ಮೋದಿ ನಾಯಕತ್ವದಿಂದ ವಿದೇಶಾಂಗ ನೀತಿಯಲ್ಲಿ ಮಹತ್ತರ ಬದಲಾವಣೆ, ಜೈಶಂಕರ್ ಜೊತೆ ಸಂವಾದ್!

ಮೋದಿ ನಾಯಕತ್ವದಿಂದ ವಿದೇಶಾಂಗ ನೀತಿಯಲ್ಲಿ ಮಹತ್ತರ ಬದಲಾವಣೆ, ಜೈಶಂಕರ್ ಜೊತೆ ಸಂವಾದ್!

Published : Aug 14, 2022, 05:54 PM IST

ಏಷ್ಯಾನೆಟ್ ಸುವರ್ಣನ್ಯೂಸ್ ವಿಶೇಷ ಸಂವಾದ ಕಾರ್ಯಕ್ರದಲ್ಲಿ ಪಾಲ್ಗೊಂಡ ಭಾರತೀಯ ವಿದೇಶಾಂಗ ಸಚಿವ ಜೈಶಂಕರ್  ಭಾರತದ ವಿದೇಶಾಂಗ ನೀತಿಯಲ್ಲಿನ ಮಹತ್ತರ ಬದಲಾವಣೆ,  75ನೇ ವರ್ಷದ ಸ್ವಾತಂತ್ರ್ಯ ದಿನಾಚರಣೆ ಸೇರಿದಂತೆ  ಕೆಲ ಸೂಕ್ಷ್ಮ ವಿಚಾರಗಳ ಕುರಿತು ಮಾತನಾಡಿದ್ದಾರೆ. ಇದರ ಜೊತೆಗೆ ಬೆಂಗಳೂರಿನ ಜೊತೆಗಿನ ನಂಟು, ಬೆಳಗಾವಿ ಉಪ್ಪಿಟ್ಟು ಕುರಿತು ಜೈಶಂಕರ್ ತಮ್ಮ ನೆನಪಿನ ಬುತ್ತಿ ಬಿಚ್ಚಿಟ್ಟಿದ್ದಾರೆ. ಸಂವಾದ್ ವಿಶೇಷ ಸಂದರ್ಶನ ಇಲ್ಲಿದೆ.

ಬೆಂಗಳೂರು(ಆ.14): ಭಾರತದ ವಿದೇಶಾಂಗ ನೀತಿಯನ್ನು ಇಡೀ ವಿಶ್ವವೇ ಹೊಗಳುತ್ತಿದೆ. ಜನರ ಹಿತಾಸಕ್ತಿಯನ್ನು ಗಮನದಲ್ಲಿಟ್ಟುಕೊಂಡು ಭಾರತೀಯ ವಿದೇಶಾಂಗ ನೀತಿಗಳು ಕಾರ್ಯನಿರ್ವಹಿಸುತ್ತಿದೆ. ಭಾರತ ಸ್ವತಂತ್ರ್ಯ ವಿದೇಶಾಂಗ ನೀತಿಯನ್ನು ಶತ್ರುಗಳೇ ಹೊಗಳುತ್ತಿದ್ದಾರೆ. ಇದಕ್ಕೆ ಕಾರಣ ಪ್ರಧಾನಿ ನರೇಂದ್ರ ಮೋದಿ ನಾಯಕತ್ವ. ಮೋದಿ ರಾಷ್ಟ್ರೀಯತೆ, ದೇಶದ ಜನರಿಗೆ ಒಳಿತು ಮಾಡುವ ಹಾಗೂ ದೇಶವನ್ನು ಅಭಿವೃದ್ಧಿಯೆಡೆಗೆ ಕೊಂಡೊಯ್ಯುವ ದಿಟ್ಟ ನಿರ್ಧಾರಗಳೇ ಕಾರಣ ಎಂದು ವಿದೇಶಾಂಗ ಸಚಿವ ಜೈಶಂಕರ್ ಹೇಳಿದ್ದಾರೆ. ಏಷ್ಯಾನೆಟ್ ಸುವರ್ಣನ್ಯೂಸ್ ಜೊತೆಗಿನ ಸಂವಾದ್ ವಿಶೇಷ ಸಂದರ್ಶನ ಕಾರ್ಯಕ್ರಮದಲ್ಲಿ ಪಾಲ್ಗೊಂಡ ಜೈಶಂಕರ್ ಭಾರತದ ವಿದೇಶಾಂಗ ನೀತಿ, 75ನೇ ವರ್ಷದ ಸ್ವಾತಂತ್ರ್ಯ ದಿನಾಚರಣೆ ಸಂಭ್ರಮ, ಹರ್ ಘರ್ ತಿರಂಗ ಸೇರಿದಂತೆ ಹಲವು ವಿಚಾರಗಳ ಕುರಿತು ಮಾತನಾಡಿದ್ದಾರೆ.  

ವಿಶ್ವದ ರಾಜಕೀಯ ತಲ್ಲಣಗಳನ್ನು ಅರ್ಥ ಮಾಡಿಕೊಳ್ಳುವ ಸಾಮರ್ಥ್ಯ ಮೋದಿಗಿದೆ. ಇದರ ಜೊತೆಗೆ ನಮಗೆ ಮುಕ್ತ ಸ್ವಾತಂತ್ರ್ಯ ನೀಡಿದ್ದಾರೆ ಎಂದು ಜೈಶಂಕರ್ ಹೇಳಿದ್ದಾರೆ. ನನ್ನ ಕುಟುಂಬದ ಯಾರೂ ರಾಜಕೀದಲ್ಲಿ ಇಲ್ಲ. ನಾನು ರಾಜಕೀಯಕ್ಕೆ ಬರಬೇಕು ಎಂದು ಯಾವತ್ತೂ ಅಂದುಕೊಂಡಿರಲಿಲ್ಲ. ಭಾರತದ ರಾಯಭಾರಿಯಾಗಿ ಚೀನಾ, ಅಮೆರಿದಕಲ್ಲಿ ಕರ್ತವ್ಯನಿರ್ವಹಿಸಿದ್ದಾರೆ. ವಿದೇಶಾಂಗ ಇಲಾಖೆ ಕಾರ್ಯದರ್ಶಿಯಾಗಿ ಕೆಲಸ ಮಾಡಿದ್ದಾರೆ. 45 ವರ್ಷಗಳಿಂದ ವಿದೇಶಾಂಗ ಇಲಾಖೆ ಜೊತೆ ಕೆಲಸ ಮಾಡುತ್ತಿದ್ದೇನೆ. ಮೋದಿ ಈ ಮಹತ್ತರ ಜವಾಬ್ದಾರಿ ತೆಗೆದುಕೊಳ್ಳಲು ಸೂಚಿಸಿದ ಕಾರಣ ವಿದೇಶಾಂಗ ಸಚಿವನಾಗಿದ್ದೇನೆ. ಇತರ ಯಾವುದೇ ರಾಜಕಾರಣಿ ಕರೆದಿದ್ದರೂ ನಾನು ರಾಜಕೀಯಕ್ಕೆ ಬರುತ್ತಿರಲಿಲ್ಲ ಎಂದು ಜೈಶಂಕರ್ ಹೇಳಿದ್ದಾರೆ.

ಶ್ರೀಲಂಕಾದಲ್ಲಿನ ಆರ್ಥಿಕ ಪರಿಸ್ಥಿತಿ, ಪಾಕಿಸ್ತಾನದಲ್ಲಿನ ಬಿಕ್ಕಟ್ಟು, ಚೀನಾ ಗಡಿ ವಿಚಾರ, ತೈವಾನ್ ಸಂಘರ್ಷ ಸೇರಿದಂತೆ ಹಲವು ವಿಚಾರಗಳ ಕುರಿತು ಜೈಶಂಕರ್ ಮುಕ್ತವಾಗಿ ಮಾತನಾಡಿದ್ದಾರೆ. ಸಂಪೂರ್ಣ ಸಂದರ್ಶನ ಇಲ್ಲಿದೆ.

46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
23:56ಹಾರ್ಮುಜ್ ಬಿಕ್ಕಟ್ಟಿನ ನಂತರ ಭಾರತದ ಭವಿಷ್ಯವೇನು? ಬಂಗಾರ ₹50,000 ಕುಸಿತ..! ಅಗ್ಗವಾಗುತ್ತಾ ಪೆಟ್ರೋಲ್ ದರ? ಮೋದಿ ಹೊಸ ಲೆಕ್ಕಾಚಾರ!
39:28ಅಯೋಧ್ಯೆ ರಾಮಮಂದಿರ: ಪ್ರಾಜೆಕ್ಟ್ ಚೀಫ್ ನೃಪೇಂದ್ರ ಮಿಶ್ರಾ ಜೊತೆ ಎಕ್ಸ್‌ಕ್ಲೂಸಿವ್ ಸಂದರ್ಶನ
22:49ವಿಧಾನಸಭೆಯಲ್ಲೂ ಸಿಎಂ ವಿಜಯ್ ಪಂಚಿಂಗ್ ಡೈಲಾಗ್, ದ್ರಾವಿಡ ನಾಡಿನಲ್ಲಿ ರಾಜಕೀಯ ರಂಗು ಬದಲು
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
19:59Suvarna Focus: ರುದ್ರಪ್ರಯಾಗದಲ್ಲಿ ನಿಹಾಂಗ್ ಯೋಧರ ರಣಕಹಳೆ; ಮತ್ತೆ ಕಾಡುತ್ತಿದೆ 1984ರ ‘ಆಪರೇಷನ್ ಬ್ಲ್ಯೂ ಸ್ಟಾರ್’ ಕರಾಳ ನೆನಪು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
22:58ಉಗ್ರನಾಗಲು ಪಾಕಿಸ್ತಾನಕ್ಕೆ ತೆರಳಿ ರಿಯಲ್ ಧುರಂಧರ್ ಆದ ಕಾಶ್ಮೀರ ಯುವಕ, ಬೆಚ್ಚಿ ಬೀಳಿಸೋ ಘಟನೆ
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್
Read more