Sonia Gandhi : "ಲೋಕ" ದಾರಿ ಬಿಟ್ಟು ರಾಜ್ಯಸಭಾ ವ್ಯೂಹ ಹೆಣೆದದ್ದೇಕೆ 'ಕೈ' ರಾಜಮಾತೆ..?

Sonia Gandhi : "ಲೋಕ" ದಾರಿ ಬಿಟ್ಟು ರಾಜ್ಯಸಭಾ ವ್ಯೂಹ ಹೆಣೆದದ್ದೇಕೆ 'ಕೈ' ರಾಜಮಾತೆ..?

Published : Feb 15, 2024, 06:27 PM IST

ಕಣ್ಣೆದುರಲ್ಲೇ ಅತ್ತೆ..ಗಂಡನ ಹತ್ಯೆ..ರಾಜಕೀಯದ ಪಗಡೆಯಾಟ..!
ಕೈಗೆ ಬಂದಿದ್ದ ಪ್ರಧಾನಿ ಪಟ್ಟವನ್ನೇ ಬೇಡ ಅಂದಿದ್ದರು ಸೋನಿಯಾ..!
ಬೆರಗು ಹುಟ್ಟಿಸುತ್ತದೆ ಕಾಂಗ್ರೆಸ್ ರಾಜಮಾತೆಯ ರಾಜಕೀಯ ಚರಿತ್ರೆ..!
ದುರ್ಗಿಯಂಥಾ ಅತ್ತೆ, ಪತಿಯ ಹತ್ಯೆ ನಂತರ ರಾಜಕೀಯಕ್ಕೆ ಎಂಟ್ರಿ..!

ಲೋಕಸಭೆಗೆ ಗುಡ್ ಬೈ ಹೇಳಿದ್ರು ಕಾಂಗ್ರೆಸ್ ರಾಜಮಾತೆ. ರಾಜ್ಯಸಭೆಗೆ(Rajya Sabha) ಎಂಟ್ರಿ ಕೊಡಲಿದ್ದಾರೆ ಕಾಂಗ್ರೆಸ್(Congress) ಅಧಿನಾಯಕಿ. ಮಾಜಿ ಪ್ರಧಾನಿ ಇಂದಿರಾ ಗಾಂಧಿಯವರ ಸೊಸೆ, ಮಾಜಿ ಪ್ರಧಾನಿ ರಾಜೀವ್ ಗಾಂಧಿಯವರ ಪತ್ನಿ. ಹುಟ್ಟೂರಲ್ಲದ ದೇಶವೊಂದಕ್ಕೆ ಸೊಸೆಯಾಗಿ ಬಂದು ಜನಬೆಂಬಲದೊಂದಿಗೆ ಭಾರತದ ಬಲಿಷ್ಠ ರಾಜಕೀಯ ನಾಯಕಿಯ ಸ್ಥಾನವನ್ನು ಆಕ್ರಮಿಸಿಕೊಂಡ ಛಲಗಾರ್ತಿ. ದೇಶದ ರಾಜಕಾರಣದಲ್ಲಿ ಬಿರುಗಾಳಿ ಎಬ್ಬಿಸಿದ್ದ ಸೋನಿಯಾ ಗಾಂಧಿಯವರ ರಾಜಕೀಯ ಚರಿತ್ರೆಗೆ ರೋಚಕ ತಿರುವು ಸಿಕ್ಕಿದೆ. ಇಲ್ಲಿವರೆಗೆ ಸತತ ಆರು ಬಾರಿ ಲೋಕಸಭಾ (Loksabha)ಸದಸ್ಯೆಯಾಗಿದ್ದ ಸೋನಿಯಾ ಗಾಂಧಿ(Sonia Gandhi), ಇದೀಗ ಲೋಕಸಭೆಗೆ ಗುಡ್ ಬೈ ಹೇಳಿ, ರಾಜ್ಯಸಭೆ ಪ್ರವೇಶಕ್ಕೆ ಸಜ್ಜಾಗಿದ್ದಾರೆ. ರಾಜಸ್ಥಾನದಿಂದ ರಾಜ್ಯಸಭೆ ಪ್ರವೇಶಿಸಲು ಮುಂದಾಗಿರುವ ಕಾಂಗ್ರೆಸ್ ರಾಜಮಾತೆ, ಬುಧವಾರ ನಾಮಪತ್ರ ಸಲ್ಲಿಸಿದ್ದಾರೆ. ಏಳು ವರ್ಷಗಳ ಹಿಂದೆ ಕೇರಳದಲ್ಲಿ ನಡೆದ ಕಾಂಗ್ರೆಸ್ ಸಮಾವೇಶವೊಂದರಲ್ಲಿ ಸೋನಿಯಾ ಗಾಂಧಿ ಈ ರೀತಿ ಭಾವುಕರಾಗಿ ಮಾತನಾಡಿದ್ರು. ಇಟಲಿಯ ವೆನೆಟೋದ ಲೂಸಿಯಾನ ಎಂಬಲ್ಲಿ ಹುಟ್ಟಿದ್ದ ಸೋನಿಯಾ ಮೈನೋ, ಸೋನಿಯಾ ಗಾಂಧಿಯಾಗಿದ್ದೇ ಒಂದು ರೋಚಕ ಕಥೆ. ಪ್ರಿಯ ವೀಕ್ಷಕರೇ.. ಜಗತ್ತಿನ ಅತೀ ದೊಡ್ಡ ಪ್ರಜಾಪ್ರಭುತ್ವ ದೇಶವಾಗಿರೋ ಭಾರತದಲ್ಲಿ, ಭಾರತದ ರಾಜಕಾರಣದಲ್ಲಿ ವಿದೇಶದಿಂದ ಬಂದ ಒಬ್ಬ ಮಹಿಳೆ ಛಾಪು ಮೂಡಿಸೋದಿದ್ಯಲ್ಲಾ... ಅದು ನಿಜಕ್ಕೂ ಬೆರಗು ಹುಟ್ಟಿಸುವಂಥಾ ಕಥೆ. ಅಂಥಾ ಕುತೂಹಲದ ಕಥೆಯ ಕಥಾನಾಯಕಿ ಸೋನಿಯಾ ಗಾಂಧಿ.

ಇದನ್ನೂ ವೀಕ್ಷಿಸಿ:  Raichur: ರಾಯಚೂರಿನಲ್ಲಿ ಮುಸ್ಲಿಮರ ನಡುವೆ ಮಾರಾಮಾರಿ: ಅಹಮದೀಯ ಮುಸ್ಲಿಮರ ಮೇಲೆ ಕಟ್ಟಾ ಮುಸ್ಲಿಮರಿಂದ ಹಲ್ಲೆ

19:50Suvarna Special: ನನ್ನವರು ಯಾರೂ ಇಲ್ಲ, ದೀದಿ ಕಟ್ಟಿದ ದಶಕದ ಕೋಟೆ ಒಂದೇ ಏಟಿಗೆ ಛಿದ್ರ
21:25ಮಧ್ಯಪ್ರಾಚ್ಯ ಯುದ್ಧ ನಡುವೆ ಭಾರತ ಟಾರ್ಗೆಟ್, ಟ್ರಂಪ್ ಎಡವಟ್ಟಿಗೆ ಮೋದಿ ಸರ್ಕಾರ ಮಾಡಿದ್ದೇನು?
24:27ನೆಹರು ದಾಖಲೆ ಮುರಿದ ಮೋದಿ ಸುದೀರ್ಘ ಆಡಳಿತ, 3 ಬಾರಿ ಜನಾದೇಶ, ಕದಲದ ಮೋದಿ ಸಿಂಹಾಸನ, ಹೇಗಿತ್ತು 4398 ದಿನಗಳ ಆಡಳಿತ?
24:09ದೀದಿ ಕೋಟೆಯಲ್ಲಿ ಮಹಾಬಿರುಕು.. ಏನು ಕಾರಣ? ಗಜಕೇಸರಿ ವ್ಯೂಹ.. ದೀದಿ ದಿಗ್ಬಂಧನ.. ಏನಿದರ ಗುಟ್ಟು?
24:26ಪ್ಲಾಸ್ಟಿಕ್ ನೋಟು... ಕರೆನ್ಸಿ ಕ್ರಾಂತಿ! ಕಾಗದದ ನೋಟುಗಳ ಆಯಸ್ಸು ಖತಂ, ಮತ್ತೆ ಡಿಮಾನಟೈಸೇಶನ್..?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
24:48ಬೆಂಗಳೂರಲ್ಲೂ ಮೊಳಗುತ್ತಾ ವಿಜಯ್ ವಿಸಿಲ್ ಸದ್ದು? ತಮಿಳು ಮತದಾರರು ಹೆಚ್ಚಿರುವ ವಾರ್ಡ್​ಗಳಲ್ಲಿ ಸ್ಪರ್ಧಿಸುತ್ತಾ ಟಿವಿಕೆ?
18:54ಐದೇ ದಿನಕ್ಕೆ 2 ಕೋಟಿ ಜಿರಳೆ ಸೈನಿಕರು, ಜೆನ್‌ಝೀ ಅಕ್ರೋಶವೋ, ಕ್ರಾಂತಿಯ ಕಿಚ್ಚೋ?
30:39‘ದೇಶಕ್ಕೆ ಆರ್ಥಿಕ ತೂಫಾನ್ ಬರಲಿದೆ.. ದೇಶ ಮಾರಿದ್ದಾರೆ’ ಪ್ರಧಾನಿ ಮೋದಿ ದೇಶದ್ರೋಹಿ ಎಂದು ರಾಹುಲ್ ವಿವಾದ!
21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
Read more