Sonia Gandhi : "ಲೋಕ" ದಾರಿ ಬಿಟ್ಟು ರಾಜ್ಯಸಭಾ ವ್ಯೂಹ ಹೆಣೆದದ್ದೇಕೆ 'ಕೈ' ರಾಜಮಾತೆ..?

Sonia Gandhi : "ಲೋಕ" ದಾರಿ ಬಿಟ್ಟು ರಾಜ್ಯಸಭಾ ವ್ಯೂಹ ಹೆಣೆದದ್ದೇಕೆ 'ಕೈ' ರಾಜಮಾತೆ..?

Published : Feb 15, 2024, 06:27 PM IST

ಕಣ್ಣೆದುರಲ್ಲೇ ಅತ್ತೆ..ಗಂಡನ ಹತ್ಯೆ..ರಾಜಕೀಯದ ಪಗಡೆಯಾಟ..!
ಕೈಗೆ ಬಂದಿದ್ದ ಪ್ರಧಾನಿ ಪಟ್ಟವನ್ನೇ ಬೇಡ ಅಂದಿದ್ದರು ಸೋನಿಯಾ..!
ಬೆರಗು ಹುಟ್ಟಿಸುತ್ತದೆ ಕಾಂಗ್ರೆಸ್ ರಾಜಮಾತೆಯ ರಾಜಕೀಯ ಚರಿತ್ರೆ..!
ದುರ್ಗಿಯಂಥಾ ಅತ್ತೆ, ಪತಿಯ ಹತ್ಯೆ ನಂತರ ರಾಜಕೀಯಕ್ಕೆ ಎಂಟ್ರಿ..!

ಲೋಕಸಭೆಗೆ ಗುಡ್ ಬೈ ಹೇಳಿದ್ರು ಕಾಂಗ್ರೆಸ್ ರಾಜಮಾತೆ. ರಾಜ್ಯಸಭೆಗೆ(Rajya Sabha) ಎಂಟ್ರಿ ಕೊಡಲಿದ್ದಾರೆ ಕಾಂಗ್ರೆಸ್(Congress) ಅಧಿನಾಯಕಿ. ಮಾಜಿ ಪ್ರಧಾನಿ ಇಂದಿರಾ ಗಾಂಧಿಯವರ ಸೊಸೆ, ಮಾಜಿ ಪ್ರಧಾನಿ ರಾಜೀವ್ ಗಾಂಧಿಯವರ ಪತ್ನಿ. ಹುಟ್ಟೂರಲ್ಲದ ದೇಶವೊಂದಕ್ಕೆ ಸೊಸೆಯಾಗಿ ಬಂದು ಜನಬೆಂಬಲದೊಂದಿಗೆ ಭಾರತದ ಬಲಿಷ್ಠ ರಾಜಕೀಯ ನಾಯಕಿಯ ಸ್ಥಾನವನ್ನು ಆಕ್ರಮಿಸಿಕೊಂಡ ಛಲಗಾರ್ತಿ. ದೇಶದ ರಾಜಕಾರಣದಲ್ಲಿ ಬಿರುಗಾಳಿ ಎಬ್ಬಿಸಿದ್ದ ಸೋನಿಯಾ ಗಾಂಧಿಯವರ ರಾಜಕೀಯ ಚರಿತ್ರೆಗೆ ರೋಚಕ ತಿರುವು ಸಿಕ್ಕಿದೆ. ಇಲ್ಲಿವರೆಗೆ ಸತತ ಆರು ಬಾರಿ ಲೋಕಸಭಾ (Loksabha)ಸದಸ್ಯೆಯಾಗಿದ್ದ ಸೋನಿಯಾ ಗಾಂಧಿ(Sonia Gandhi), ಇದೀಗ ಲೋಕಸಭೆಗೆ ಗುಡ್ ಬೈ ಹೇಳಿ, ರಾಜ್ಯಸಭೆ ಪ್ರವೇಶಕ್ಕೆ ಸಜ್ಜಾಗಿದ್ದಾರೆ. ರಾಜಸ್ಥಾನದಿಂದ ರಾಜ್ಯಸಭೆ ಪ್ರವೇಶಿಸಲು ಮುಂದಾಗಿರುವ ಕಾಂಗ್ರೆಸ್ ರಾಜಮಾತೆ, ಬುಧವಾರ ನಾಮಪತ್ರ ಸಲ್ಲಿಸಿದ್ದಾರೆ. ಏಳು ವರ್ಷಗಳ ಹಿಂದೆ ಕೇರಳದಲ್ಲಿ ನಡೆದ ಕಾಂಗ್ರೆಸ್ ಸಮಾವೇಶವೊಂದರಲ್ಲಿ ಸೋನಿಯಾ ಗಾಂಧಿ ಈ ರೀತಿ ಭಾವುಕರಾಗಿ ಮಾತನಾಡಿದ್ರು. ಇಟಲಿಯ ವೆನೆಟೋದ ಲೂಸಿಯಾನ ಎಂಬಲ್ಲಿ ಹುಟ್ಟಿದ್ದ ಸೋನಿಯಾ ಮೈನೋ, ಸೋನಿಯಾ ಗಾಂಧಿಯಾಗಿದ್ದೇ ಒಂದು ರೋಚಕ ಕಥೆ. ಪ್ರಿಯ ವೀಕ್ಷಕರೇ.. ಜಗತ್ತಿನ ಅತೀ ದೊಡ್ಡ ಪ್ರಜಾಪ್ರಭುತ್ವ ದೇಶವಾಗಿರೋ ಭಾರತದಲ್ಲಿ, ಭಾರತದ ರಾಜಕಾರಣದಲ್ಲಿ ವಿದೇಶದಿಂದ ಬಂದ ಒಬ್ಬ ಮಹಿಳೆ ಛಾಪು ಮೂಡಿಸೋದಿದ್ಯಲ್ಲಾ... ಅದು ನಿಜಕ್ಕೂ ಬೆರಗು ಹುಟ್ಟಿಸುವಂಥಾ ಕಥೆ. ಅಂಥಾ ಕುತೂಹಲದ ಕಥೆಯ ಕಥಾನಾಯಕಿ ಸೋನಿಯಾ ಗಾಂಧಿ.

ಇದನ್ನೂ ವೀಕ್ಷಿಸಿ:  Raichur: ರಾಯಚೂರಿನಲ್ಲಿ ಮುಸ್ಲಿಮರ ನಡುವೆ ಮಾರಾಮಾರಿ: ಅಹಮದೀಯ ಮುಸ್ಲಿಮರ ಮೇಲೆ ಕಟ್ಟಾ ಮುಸ್ಲಿಮರಿಂದ ಹಲ್ಲೆ

22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
23:34ಕೇರಳ ಎಲೆಕ್ಷನ್ ಗ್ರೌಂಡ್ ರಿಪೋರ್ಟ್: ಕನ್ನಡಿಗರೇ ಹೆಚ್ಚಿರುವ ಮಂಜೇಶ್ವರದ ಜನ ಹೇಳೋದೇನು?
20:04Suvarna Focus: ಕೆಂಪು ರಕ್ಕಸ ಕೋಟೆ ಧೂಳಿಪಟ, ಭಾರತ ಈಗ ನಕ್ಸಲ್ ಮುಕ್ತ! 59 ವರ್ಷಗಳ ರಕ್ಕಸನಿಗೆ ಶಾಶ್ವತ ಅಂತ್ಯಕ್ರಿಯೆ
53:2759 ವರ್ಷಗಳ ನಕ್ಸಲ್ ಯುಗಾಂತ್ಯ? ಅಮಿತ್ ಶಾ ಮಹತ್ವದ ಘೋಷಣೆ! 59 ವರ್ಷದ ಬಳಿಕ ಭಾರತ ನಿರಾಳ!
16:00ನೆತನ್ಯಾಹು ಹೆಣೆದ 'ಹೆಕ್ಸಾಗನ್' ವ್ಯೂಹಕ್ಕೆ ಮೋದಿ ಸಾರಥಿ: ಇಸ್ರೇಲ್ ಭೇಟಿಯಿಂದ ಜಾಗತಿಕ ರಾಜಕಾರಣದಲ್ಲಿ ಹೊಸ ಸಂಚಲನ!
18:19ಸರ್ಕಾರಿ ನೌಕರರ ಮೇಲೆ ಯೋಗಿ ಕಟ್ಟು ನಿಟ್ಟಿನ ಆಕ್ಷನ್​: ವೇತನ ಬೇಕಿದ್ದವರು ನಿಯಮ ಪಾಲಿಸಿ.. ಏನಿದು ರೂಲ್ಸ್..?
18:27ಒಂದೇ ಒಂದು ಫೋನ್ ಕಾಲ್. ಬದಲಾಯ್ತು ಭಾರತ-ಅಮೆರಿಕ ನಂಟು! ಚೀನಾಕ್ಕೆ ಶಾಕ್, ಭಾರತಕ್ಕೆ ಲಕ್!
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
Read more