ಹಿರಿಯ ನಾಯಕನ ರಾಜೀನಾಮೆ: ಇಕ್ಕಟ್ಟಿನಲ್ಲಿ ಬಿಜೆಪಿ ಮೈತ್ರಿ ಪಕ್ಷ!

ಹಿರಿಯ ನಾಯಕನ ರಾಜೀನಾಮೆ: ಇಕ್ಕಟ್ಟಿನಲ್ಲಿ ಬಿಜೆಪಿ ಮೈತ್ರಿ ಪಕ್ಷ!

Published : Dec 27, 2019, 04:01 PM ISTUpdated : Dec 27, 2019, 05:22 PM IST

ಜನನಾಯಕ್ ಜನತಾ ಪಾರ್ಟಿಯ ಹಿರಿಯ ನಾಯಕರೊಬ್ಬರು ಧಿಡೀರನೆ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಇದರಿಂದಾಗಿ ಹರ್ಯಾಣದಲ್ಲಿ ಬಿಜೆಪಿ ಜೊತೆಗೆ ಮೈತ್ರಿ ಮಾಡಿಕೊಂಡು ಡಿಸಿಎಂ ಆಗಿರುವ ದುಷ್ಯಂತ್ ಚೌಟಾಲಾ ಸದ್ಯ ಇಕ್ಕಟ್ಟಿನಲ್ಲಿ ಸಿಲುಕಿದ್ದಾರೆ. ದುಷ್ಯಂತ್ ಚೌಟಾಲಾ ವಿರುದ್ಧ ಬಹಿರಂಗವಾಗಿಯೇ ಟೀಕಿಸಿದ್ದ, ಹರ್ಯಾಣದ ಶಾಸಕ ರಾಮ್ ಕುಮಾರ್ ಗೌತಮ್ ಬುಧವಾರದಂದು ಪಕ್ಷದ ಉಪ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

 

ಚಂಡೀಗಡ[ಡಿ.27]: ಜನನಾಯಕ್ ಜನತಾ ಪಾರ್ಟಿಯ ಹಿರಿಯ ನಾಯಕರೊಬ್ಬರು ಧಿಡೀರನೆ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಇದರಿಂದಾಗಿ ಹರ್ಯಾಣದಲ್ಲಿ ಬಿಜೆಪಿ ಜೊತೆಗೆ ಮೈತ್ರಿ ಮಾಡಿಕೊಂಡು ಡಿಸಿಎಂ ಆಗಿರುವ ದುಷ್ಯಂತ್ ಚೌಟಾಲಾ ಸದ್ಯ ಇಕ್ಕಟ್ಟಿನಲ್ಲಿ ಸಿಲುಕಿದ್ದಾರೆ. ದುಷ್ಯಂತ್ ಚೌಟಾಲಾ ವಿರುದ್ಧ ಬಹಿರಂಗವಾಗಿಯೇ ಟೀಕಿಸಿದ್ದ, ಹರ್ಯಾಣದ ಶಾಸಕ ರಾಮ್ ಕುಮಾರ್ ಗೌತಮ್ ಬುಧವಾರದಂದು ಪಕ್ಷದ ಉಪ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

ಜೆಜೆಪಿ ಪಕ್ಷದ ಮುಖ್ಯಸ್ಥ ದುಷ್ಯಂತ್ ಚೌಟಾಲಾ ವಿರುದ್ಧ ಸಾರ್ವಜನಿಕವಾಗಿಯೇ ಟೀಕಿಸಿದ್ದ 73 ವರ್ಷದ ರಾಮ್ ಕುಮಾರ್ ಗೌತಮ್ 'ತಾನು ಉಪ ಮುಖ್ಯಮಂತ್ರಿಯಾಗಿದ್ದು ತನ್ನ ಪಕ್ಷದ ಶಾಸಕರ ಬೆಂಬಲದಿಂದ ಎಂಬುವುದನ್ನು ದುಷ್ಯಂತರ್ ಚೌಟಾಲಾ ಯಾವತ್ತೂ ಮರೆಯಬಾರದು' ಎಂದಿದ್ದಾರೆ. ರಾಮ್ ಕುಮಾರ್ ಗೌತಮ್ ಅಕ್ಟೋಬರ್ ತಿಂಗಳಲ್ಲಿ ನಡೆದಿದ್ದ ಹರ್ಯಾಣ ವಿಧಾನಸಭಾ ಚುನಾವಣೆಯಲ್ಲಿ ಅತಂತ್ರ ಸ್ಥಿತಿ ನಿರ್ಮಾಣವಾದಾಗ, ಬಿಜೆಪಿ ಸರ್ಕಾರ ರಚಿಲು ಬೆಂಬಲ ಸೂಚಿಸಿದ್ದ ಜೆಜೆಪಿ ಶಾಸಕರಲ್ಲಿ ಒಬ್ಬರು. 

ರಾಮ್ ಕುಮಾರ್ ಗೌತಮ್ ಅನ್ವಯ ಉಪ ಮುಖ್ಯಮಂತ್ರಿ ತಮ್ಮ ಬಳಿ 11 ಖಾತೆಗಳನ್ನಿಟ್ಟುಕೊಂಡು ಕೇವಲ ಒಬ್ಬ ಶಾಸಕನಿಗೆ, ಪ್ರಮುಖವಲ್ಲದ ಖಾತೆಗೆ ಕಿರಿಯ ಸಚಿವರಾಗಿ ನೇಮಿಸಿರುವುದು ಸರಿಯಲ್ಲ ಎಂದಿದ್ದಾರೆ.

ಚುನಾವಣಾ ಪ್ರಚಾರದ ವೇಳೆ ಕಟು ವಾಗ್ದಾಳಿ ನಡೆಸಿದ್ದ ಪಕ್ಷಕ್ಕೆ ಸರ್ಕಾರ ರಚಿಸಲು ದುಷ್ಯಂತ್ ಚೌಟಾಲಾ ಬೆಂಬಲ ಸೂಚಿಸಿದ್ದರು. ಬಿಜೆಪಿ ಹಾಗೂ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಅವರು ಕಿಡಿ ಕಾರಿದ್ದ ವಿಡಿಯೋಗಳು ಸೋಶಿಯಲ್ ಮೀಡಿಯಾದಲ್ಲಿ ಭಾರೀ ವೈರಲ್ ಆಗಿವೆ

ಡಿಸೆಂಬರ್ 27ರ ಟಾಪ್ 10 ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

24:27ನೆಹರು ದಾಖಲೆ ಮುರಿದ ಮೋದಿ ಸುದೀರ್ಘ ಆಡಳಿತ, 3 ಬಾರಿ ಜನಾದೇಶ, ಕದಲದ ಮೋದಿ ಸಿಂಹಾಸನ, ಹೇಗಿತ್ತು 4398 ದಿನಗಳ ಆಡಳಿತ?
24:09ದೀದಿ ಕೋಟೆಯಲ್ಲಿ ಮಹಾಬಿರುಕು.. ಏನು ಕಾರಣ? ಗಜಕೇಸರಿ ವ್ಯೂಹ.. ದೀದಿ ದಿಗ್ಬಂಧನ.. ಏನಿದರ ಗುಟ್ಟು?
24:26ಪ್ಲಾಸ್ಟಿಕ್ ನೋಟು... ಕರೆನ್ಸಿ ಕ್ರಾಂತಿ! ಕಾಗದದ ನೋಟುಗಳ ಆಯಸ್ಸು ಖತಂ, ಮತ್ತೆ ಡಿಮಾನಟೈಸೇಶನ್..?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
24:48ಬೆಂಗಳೂರಲ್ಲೂ ಮೊಳಗುತ್ತಾ ವಿಜಯ್ ವಿಸಿಲ್ ಸದ್ದು? ತಮಿಳು ಮತದಾರರು ಹೆಚ್ಚಿರುವ ವಾರ್ಡ್​ಗಳಲ್ಲಿ ಸ್ಪರ್ಧಿಸುತ್ತಾ ಟಿವಿಕೆ?
18:54ಐದೇ ದಿನಕ್ಕೆ 2 ಕೋಟಿ ಜಿರಳೆ ಸೈನಿಕರು, ಜೆನ್‌ಝೀ ಅಕ್ರೋಶವೋ, ಕ್ರಾಂತಿಯ ಕಿಚ್ಚೋ?
30:39‘ದೇಶಕ್ಕೆ ಆರ್ಥಿಕ ತೂಫಾನ್ ಬರಲಿದೆ.. ದೇಶ ಮಾರಿದ್ದಾರೆ’ ಪ್ರಧಾನಿ ಮೋದಿ ದೇಶದ್ರೋಹಿ ಎಂದು ರಾಹುಲ್ ವಿವಾದ!
21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
47:39ಸೋಷಿಯಲ್ ಮೀಡಿಯಾದಲ್ಲಿ 'ಕಾಕ್ರೋಚ್ ಜನತಾ ಪಾರ್ಟಿ' ಕೋಲಾಹಲ: GenZ ಹೋರಾಟವೋ, ಬರೀ ಕ್ರೇಜೋ?
20:58ರಾಜೀವ್ ಗಾಂಧಿ ಹತ್ಯೆ ಮಾಡಿದ್ದ LTTE ಪ್ರಭಾಕರನ್ ಸ್ಮರಿಸಿದ ತಮಿಳುನಾಡು ಸಿಎಂ ವಿಜಯ್: ಕಾಂಗ್ರೆಸ್‌ಗೆ ಇಕ್ಕಟ್ಟು!