ಮೋದಿ ಕ್ಯಾಬಿನೆಟ್‌ಗೆ ಅಚ್ಚರಿಯ ಹೆಸರು: ಶೋಭಾ ಕರಂದ್ಲಾಜೆಗೆ ಸಚಿವ ಸ್ಥಾನ?

ಮೋದಿ ಕ್ಯಾಬಿನೆಟ್‌ಗೆ ಅಚ್ಚರಿಯ ಹೆಸರು: ಶೋಭಾ ಕರಂದ್ಲಾಜೆಗೆ ಸಚಿವ ಸ್ಥಾನ?

Published : Jul 07, 2021, 01:38 PM ISTUpdated : Jul 07, 2021, 01:43 PM IST

ಸದ್ಯ ಇಡೀ ದೇಶದ ಚಿತ್ತ ಪ್ರಧಾನ ಮಂತ್ರಿ ನರೇಂದ್ರ ಮೋದಿ ಸಂಪುಟದಲ್ಲಿ ಯಾರಿಗೆ ಸ್ಥಾನ ಸಿಗುತ್ತದೆ ಎಂಬ ವಿಚಾರದ ಮೇಲಿದೆ. ಇದೇ ಸಂದರ್ಭದಲ್ಲಿ ಕರ್ನಾಟಕದ ಯಾವ ಸಂಸದರಿಗೆ ಸಚಿವರಾಗೋ ಭಾಗ್ಯ ಸಿಗುತ್ತದೆ ಎಂಬ ವಿಚಾರವೂ ಕನ್ನಡಿಗರ ಕುತೂಹಲಕ್ಕೆ ಕಾರಣವಾಗಿದೆ. ಈ ಎಲ್ಲಾ ವಿಚಾರಗಳ ನಡುವೆ ಸದ್ಯ ಶೋಭಾ ಕರಂದ್ಲಾಜೆ ಹೆಸರು ಸಚಿವ ಸ್ಥಾನಕ್ಕೆ ಅಂತಿಮವಾಗಿದೆ ಎಂಬ ಮಾತುಗಳು ಕೇಳಿ ಬಂದಿವೆ

ನವದೆಹಲಿ(ಜು.07): ಸದ್ಯ ಇಡೀ ದೇಶದ ಚಿತ್ತ ಪ್ರಧಾನ ಮಂತ್ರಿ ನರೇಂದ್ರ ಮೋದಿ ಸಂಪುಟದಲ್ಲಿ ಯಾರಿಗೆ ಸ್ಥಾನ ಸಿಗುತ್ತದೆ ಎಂಬ ವಿಚಾರದ ಮೇಲಿದೆ. ಇದೇ ಸಂದರ್ಭದಲ್ಲಿ ಕರ್ನಾಟಕದ ಯಾವ ಸಂಸದರಿಗೆ ಸಚಿವರಾಗೋ ಭಾಗ್ಯ ಸಿಗುತ್ತದೆ ಎಂಬ ವಿಚಾರವೂ ಕನ್ನಡಿಗರ ಕುತೂಹಲಕ್ಕೆ ಕಾರಣವಾಗಿದೆ. ಈ ಎಲ್ಲಾ ವಿಚಾರಗಳ ನಡುವೆ ಸದ್ಯ ಶೋಭಾ ಕರಂದ್ಲಾಜೆ ಹೆಸರು ಸಚಿವ ಸ್ಥಾನಕ್ಕೆ ಅಂತಿಮವಾಗಿದೆ ಎಂಬ ಮಾತುಗಳು ಕೇಳಿ ಬಂದಿವೆ. 

ಮೋದಿ ಸಂಪುಟಕ್ಕೆ ಕರ್ನಾಟಕದ ಸಂಸದರು?: ಇಲ್ಲಿದೆ ಸಂಭಾವ್ಯ ಸಚಿವರ ಪಟ್ಟಿ!

ಹೌದು ಕರಾವಳಿ ಭಾಗ ಮತ್ತು ಒಕ್ಕಲಿಗ ಸಮೂದಾಯಕ್ಕೆ ಪ್ರಾತಿನಿಧ್ಯ ನೀಡಿದ ಕೇಂದ್ರ ನಾಯಕತ್ವ ಸದಾನಂದಗೌಡ ಅವರಿಗೆ ಪರ್ಯಾಯವಾಗಿ ಶೋಭಾ ಕರಂದ್ಲಾಜೆಗೆ ಅವಕಾಶ ನೀಡುವ ಸಾಧ್ಯತೆ ಇದೆ ಎನ್ನಲಾಗಿದೆ. ಕರಾವಳಿ ಮತ್ತು ಒಕ್ಕಲಿಗ ಕೋಟಾದಡಿ ಶೋಭಾ ಹೆಸರು ಅಂತಿಮವಾಗಿದ್ದು, ಸಂಘಟನೆಯಲ್ಲೂ ಅವರಿಗೆ ಒಳ್ಳೆಯ ಹೆಸರು ಇದೆ. ಹೀಗಿರುವಾಗ ಕೇಂದ್ರ ಸರ್ಕಾರ ಮತ್ತು ರಾಜ್ಯ ಸರ್ಕಾರದ ನಡುವೆ ಉತ್ತಮ ಸಂಪರ್ಕ ಸೇತುವೆಯಾಗಿ ಕೆಲಸ ಮಾಡುವ ಚಾಕಚಕ್ಯತೆಯೂ ಅವರಲ್ಲಿದೆ.

ಸಂಪುಟ ವಿಸ್ತರಣೆಗೆ ಶುಭ ಮುಹೂರ್ತ ಫಿಕ್ಸ್; ಸಂಜೆ 6 ಗಂಟೆಗೆ ಅತ್ಯಂತ ಕಿರಿಯರ ಕ್ಯಾಬಿನೆಟ್ ಪ್ರಕಟ!

ಇವೆಲ್ಲಕ್ಕಿಂತಲೂ ಮಿಗಿಲಾಗಿ ಜಾತಿ ಸಮೀಕರಣದಲ್ಲೂ ಶೋಭಾ ಆಯ್ಕೆ ಉತ್ತಮ ಫಲಿತಾಂಶ ನೀಡುವ ನಿರೀಕ್ಷೆ ಇದೆ ಎನ್ನಲಾಗಿದೆ. ಈಗಾಗಲೇ ಶೋಭಾ ಕರೆಂದ್ಲಾಜೆಯೂ ದೆಹಲಿ ಸೇರಿದ್ದಾರೆ.

24:25ಭಾರತದ ಬಳಿಯೂ ಇದೆ ಮಲಕ್ಕಾ ಜಲಸಂಧಿ ಮುಚ್ಚಿದ್ರೆ ಕೆಲ ದೇಶದ ಕತೆ ಗೋವಿಂದ
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
23:34ಕೇರಳ ಎಲೆಕ್ಷನ್ ಗ್ರೌಂಡ್ ರಿಪೋರ್ಟ್: ಕನ್ನಡಿಗರೇ ಹೆಚ್ಚಿರುವ ಮಂಜೇಶ್ವರದ ಜನ ಹೇಳೋದೇನು?
20:04Suvarna Focus: ಕೆಂಪು ರಕ್ಕಸ ಕೋಟೆ ಧೂಳಿಪಟ, ಭಾರತ ಈಗ ನಕ್ಸಲ್ ಮುಕ್ತ! 59 ವರ್ಷಗಳ ರಕ್ಕಸನಿಗೆ ಶಾಶ್ವತ ಅಂತ್ಯಕ್ರಿಯೆ
53:2759 ವರ್ಷಗಳ ನಕ್ಸಲ್ ಯುಗಾಂತ್ಯ? ಅಮಿತ್ ಶಾ ಮಹತ್ವದ ಘೋಷಣೆ! 59 ವರ್ಷದ ಬಳಿಕ ಭಾರತ ನಿರಾಳ!
16:00ನೆತನ್ಯಾಹು ಹೆಣೆದ 'ಹೆಕ್ಸಾಗನ್' ವ್ಯೂಹಕ್ಕೆ ಮೋದಿ ಸಾರಥಿ: ಇಸ್ರೇಲ್ ಭೇಟಿಯಿಂದ ಜಾಗತಿಕ ರಾಜಕಾರಣದಲ್ಲಿ ಹೊಸ ಸಂಚಲನ!
18:19ಸರ್ಕಾರಿ ನೌಕರರ ಮೇಲೆ ಯೋಗಿ ಕಟ್ಟು ನಿಟ್ಟಿನ ಆಕ್ಷನ್​: ವೇತನ ಬೇಕಿದ್ದವರು ನಿಯಮ ಪಾಲಿಸಿ.. ಏನಿದು ರೂಲ್ಸ್..?
18:27ಒಂದೇ ಒಂದು ಫೋನ್ ಕಾಲ್. ಬದಲಾಯ್ತು ಭಾರತ-ಅಮೆರಿಕ ನಂಟು! ಚೀನಾಕ್ಕೆ ಶಾಕ್, ಭಾರತಕ್ಕೆ ಲಕ್!
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್