Samvaad: ಭಾರತದ ಸಂಸ್ಕೃತಿ ಪ್ರಭಾವ ನನ್ನ ಮೇಲಿದೆ, ನಾನೆಂದು ಬೀಫ್‌ ತಿಂದಿಲ್ಲ, ತಿನ್ನೋದು ಇಲ್ಲ: ಎಸ್‌ವೈ ಖುರೇಷಿ!

Samvaad: ಭಾರತದ ಸಂಸ್ಕೃತಿ ಪ್ರಭಾವ ನನ್ನ ಮೇಲಿದೆ, ನಾನೆಂದು ಬೀಫ್‌ ತಿಂದಿಲ್ಲ, ತಿನ್ನೋದು ಇಲ್ಲ: ಎಸ್‌ವೈ ಖುರೇಷಿ!

Published : Oct 16, 2022, 07:09 PM IST

 ಇತ್ತೀಚೆಗೆ ಆರೆಸ್ಸೆಸ್‌ ಸರಸಂಘಚಾಲಕ ಮೋಹನ್‌ ಭಾಗ್ವತ್‌ ಮುಸ್ಲಿಂ ಮುಖಂಡರನ್ನು ಭೇಟಿಯಾಗಿದ್ದು ದೇಶಾದ್ಯಂತ ದೊಡ್ಡ ಸುದ್ದಿಯಾಗಿತ್ತು. ಆದರೆ, ಇಡೀ ವಿಚಾರದ ಹಿಂದೆ ಇದ್ದಿದ್ದು ಮಾಜಿ ಚುನಾವಣಾ ಆಯುಕ್ತ ಎಸ್‌ವೈ ಖುರೇಷಿ. ಈ ಕುರಿತಾಗಿ ಅವರು ಏಷ್ಯಾನೆಟ್‌ ಸಂವಾದದಲ್ಲಿ ಮಾತನಾಡಿದ್ದಾರೆ.
 


ಬೆಂಗಳೂರು (ಅ.16): ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಸರಸಂಘಚಾಲಕ ಕಳೆದ ಒಂದು ತಿಂಗಳಲ್ಲಿ ಎರಡು ಬಾರಿ ಮುಸ್ಲಿಂ ಮುಖಂಡರನ್ನು ಭೇಟಿಯಾಗಿದ್ದರು. ಆದರೆ, ಈ ಭೇಟಿಯ ಹಿಂದಿನ ರೂವಾರಿ, ಮಾಜಿ ಚುನಾವಣಾ ಆಯುಕ್ತ ಎಸ್‌ವೈ ಖುರೇಷಿ ಹಾಗೂ ಇತರ ನಾಲ್ಕು ಮಂದಿ. ಈ ವಿಚಾರವಾಗಿ ಅವರು ಏಷ್ಯಾನೆಟ್‌ ಸಂವಾದ ಕಾರ್ಯಕ್ರಮದಲ್ಲಿ ಮಾತನಾಡಿದ್ದಾರೆ.

ಭೇಟಿಯ ವೇಳೆ ನಾವು ಕೆಲವೊಂದು ವಿಚಾರಗಳನ್ನು ಆರೆಸ್ಸೆಸ್‌ (RSS) ಮುಖ್ಯಸ್ಥರಿಗೆ ಹೇಳಿದ್ದೇವೆ. ಹಾಗಂತ ನಾವು ಮುಸ್ಲಿಂ (Muslim) ಸಮುದಾಯದ ಪ್ರತಿನಿಧಿಗಳಲ್ಲ. ಹಿಂದು-ಮುಸ್ಲಿಮರ ದ್ವೇಷವನ್ನು ಕಡಿಮೆ ಮಾಡುವ ನಿಟ್ಟಿನಲ್ಲಿ ನಮ್ಮ ವೈಯಕ್ತಿಕಗಾಗಿ ಎಷ್ಟು ಸಾಧ್ಯವೋ ಅಷ್ಟು ಪ್ರಯತ್ನ ಪಟ್ಟಿದ್ದೇವೆ ಎಂದು ಹೇಳಿದರು. ಈ ವೇಳೆ ಮೋಹನ್‌ ಭಾಗ್ವತ್‌ (Mohan Bhagwat) ಅವರು 'ಗೋಹತ್ಯೆ' ವಿಚಾರವನ್ನೂ ಪ್ರಸ್ತಾಪ ಮಾಡಿದ್ದಾರೆ. ಹಿಂದುಗಳು ಗೋವನ್ನು ಪರಮಪೂಜ್ಯ ಎಂದು ಭಾವಿಸುತ್ತಾರೆ. ಈ ವಿಚಾರದ ಬಗ್ಗೆ ಮೌಲ್ವಿಗಳೊಂದಿಗೆ ಮಾತನಾಡಿದ್ದಾರೆ.

ಆರೆಸ್ಸೆಸ್‌ ಚೀಫ್‌ ಮೋಹನ್‌ ಭಾಗವತ್‌, ರಾಷ್ಟ್ರಪಿತ ಮತ್ತು ರಾಷ್ಟ್ರ ಋಷಿ: ಇಮಾಮ್ ಉಮರ್ ಅಹ್ಮದ್ ಇಲ್ಯಾಸಿ!

ಈ ವೇಳೆ ಮಾತನಾಡಿದ ಎಸ್‌ವೈ ಖುರೇಷಿ, ಮೋಹನ್‌ ಭಾಗ್ವತ್‌ ಅವರು (Cow Slaughter) ಮಾತನ್ನು ನಾನು ಒಪ್ಪುತ್ತೇನೆ. ವಿಶ್ವದ ಹಲವು ದೇಶಗಳಲ್ಲಿ ಗೋಹತ್ಯೆ ನಿಷೇಧವಿದೆ. ನಾನು ಮುಸ್ಲಿಂ. ನಮ್ಮಲ್ಲಿ ಬೀಫ್‌ ತಿನ್ನುವ ಬಗ್ಗೆ ಯಾವುದೇ ಅಡ್ಡಿಗಳಿಲ್ಲ. ಆದರೆ, ಭಾರತದ ಸಂಸ್ಕೃತಿಯಲ್ಲಿ ಬೆಳೆದವನು ನಾನು. ಆ ಕಾರಣದಿಂದಾ ಕಳೆದ 50 ವರ್ಷಗಳಲ್ಲಿ ಭಾರತದಲ್ಲಾಗಲಿ, ವಿದೇಶದಲ್ಲಾಗಲಿ ನಾನು ದನದ ಮಾಂಸ ತಿಂದಿಲ್ಲ. ನನ್ನ ಬಹಳಷ್ಟು ಸ್ನೇಹಿತರು ಹಿಂದುಗಳು. ಅವರು ಬೀಫ್‌ ತಿನ್ನೋದಿಲ್ಲ ಅದನ್ನು ನಾನೂ ಅಭ್ಯಾಸ ಮಾಡಿಕೊಂಡಿದ್ದೇನೆ' ಎಂದು ಹೇಳಿದ್ದಾರೆ.

18:19ಸರ್ಕಾರಿ ನೌಕರರ ಮೇಲೆ ಯೋಗಿ ಕಟ್ಟು ನಿಟ್ಟಿನ ಆಕ್ಷನ್​: ವೇತನ ಬೇಕಿದ್ದವರು ನಿಯಮ ಪಾಲಿಸಿ.. ಏನಿದು ರೂಲ್ಸ್..?
18:27ಒಂದೇ ಒಂದು ಫೋನ್ ಕಾಲ್. ಬದಲಾಯ್ತು ಭಾರತ-ಅಮೆರಿಕ ನಂಟು! ಚೀನಾಕ್ಕೆ ಶಾಕ್, ಭಾರತಕ್ಕೆ ಲಕ್!
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
22:38ನೀನೆ ನನ್ನ ಬೆಳ್ಳಿ ಅನ್ನೋ ದಿನವೂ ಬಂತು ನೋಡಿ: ಬೆಳ್ಳಿ ಬೆಲೆ ಏರಿಕೆಗೆ ಕಾರಣ ಏನು?
18:51ಡಾಲರ್ ಸಾಮ್ರಾಜ್ಯ ಪತನ? ಚಿನ್ನದ ಅಧಿಪತ್ಯ ಶುರು, ಡಾಲರ್ ಕಂಗಾಲು! ಬಂಗಾರ ರಾಶಿ ಹಾಕ್ತಿರೋ ರಿಸರ್ವ್ ಬ್ಯಾಂಕ್‌
21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
21:07ಅಸ್ಸಾಂ ಅಖಾಡದಲ್ಲಿ ಡಿಕೆ–ಪ್ರಿಯಾಂಕ ಹಿಮಾಗ್ನಿ ಯಜ್ಞ! ಕಮಲ ಸಾಮ್ರಾಜ್ಯಕ್ಕೆ ಡೆಡ್ಲಿ ಸವಾಲು