Samvaad: ಭಾರತದ ಸಂಸ್ಕೃತಿ ಪ್ರಭಾವ ನನ್ನ ಮೇಲಿದೆ, ನಾನೆಂದು ಬೀಫ್‌ ತಿಂದಿಲ್ಲ, ತಿನ್ನೋದು ಇಲ್ಲ: ಎಸ್‌ವೈ ಖುರೇಷಿ!

Samvaad: ಭಾರತದ ಸಂಸ್ಕೃತಿ ಪ್ರಭಾವ ನನ್ನ ಮೇಲಿದೆ, ನಾನೆಂದು ಬೀಫ್‌ ತಿಂದಿಲ್ಲ, ತಿನ್ನೋದು ಇಲ್ಲ: ಎಸ್‌ವೈ ಖುರೇಷಿ!

Published : Oct 16, 2022, 07:09 PM IST

 ಇತ್ತೀಚೆಗೆ ಆರೆಸ್ಸೆಸ್‌ ಸರಸಂಘಚಾಲಕ ಮೋಹನ್‌ ಭಾಗ್ವತ್‌ ಮುಸ್ಲಿಂ ಮುಖಂಡರನ್ನು ಭೇಟಿಯಾಗಿದ್ದು ದೇಶಾದ್ಯಂತ ದೊಡ್ಡ ಸುದ್ದಿಯಾಗಿತ್ತು. ಆದರೆ, ಇಡೀ ವಿಚಾರದ ಹಿಂದೆ ಇದ್ದಿದ್ದು ಮಾಜಿ ಚುನಾವಣಾ ಆಯುಕ್ತ ಎಸ್‌ವೈ ಖುರೇಷಿ. ಈ ಕುರಿತಾಗಿ ಅವರು ಏಷ್ಯಾನೆಟ್‌ ಸಂವಾದದಲ್ಲಿ ಮಾತನಾಡಿದ್ದಾರೆ.
 


ಬೆಂಗಳೂರು (ಅ.16): ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಸರಸಂಘಚಾಲಕ ಕಳೆದ ಒಂದು ತಿಂಗಳಲ್ಲಿ ಎರಡು ಬಾರಿ ಮುಸ್ಲಿಂ ಮುಖಂಡರನ್ನು ಭೇಟಿಯಾಗಿದ್ದರು. ಆದರೆ, ಈ ಭೇಟಿಯ ಹಿಂದಿನ ರೂವಾರಿ, ಮಾಜಿ ಚುನಾವಣಾ ಆಯುಕ್ತ ಎಸ್‌ವೈ ಖುರೇಷಿ ಹಾಗೂ ಇತರ ನಾಲ್ಕು ಮಂದಿ. ಈ ವಿಚಾರವಾಗಿ ಅವರು ಏಷ್ಯಾನೆಟ್‌ ಸಂವಾದ ಕಾರ್ಯಕ್ರಮದಲ್ಲಿ ಮಾತನಾಡಿದ್ದಾರೆ.

ಭೇಟಿಯ ವೇಳೆ ನಾವು ಕೆಲವೊಂದು ವಿಚಾರಗಳನ್ನು ಆರೆಸ್ಸೆಸ್‌ (RSS) ಮುಖ್ಯಸ್ಥರಿಗೆ ಹೇಳಿದ್ದೇವೆ. ಹಾಗಂತ ನಾವು ಮುಸ್ಲಿಂ (Muslim) ಸಮುದಾಯದ ಪ್ರತಿನಿಧಿಗಳಲ್ಲ. ಹಿಂದು-ಮುಸ್ಲಿಮರ ದ್ವೇಷವನ್ನು ಕಡಿಮೆ ಮಾಡುವ ನಿಟ್ಟಿನಲ್ಲಿ ನಮ್ಮ ವೈಯಕ್ತಿಕಗಾಗಿ ಎಷ್ಟು ಸಾಧ್ಯವೋ ಅಷ್ಟು ಪ್ರಯತ್ನ ಪಟ್ಟಿದ್ದೇವೆ ಎಂದು ಹೇಳಿದರು. ಈ ವೇಳೆ ಮೋಹನ್‌ ಭಾಗ್ವತ್‌ (Mohan Bhagwat) ಅವರು 'ಗೋಹತ್ಯೆ' ವಿಚಾರವನ್ನೂ ಪ್ರಸ್ತಾಪ ಮಾಡಿದ್ದಾರೆ. ಹಿಂದುಗಳು ಗೋವನ್ನು ಪರಮಪೂಜ್ಯ ಎಂದು ಭಾವಿಸುತ್ತಾರೆ. ಈ ವಿಚಾರದ ಬಗ್ಗೆ ಮೌಲ್ವಿಗಳೊಂದಿಗೆ ಮಾತನಾಡಿದ್ದಾರೆ.

ಆರೆಸ್ಸೆಸ್‌ ಚೀಫ್‌ ಮೋಹನ್‌ ಭಾಗವತ್‌, ರಾಷ್ಟ್ರಪಿತ ಮತ್ತು ರಾಷ್ಟ್ರ ಋಷಿ: ಇಮಾಮ್ ಉಮರ್ ಅಹ್ಮದ್ ಇಲ್ಯಾಸಿ!

ಈ ವೇಳೆ ಮಾತನಾಡಿದ ಎಸ್‌ವೈ ಖುರೇಷಿ, ಮೋಹನ್‌ ಭಾಗ್ವತ್‌ ಅವರು (Cow Slaughter) ಮಾತನ್ನು ನಾನು ಒಪ್ಪುತ್ತೇನೆ. ವಿಶ್ವದ ಹಲವು ದೇಶಗಳಲ್ಲಿ ಗೋಹತ್ಯೆ ನಿಷೇಧವಿದೆ. ನಾನು ಮುಸ್ಲಿಂ. ನಮ್ಮಲ್ಲಿ ಬೀಫ್‌ ತಿನ್ನುವ ಬಗ್ಗೆ ಯಾವುದೇ ಅಡ್ಡಿಗಳಿಲ್ಲ. ಆದರೆ, ಭಾರತದ ಸಂಸ್ಕೃತಿಯಲ್ಲಿ ಬೆಳೆದವನು ನಾನು. ಆ ಕಾರಣದಿಂದಾ ಕಳೆದ 50 ವರ್ಷಗಳಲ್ಲಿ ಭಾರತದಲ್ಲಾಗಲಿ, ವಿದೇಶದಲ್ಲಾಗಲಿ ನಾನು ದನದ ಮಾಂಸ ತಿಂದಿಲ್ಲ. ನನ್ನ ಬಹಳಷ್ಟು ಸ್ನೇಹಿತರು ಹಿಂದುಗಳು. ಅವರು ಬೀಫ್‌ ತಿನ್ನೋದಿಲ್ಲ ಅದನ್ನು ನಾನೂ ಅಭ್ಯಾಸ ಮಾಡಿಕೊಂಡಿದ್ದೇನೆ' ಎಂದು ಹೇಳಿದ್ದಾರೆ.

45:25ಸಾಮಾನ್ಯ ಜನರ ಜೇಬಿಗೆ ಕೈ ಹಾಕಿದ ಮೋದಿ ಸರ್ಕಾರ: ಮುಂದೈತಾ ಮಾರಿಹಬ್ಬ?
20:46ಕನಸಿಗೆ ಎದುರಾಯ್ತು ಚತುರ್ಮುಖ ಕಂಟಕ! ಭಾರತದ ಖಜಾನೆ ಖಾಲಿ, ಬಂಗಾರವೇ ವಿಲನ್!
22:50ದಳಪತಿ ಹೊಡೆತಕ್ಕೆ ಅಮ್ಮನ ಕೋಟೆ ಛಿದ್ರ, ವಿಜಯ್‌ಗೆ ಜೈ ಎಂದ ಜಯಲಲಿತಾ ಪಕ್ಷದ 30 ಶಾಸಕರು
21:28ಸಾಲ ಮಾಡಿ ತುಪ್ಪ ತಿನ್ನಿಸಬೇಕಾ ಮುಖ್ಯಮಂತ್ರಿ ವಿಜಯ್? ಏನ್ ಮಾಡ್ತಾರೆ ದಳಪತಿ ?
19:23₹10 ಲಕ್ಷ ಕೋಟಿ ಸಾಲದ ಬೆಟ್ಟ.. ಹೊಸ ಸರ್ಕಾರಕ್ಕೆ ಬಿಗ್ ಚಾಲೆಂಜ್: ವಿಜಯ್ ವಿಜಯ ತಂತ್ರವೇನು?
19:54ಮುಖ್ಯಮಂತ್ರಿ ವಿಜಯ್ ಫಸ್ಟ್ ಡೇ ಫಸ್ಟ್ ಶೋ: ಭರವಸೆಗಳ ಬೆಟ್ಟ, ಖಜಾನೆಗೆ ಭಾರಿ ಹೊರೆ!
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
24:25ಭಾರತದ ಬಳಿಯೂ ಇದೆ ಮಲಕ್ಕಾ ಜಲಸಂಧಿ ಮುಚ್ಚಿದ್ರೆ ಕೆಲ ದೇಶದ ಕತೆ ಗೋವಿಂದ
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!