ಹಿರಿಯ ನಾಯಕನ ರಾಜೀನಾಮೆ: ಇಕ್ಕಟ್ಟಿನಲ್ಲಿ ಬಿಜೆಪಿ ಮೈತ್ರಿ ಪಕ್ಷ!

ಹಿರಿಯ ನಾಯಕನ ರಾಜೀನಾಮೆ: ಇಕ್ಕಟ್ಟಿನಲ್ಲಿ ಬಿಜೆಪಿ ಮೈತ್ರಿ ಪಕ್ಷ!

Published : Dec 27, 2019, 04:01 PM ISTUpdated : Dec 27, 2019, 05:22 PM IST

ಜನನಾಯಕ್ ಜನತಾ ಪಾರ್ಟಿಯ ಹಿರಿಯ ನಾಯಕರೊಬ್ಬರು ಧಿಡೀರನೆ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಇದರಿಂದಾಗಿ ಹರ್ಯಾಣದಲ್ಲಿ ಬಿಜೆಪಿ ಜೊತೆಗೆ ಮೈತ್ರಿ ಮಾಡಿಕೊಂಡು ಡಿಸಿಎಂ ಆಗಿರುವ ದುಷ್ಯಂತ್ ಚೌಟಾಲಾ ಸದ್ಯ ಇಕ್ಕಟ್ಟಿನಲ್ಲಿ ಸಿಲುಕಿದ್ದಾರೆ. ದುಷ್ಯಂತ್ ಚೌಟಾಲಾ ವಿರುದ್ಧ ಬಹಿರಂಗವಾಗಿಯೇ ಟೀಕಿಸಿದ್ದ, ಹರ್ಯಾಣದ ಶಾಸಕ ರಾಮ್ ಕುಮಾರ್ ಗೌತಮ್ ಬುಧವಾರದಂದು ಪಕ್ಷದ ಉಪ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

 

ಚಂಡೀಗಡ[ಡಿ.27]: ಜನನಾಯಕ್ ಜನತಾ ಪಾರ್ಟಿಯ ಹಿರಿಯ ನಾಯಕರೊಬ್ಬರು ಧಿಡೀರನೆ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಇದರಿಂದಾಗಿ ಹರ್ಯಾಣದಲ್ಲಿ ಬಿಜೆಪಿ ಜೊತೆಗೆ ಮೈತ್ರಿ ಮಾಡಿಕೊಂಡು ಡಿಸಿಎಂ ಆಗಿರುವ ದುಷ್ಯಂತ್ ಚೌಟಾಲಾ ಸದ್ಯ ಇಕ್ಕಟ್ಟಿನಲ್ಲಿ ಸಿಲುಕಿದ್ದಾರೆ. ದುಷ್ಯಂತ್ ಚೌಟಾಲಾ ವಿರುದ್ಧ ಬಹಿರಂಗವಾಗಿಯೇ ಟೀಕಿಸಿದ್ದ, ಹರ್ಯಾಣದ ಶಾಸಕ ರಾಮ್ ಕುಮಾರ್ ಗೌತಮ್ ಬುಧವಾರದಂದು ಪಕ್ಷದ ಉಪ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

ಜೆಜೆಪಿ ಪಕ್ಷದ ಮುಖ್ಯಸ್ಥ ದುಷ್ಯಂತ್ ಚೌಟಾಲಾ ವಿರುದ್ಧ ಸಾರ್ವಜನಿಕವಾಗಿಯೇ ಟೀಕಿಸಿದ್ದ 73 ವರ್ಷದ ರಾಮ್ ಕುಮಾರ್ ಗೌತಮ್ 'ತಾನು ಉಪ ಮುಖ್ಯಮಂತ್ರಿಯಾಗಿದ್ದು ತನ್ನ ಪಕ್ಷದ ಶಾಸಕರ ಬೆಂಬಲದಿಂದ ಎಂಬುವುದನ್ನು ದುಷ್ಯಂತರ್ ಚೌಟಾಲಾ ಯಾವತ್ತೂ ಮರೆಯಬಾರದು' ಎಂದಿದ್ದಾರೆ. ರಾಮ್ ಕುಮಾರ್ ಗೌತಮ್ ಅಕ್ಟೋಬರ್ ತಿಂಗಳಲ್ಲಿ ನಡೆದಿದ್ದ ಹರ್ಯಾಣ ವಿಧಾನಸಭಾ ಚುನಾವಣೆಯಲ್ಲಿ ಅತಂತ್ರ ಸ್ಥಿತಿ ನಿರ್ಮಾಣವಾದಾಗ, ಬಿಜೆಪಿ ಸರ್ಕಾರ ರಚಿಲು ಬೆಂಬಲ ಸೂಚಿಸಿದ್ದ ಜೆಜೆಪಿ ಶಾಸಕರಲ್ಲಿ ಒಬ್ಬರು. 

ರಾಮ್ ಕುಮಾರ್ ಗೌತಮ್ ಅನ್ವಯ ಉಪ ಮುಖ್ಯಮಂತ್ರಿ ತಮ್ಮ ಬಳಿ 11 ಖಾತೆಗಳನ್ನಿಟ್ಟುಕೊಂಡು ಕೇವಲ ಒಬ್ಬ ಶಾಸಕನಿಗೆ, ಪ್ರಮುಖವಲ್ಲದ ಖಾತೆಗೆ ಕಿರಿಯ ಸಚಿವರಾಗಿ ನೇಮಿಸಿರುವುದು ಸರಿಯಲ್ಲ ಎಂದಿದ್ದಾರೆ.

ಚುನಾವಣಾ ಪ್ರಚಾರದ ವೇಳೆ ಕಟು ವಾಗ್ದಾಳಿ ನಡೆಸಿದ್ದ ಪಕ್ಷಕ್ಕೆ ಸರ್ಕಾರ ರಚಿಸಲು ದುಷ್ಯಂತ್ ಚೌಟಾಲಾ ಬೆಂಬಲ ಸೂಚಿಸಿದ್ದರು. ಬಿಜೆಪಿ ಹಾಗೂ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಅವರು ಕಿಡಿ ಕಾರಿದ್ದ ವಿಡಿಯೋಗಳು ಸೋಶಿಯಲ್ ಮೀಡಿಯಾದಲ್ಲಿ ಭಾರೀ ವೈರಲ್ ಆಗಿವೆ

ಡಿಸೆಂಬರ್ 27ರ ಟಾಪ್ 10 ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

39:28ಅಯೋಧ್ಯೆ ರಾಮಮಂದಿರ: ಪ್ರಾಜೆಕ್ಟ್ ಚೀಫ್ ನೃಪೇಂದ್ರ ಮಿಶ್ರಾ ಜೊತೆ ಎಕ್ಸ್‌ಕ್ಲೂಸಿವ್ ಸಂದರ್ಶನ
22:49ವಿಧಾನಸಭೆಯಲ್ಲೂ ಸಿಎಂ ವಿಜಯ್ ಪಂಚಿಂಗ್ ಡೈಲಾಗ್, ದ್ರಾವಿಡ ನಾಡಿನಲ್ಲಿ ರಾಜಕೀಯ ರಂಗು ಬದಲು
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
19:59Suvarna Focus: ರುದ್ರಪ್ರಯಾಗದಲ್ಲಿ ನಿಹಾಂಗ್ ಯೋಧರ ರಣಕಹಳೆ; ಮತ್ತೆ ಕಾಡುತ್ತಿದೆ 1984ರ ‘ಆಪರೇಷನ್ ಬ್ಲ್ಯೂ ಸ್ಟಾರ್’ ಕರಾಳ ನೆನಪು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
22:58ಉಗ್ರನಾಗಲು ಪಾಕಿಸ್ತಾನಕ್ಕೆ ತೆರಳಿ ರಿಯಲ್ ಧುರಂಧರ್ ಆದ ಕಾಶ್ಮೀರ ಯುವಕ, ಬೆಚ್ಚಿ ಬೀಳಿಸೋ ಘಟನೆ
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್
20:58ಮುಂಗಾರು ಮಳೆಯನ್ನೇ ನುಂಗಿ ಹಾಕ್ತಾನಾ ಪುಟ್ಟ ಹುಡುಗ? ಭಾರತಕ್ಕೆ ಶೇ.60ರಷ್ಟು ಬರಗಾಲ ಎಚ್ಚರಿಕೆ
19:36ಯುಪಿ ಕದನ 2027: ‘ಲೋಕ’ ಪಾಠ, ಕಮಲ ಪಡೆಯ ಪ್ರತೀಕಾರ! ವಿಪಕ್ಷಗಳ ನಿದ್ದೆಗೆಡಿಸಿದ ಬಿಜೆಪಿಯ ಮಹಾ ಚಾಣಕ್ಯ ತಂತ್ರ!