್ಟ್‌ ತೀರ್ಪು!

ಮಾಜಿ ಸಿಎಂ ಕಮಲನಾಥ್ ಈ ಹೇಳಿಕೆಯಿಂದ ಸಿಡಿದೆದ್ದ ಅಖಿಲೇಶ್ ಯಾದವ್, ಕಾಂಗ್ರೆಸ್ ನಾಯಕರು ಇಂಡಿಯಾ ಮೈತ್ರಿಕೂಟ ಲೋಕಸಭೆಗೆ ಮಾತ್ರನಾ? ವಿಧಾನಸಭೆಗೆ ಇಲ್ವಾ ಎಂಬುದನ್ನ ಸ್ಪಷ್ಟಪಡಿಸಲಿ.. ಮುಂದಿನ ಲೋಕಸಭೆ ಈಗ ಅವರ ವ್ಯವಹಾರ ಹೇಗಿದೆಯೋ ಅದೇ ರೀತಿ ನಮ್ಮ ವ್ಯವಹಾರ ಇರುತ್ತೆ ಅನ್ನುತ್ತಲೇ ಮೈತ್ರಿಯಿಂದ ಹೊರಬರುವ ಮುನ್ಸೂಚನೆ ನೀಡಿದ್ದಾರೆ. ಮಧ್ಯ ಪ್ರದೇಶದಲ್ಲಿ 31 ಕ್ಷೇತ್ರಗಳಿಗೆ ಅಭ್ಯರ್ಥಿ ಘೋಷಿಸಿದ್ದು, ಛತ್ತೀಸ್‌ಗಢ ರಾಜಸ್ಥಾನದಲ್ಲೂ ಸ್ಪರ್ಧಿಸುವ ಸುಳಿವು ನೀಡಿದ್ದಾರೆ.

20:57Suvarna Special: ಮಮತಾ ಬತ್ತಳಿಕೆ ಹೊಸ ಅಸ್ತ್ರ ಯಾವುದು ? ಮೋದಿ ವಿರುದ್ಧ ಹಿಂದೂ ಅಸ್ತ್ರ ಹಿಡಿದ ದೀದಿ..!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
18:19ಪುಟಿನ್ ಭಾರತ ಭೇಟಿಯಿಂದ ಹೊಸ ಚರಿತ್ರೆಗೆ ಮುನ್ನುಡಿ, ಕೆಲ ರಾಷ್ಟ್ರಗಳಿಗೆ ಟೆನ್ಶನ್
45:03ಕಿಚ್ಚು ಹೊತ್ತಿಸಿದ ‘ಸಂಚಾರ ಸಾಥಿ​’ ಆ್ಯಪ್; ನಾಯಿ ಇಂದಿನ ಮುಖ್ಯ ವಿಷಯ ಎಂದು ರಾಹುಲ್ ವ್ಯಂಗ್ಯ
01:49Viral Video: ಹೈದ್ರಾಬಾದ್‌ನಲ್ಲಿ ಅಮಾನವೀಯ ಕೃತ್ಯ, ಪುಟ್ಟ ಬಾಲಕಿಯ ಮೇಲೆ ಶಾಲೆಯ ಆಯಾ ಕ್ರೌರ್ಯ!
20:02ಮೋದಿ ಮಾರ್ಗ.. ಕುಮಾರ ಪರ್ವ: ಆತ್ಮನಿರ್ಭರ ಹೆಜ್ಜೆ.. ನಮೋ ಗುರಿಗೆ ಎಚ್​ಡಿಕೆ ಸಾಥ್​​!
20:35Ditwah Cyclone: ಕಾಡುವ ಮಳೆ, ನಡುಗುವು ಭೂಮಿ: ಕಡಲಿನಿಂದ ಕೇಡಿನ ಸಂದೇಶ!
25:147 ನಿಮಿಷದಲ್ಲಿ 7 ಕೋಟಿ ಕದ್ದವರು 24 ಗಂಟೆಯಲ್ಲಿ ಲಾಕ್: ಪಕ್ಕಾ ಪ್ಲಾನ್​ ಮಾಡಿದವರು ಅದೊಂದು ತಪ್ಪು ಮಾಡಿದ್ರು!
22:45ಸೌದಿಯಲ್ಲಿ ಭಾರತೀಯ ಉಮ್ರಾ ಯಾತ್ರಿಗಳ ದುರಂತ ಅಂತ್ಯ: ಅಗ್ನಿವ್ಯೂಹದಿಂದ ಪಾರಾದ ಆ ಒಬ್ಬ ಯಾರು?
01:30ಮಹಾರಾಷ್ಟ್ರ: ಡಿಜೆ ವಿಚಾರಕ್ಕೆ ವರನಿಗೆ ಚಾಕು ಇರಿತ, ಡ್ರೋನ್‌ ಮೂಲಕ 2 ಕಿ.ಮೀ ಆರೋಪಿಗಳ ಚೇಸಿಂಗ್!
Read more