ಡಿ. 13, 2001ರಂದು ಸಂಸತ್ ಮೇಲೆರಗಿದ್ದರು ಐವರು ಉಗ್ರರು..! ಅದೇ ದಿನ ಮತ್ತೆ ನಡುಗಿತು ಲೋಕಸಭೆ..!

ಡಿ. 13, 2001ರಂದು ಸಂಸತ್ ಮೇಲೆರಗಿದ್ದರು ಐವರು ಉಗ್ರರು..! ಅದೇ ದಿನ ಮತ್ತೆ ನಡುಗಿತು ಲೋಕಸಭೆ..!

Published : Dec 14, 2023, 03:44 PM IST

ಲೋಕಸಭೆ ಇತಿಹಾಸದಲ್ಲೇ ಕಂಡು ಕೇಳರಿಯದ ಭದ್ರತಾ ವೈಫಲ್ಯ..!
22 ವರ್ಷಗಳ ಹಿಂದಿನ ಕರಾಳ ಘಟನೆ,ಅದೇ ದಿನ ಮಹಾ ಪ್ರಮಾದ..!
ಸಂಸತ್ ಒಳಗೆ ನುಗ್ಗಿದ ಅಪರಿಚಿತರು ಯಾರು?ಏನು ಅವರ ಟಾರ್ಗೆಟ್ ?

22 ವರ್ಷಗಳ ನಂತರ ಇಡೀ ದೇಶ ಮತ್ತೊಮ್ಮೆ ಬೆಚ್ಚಿ ಬಿದ್ದಿದೆ. 2 ದಶಕಗಳ ಹಿಂದಿನ ಆ ಕರಾಳ ಘಟನೆಯನ್ನು ಮತ್ತೆ ನೆನಪಿಸಿತು, ಅದೊಂದು ಪ್ರಮಾದ. ಹೊಸ ಸಂಸತ್(Parlimrnt) ಭವನಕ್ಕೇ ನುಗ್ಗಿದರು ಇಬ್ಬರು ಆಗಂತುಕರು. ಲೋಕಸಭೆಯಲ್ಲೇ(Loksabha) ಸ್ಮೋಕ್ ಬಾಂಬ್ ಸಿಡಿಸಿದ್ರು ಅವಳಿ ಅಪರಿಚಿತರು. ಅವತ್ತು ನಡೆದದ್ದು ಮಾರಣಹೋಮ, ಇವತ್ತು ನಡೆದಿರೋದು ಮಹಾಪ್ರಮಾದ. ಸಂಸತ್ ಭವನ ಈ ದೇಶದ ಆಡಳಿತದ ಶಕ್ತಿಕೇಂದ್ರ. ದೇಶಕ್ಕೆ ಏನೇ ಕಾನೂನು ಬಂದ್ರೂ, ವ್ಯವಸ್ಥಗಳು ಬಂದ್ರೂ ಅವೆಲ್ಲದ ಮೂಲ ಸ್ಥಾನ ಅದೇ. ಸಂಸತ್ ಅಂದ್ರೆ ದೇಶದ ಹೆಮ್ಮೆ, ಸಂಸತ್ ಅಂದ್ರೆ ದೇಶದ ಘನತೆ, ಗೌರವ. ಪ್ರಜಾತಂತ್ರ ವ್ಯವಸ್ಥೆಯ ಪ್ರತೀಕ ಈ ಸಂಸತ್. ಅಂಥಾ ಸಂಸತ್'ನೊಳಗೆ ಬುಧವಾರ ನಡೆದದ್ದು ನಿಜಕ್ಕೂ ಇಡೀ ದೇಶವೇ ಬೆಚ್ಚಿ ಬೀಳುವಂಥಾ ಘಟನೆ. ಡಿಸೆಂಬರ್ 13 ಈ ದಿನವನ್ನು ನೆನಪಿಸಿಕೊಂಡ್ರ ಭಾರತದ ಸಂಸತ್ ಒಂದು ಕ್ಷಣ ಬೆಚ್ಚಿ ಬೀಳತ್ತೆ. ಕಾರಣವೂ ಇದೆ. ಅದು ಸಂಸತ್ ಪಾಲಿಗೆ ಕರಾಳ ದಿನ. 22 ವರ್ಷಗಳ ಹಿಂದೆ ಅದೇ ಡಿಸೆಂಬರ್ 13ರ ದಿನ ನಡೆದಿದ್ದ ಘಟನೆಯನ್ನ ದೇಶ ಇನ್ನೂ ಮರೆತಿಲ್ಲ, ಮರೆಯೋದಕ್ಕೆ ಸಾಧ್ಯಾನೂ ಇಲ್ಲ. ಯಾಕಂದ್ರೆ ಆ ಘಟನೆಯೇ ಅಂಥದ್ದು. ಆ ಘಟನೆಗೆ ದಿನಕ್ಕೆ 22 ವರ್ಷ ತುಂಬಿದ ದಿನದಂದೇ ಮತ್ತೊಂದು ಮಹಾಪ್ರಮಾದ ನಡೆದು ಹೋಗಿದೆ.

ಭಾರತದ ಸಂಸತ್ ಅಂದ್ರೆ ಅದೊಂದು ಸರ್ಪಕೋಟೆ. ಅದ್ರಲ್ಲೂ ಇತ್ತೀಚೆಗೆ ಉದ್ಘಾಟನೆಗೊಂಡಿದ್ದ ಸೆಂಟ್ರಲ್ ವಿಸ್ತಾ(Central Vista) ಹೆಸರಿನ ಹೊಸ ಸಂಸತ್ ಭವನವಂತೂ ಅಭೇದ್ಯ ಕೋಟೆ. ಅಲ್ಲಿಗೆ ಸಂಸತ್ ಸದಸ್ಯರು, ಅಧಿಕಾರಿಗಳು, ಮಾಧ್ಯಮದವರು ಬಿಟ್ರೆ, ಬೇರಾರಿಗೂ ಪ್ರವೇಶವೇ ಇಲ್ಲ. ಸಂಸತ್ ಕಲಾಪವನ್ನು ವೀಕ್ಷಿಸಲು ಬರುವವರಿಗೆ ಪಾಸ್ ಇದ್ರೆ ಮಾತ್ರ ಎಂಟ್ರಿ. ಹಾಗೆ ಪಾಸ್ ಇದ್ದವರು ಐದಾರೂ ಭದ್ರತಾ ತಪಾಸಣೆಗಳನ್ನು ಮುಗಿಸಿಯೇ ಒಳಗೆ ಹೋಗ್ಬೇಕು. ಅನುಮತಿ ಇಲ್ಲದೆ ಒಂದು ಸಣ್ಣ ಇರುವೆಯೂ ಒಳ ಹೋಗಲು ಸಾಧ್ಯವಿಲ್ಲ ಅನ್ನುವಷ್ಟರ ಮಟ್ಟಿಗಿನ ಸರ್ಪಕೋಟೆಯಂಥಾ ಭದ್ರತೆ. ಆದ್ರೆ ಆ ಭದ್ರಕೋಟೆಯನ್ನೇ ವಂಚಿಸಿದ ಇಬ್ಬರು ಅಪರಿಚಿತರು, ಬುಧವಾರ ಲೋಕಸಭೆ ಕಲಾಪ ನಡೆಯುತ್ತಿದ್ದ ಸಂಸತ್ ಭವನಕ್ಕೇ ನುಗ್ಗಿ ಬಿಟ್ರು.

ಇದನ್ನೂ ವೀಕ್ಷಿಸಿ:  ಪ್ರೀತಿಸಿ ಮದುವೆಯಾದವಳಿಗೆ ವಿಷ ಉಣಿಸಿದ ಗಂಡ..!ಮುದ್ದೆಯಲ್ಲಿ ಸೈನೈಡ್ ಹಾಕಿದ್ನಾ ಪಾಪಿ ಗಂಡ..?

19:36ಯುಪಿ ಕದನ 2027: ‘ಲೋಕ’ ಪಾಠ, ಕಮಲ ಪಡೆಯ ಪ್ರತೀಕಾರ! ವಿಪಕ್ಷಗಳ ನಿದ್ದೆಗೆಡಿಸಿದ ಬಿಜೆಪಿಯ ಮಹಾ ಚಾಣಕ್ಯ ತಂತ್ರ!
39:34ಅಮಿತ್ ಶಾ ರಣತಂತ್ರ: ಬದಲಾಗಲಿದೆಯೇ ಬಲಾಬಲ? 3ನೇ 2ರಷ್ಟು ಬಹುಮತ ಪಡೆಯಲು ಹೆಜ್ಜೆ
21:15ಬೆಲೆಗೆ ಬಿದ್ದ 200 ಕೋಟಿ ರೂ ಸರ್ಕಾರಿ ಎಂಜಿನೀಯರ್, ಕೆಜಿಗಟ್ಟಲೇ ಚಿನ್ನ ಬೆಳ್ಳಿ, ಹಲವು ಭವ್ಯ ಬಂಗಲೇ ಸೀಝ್
19:50Suvarna Special: ನನ್ನವರು ಯಾರೂ ಇಲ್ಲ, ದೀದಿ ಕಟ್ಟಿದ ದಶಕದ ಕೋಟೆ ಒಂದೇ ಏಟಿಗೆ ಛಿದ್ರ
21:25ಮಧ್ಯಪ್ರಾಚ್ಯ ಯುದ್ಧ ನಡುವೆ ಭಾರತ ಟಾರ್ಗೆಟ್, ಟ್ರಂಪ್ ಎಡವಟ್ಟಿಗೆ ಮೋದಿ ಸರ್ಕಾರ ಮಾಡಿದ್ದೇನು?
24:27ನೆಹರು ದಾಖಲೆ ಮುರಿದ ಮೋದಿ ಸುದೀರ್ಘ ಆಡಳಿತ, 3 ಬಾರಿ ಜನಾದೇಶ, ಕದಲದ ಮೋದಿ ಸಿಂಹಾಸನ, ಹೇಗಿತ್ತು 4398 ದಿನಗಳ ಆಡಳಿತ?
24:09ದೀದಿ ಕೋಟೆಯಲ್ಲಿ ಮಹಾಬಿರುಕು.. ಏನು ಕಾರಣ? ಗಜಕೇಸರಿ ವ್ಯೂಹ.. ದೀದಿ ದಿಗ್ಬಂಧನ.. ಏನಿದರ ಗುಟ್ಟು?
24:26ಪ್ಲಾಸ್ಟಿಕ್ ನೋಟು... ಕರೆನ್ಸಿ ಕ್ರಾಂತಿ! ಕಾಗದದ ನೋಟುಗಳ ಆಯಸ್ಸು ಖತಂ, ಮತ್ತೆ ಡಿಮಾನಟೈಸೇಶನ್..?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
24:48ಬೆಂಗಳೂರಲ್ಲೂ ಮೊಳಗುತ್ತಾ ವಿಜಯ್ ವಿಸಿಲ್ ಸದ್ದು? ತಮಿಳು ಮತದಾರರು ಹೆಚ್ಚಿರುವ ವಾರ್ಡ್​ಗಳಲ್ಲಿ ಸ್ಪರ್ಧಿಸುತ್ತಾ ಟಿವಿಕೆ?
Read more