Ram Mandir: ಮಕ್ಕಳ ಮುಖಭಾವನೆ ಕಲ್ಪಿಸಿಕೊಂಡು ರಾಮಲಲ್ಲಾ ಮೂರ್ತಿ ಕೆತ್ತನೆ: ಅರುಣ್ ಯೋಗಿರಾಜ್

Ram Mandir: ಮಕ್ಕಳ ಮುಖಭಾವನೆ ಕಲ್ಪಿಸಿಕೊಂಡು ರಾಮಲಲ್ಲಾ ಮೂರ್ತಿ ಕೆತ್ತನೆ: ಅರುಣ್ ಯೋಗಿರಾಜ್

Published : Jan 19, 2024, 03:22 PM IST

ರಾಮಲಲ್ಲಾ ಮೂರ್ತಿ ಶಿಲ್ಪಿ ಅರುಣ್ ಯೋಗಿರಾಜ್ ಮೂರ್ತಿ ಕೆತ್ತನೆ ಬಗೆಗಿನ ಸಂಪೂರ್ಣ ವಿವರವನ್ನು ಏಷ್ಯಾನೆಟ್‌ ಸುವರ್ಣ ನ್ಯೂಸ್‌ಗೆ ನೀಡಿದ್ದಾರೆ. ಇದರ ವಿಡಿಯೋ ಇಲ್ಲಿದೆ..

ಇದು ಏಷ್ಯಾನೆಟ್‌ ಸುವರ್ಣ ನ್ಯೂಸ್ ಸೂಪರ್ EXCLUSIVE ಸುದ್ದಿಯಾಗಿದ್ದು, ಅಯೋಧ್ಯೆ(Ayodhya) ರಾಮಲಲ್ಲಾ ಮೂರ್ತಿ ಶಿಲ್ಪಿ ಅರುಣ್ ಯೋಗಿರಾಜ್(Sculptor Arun Yogiraj) ನಮ್ಮ ಜೊತೆ ಮಾತನಾಡಿದ್ದಾರೆ. ರಾಮಲಲ್ಲಾ ಮೂರ್ತಿ(Ram Lalla idol) ಕೆತ್ತನೆ ಬಳಿಕ ಮೊದಲ ಸಂದರ್ಶನ ಇದಾಗಿದೆ. ದೇವಾಲಯದ ಅಂಗಳದಿಂದಲೇ ಅಜಿತ್ ಹನಮಕ್ಕನವರ್ ಅವರು ಸಂದರ್ಶನ ಮಾಡಿದ್ದಾರೆ. ಮಕ್ಕಳ ಮುಖಭಾವನೆ ಕಲ್ಪಿಸಿಕೊಂಡು ರಾಮಲಲ್ಲಾ ಮೂರ್ತಿ ಕೆತ್ತನೆ ಮಾಡಲಾಗಿದೆ. ಮಕ್ಕಳನ್ನು ಅಧ್ಯಯನ ಮಾಡಿದ ಬಳಿಕ ಮೂರ್ತಿಯ ಕಲ್ಪನೆ ಮೂಡಿತು. ಈ ಕಲ್ಪನೆಯಲ್ಲಿಯೇ ರಾಮಲಲ್ಲಾ ಮೂರ್ತಿ ಕೆತ್ತನೆ ಮಾಡಿದ್ದೇನೆ. ಮೂರ್ತಿ ಕೆತ್ತನೆಗೆ ವಿಶ್ವದೆಲ್ಲೆಡೆಯಿಂದ ಕಲ್ಲು ನೀಡಲು ಸಿದ್ಧರಿದ್ದರು. ಆದರೆ ಮೂರ್ತಿ ಕೆತ್ತನೆಗೆ ಕರ್ನಾಟಕದ ಕಲ್ಲು ಸಿಕ್ಕಿದ್ದು ತುಂಬಾ ಖುಷಿಯಾಗಿದೆ. ನಮ್ಮೂರಿನ ಬಡ ರೈತನ ಜಮೀನಿನ ಕಲ್ಲು ರಾಮನ ಮೂರ್ತಿಯಾಗಿದ್ದು ಸಂತೋಷವಾಗಿದೆ. ಮೂವರೂ ಶಿಲ್ಪಿಗಳ ಮಧ್ಯೆ ಆರೋಗ್ಯಕರ ಸ್ಪರ್ಧೆ ಇತ್ತು. ನಾವು ಮತ್ತೊಬ್ಬರು ಕೆತ್ತಿದ ಮೂರ್ತಿಯನ್ನು ಇನ್ನೂ ನೋಡೇ ಇಲ್ಲ. ನನ್ನ ಕೈ ಮೂಲಕ ಮೂರ್ತಿಯಾಗಿ ರೂಪುಗೊಳ್ಳಲು ದೇವರ ಆಶೀರ್ವಾದ ಕಾರಣ ಎಂದು ಅರುಣ್ ಯೋಗಿರಾಜ್ ಹೇಳುತ್ತಾರೆ.

ಇದನ್ನೂ ವೀಕ್ಷಿಸಿ:  Pejavara Shree: ಅಯೋಧ್ಯೆ ರಾಮ ಮಂದಿರ ಬಗ್ಗೆ ಪೇಜಾವರ ಶ್ರೀಗಳು ಹೇಳಿದ್ದೇನು..?

21:52ಖಗ ಮೃಗಗಳ ಮೂಲಕ ಗೂಢಚರ್ಯೆ: ಪ್ರಾಣಿ, ಪಕ್ಷಿ, ಕೀಟಗಳಿಂದ ಹೇಗೆ ನಡೆಯುತ್ತೆ ಗೂಢಚರ್ಯೆ
21:11ಮೋದಿ ಓಮನ್ ಭೇಟಿ.. ಪಾಕ್ ಚೀನಾ ಪತರಗುಟ್ಟಿದ್ದೇಕೆ? ಶತಕೋಟಿ ಒಡೆಯನ ಸಾಮ್ರಾಜ್ಯ ಹೇಗಿದೆ ಗೊತ್ತಾ..!
19:21ಆರ್ಥಿಕತೆ ಬಾಹುಬಲಿಯ ರೂಪಾಯಿ ಮೌಲ್ಯ ICUನಲ್ಲಿ; ಅಂದುಕೊಂಡಂಗಿಲ್ಲ ಭವಿಷ್ಯ!
20:57Suvarna Special: ಮಮತಾ ಬತ್ತಳಿಕೆ ಹೊಸ ಅಸ್ತ್ರ ಯಾವುದು ? ಮೋದಿ ವಿರುದ್ಧ ಹಿಂದೂ ಅಸ್ತ್ರ ಹಿಡಿದ ದೀದಿ..!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
18:19ಪುಟಿನ್ ಭಾರತ ಭೇಟಿಯಿಂದ ಹೊಸ ಚರಿತ್ರೆಗೆ ಮುನ್ನುಡಿ, ಕೆಲ ರಾಷ್ಟ್ರಗಳಿಗೆ ಟೆನ್ಶನ್
45:03ಕಿಚ್ಚು ಹೊತ್ತಿಸಿದ ‘ಸಂಚಾರ ಸಾಥಿ​’ ಆ್ಯಪ್; ನಾಯಿ ಇಂದಿನ ಮುಖ್ಯ ವಿಷಯ ಎಂದು ರಾಹುಲ್ ವ್ಯಂಗ್ಯ
01:49Viral Video: ಹೈದ್ರಾಬಾದ್‌ನಲ್ಲಿ ಅಮಾನವೀಯ ಕೃತ್ಯ, ಪುಟ್ಟ ಬಾಲಕಿಯ ಮೇಲೆ ಶಾಲೆಯ ಆಯಾ ಕ್ರೌರ್ಯ!
20:02ಮೋದಿ ಮಾರ್ಗ.. ಕುಮಾರ ಪರ್ವ: ಆತ್ಮನಿರ್ಭರ ಹೆಜ್ಜೆ.. ನಮೋ ಗುರಿಗೆ ಎಚ್​ಡಿಕೆ ಸಾಥ್​​!
20:35Ditwah Cyclone: ಕಾಡುವ ಮಳೆ, ನಡುಗುವು ಭೂಮಿ: ಕಡಲಿನಿಂದ ಕೇಡಿನ ಸಂದೇಶ!
Read more