Sonu sood saves life ಕಾರು ಮುಖಾಮುಖಿ ಡಿಕ್ಕಿ, ಸ್ಥಳಕ್ಕೆ ಧಾವಿಸಿ ಪ್ರಜ್ಞಾ ಹೀನಾ ಯುವಕನ ಆಸ್ಪತ್ರೆ ದಾಖಲಿಸಿದ ಸೋನು ಸೂದ್!

Sonu sood saves life ಕಾರು ಮುಖಾಮುಖಿ ಡಿಕ್ಕಿ, ಸ್ಥಳಕ್ಕೆ ಧಾವಿಸಿ ಪ್ರಜ್ಞಾ ಹೀನಾ ಯುವಕನ ಆಸ್ಪತ್ರೆ ದಾಖಲಿಸಿದ ಸೋನು ಸೂದ್!

Published : Feb 09, 2022, 12:49 AM ISTUpdated : Feb 09, 2022, 08:13 AM IST

ಹೆದ್ದಾರಿಯಲ್ಲಿ ಎರಡು ಕಾರುಗಳ ಮುಖಾಮುಖಿ ಡಿಕ್ಕಿಯಿಂದ ಭೀಕರ ಅಪಘಾತ ಪಂಜಾಬ್‌ನ ಮೊಗಾ ಬಳಿ ಸಂಭವಿಸಿದೆ. ಬಾಲಿವುಡ್ ನಟ ಸೋನು ಸೂದ್ ಇದೇ ಹೆದ್ದಾರಿಯಲ್ಲಿ ಸಾಗುತ್ತಿದ್ದ ವೇಳೆ ಕೂಗಳತೆ ದೂರದಲ್ಲಿ ಅಪಘಾತ ಸಂಭವಿಸಿದೆ. ತಕ್ಷಣ ಕಾರು ನಿಲ್ಲಿಸಿದ ಸೋನು ಸೂದ್ ಕಾರಿನತ್ತ ಓಡಿ ಹೋಗಿ ಅಸ್ವಸ್ಥಗೊಂಡಿದ್ದ ಯವಕನ ಸ್ವತಃ ಎತ್ತಿ ತಮ್ಮ ಕಾರಿನಲ್ಲಿ ಆಸ್ಪತ್ರೆ ದಾಖಲಿಸಿದ್ದಾರೆ.

ಪಂಜಾಬ್(ಫೆ.09):  ಹೆದ್ದಾರಿಯಲ್ಲಿ ಎರಡು ಕಾರುಗಳ ಮುಖಾಮುಖಿ ಡಿಕ್ಕಿಯಿಂದ ಭೀಕರ ಅಪಘಾತ ಪಂಜಾಬ್‌ನ ಮೊಗಾ ಬಳಿ ಸಂಭವಿಸಿದೆ. ಬಾಲಿವುಡ್ ನಟ ಸೋನು ಸೂದ್ ಇದೇ ಹೆದ್ದಾರಿಯಲ್ಲಿ ಸಾಗುತ್ತಿದ್ದ ವೇಳೆ ಕೂಗಳತೆ ದೂರದಲ್ಲಿ ಅಪಘಾತ ಸಂಭವಿಸಿದೆ. ತಕ್ಷಣ ಕಾರು ನಿಲ್ಲಿಸಿದ ಸೋನು ಸೂದ್ ಕಾರಿನತ್ತ ಓಡಿ ಹೋಗಿ ಅಸ್ವಸ್ಥಗೊಂಡಿದ್ದ ಯವಕನ ಸ್ವತಃ ಎತ್ತಿ ತಮ್ಮ ಕಾರಿನಲ್ಲಿ ಆಸ್ಪತ್ರೆ ದಾಖಲಿಸಿದ್ದಾರೆ. 

ಫೆಬ್ರವರಿ 8ರ ಮಧ್ಯರಾತ್ರಿ ಈ ಅಪಘಾತ ಸಂಭವಿಸಿದೆ. ಇಬ್ಬರು ಯುವಕರು ಪ್ರಯಾಣಿಸುತ್ತಿದ್ದ ಕಾರು ಅಪರಿಚತ ವಾಹನಕ್ಕೆ ಡಿಕ್ಕಿ ಹೊಡೆದಿದೆ. ಪರಿಣಾಮ ಒರ್ವ ತೀವ್ರ ಗಾಯಗೊಂಡು ಅಸ್ವಸ್ಥನಾಗಿದ್ದಾನೆ. ಕಾರು ಸೆಂಟ್ರಲ್ ಲಾಕ್ ಆದ ಕಾರಣ ಕಾರಿನಲ್ಲಿದ್ದ ಮತ್ತೊರ್ವ ಯುವ ಗಾಜು ಒಡೆದು ಹೊರಬಂದಿದ್ದಾನೆ. ಗಾಯಗೊಂಡ ಯುವಕನ ಕಾರಿನ ಹೊರತೆಗೆಯಲು ಹರಸಾಹಸ ಪಟ್ಟಿದ್ದಾನೆ. ಆದರೆ ಸಾಧ್ಯವಾಗಿಲ್ಲ. ಇದೇ ವೇಳೆ ಸಹದೋರಿ ಮಾಳವಿಕಾ ಸೂದ್ ಅವರ ಚುನಾವಣಾ ಪ್ರಚಾರ ಮುಗಿಸಿ ಆಗಮಿಸುತ್ತಿದ್ದ ಸೋನು ಸೂದ್ ಅಪಘಾತ ನೋಡಿ ಕಾರು ನಿಲ್ಲಿಸಿ ಸ್ಥಳಕ್ಕೆ ಧಾವಿಸಿದ್ದಾರೆ.  ಅಪಘಾತದ ತೀವ್ರತೆಗೆ ಕಾರಿನಲ್ಲಿದ್ದ ಯುವಕ ಗಾಯಗೊಂಡು ಪ್ರಜ್ಞಾಹೀನಾ ಸ್ಥಿತಿಯಲ್ಲಿದ್ದ.  ಕಾರಿನ ಬಾಗಿಲು ತೆರೆದು ಅಸ್ವಸ್ಥಗೊಂಡಿದ್ದ ಯುವಕನ ಸ್ವತಃ ಎತ್ತಿಕೊಂಡು ತಮ್ಮ ಕಾರಿನಲ್ಲಿ ಮಲಗಿಸಿದ್ದಾರೆ. ಬಳಿಕ ತಕ್ಷಣವೇ ಆಸ್ಪತ್ರೆ ದಾಖಲಿಸಿದ್ದಾರೆ. ಇದೀಗ ಯುವಕ ಚೇತರಿಸಿಕೊಳ್ಳುತ್ತಿದ್ದಾರೆ. ಸಾಮಾಜಿಕ ಕಾರ್ಯಗಳ ಮೂಲಕ ಈಗಾಗಲೇ ಜನರ ಮನಗೆದ್ದಿರುವ ಸೂನು ಸೂದ್ ಅಪಘಾತದ ಸಂದರ್ಭದಲ್ಲಿ ತಕ್ಷಣ ಕಾರ್ಯಪ್ರವೃತ್ತರಾಗಿ ಜೀವ ಉಳಿಸಿದ ಮಹತ್ ಕಾರ್ಯಕ್ಕೆ ಎಲ್ಲೆಡೆಗಳಿಂದ ಮೆಚ್ಚುಗೆ ಮಹಾಪೂರವೇ ಹರಿದುಬರುತ್ತಿದೆ. 

39:28ಅಯೋಧ್ಯೆ ರಾಮಮಂದಿರ: ಪ್ರಾಜೆಕ್ಟ್ ಚೀಫ್ ನೃಪೇಂದ್ರ ಮಿಶ್ರಾ ಜೊತೆ ಎಕ್ಸ್‌ಕ್ಲೂಸಿವ್ ಸಂದರ್ಶನ
22:49ವಿಧಾನಸಭೆಯಲ್ಲೂ ಸಿಎಂ ವಿಜಯ್ ಪಂಚಿಂಗ್ ಡೈಲಾಗ್, ದ್ರಾವಿಡ ನಾಡಿನಲ್ಲಿ ರಾಜಕೀಯ ರಂಗು ಬದಲು
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
19:59Suvarna Focus: ರುದ್ರಪ್ರಯಾಗದಲ್ಲಿ ನಿಹಾಂಗ್ ಯೋಧರ ರಣಕಹಳೆ; ಮತ್ತೆ ಕಾಡುತ್ತಿದೆ 1984ರ ‘ಆಪರೇಷನ್ ಬ್ಲ್ಯೂ ಸ್ಟಾರ್’ ಕರಾಳ ನೆನಪು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
22:58ಉಗ್ರನಾಗಲು ಪಾಕಿಸ್ತಾನಕ್ಕೆ ತೆರಳಿ ರಿಯಲ್ ಧುರಂಧರ್ ಆದ ಕಾಶ್ಮೀರ ಯುವಕ, ಬೆಚ್ಚಿ ಬೀಳಿಸೋ ಘಟನೆ
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್
20:58ಮುಂಗಾರು ಮಳೆಯನ್ನೇ ನುಂಗಿ ಹಾಕ್ತಾನಾ ಪುಟ್ಟ ಹುಡುಗ? ಭಾರತಕ್ಕೆ ಶೇ.60ರಷ್ಟು ಬರಗಾಲ ಎಚ್ಚರಿಕೆ
19:36ಯುಪಿ ಕದನ 2027: ‘ಲೋಕ’ ಪಾಠ, ಕಮಲ ಪಡೆಯ ಪ್ರತೀಕಾರ! ವಿಪಕ್ಷಗಳ ನಿದ್ದೆಗೆಡಿಸಿದ ಬಿಜೆಪಿಯ ಮಹಾ ಚಾಣಕ್ಯ ತಂತ್ರ!
Read more