ಹಿರಿಯ ನಾಯಕನ ರಾಜೀನಾಮೆ: ಇಕ್ಕಟ್ಟಿನಲ್ಲಿ ಬಿಜೆಪಿ ಮೈತ್ರಿ ಪಕ್ಷ!

ಹಿರಿಯ ನಾಯಕನ ರಾಜೀನಾಮೆ: ಇಕ್ಕಟ್ಟಿನಲ್ಲಿ ಬಿಜೆಪಿ ಮೈತ್ರಿ ಪಕ್ಷ!

Published : Dec 27, 2019, 04:01 PM ISTUpdated : Dec 27, 2019, 05:22 PM IST

ಜನನಾಯಕ್ ಜನತಾ ಪಾರ್ಟಿಯ ಹಿರಿಯ ನಾಯಕರೊಬ್ಬರು ಧಿಡೀರನೆ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಇದರಿಂದಾಗಿ ಹರ್ಯಾಣದಲ್ಲಿ ಬಿಜೆಪಿ ಜೊತೆಗೆ ಮೈತ್ರಿ ಮಾಡಿಕೊಂಡು ಡಿಸಿಎಂ ಆಗಿರುವ ದುಷ್ಯಂತ್ ಚೌಟಾಲಾ ಸದ್ಯ ಇಕ್ಕಟ್ಟಿನಲ್ಲಿ ಸಿಲುಕಿದ್ದಾರೆ. ದುಷ್ಯಂತ್ ಚೌಟಾಲಾ ವಿರುದ್ಧ ಬಹಿರಂಗವಾಗಿಯೇ ಟೀಕಿಸಿದ್ದ, ಹರ್ಯಾಣದ ಶಾಸಕ ರಾಮ್ ಕುಮಾರ್ ಗೌತಮ್ ಬುಧವಾರದಂದು ಪಕ್ಷದ ಉಪ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

 

ಚಂಡೀಗಡ[ಡಿ.27]: ಜನನಾಯಕ್ ಜನತಾ ಪಾರ್ಟಿಯ ಹಿರಿಯ ನಾಯಕರೊಬ್ಬರು ಧಿಡೀರನೆ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಇದರಿಂದಾಗಿ ಹರ್ಯಾಣದಲ್ಲಿ ಬಿಜೆಪಿ ಜೊತೆಗೆ ಮೈತ್ರಿ ಮಾಡಿಕೊಂಡು ಡಿಸಿಎಂ ಆಗಿರುವ ದುಷ್ಯಂತ್ ಚೌಟಾಲಾ ಸದ್ಯ ಇಕ್ಕಟ್ಟಿನಲ್ಲಿ ಸಿಲುಕಿದ್ದಾರೆ. ದುಷ್ಯಂತ್ ಚೌಟಾಲಾ ವಿರುದ್ಧ ಬಹಿರಂಗವಾಗಿಯೇ ಟೀಕಿಸಿದ್ದ, ಹರ್ಯಾಣದ ಶಾಸಕ ರಾಮ್ ಕುಮಾರ್ ಗೌತಮ್ ಬುಧವಾರದಂದು ಪಕ್ಷದ ಉಪ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

ಜೆಜೆಪಿ ಪಕ್ಷದ ಮುಖ್ಯಸ್ಥ ದುಷ್ಯಂತ್ ಚೌಟಾಲಾ ವಿರುದ್ಧ ಸಾರ್ವಜನಿಕವಾಗಿಯೇ ಟೀಕಿಸಿದ್ದ 73 ವರ್ಷದ ರಾಮ್ ಕುಮಾರ್ ಗೌತಮ್ 'ತಾನು ಉಪ ಮುಖ್ಯಮಂತ್ರಿಯಾಗಿದ್ದು ತನ್ನ ಪಕ್ಷದ ಶಾಸಕರ ಬೆಂಬಲದಿಂದ ಎಂಬುವುದನ್ನು ದುಷ್ಯಂತರ್ ಚೌಟಾಲಾ ಯಾವತ್ತೂ ಮರೆಯಬಾರದು' ಎಂದಿದ್ದಾರೆ. ರಾಮ್ ಕುಮಾರ್ ಗೌತಮ್ ಅಕ್ಟೋಬರ್ ತಿಂಗಳಲ್ಲಿ ನಡೆದಿದ್ದ ಹರ್ಯಾಣ ವಿಧಾನಸಭಾ ಚುನಾವಣೆಯಲ್ಲಿ ಅತಂತ್ರ ಸ್ಥಿತಿ ನಿರ್ಮಾಣವಾದಾಗ, ಬಿಜೆಪಿ ಸರ್ಕಾರ ರಚಿಲು ಬೆಂಬಲ ಸೂಚಿಸಿದ್ದ ಜೆಜೆಪಿ ಶಾಸಕರಲ್ಲಿ ಒಬ್ಬರು. 

ರಾಮ್ ಕುಮಾರ್ ಗೌತಮ್ ಅನ್ವಯ ಉಪ ಮುಖ್ಯಮಂತ್ರಿ ತಮ್ಮ ಬಳಿ 11 ಖಾತೆಗಳನ್ನಿಟ್ಟುಕೊಂಡು ಕೇವಲ ಒಬ್ಬ ಶಾಸಕನಿಗೆ, ಪ್ರಮುಖವಲ್ಲದ ಖಾತೆಗೆ ಕಿರಿಯ ಸಚಿವರಾಗಿ ನೇಮಿಸಿರುವುದು ಸರಿಯಲ್ಲ ಎಂದಿದ್ದಾರೆ.

ಚುನಾವಣಾ ಪ್ರಚಾರದ ವೇಳೆ ಕಟು ವಾಗ್ದಾಳಿ ನಡೆಸಿದ್ದ ಪಕ್ಷಕ್ಕೆ ಸರ್ಕಾರ ರಚಿಸಲು ದುಷ್ಯಂತ್ ಚೌಟಾಲಾ ಬೆಂಬಲ ಸೂಚಿಸಿದ್ದರು. ಬಿಜೆಪಿ ಹಾಗೂ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಅವರು ಕಿಡಿ ಕಾರಿದ್ದ ವಿಡಿಯೋಗಳು ಸೋಶಿಯಲ್ ಮೀಡಿಯಾದಲ್ಲಿ ಭಾರೀ ವೈರಲ್ ಆಗಿವೆ

ಡಿಸೆಂಬರ್ 27ರ ಟಾಪ್ 10 ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

18:19ಸರ್ಕಾರಿ ನೌಕರರ ಮೇಲೆ ಯೋಗಿ ಕಟ್ಟು ನಿಟ್ಟಿನ ಆಕ್ಷನ್​: ವೇತನ ಬೇಕಿದ್ದವರು ನಿಯಮ ಪಾಲಿಸಿ.. ಏನಿದು ರೂಲ್ಸ್..?
18:27ಒಂದೇ ಒಂದು ಫೋನ್ ಕಾಲ್. ಬದಲಾಯ್ತು ಭಾರತ-ಅಮೆರಿಕ ನಂಟು! ಚೀನಾಕ್ಕೆ ಶಾಕ್, ಭಾರತಕ್ಕೆ ಲಕ್!
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
22:38ನೀನೆ ನನ್ನ ಬೆಳ್ಳಿ ಅನ್ನೋ ದಿನವೂ ಬಂತು ನೋಡಿ: ಬೆಳ್ಳಿ ಬೆಲೆ ಏರಿಕೆಗೆ ಕಾರಣ ಏನು?
18:51ಡಾಲರ್ ಸಾಮ್ರಾಜ್ಯ ಪತನ? ಚಿನ್ನದ ಅಧಿಪತ್ಯ ಶುರು, ಡಾಲರ್ ಕಂಗಾಲು! ಬಂಗಾರ ರಾಶಿ ಹಾಕ್ತಿರೋ ರಿಸರ್ವ್ ಬ್ಯಾಂಕ್‌
21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
21:07ಅಸ್ಸಾಂ ಅಖಾಡದಲ್ಲಿ ಡಿಕೆ–ಪ್ರಿಯಾಂಕ ಹಿಮಾಗ್ನಿ ಯಜ್ಞ! ಕಮಲ ಸಾಮ್ರಾಜ್ಯಕ್ಕೆ ಡೆಡ್ಲಿ ಸವಾಲು