ಹಿರಿಯ ನಾಯಕನ ರಾಜೀನಾಮೆ: ಇಕ್ಕಟ್ಟಿನಲ್ಲಿ ಬಿಜೆಪಿ ಮೈತ್ರಿ ಪಕ್ಷ!

ಹಿರಿಯ ನಾಯಕನ ರಾಜೀನಾಮೆ: ಇಕ್ಕಟ್ಟಿನಲ್ಲಿ ಬಿಜೆಪಿ ಮೈತ್ರಿ ಪಕ್ಷ!

Published : Dec 27, 2019, 04:01 PM ISTUpdated : Dec 27, 2019, 05:22 PM IST

ಜನನಾಯಕ್ ಜನತಾ ಪಾರ್ಟಿಯ ಹಿರಿಯ ನಾಯಕರೊಬ್ಬರು ಧಿಡೀರನೆ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಇದರಿಂದಾಗಿ ಹರ್ಯಾಣದಲ್ಲಿ ಬಿಜೆಪಿ ಜೊತೆಗೆ ಮೈತ್ರಿ ಮಾಡಿಕೊಂಡು ಡಿಸಿಎಂ ಆಗಿರುವ ದುಷ್ಯಂತ್ ಚೌಟಾಲಾ ಸದ್ಯ ಇಕ್ಕಟ್ಟಿನಲ್ಲಿ ಸಿಲುಕಿದ್ದಾರೆ. ದುಷ್ಯಂತ್ ಚೌಟಾಲಾ ವಿರುದ್ಧ ಬಹಿರಂಗವಾಗಿಯೇ ಟೀಕಿಸಿದ್ದ, ಹರ್ಯಾಣದ ಶಾಸಕ ರಾಮ್ ಕುಮಾರ್ ಗೌತಮ್ ಬುಧವಾರದಂದು ಪಕ್ಷದ ಉಪ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

 

ಚಂಡೀಗಡ[ಡಿ.27]: ಜನನಾಯಕ್ ಜನತಾ ಪಾರ್ಟಿಯ ಹಿರಿಯ ನಾಯಕರೊಬ್ಬರು ಧಿಡೀರನೆ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಇದರಿಂದಾಗಿ ಹರ್ಯಾಣದಲ್ಲಿ ಬಿಜೆಪಿ ಜೊತೆಗೆ ಮೈತ್ರಿ ಮಾಡಿಕೊಂಡು ಡಿಸಿಎಂ ಆಗಿರುವ ದುಷ್ಯಂತ್ ಚೌಟಾಲಾ ಸದ್ಯ ಇಕ್ಕಟ್ಟಿನಲ್ಲಿ ಸಿಲುಕಿದ್ದಾರೆ. ದುಷ್ಯಂತ್ ಚೌಟಾಲಾ ವಿರುದ್ಧ ಬಹಿರಂಗವಾಗಿಯೇ ಟೀಕಿಸಿದ್ದ, ಹರ್ಯಾಣದ ಶಾಸಕ ರಾಮ್ ಕುಮಾರ್ ಗೌತಮ್ ಬುಧವಾರದಂದು ಪಕ್ಷದ ಉಪ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

ಜೆಜೆಪಿ ಪಕ್ಷದ ಮುಖ್ಯಸ್ಥ ದುಷ್ಯಂತ್ ಚೌಟಾಲಾ ವಿರುದ್ಧ ಸಾರ್ವಜನಿಕವಾಗಿಯೇ ಟೀಕಿಸಿದ್ದ 73 ವರ್ಷದ ರಾಮ್ ಕುಮಾರ್ ಗೌತಮ್ 'ತಾನು ಉಪ ಮುಖ್ಯಮಂತ್ರಿಯಾಗಿದ್ದು ತನ್ನ ಪಕ್ಷದ ಶಾಸಕರ ಬೆಂಬಲದಿಂದ ಎಂಬುವುದನ್ನು ದುಷ್ಯಂತರ್ ಚೌಟಾಲಾ ಯಾವತ್ತೂ ಮರೆಯಬಾರದು' ಎಂದಿದ್ದಾರೆ. ರಾಮ್ ಕುಮಾರ್ ಗೌತಮ್ ಅಕ್ಟೋಬರ್ ತಿಂಗಳಲ್ಲಿ ನಡೆದಿದ್ದ ಹರ್ಯಾಣ ವಿಧಾನಸಭಾ ಚುನಾವಣೆಯಲ್ಲಿ ಅತಂತ್ರ ಸ್ಥಿತಿ ನಿರ್ಮಾಣವಾದಾಗ, ಬಿಜೆಪಿ ಸರ್ಕಾರ ರಚಿಲು ಬೆಂಬಲ ಸೂಚಿಸಿದ್ದ ಜೆಜೆಪಿ ಶಾಸಕರಲ್ಲಿ ಒಬ್ಬರು. 

ರಾಮ್ ಕುಮಾರ್ ಗೌತಮ್ ಅನ್ವಯ ಉಪ ಮುಖ್ಯಮಂತ್ರಿ ತಮ್ಮ ಬಳಿ 11 ಖಾತೆಗಳನ್ನಿಟ್ಟುಕೊಂಡು ಕೇವಲ ಒಬ್ಬ ಶಾಸಕನಿಗೆ, ಪ್ರಮುಖವಲ್ಲದ ಖಾತೆಗೆ ಕಿರಿಯ ಸಚಿವರಾಗಿ ನೇಮಿಸಿರುವುದು ಸರಿಯಲ್ಲ ಎಂದಿದ್ದಾರೆ.

ಚುನಾವಣಾ ಪ್ರಚಾರದ ವೇಳೆ ಕಟು ವಾಗ್ದಾಳಿ ನಡೆಸಿದ್ದ ಪಕ್ಷಕ್ಕೆ ಸರ್ಕಾರ ರಚಿಸಲು ದುಷ್ಯಂತ್ ಚೌಟಾಲಾ ಬೆಂಬಲ ಸೂಚಿಸಿದ್ದರು. ಬಿಜೆಪಿ ಹಾಗೂ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಅವರು ಕಿಡಿ ಕಾರಿದ್ದ ವಿಡಿಯೋಗಳು ಸೋಶಿಯಲ್ ಮೀಡಿಯಾದಲ್ಲಿ ಭಾರೀ ವೈರಲ್ ಆಗಿವೆ

ಡಿಸೆಂಬರ್ 27ರ ಟಾಪ್ 10 ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
18:19ಪುಟಿನ್ ಭಾರತ ಭೇಟಿಯಿಂದ ಹೊಸ ಚರಿತ್ರೆಗೆ ಮುನ್ನುಡಿ, ಕೆಲ ರಾಷ್ಟ್ರಗಳಿಗೆ ಟೆನ್ಶನ್
45:03ಕಿಚ್ಚು ಹೊತ್ತಿಸಿದ ‘ಸಂಚಾರ ಸಾಥಿ​’ ಆ್ಯಪ್; ನಾಯಿ ಇಂದಿನ ಮುಖ್ಯ ವಿಷಯ ಎಂದು ರಾಹುಲ್ ವ್ಯಂಗ್ಯ
01:49Viral Video: ಹೈದ್ರಾಬಾದ್‌ನಲ್ಲಿ ಅಮಾನವೀಯ ಕೃತ್ಯ, ಪುಟ್ಟ ಬಾಲಕಿಯ ಮೇಲೆ ಶಾಲೆಯ ಆಯಾ ಕ್ರೌರ್ಯ!
20:02ಮೋದಿ ಮಾರ್ಗ.. ಕುಮಾರ ಪರ್ವ: ಆತ್ಮನಿರ್ಭರ ಹೆಜ್ಜೆ.. ನಮೋ ಗುರಿಗೆ ಎಚ್​ಡಿಕೆ ಸಾಥ್​​!
20:35Ditwah Cyclone: ಕಾಡುವ ಮಳೆ, ನಡುಗುವು ಭೂಮಿ: ಕಡಲಿನಿಂದ ಕೇಡಿನ ಸಂದೇಶ!
25:147 ನಿಮಿಷದಲ್ಲಿ 7 ಕೋಟಿ ಕದ್ದವರು 24 ಗಂಟೆಯಲ್ಲಿ ಲಾಕ್: ಪಕ್ಕಾ ಪ್ಲಾನ್​ ಮಾಡಿದವರು ಅದೊಂದು ತಪ್ಪು ಮಾಡಿದ್ರು!
22:45ಸೌದಿಯಲ್ಲಿ ಭಾರತೀಯ ಉಮ್ರಾ ಯಾತ್ರಿಗಳ ದುರಂತ ಅಂತ್ಯ: ಅಗ್ನಿವ್ಯೂಹದಿಂದ ಪಾರಾದ ಆ ಒಬ್ಬ ಯಾರು?
01:30ಮಹಾರಾಷ್ಟ್ರ: ಡಿಜೆ ವಿಚಾರಕ್ಕೆ ವರನಿಗೆ ಚಾಕು ಇರಿತ, ಡ್ರೋನ್‌ ಮೂಲಕ 2 ಕಿ.ಮೀ ಆರೋಪಿಗಳ ಚೇಸಿಂಗ್!
24:19ಮುಸ್ಲಿಮರೆಲ್ಲಾ ಒಂದೇ ಥರ ಅಲ್ಲ.. ಹೀಗೆ ಹೇಳಿದ್ದೇಕೆ ಭಾಗವತ್? RSS ವಿರುದ್ಧದ ಪ್ರಶ್ನೆಗಳಿಗೆಲ್ಲಾ ಮೋಹನ್ ಭಾಗವತ್ ಉತ್ತರ!