Samvaad: ಭಾರತದ ಸಂಸ್ಕೃತಿ ಪ್ರಭಾವ ನನ್ನ ಮೇಲಿದೆ, ನಾನೆಂದು ಬೀಫ್‌ ತಿಂದಿಲ್ಲ, ತಿನ್ನೋದು ಇಲ್ಲ: ಎಸ್‌ವೈ ಖುರೇಷಿ!

Samvaad: ಭಾರತದ ಸಂಸ್ಕೃತಿ ಪ್ರಭಾವ ನನ್ನ ಮೇಲಿದೆ, ನಾನೆಂದು ಬೀಫ್‌ ತಿಂದಿಲ್ಲ, ತಿನ್ನೋದು ಇಲ್ಲ: ಎಸ್‌ವೈ ಖುರೇಷಿ!

Published : Oct 16, 2022, 07:09 PM IST

 ಇತ್ತೀಚೆಗೆ ಆರೆಸ್ಸೆಸ್‌ ಸರಸಂಘಚಾಲಕ ಮೋಹನ್‌ ಭಾಗ್ವತ್‌ ಮುಸ್ಲಿಂ ಮುಖಂಡರನ್ನು ಭೇಟಿಯಾಗಿದ್ದು ದೇಶಾದ್ಯಂತ ದೊಡ್ಡ ಸುದ್ದಿಯಾಗಿತ್ತು. ಆದರೆ, ಇಡೀ ವಿಚಾರದ ಹಿಂದೆ ಇದ್ದಿದ್ದು ಮಾಜಿ ಚುನಾವಣಾ ಆಯುಕ್ತ ಎಸ್‌ವೈ ಖುರೇಷಿ. ಈ ಕುರಿತಾಗಿ ಅವರು ಏಷ್ಯಾನೆಟ್‌ ಸಂವಾದದಲ್ಲಿ ಮಾತನಾಡಿದ್ದಾರೆ.
 


ಬೆಂಗಳೂರು (ಅ.16): ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಸರಸಂಘಚಾಲಕ ಕಳೆದ ಒಂದು ತಿಂಗಳಲ್ಲಿ ಎರಡು ಬಾರಿ ಮುಸ್ಲಿಂ ಮುಖಂಡರನ್ನು ಭೇಟಿಯಾಗಿದ್ದರು. ಆದರೆ, ಈ ಭೇಟಿಯ ಹಿಂದಿನ ರೂವಾರಿ, ಮಾಜಿ ಚುನಾವಣಾ ಆಯುಕ್ತ ಎಸ್‌ವೈ ಖುರೇಷಿ ಹಾಗೂ ಇತರ ನಾಲ್ಕು ಮಂದಿ. ಈ ವಿಚಾರವಾಗಿ ಅವರು ಏಷ್ಯಾನೆಟ್‌ ಸಂವಾದ ಕಾರ್ಯಕ್ರಮದಲ್ಲಿ ಮಾತನಾಡಿದ್ದಾರೆ.

ಭೇಟಿಯ ವೇಳೆ ನಾವು ಕೆಲವೊಂದು ವಿಚಾರಗಳನ್ನು ಆರೆಸ್ಸೆಸ್‌ (RSS) ಮುಖ್ಯಸ್ಥರಿಗೆ ಹೇಳಿದ್ದೇವೆ. ಹಾಗಂತ ನಾವು ಮುಸ್ಲಿಂ (Muslim) ಸಮುದಾಯದ ಪ್ರತಿನಿಧಿಗಳಲ್ಲ. ಹಿಂದು-ಮುಸ್ಲಿಮರ ದ್ವೇಷವನ್ನು ಕಡಿಮೆ ಮಾಡುವ ನಿಟ್ಟಿನಲ್ಲಿ ನಮ್ಮ ವೈಯಕ್ತಿಕಗಾಗಿ ಎಷ್ಟು ಸಾಧ್ಯವೋ ಅಷ್ಟು ಪ್ರಯತ್ನ ಪಟ್ಟಿದ್ದೇವೆ ಎಂದು ಹೇಳಿದರು. ಈ ವೇಳೆ ಮೋಹನ್‌ ಭಾಗ್ವತ್‌ (Mohan Bhagwat) ಅವರು 'ಗೋಹತ್ಯೆ' ವಿಚಾರವನ್ನೂ ಪ್ರಸ್ತಾಪ ಮಾಡಿದ್ದಾರೆ. ಹಿಂದುಗಳು ಗೋವನ್ನು ಪರಮಪೂಜ್ಯ ಎಂದು ಭಾವಿಸುತ್ತಾರೆ. ಈ ವಿಚಾರದ ಬಗ್ಗೆ ಮೌಲ್ವಿಗಳೊಂದಿಗೆ ಮಾತನಾಡಿದ್ದಾರೆ.

ಆರೆಸ್ಸೆಸ್‌ ಚೀಫ್‌ ಮೋಹನ್‌ ಭಾಗವತ್‌, ರಾಷ್ಟ್ರಪಿತ ಮತ್ತು ರಾಷ್ಟ್ರ ಋಷಿ: ಇಮಾಮ್ ಉಮರ್ ಅಹ್ಮದ್ ಇಲ್ಯಾಸಿ!

ಈ ವೇಳೆ ಮಾತನಾಡಿದ ಎಸ್‌ವೈ ಖುರೇಷಿ, ಮೋಹನ್‌ ಭಾಗ್ವತ್‌ ಅವರು (Cow Slaughter) ಮಾತನ್ನು ನಾನು ಒಪ್ಪುತ್ತೇನೆ. ವಿಶ್ವದ ಹಲವು ದೇಶಗಳಲ್ಲಿ ಗೋಹತ್ಯೆ ನಿಷೇಧವಿದೆ. ನಾನು ಮುಸ್ಲಿಂ. ನಮ್ಮಲ್ಲಿ ಬೀಫ್‌ ತಿನ್ನುವ ಬಗ್ಗೆ ಯಾವುದೇ ಅಡ್ಡಿಗಳಿಲ್ಲ. ಆದರೆ, ಭಾರತದ ಸಂಸ್ಕೃತಿಯಲ್ಲಿ ಬೆಳೆದವನು ನಾನು. ಆ ಕಾರಣದಿಂದಾ ಕಳೆದ 50 ವರ್ಷಗಳಲ್ಲಿ ಭಾರತದಲ್ಲಾಗಲಿ, ವಿದೇಶದಲ್ಲಾಗಲಿ ನಾನು ದನದ ಮಾಂಸ ತಿಂದಿಲ್ಲ. ನನ್ನ ಬಹಳಷ್ಟು ಸ್ನೇಹಿತರು ಹಿಂದುಗಳು. ಅವರು ಬೀಫ್‌ ತಿನ್ನೋದಿಲ್ಲ ಅದನ್ನು ನಾನೂ ಅಭ್ಯಾಸ ಮಾಡಿಕೊಂಡಿದ್ದೇನೆ' ಎಂದು ಹೇಳಿದ್ದಾರೆ.

24:09ದೀದಿ ಕೋಟೆಯಲ್ಲಿ ಮಹಾಬಿರುಕು.. ಏನು ಕಾರಣ? ಗಜಕೇಸರಿ ವ್ಯೂಹ.. ದೀದಿ ದಿಗ್ಬಂಧನ.. ಏನಿದರ ಗುಟ್ಟು?
24:26ಪ್ಲಾಸ್ಟಿಕ್ ನೋಟು... ಕರೆನ್ಸಿ ಕ್ರಾಂತಿ! ಕಾಗದದ ನೋಟುಗಳ ಆಯಸ್ಸು ಖತಂ, ಮತ್ತೆ ಡಿಮಾನಟೈಸೇಶನ್..?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
24:48ಬೆಂಗಳೂರಲ್ಲೂ ಮೊಳಗುತ್ತಾ ವಿಜಯ್ ವಿಸಿಲ್ ಸದ್ದು? ತಮಿಳು ಮತದಾರರು ಹೆಚ್ಚಿರುವ ವಾರ್ಡ್​ಗಳಲ್ಲಿ ಸ್ಪರ್ಧಿಸುತ್ತಾ ಟಿವಿಕೆ?
18:54ಐದೇ ದಿನಕ್ಕೆ 2 ಕೋಟಿ ಜಿರಳೆ ಸೈನಿಕರು, ಜೆನ್‌ಝೀ ಅಕ್ರೋಶವೋ, ಕ್ರಾಂತಿಯ ಕಿಚ್ಚೋ?
30:39‘ದೇಶಕ್ಕೆ ಆರ್ಥಿಕ ತೂಫಾನ್ ಬರಲಿದೆ.. ದೇಶ ಮಾರಿದ್ದಾರೆ’ ಪ್ರಧಾನಿ ಮೋದಿ ದೇಶದ್ರೋಹಿ ಎಂದು ರಾಹುಲ್ ವಿವಾದ!
21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
47:39ಸೋಷಿಯಲ್ ಮೀಡಿಯಾದಲ್ಲಿ 'ಕಾಕ್ರೋಚ್ ಜನತಾ ಪಾರ್ಟಿ' ಕೋಲಾಹಲ: GenZ ಹೋರಾಟವೋ, ಬರೀ ಕ್ರೇಜೋ?
20:58ರಾಜೀವ್ ಗಾಂಧಿ ಹತ್ಯೆ ಮಾಡಿದ್ದ LTTE ಪ್ರಭಾಕರನ್ ಸ್ಮರಿಸಿದ ತಮಿಳುನಾಡು ಸಿಎಂ ವಿಜಯ್: ಕಾಂಗ್ರೆಸ್‌ಗೆ ಇಕ್ಕಟ್ಟು!
45:25ಸಾಮಾನ್ಯ ಜನರ ಜೇಬಿಗೆ ಕೈ ಹಾಕಿದ ಮೋದಿ ಸರ್ಕಾರ: ಮುಂದೈತಾ ಮಾರಿಹಬ್ಬ?