Aug 13, 2022, 10:45 PM IST
ಸ್ವಾತಂತ್ರ್ಯ ದಿನಾಚರಣೆ ಸಂಭ್ರಮದ ಹಿನ್ನಲೆಯಲ್ಲಿ ಮಾಲ್ ಒಂದರಲ್ಲಿ ಎಸ್ಡಿಪಿಐ ಕಾರ್ಯಕರ್ತರು ಪುಂಡಾಟ ನಡೆಸಿದ ಘಟನೆ ಶಿವಮೊಗ್ಗದಲ್ಲಿ ನಡೆದಿದೆ. ಸ್ವಾತಂತ್ರ್ಯ ವೀರರ ಫೋಟೋಗಳನ್ನು ತೆರವುಗೊಳಿಸಿದ ಪುಂಡಾಟ ಮೆರೆದಿದ್ದಾರೆ. ಮುಸ್ಲಿಮ್ ಹೋರಾಟಗಾರರ ಫೋಟೋ ಯಾಕಿಲ್ಲ, ವೀರ ಸಾವರ್ಕರ್ ಫೋಟೋ ಯಾಕೆ ಎಂದು ತಗಾದೆ ತೆಗೆದು ರಂಪಾಟ ಮಾಡಿದ್ದಾರೆ. ಇತ್ತ ದೇಶಾದ್ಯಂತ ಹರ್ ಘರ್ ತಿರಂಗ ಸಡಗರ ಮನೆ ಮಾಡಿದೆ. ಸ್ವಾತಂತ್ರ್ಯ ದಿನಾಚರಣೆ ಅಮೃತ ಮಹೋತ್ಸ ಸಂಭ್ರಮದಲ್ಲಿರುವ ಭಾರತ ಇಂದು ಹರ್ ಘರ್ ತಿರಂಗ ಅಭಿಯಾನಕ್ಕೆ ಭರ್ಜರಿ ಸ್ಪಂದನೆ ಸಿಕ್ಕಿದೆ. ಸಿಎಂ ಬಸವರಾಜ್ ಬೊಮ್ಮಾಯಿ ಸೇರಿದಂತೆ ಹಲವರು ಹರ್ ಘರ್ ತಿರಂಗ ಅಭಿಯಾನಕ್ಕೆ ಕೈಜೋಡಿಸಿ ತಿರಂಗ ಹಾರಿಸಿದ್ದಾರೆ.