ಲೋಕಸಭಾ ಚುನಾವಣೆ ಬಳಿಕ ಸಿಎಂ ಆಗ್ತಾರ ಡಿಕೆಶಿ? ಕಾಂಗ್ರೆಸ್ ನಾಯಕರ ಮಾತಿನಲ್ಲೇ ಸುಳಿವು!

Apr 15, 2024, 11:29 PM IST

ಲೋಕಸಭೆ ಚುನಾವಣೆ ಬಳಿಕ ಕರ್ನಾಟಕದಲ್ಲಿ ಮುಖ್ಯಮಂತ್ರಿ ಬದಲಾವಣೆಯಾಗುತ್ತಾ? ಈ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ನೀಡುತ್ತಿರುವ ಹೇಳಿಕೆ ಈ ಚರ್ಚೆಗೆ ಮತ್ತಷ್ಟು ಬಲ ನೀಡಿದೆ. ಮೈಸೂರು ಹಾಗೂ ಚಾಮರಾಜನಗರ ಸವಾಲನ್ನು ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಸಿಎಂ ಸಿದ್ದರಾಮಯ್ಯ ಬರೋಬ್ಬರಿ 9 ದಿನ ಈ ಕ್ಷೇತ್ರದಲ್ಲಿ ಕಳೆದಿದ್ದಾರೆ. ನಾನು ಬೇಕೋ ಬೇಡ್ವೋ ಎಂದು ಭಾಷಣದಲ್ಲಿ ಸಿದ್ದರಾಮಯ್ಯ ಜನರನ್ನು ಕೇಳುತ್ತಿದ್ದಾರೆ.  ಇತ್ತ ದೆಹಲಿಯಲ್ಲಿ ಎಲ್ಲಾ ನಿರ್ಧಾರವಾಗಿದೆ. ನೀವು ತಲೆಕೆಡಿಸಿಕೊಳ್ಳಬೇಡಿ, ದಿಲ್ಲಿಯಲ್ಲಿ ಎಲ್ಲಾ ತೀರ್ಮಾನ ಆಗಿದೆ ಎಂದು ಡಿಕೆ ಶಿವಕುಮಾರ್ ಹೇಳಿದ್ದಾರೆ.