ಹಿರಿಯ ನಾಯಕನ ರಾಜೀನಾಮೆ: ಇಕ್ಕಟ್ಟಿನಲ್ಲಿ ಬಿಜೆಪಿ ಮೈತ್ರಿ ಪಕ್ಷ!

ಹಿರಿಯ ನಾಯಕನ ರಾಜೀನಾಮೆ: ಇಕ್ಕಟ್ಟಿನಲ್ಲಿ ಬಿಜೆಪಿ ಮೈತ್ರಿ ಪಕ್ಷ!

Published : Dec 27, 2019, 04:01 PM ISTUpdated : Dec 27, 2019, 05:22 PM IST

ಜನನಾಯಕ್ ಜನತಾ ಪಾರ್ಟಿಯ ಹಿರಿಯ ನಾಯಕರೊಬ್ಬರು ಧಿಡೀರನೆ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಇದರಿಂದಾಗಿ ಹರ್ಯಾಣದಲ್ಲಿ ಬಿಜೆಪಿ ಜೊತೆಗೆ ಮೈತ್ರಿ ಮಾಡಿಕೊಂಡು ಡಿಸಿಎಂ ಆಗಿರುವ ದುಷ್ಯಂತ್ ಚೌಟಾಲಾ ಸದ್ಯ ಇಕ್ಕಟ್ಟಿನಲ್ಲಿ ಸಿಲುಕಿದ್ದಾರೆ. ದುಷ್ಯಂತ್ ಚೌಟಾಲಾ ವಿರುದ್ಧ ಬಹಿರಂಗವಾಗಿಯೇ ಟೀಕಿಸಿದ್ದ, ಹರ್ಯಾಣದ ಶಾಸಕ ರಾಮ್ ಕುಮಾರ್ ಗೌತಮ್ ಬುಧವಾರದಂದು ಪಕ್ಷದ ಉಪ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

 

ಚಂಡೀಗಡ[ಡಿ.27]: ಜನನಾಯಕ್ ಜನತಾ ಪಾರ್ಟಿಯ ಹಿರಿಯ ನಾಯಕರೊಬ್ಬರು ಧಿಡೀರನೆ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಇದರಿಂದಾಗಿ ಹರ್ಯಾಣದಲ್ಲಿ ಬಿಜೆಪಿ ಜೊತೆಗೆ ಮೈತ್ರಿ ಮಾಡಿಕೊಂಡು ಡಿಸಿಎಂ ಆಗಿರುವ ದುಷ್ಯಂತ್ ಚೌಟಾಲಾ ಸದ್ಯ ಇಕ್ಕಟ್ಟಿನಲ್ಲಿ ಸಿಲುಕಿದ್ದಾರೆ. ದುಷ್ಯಂತ್ ಚೌಟಾಲಾ ವಿರುದ್ಧ ಬಹಿರಂಗವಾಗಿಯೇ ಟೀಕಿಸಿದ್ದ, ಹರ್ಯಾಣದ ಶಾಸಕ ರಾಮ್ ಕುಮಾರ್ ಗೌತಮ್ ಬುಧವಾರದಂದು ಪಕ್ಷದ ಉಪ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

ಜೆಜೆಪಿ ಪಕ್ಷದ ಮುಖ್ಯಸ್ಥ ದುಷ್ಯಂತ್ ಚೌಟಾಲಾ ವಿರುದ್ಧ ಸಾರ್ವಜನಿಕವಾಗಿಯೇ ಟೀಕಿಸಿದ್ದ 73 ವರ್ಷದ ರಾಮ್ ಕುಮಾರ್ ಗೌತಮ್ 'ತಾನು ಉಪ ಮುಖ್ಯಮಂತ್ರಿಯಾಗಿದ್ದು ತನ್ನ ಪಕ್ಷದ ಶಾಸಕರ ಬೆಂಬಲದಿಂದ ಎಂಬುವುದನ್ನು ದುಷ್ಯಂತರ್ ಚೌಟಾಲಾ ಯಾವತ್ತೂ ಮರೆಯಬಾರದು' ಎಂದಿದ್ದಾರೆ. ರಾಮ್ ಕುಮಾರ್ ಗೌತಮ್ ಅಕ್ಟೋಬರ್ ತಿಂಗಳಲ್ಲಿ ನಡೆದಿದ್ದ ಹರ್ಯಾಣ ವಿಧಾನಸಭಾ ಚುನಾವಣೆಯಲ್ಲಿ ಅತಂತ್ರ ಸ್ಥಿತಿ ನಿರ್ಮಾಣವಾದಾಗ, ಬಿಜೆಪಿ ಸರ್ಕಾರ ರಚಿಲು ಬೆಂಬಲ ಸೂಚಿಸಿದ್ದ ಜೆಜೆಪಿ ಶಾಸಕರಲ್ಲಿ ಒಬ್ಬರು. 

ರಾಮ್ ಕುಮಾರ್ ಗೌತಮ್ ಅನ್ವಯ ಉಪ ಮುಖ್ಯಮಂತ್ರಿ ತಮ್ಮ ಬಳಿ 11 ಖಾತೆಗಳನ್ನಿಟ್ಟುಕೊಂಡು ಕೇವಲ ಒಬ್ಬ ಶಾಸಕನಿಗೆ, ಪ್ರಮುಖವಲ್ಲದ ಖಾತೆಗೆ ಕಿರಿಯ ಸಚಿವರಾಗಿ ನೇಮಿಸಿರುವುದು ಸರಿಯಲ್ಲ ಎಂದಿದ್ದಾರೆ.

ಚುನಾವಣಾ ಪ್ರಚಾರದ ವೇಳೆ ಕಟು ವಾಗ್ದಾಳಿ ನಡೆಸಿದ್ದ ಪಕ್ಷಕ್ಕೆ ಸರ್ಕಾರ ರಚಿಸಲು ದುಷ್ಯಂತ್ ಚೌಟಾಲಾ ಬೆಂಬಲ ಸೂಚಿಸಿದ್ದರು. ಬಿಜೆಪಿ ಹಾಗೂ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಅವರು ಕಿಡಿ ಕಾರಿದ್ದ ವಿಡಿಯೋಗಳು ಸೋಶಿಯಲ್ ಮೀಡಿಯಾದಲ್ಲಿ ಭಾರೀ ವೈರಲ್ ಆಗಿವೆ

ಡಿಸೆಂಬರ್ 27ರ ಟಾಪ್ 10 ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
21:07ಅಸ್ಸಾಂ ಅಖಾಡದಲ್ಲಿ ಡಿಕೆ–ಪ್ರಿಯಾಂಕ ಹಿಮಾಗ್ನಿ ಯಜ್ಞ! ಕಮಲ ಸಾಮ್ರಾಜ್ಯಕ್ಕೆ ಡೆಡ್ಲಿ ಸವಾಲು
23:42ಭರತ ಭೂಮಿಯ ಮೇಲೆ ಕೋಪಿಸಿಕೊಂಡನಾ ಭಾಸ್ಕರ..? ನೆತ್ತಿ ಸುಡುವ ಸೂರ್ಯ ಬೆಳಕು ಚೆಲ್ಲುತ್ತಿಲ್ಲವೇಕೆ..?
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
20:56ಮೂರು ದಶಕದ ಬಳಿಕ ಗಾಂಧಿ ಕುಟುಂಬದಲ್ಲಿ ಮದುವೆ ಸಂಭ್ರಮ: ರೈಹಾನ್ ವಾದ್ರಾ–ಅವಿವಾ ಬೇಗ್ ಲವ್ ಸ್ಟೋರಿ
23:19Bullet Train: ಸಮುದ್ರದಡಿ 7 ಕಿ.ಮೀ ಸುರಂಗ, ದೇಶದ ಮೊದಲ ಅದ್ಭುತ! ಬಂದ ಬಂದ ಬುಲೆಟ್‌ ಬಾಬಾ!
21:52ಖಗ ಮೃಗಗಳ ಮೂಲಕ ಗೂಢಚರ್ಯೆ: ಪ್ರಾಣಿ, ಪಕ್ಷಿ, ಕೀಟಗಳಿಂದ ಹೇಗೆ ನಡೆಯುತ್ತೆ ಗೂಢಚರ್ಯೆ
21:11ಮೋದಿ ಓಮನ್ ಭೇಟಿ.. ಪಾಕ್ ಚೀನಾ ಪತರಗುಟ್ಟಿದ್ದೇಕೆ? ಶತಕೋಟಿ ಒಡೆಯನ ಸಾಮ್ರಾಜ್ಯ ಹೇಗಿದೆ ಗೊತ್ತಾ..!
19:21ಆರ್ಥಿಕತೆ ಬಾಹುಬಲಿಯ ರೂಪಾಯಿ ಮೌಲ್ಯ ICUನಲ್ಲಿ; ಅಂದುಕೊಂಡಂಗಿಲ್ಲ ಭವಿಷ್ಯ!
20:57Suvarna Special: ಮಮತಾ ಬತ್ತಳಿಕೆ ಹೊಸ ಅಸ್ತ್ರ ಯಾವುದು ? ಮೋದಿ ವಿರುದ್ಧ ಹಿಂದೂ ಅಸ್ತ್ರ ಹಿಡಿದ ದೀದಿ..!