ಹಿರಿಯ ನಾಯಕನ ರಾಜೀನಾಮೆ: ಇಕ್ಕಟ್ಟಿನಲ್ಲಿ ಬಿಜೆಪಿ ಮೈತ್ರಿ ಪಕ್ಷ!

ಹಿರಿಯ ನಾಯಕನ ರಾಜೀನಾಮೆ: ಇಕ್ಕಟ್ಟಿನಲ್ಲಿ ಬಿಜೆಪಿ ಮೈತ್ರಿ ಪಕ್ಷ!

Published : Dec 27, 2019, 04:01 PM ISTUpdated : Dec 27, 2019, 05:22 PM IST

ಜನನಾಯಕ್ ಜನತಾ ಪಾರ್ಟಿಯ ಹಿರಿಯ ನಾಯಕರೊಬ್ಬರು ಧಿಡೀರನೆ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಇದರಿಂದಾಗಿ ಹರ್ಯಾಣದಲ್ಲಿ ಬಿಜೆಪಿ ಜೊತೆಗೆ ಮೈತ್ರಿ ಮಾಡಿಕೊಂಡು ಡಿಸಿಎಂ ಆಗಿರುವ ದುಷ್ಯಂತ್ ಚೌಟಾಲಾ ಸದ್ಯ ಇಕ್ಕಟ್ಟಿನಲ್ಲಿ ಸಿಲುಕಿದ್ದಾರೆ. ದುಷ್ಯಂತ್ ಚೌಟಾಲಾ ವಿರುದ್ಧ ಬಹಿರಂಗವಾಗಿಯೇ ಟೀಕಿಸಿದ್ದ, ಹರ್ಯಾಣದ ಶಾಸಕ ರಾಮ್ ಕುಮಾರ್ ಗೌತಮ್ ಬುಧವಾರದಂದು ಪಕ್ಷದ ಉಪ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

 

ಚಂಡೀಗಡ[ಡಿ.27]: ಜನನಾಯಕ್ ಜನತಾ ಪಾರ್ಟಿಯ ಹಿರಿಯ ನಾಯಕರೊಬ್ಬರು ಧಿಡೀರನೆ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಇದರಿಂದಾಗಿ ಹರ್ಯಾಣದಲ್ಲಿ ಬಿಜೆಪಿ ಜೊತೆಗೆ ಮೈತ್ರಿ ಮಾಡಿಕೊಂಡು ಡಿಸಿಎಂ ಆಗಿರುವ ದುಷ್ಯಂತ್ ಚೌಟಾಲಾ ಸದ್ಯ ಇಕ್ಕಟ್ಟಿನಲ್ಲಿ ಸಿಲುಕಿದ್ದಾರೆ. ದುಷ್ಯಂತ್ ಚೌಟಾಲಾ ವಿರುದ್ಧ ಬಹಿರಂಗವಾಗಿಯೇ ಟೀಕಿಸಿದ್ದ, ಹರ್ಯಾಣದ ಶಾಸಕ ರಾಮ್ ಕುಮಾರ್ ಗೌತಮ್ ಬುಧವಾರದಂದು ಪಕ್ಷದ ಉಪ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

ಜೆಜೆಪಿ ಪಕ್ಷದ ಮುಖ್ಯಸ್ಥ ದುಷ್ಯಂತ್ ಚೌಟಾಲಾ ವಿರುದ್ಧ ಸಾರ್ವಜನಿಕವಾಗಿಯೇ ಟೀಕಿಸಿದ್ದ 73 ವರ್ಷದ ರಾಮ್ ಕುಮಾರ್ ಗೌತಮ್ 'ತಾನು ಉಪ ಮುಖ್ಯಮಂತ್ರಿಯಾಗಿದ್ದು ತನ್ನ ಪಕ್ಷದ ಶಾಸಕರ ಬೆಂಬಲದಿಂದ ಎಂಬುವುದನ್ನು ದುಷ್ಯಂತರ್ ಚೌಟಾಲಾ ಯಾವತ್ತೂ ಮರೆಯಬಾರದು' ಎಂದಿದ್ದಾರೆ. ರಾಮ್ ಕುಮಾರ್ ಗೌತಮ್ ಅಕ್ಟೋಬರ್ ತಿಂಗಳಲ್ಲಿ ನಡೆದಿದ್ದ ಹರ್ಯಾಣ ವಿಧಾನಸಭಾ ಚುನಾವಣೆಯಲ್ಲಿ ಅತಂತ್ರ ಸ್ಥಿತಿ ನಿರ್ಮಾಣವಾದಾಗ, ಬಿಜೆಪಿ ಸರ್ಕಾರ ರಚಿಲು ಬೆಂಬಲ ಸೂಚಿಸಿದ್ದ ಜೆಜೆಪಿ ಶಾಸಕರಲ್ಲಿ ಒಬ್ಬರು. 

ರಾಮ್ ಕುಮಾರ್ ಗೌತಮ್ ಅನ್ವಯ ಉಪ ಮುಖ್ಯಮಂತ್ರಿ ತಮ್ಮ ಬಳಿ 11 ಖಾತೆಗಳನ್ನಿಟ್ಟುಕೊಂಡು ಕೇವಲ ಒಬ್ಬ ಶಾಸಕನಿಗೆ, ಪ್ರಮುಖವಲ್ಲದ ಖಾತೆಗೆ ಕಿರಿಯ ಸಚಿವರಾಗಿ ನೇಮಿಸಿರುವುದು ಸರಿಯಲ್ಲ ಎಂದಿದ್ದಾರೆ.

ಚುನಾವಣಾ ಪ್ರಚಾರದ ವೇಳೆ ಕಟು ವಾಗ್ದಾಳಿ ನಡೆಸಿದ್ದ ಪಕ್ಷಕ್ಕೆ ಸರ್ಕಾರ ರಚಿಸಲು ದುಷ್ಯಂತ್ ಚೌಟಾಲಾ ಬೆಂಬಲ ಸೂಚಿಸಿದ್ದರು. ಬಿಜೆಪಿ ಹಾಗೂ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಅವರು ಕಿಡಿ ಕಾರಿದ್ದ ವಿಡಿಯೋಗಳು ಸೋಶಿಯಲ್ ಮೀಡಿಯಾದಲ್ಲಿ ಭಾರೀ ವೈರಲ್ ಆಗಿವೆ

ಡಿಸೆಂಬರ್ 27ರ ಟಾಪ್ 10 ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
23:56ಹಾರ್ಮುಜ್ ಬಿಕ್ಕಟ್ಟಿನ ನಂತರ ಭಾರತದ ಭವಿಷ್ಯವೇನು? ಬಂಗಾರ ₹50,000 ಕುಸಿತ..! ಅಗ್ಗವಾಗುತ್ತಾ ಪೆಟ್ರೋಲ್ ದರ? ಮೋದಿ ಹೊಸ ಲೆಕ್ಕಾಚಾರ!
39:28ಅಯೋಧ್ಯೆ ರಾಮಮಂದಿರ: ಪ್ರಾಜೆಕ್ಟ್ ಚೀಫ್ ನೃಪೇಂದ್ರ ಮಿಶ್ರಾ ಜೊತೆ ಎಕ್ಸ್‌ಕ್ಲೂಸಿವ್ ಸಂದರ್ಶನ
22:49ವಿಧಾನಸಭೆಯಲ್ಲೂ ಸಿಎಂ ವಿಜಯ್ ಪಂಚಿಂಗ್ ಡೈಲಾಗ್, ದ್ರಾವಿಡ ನಾಡಿನಲ್ಲಿ ರಾಜಕೀಯ ರಂಗು ಬದಲು
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?