ಸೋಶಿಯಲ್‌ ಮೀಡಿಯಾದಲ್ಲಿ ವೈರಲ್‌ ಆದ ರೋಚಕ ಸ್ಟೋರಿಗಳಿವು

ಸೋಶಿಯಲ್‌ ಮೀಡಿಯಾದಲ್ಲಿ ವೈರಲ್‌ ಆದ ರೋಚಕ ಸ್ಟೋರಿಗಳಿವು

Suvarna News   | Asianet News
Published : Jan 06, 2022, 03:49 PM IST

ವೀಲಿಂಗ್‌ ಮಾಡಲು ಹೋಗಿ ಮುಗ್ಗರಿಸಿ ಬಿದ್ದ ಯುವಕ
ಸಾಯಲು ಹೊರಟವನ ಪ್ರಾಣ ಉಳಿಸಿದ ರೈಲ್ವೆ ಸಿಬ್ಬಂದಿ

ಬೆಂಗಳೂರು(ಜ.6) ಜಗತ್ತಿನಲ್ಲಿ ಏನೇನೋ ವಿಚಿತ್ರಗಳು, ಅನಾಹುತಗಳು ನಡೆಯುತ್ತಲ್ಲೇ ಇರುತ್ತವೆ. ಆದರೆ ಇತ್ತೀಚೆಗೆ ಪ್ರತಿಯೊಬ್ಬರ ಕೈಯಲ್ಲೂ  ಸ್ಮಾರ್ಟ್‌ ಫೋನ್‌ ಇರುವುದರಿಂದ ಇವು ವೈರಲ್‌ ಆಗುತ್ತಿವೆ.  ಹೀಗೆ ವೈರಲ್‌ ಆದ ಕೆಲವು ರೋಚಕ ಸ್ಟೋರಿಗಳ ವಿವರ ಇಲ್ಲಿದೆ ನೋಡಿ... 

ಬೈಕ್‌ ವೀಲಿಂಗ್‌ ಸೋಕಿಗೆ ಬಿದ್ದ ಯುವಕರಿಬ್ಬರು ವ್ಹೀಲಿಂಗ್‌ ಮಾಡಲು ಹೋಗಿ ನೋಡ ನೋಡುತ್ತಿದ್ದಂತೆ ರಸ್ತೆಯಿಂದ ಗದ್ದೆಗೆ ಬಿದ್ದಿದ್ದಾರೆ.  ಈ ವೇಳೆ ಬೈಕ್‌ ಹಿಂದೆ ಕುಳಿತಿದ್ದ ಯುವಕ ಕೆಳಗೆ ಬಿದ್ದಿದ್ದಾನೆ.  ಸದ್ಯ ಈ ವಿಡಿಯೋ ಸೋಶಿಯಲ್‌ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ವೈರಲ್‌ ಆಗಿದೆ. 

ಬೈಕ್‌ನಲ್ಲಿ ತೆರಳುತ್ತಿದ್ದ ಮೂರು ಜನರಿದ್ದ ಪುಟ್ಟ ಕುಟುಂಬವೊಂದಕ್ಕೆ ಎತ್ತಲಿಂದಲೋ ಬಂದ ಮದವೇರಿದ್ದ ಗೂಳಿಯೊಂದು ಗುದ್ದಿದ್ದು, ಗೂಳಿ ಗುದ್ದಿದ್ದ ರಭಸಕ್ಕೆ ಬೈಕ್ ಹಿಂಬದಿ ಕುಳಿತಿದ್ದ ಮಹಿಳೆ ರಸ್ತೆಗೆ ಬಿದ್ದಿದ್ದಾರೆ. ಈ ಭಯನಾಕ ವಿಡಿಯೋ ನೋಡುಗರ ಎದೆ ಝಲ್‌ ಎನಿಸುವಂತಿದೆ. ತಮಿಳುನಾಡಿನ ಕನ್ನಮಂಗಲಂನಲ್ಲಿ ಈ ಘಟನೆ ನಡೆದಿದೆ. 

ಆತ್ಮಹತ್ಯೆಗೆ ಯತ್ನಿಸಿದ್ದ ವ್ಯಕ್ತಿಯೊಬ್ಬ ರೈಲು ಬರುವುದನ್ನೇ ಕಾದು  ರೈಲು ಬರುತ್ತಿದ್ದಂತೆ ಹಳಿಯ ಮೇಲೆ ಮಲಗಿದ್ದಾನೆ. ಆದರೆ ಆತನ ಅದೃಷ್ಟ ಚೆನ್ನಾಗಿತ್ತೇನೋ ಇದನ್ನು ನೋಡಿದ ರೈಲಿನ ಲೋಕೋಪೈಲೆಟ್‌ ಕೂಡಲೇ ರೈಲಿನ ತುರ್ತು ಬ್ರೇಕ್‌ ಎಳೆದು ರೈಲು ನಿಲ್ಲಿಸಿದ್ದಾರೆ. ನಂತರ ರೈಲ್ವೆ ಸಿಬ್ಬಂದಿ ಬಂದು ಈತನನ್ನು ಎಬ್ಬಿಸಿ ರಕ್ಷಿಸಿದ್ದಾರೆ.  ಮುಂಬೈನ ಶಿವ್ಡಿ ರೈಲು ನಿಲ್ದಾಣದ ಸಮೀಪ ಈ ಘಡನೆ ನಡೆದಿತ್ತು. 

ಇನ್ನು ತಮಿಳುನಾಡಿನಲ್ಲಿ  ಕುಟುಂಬವೊಂದು ಎರಡು ಸಾಕು ಬೆಕ್ಕುಗಳಿಗೆ ಸೀಮಂತ ಮಾಡಿದ ವಿಚಿತ್ರ ಘಟನೆ ನಡೆದಿತ್ತು. ಇದು ಅಲ್ಲದೇ ನಮ್ಮ ಬೆಂಗಳೂರಿನ ಬನ್ನೇರುಘಟ್ಟ ರಾಷ್ಟ್ರೀಯ ಉದ್ಯಾನದಲ್ಲಿ ಕೆಟ್ಟು ನಿಂತಿದ್ದ ಪ್ರವಾಸಿಗರಿದ್ದ ಕ್ಸೈಲೋ ಮಹೀಂದ್ರಾ ಸಫಾರಿ ವಾಹನವನ್ನು ಹುಲಿಯೊಂದು ಹಿಂದಿನಿಂದ ಎಳೆದ ರೋಚಕ ವಿಡಿಯೋ ಕೂಡ ಈ ವಾರ ಭಾರಿ ವೈರಲ್ ಆಗಿತ್ತು. 

45:25ಸಾಮಾನ್ಯ ಜನರ ಜೇಬಿಗೆ ಕೈ ಹಾಕಿದ ಮೋದಿ ಸರ್ಕಾರ: ಮುಂದೈತಾ ಮಾರಿಹಬ್ಬ?
20:46ಕನಸಿಗೆ ಎದುರಾಯ್ತು ಚತುರ್ಮುಖ ಕಂಟಕ! ಭಾರತದ ಖಜಾನೆ ಖಾಲಿ, ಬಂಗಾರವೇ ವಿಲನ್!
22:50ದಳಪತಿ ಹೊಡೆತಕ್ಕೆ ಅಮ್ಮನ ಕೋಟೆ ಛಿದ್ರ, ವಿಜಯ್‌ಗೆ ಜೈ ಎಂದ ಜಯಲಲಿತಾ ಪಕ್ಷದ 30 ಶಾಸಕರು
21:28ಸಾಲ ಮಾಡಿ ತುಪ್ಪ ತಿನ್ನಿಸಬೇಕಾ ಮುಖ್ಯಮಂತ್ರಿ ವಿಜಯ್? ಏನ್ ಮಾಡ್ತಾರೆ ದಳಪತಿ ?
19:23₹10 ಲಕ್ಷ ಕೋಟಿ ಸಾಲದ ಬೆಟ್ಟ.. ಹೊಸ ಸರ್ಕಾರಕ್ಕೆ ಬಿಗ್ ಚಾಲೆಂಜ್: ವಿಜಯ್ ವಿಜಯ ತಂತ್ರವೇನು?
19:54ಮುಖ್ಯಮಂತ್ರಿ ವಿಜಯ್ ಫಸ್ಟ್ ಡೇ ಫಸ್ಟ್ ಶೋ: ಭರವಸೆಗಳ ಬೆಟ್ಟ, ಖಜಾನೆಗೆ ಭಾರಿ ಹೊರೆ!
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
24:25ಭಾರತದ ಬಳಿಯೂ ಇದೆ ಮಲಕ್ಕಾ ಜಲಸಂಧಿ ಮುಚ್ಚಿದ್ರೆ ಕೆಲ ದೇಶದ ಕತೆ ಗೋವಿಂದ
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
Read more