Sonu sood saves life ಕಾರು ಮುಖಾಮುಖಿ ಡಿಕ್ಕಿ, ಸ್ಥಳಕ್ಕೆ ಧಾವಿಸಿ ಪ್ರಜ್ಞಾ ಹೀನಾ ಯುವಕನ ಆಸ್ಪತ್ರೆ ದಾಖಲಿಸಿದ ಸೋನು ಸೂದ್!

Sonu sood saves life ಕಾರು ಮುಖಾಮುಖಿ ಡಿಕ್ಕಿ, ಸ್ಥಳಕ್ಕೆ ಧಾವಿಸಿ ಪ್ರಜ್ಞಾ ಹೀನಾ ಯುವಕನ ಆಸ್ಪತ್ರೆ ದಾಖಲಿಸಿದ ಸೋನು ಸೂದ್!

Published : Feb 09, 2022, 12:49 AM ISTUpdated : Feb 09, 2022, 08:13 AM IST

ಹೆದ್ದಾರಿಯಲ್ಲಿ ಎರಡು ಕಾರುಗಳ ಮುಖಾಮುಖಿ ಡಿಕ್ಕಿಯಿಂದ ಭೀಕರ ಅಪಘಾತ ಪಂಜಾಬ್‌ನ ಮೊಗಾ ಬಳಿ ಸಂಭವಿಸಿದೆ. ಬಾಲಿವುಡ್ ನಟ ಸೋನು ಸೂದ್ ಇದೇ ಹೆದ್ದಾರಿಯಲ್ಲಿ ಸಾಗುತ್ತಿದ್ದ ವೇಳೆ ಕೂಗಳತೆ ದೂರದಲ್ಲಿ ಅಪಘಾತ ಸಂಭವಿಸಿದೆ. ತಕ್ಷಣ ಕಾರು ನಿಲ್ಲಿಸಿದ ಸೋನು ಸೂದ್ ಕಾರಿನತ್ತ ಓಡಿ ಹೋಗಿ ಅಸ್ವಸ್ಥಗೊಂಡಿದ್ದ ಯವಕನ ಸ್ವತಃ ಎತ್ತಿ ತಮ್ಮ ಕಾರಿನಲ್ಲಿ ಆಸ್ಪತ್ರೆ ದಾಖಲಿಸಿದ್ದಾರೆ.

ಪಂಜಾಬ್(ಫೆ.09):  ಹೆದ್ದಾರಿಯಲ್ಲಿ ಎರಡು ಕಾರುಗಳ ಮುಖಾಮುಖಿ ಡಿಕ್ಕಿಯಿಂದ ಭೀಕರ ಅಪಘಾತ ಪಂಜಾಬ್‌ನ ಮೊಗಾ ಬಳಿ ಸಂಭವಿಸಿದೆ. ಬಾಲಿವುಡ್ ನಟ ಸೋನು ಸೂದ್ ಇದೇ ಹೆದ್ದಾರಿಯಲ್ಲಿ ಸಾಗುತ್ತಿದ್ದ ವೇಳೆ ಕೂಗಳತೆ ದೂರದಲ್ಲಿ ಅಪಘಾತ ಸಂಭವಿಸಿದೆ. ತಕ್ಷಣ ಕಾರು ನಿಲ್ಲಿಸಿದ ಸೋನು ಸೂದ್ ಕಾರಿನತ್ತ ಓಡಿ ಹೋಗಿ ಅಸ್ವಸ್ಥಗೊಂಡಿದ್ದ ಯವಕನ ಸ್ವತಃ ಎತ್ತಿ ತಮ್ಮ ಕಾರಿನಲ್ಲಿ ಆಸ್ಪತ್ರೆ ದಾಖಲಿಸಿದ್ದಾರೆ. 

ಫೆಬ್ರವರಿ 8ರ ಮಧ್ಯರಾತ್ರಿ ಈ ಅಪಘಾತ ಸಂಭವಿಸಿದೆ. ಇಬ್ಬರು ಯುವಕರು ಪ್ರಯಾಣಿಸುತ್ತಿದ್ದ ಕಾರು ಅಪರಿಚತ ವಾಹನಕ್ಕೆ ಡಿಕ್ಕಿ ಹೊಡೆದಿದೆ. ಪರಿಣಾಮ ಒರ್ವ ತೀವ್ರ ಗಾಯಗೊಂಡು ಅಸ್ವಸ್ಥನಾಗಿದ್ದಾನೆ. ಕಾರು ಸೆಂಟ್ರಲ್ ಲಾಕ್ ಆದ ಕಾರಣ ಕಾರಿನಲ್ಲಿದ್ದ ಮತ್ತೊರ್ವ ಯುವ ಗಾಜು ಒಡೆದು ಹೊರಬಂದಿದ್ದಾನೆ. ಗಾಯಗೊಂಡ ಯುವಕನ ಕಾರಿನ ಹೊರತೆಗೆಯಲು ಹರಸಾಹಸ ಪಟ್ಟಿದ್ದಾನೆ. ಆದರೆ ಸಾಧ್ಯವಾಗಿಲ್ಲ. ಇದೇ ವೇಳೆ ಸಹದೋರಿ ಮಾಳವಿಕಾ ಸೂದ್ ಅವರ ಚುನಾವಣಾ ಪ್ರಚಾರ ಮುಗಿಸಿ ಆಗಮಿಸುತ್ತಿದ್ದ ಸೋನು ಸೂದ್ ಅಪಘಾತ ನೋಡಿ ಕಾರು ನಿಲ್ಲಿಸಿ ಸ್ಥಳಕ್ಕೆ ಧಾವಿಸಿದ್ದಾರೆ.  ಅಪಘಾತದ ತೀವ್ರತೆಗೆ ಕಾರಿನಲ್ಲಿದ್ದ ಯುವಕ ಗಾಯಗೊಂಡು ಪ್ರಜ್ಞಾಹೀನಾ ಸ್ಥಿತಿಯಲ್ಲಿದ್ದ.  ಕಾರಿನ ಬಾಗಿಲು ತೆರೆದು ಅಸ್ವಸ್ಥಗೊಂಡಿದ್ದ ಯುವಕನ ಸ್ವತಃ ಎತ್ತಿಕೊಂಡು ತಮ್ಮ ಕಾರಿನಲ್ಲಿ ಮಲಗಿಸಿದ್ದಾರೆ. ಬಳಿಕ ತಕ್ಷಣವೇ ಆಸ್ಪತ್ರೆ ದಾಖಲಿಸಿದ್ದಾರೆ. ಇದೀಗ ಯುವಕ ಚೇತರಿಸಿಕೊಳ್ಳುತ್ತಿದ್ದಾರೆ. ಸಾಮಾಜಿಕ ಕಾರ್ಯಗಳ ಮೂಲಕ ಈಗಾಗಲೇ ಜನರ ಮನಗೆದ್ದಿರುವ ಸೂನು ಸೂದ್ ಅಪಘಾತದ ಸಂದರ್ಭದಲ್ಲಿ ತಕ್ಷಣ ಕಾರ್ಯಪ್ರವೃತ್ತರಾಗಿ ಜೀವ ಉಳಿಸಿದ ಮಹತ್ ಕಾರ್ಯಕ್ಕೆ ಎಲ್ಲೆಡೆಗಳಿಂದ ಮೆಚ್ಚುಗೆ ಮಹಾಪೂರವೇ ಹರಿದುಬರುತ್ತಿದೆ. 

21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
24:48ಬೆಂಗಳೂರಲ್ಲೂ ಮೊಳಗುತ್ತಾ ವಿಜಯ್ ವಿಸಿಲ್ ಸದ್ದು? ತಮಿಳು ಮತದಾರರು ಹೆಚ್ಚಿರುವ ವಾರ್ಡ್​ಗಳಲ್ಲಿ ಸ್ಪರ್ಧಿಸುತ್ತಾ ಟಿವಿಕೆ?
18:54ಐದೇ ದಿನಕ್ಕೆ 2 ಕೋಟಿ ಜಿರಳೆ ಸೈನಿಕರು, ಜೆನ್‌ಝೀ ಅಕ್ರೋಶವೋ, ಕ್ರಾಂತಿಯ ಕಿಚ್ಚೋ?
30:39‘ದೇಶಕ್ಕೆ ಆರ್ಥಿಕ ತೂಫಾನ್ ಬರಲಿದೆ.. ದೇಶ ಮಾರಿದ್ದಾರೆ’ ಪ್ರಧಾನಿ ಮೋದಿ ದೇಶದ್ರೋಹಿ ಎಂದು ರಾಹುಲ್ ವಿವಾದ!
21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
47:39ಸೋಷಿಯಲ್ ಮೀಡಿಯಾದಲ್ಲಿ 'ಕಾಕ್ರೋಚ್ ಜನತಾ ಪಾರ್ಟಿ' ಕೋಲಾಹಲ: GenZ ಹೋರಾಟವೋ, ಬರೀ ಕ್ರೇಜೋ?
20:58ರಾಜೀವ್ ಗಾಂಧಿ ಹತ್ಯೆ ಮಾಡಿದ್ದ LTTE ಪ್ರಭಾಕರನ್ ಸ್ಮರಿಸಿದ ತಮಿಳುನಾಡು ಸಿಎಂ ವಿಜಯ್: ಕಾಂಗ್ರೆಸ್‌ಗೆ ಇಕ್ಕಟ್ಟು!
45:25ಸಾಮಾನ್ಯ ಜನರ ಜೇಬಿಗೆ ಕೈ ಹಾಕಿದ ಮೋದಿ ಸರ್ಕಾರ: ಮುಂದೈತಾ ಮಾರಿಹಬ್ಬ?
20:46ಕನಸಿಗೆ ಎದುರಾಯ್ತು ಚತುರ್ಮುಖ ಕಂಟಕ! ಭಾರತದ ಖಜಾನೆ ಖಾಲಿ, ಬಂಗಾರವೇ ವಿಲನ್!
22:50ದಳಪತಿ ಹೊಡೆತಕ್ಕೆ ಅಮ್ಮನ ಕೋಟೆ ಛಿದ್ರ, ವಿಜಯ್‌ಗೆ ಜೈ ಎಂದ ಜಯಲಲಿತಾ ಪಕ್ಷದ 30 ಶಾಸಕರು
Read more