ಸೋಶಿಯಲ್‌ ಮೀಡಿಯಾದಲ್ಲಿ ವೈರಲ್‌ ಆದ ರೋಚಕ ಸ್ಟೋರಿಗಳಿವು

ಸೋಶಿಯಲ್‌ ಮೀಡಿಯಾದಲ್ಲಿ ವೈರಲ್‌ ಆದ ರೋಚಕ ಸ್ಟೋರಿಗಳಿವು

Suvarna News   | Asianet News
Published : Jan 06, 2022, 03:49 PM IST

ವೀಲಿಂಗ್‌ ಮಾಡಲು ಹೋಗಿ ಮುಗ್ಗರಿಸಿ ಬಿದ್ದ ಯುವಕ
ಸಾಯಲು ಹೊರಟವನ ಪ್ರಾಣ ಉಳಿಸಿದ ರೈಲ್ವೆ ಸಿಬ್ಬಂದಿ

ಬೆಂಗಳೂರು(ಜ.6) ಜಗತ್ತಿನಲ್ಲಿ ಏನೇನೋ ವಿಚಿತ್ರಗಳು, ಅನಾಹುತಗಳು ನಡೆಯುತ್ತಲ್ಲೇ ಇರುತ್ತವೆ. ಆದರೆ ಇತ್ತೀಚೆಗೆ ಪ್ರತಿಯೊಬ್ಬರ ಕೈಯಲ್ಲೂ  ಸ್ಮಾರ್ಟ್‌ ಫೋನ್‌ ಇರುವುದರಿಂದ ಇವು ವೈರಲ್‌ ಆಗುತ್ತಿವೆ.  ಹೀಗೆ ವೈರಲ್‌ ಆದ ಕೆಲವು ರೋಚಕ ಸ್ಟೋರಿಗಳ ವಿವರ ಇಲ್ಲಿದೆ ನೋಡಿ... 

ಬೈಕ್‌ ವೀಲಿಂಗ್‌ ಸೋಕಿಗೆ ಬಿದ್ದ ಯುವಕರಿಬ್ಬರು ವ್ಹೀಲಿಂಗ್‌ ಮಾಡಲು ಹೋಗಿ ನೋಡ ನೋಡುತ್ತಿದ್ದಂತೆ ರಸ್ತೆಯಿಂದ ಗದ್ದೆಗೆ ಬಿದ್ದಿದ್ದಾರೆ.  ಈ ವೇಳೆ ಬೈಕ್‌ ಹಿಂದೆ ಕುಳಿತಿದ್ದ ಯುವಕ ಕೆಳಗೆ ಬಿದ್ದಿದ್ದಾನೆ.  ಸದ್ಯ ಈ ವಿಡಿಯೋ ಸೋಶಿಯಲ್‌ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ವೈರಲ್‌ ಆಗಿದೆ. 

ಬೈಕ್‌ನಲ್ಲಿ ತೆರಳುತ್ತಿದ್ದ ಮೂರು ಜನರಿದ್ದ ಪುಟ್ಟ ಕುಟುಂಬವೊಂದಕ್ಕೆ ಎತ್ತಲಿಂದಲೋ ಬಂದ ಮದವೇರಿದ್ದ ಗೂಳಿಯೊಂದು ಗುದ್ದಿದ್ದು, ಗೂಳಿ ಗುದ್ದಿದ್ದ ರಭಸಕ್ಕೆ ಬೈಕ್ ಹಿಂಬದಿ ಕುಳಿತಿದ್ದ ಮಹಿಳೆ ರಸ್ತೆಗೆ ಬಿದ್ದಿದ್ದಾರೆ. ಈ ಭಯನಾಕ ವಿಡಿಯೋ ನೋಡುಗರ ಎದೆ ಝಲ್‌ ಎನಿಸುವಂತಿದೆ. ತಮಿಳುನಾಡಿನ ಕನ್ನಮಂಗಲಂನಲ್ಲಿ ಈ ಘಟನೆ ನಡೆದಿದೆ. 

ಆತ್ಮಹತ್ಯೆಗೆ ಯತ್ನಿಸಿದ್ದ ವ್ಯಕ್ತಿಯೊಬ್ಬ ರೈಲು ಬರುವುದನ್ನೇ ಕಾದು  ರೈಲು ಬರುತ್ತಿದ್ದಂತೆ ಹಳಿಯ ಮೇಲೆ ಮಲಗಿದ್ದಾನೆ. ಆದರೆ ಆತನ ಅದೃಷ್ಟ ಚೆನ್ನಾಗಿತ್ತೇನೋ ಇದನ್ನು ನೋಡಿದ ರೈಲಿನ ಲೋಕೋಪೈಲೆಟ್‌ ಕೂಡಲೇ ರೈಲಿನ ತುರ್ತು ಬ್ರೇಕ್‌ ಎಳೆದು ರೈಲು ನಿಲ್ಲಿಸಿದ್ದಾರೆ. ನಂತರ ರೈಲ್ವೆ ಸಿಬ್ಬಂದಿ ಬಂದು ಈತನನ್ನು ಎಬ್ಬಿಸಿ ರಕ್ಷಿಸಿದ್ದಾರೆ.  ಮುಂಬೈನ ಶಿವ್ಡಿ ರೈಲು ನಿಲ್ದಾಣದ ಸಮೀಪ ಈ ಘಡನೆ ನಡೆದಿತ್ತು. 

ಇನ್ನು ತಮಿಳುನಾಡಿನಲ್ಲಿ  ಕುಟುಂಬವೊಂದು ಎರಡು ಸಾಕು ಬೆಕ್ಕುಗಳಿಗೆ ಸೀಮಂತ ಮಾಡಿದ ವಿಚಿತ್ರ ಘಟನೆ ನಡೆದಿತ್ತು. ಇದು ಅಲ್ಲದೇ ನಮ್ಮ ಬೆಂಗಳೂರಿನ ಬನ್ನೇರುಘಟ್ಟ ರಾಷ್ಟ್ರೀಯ ಉದ್ಯಾನದಲ್ಲಿ ಕೆಟ್ಟು ನಿಂತಿದ್ದ ಪ್ರವಾಸಿಗರಿದ್ದ ಕ್ಸೈಲೋ ಮಹೀಂದ್ರಾ ಸಫಾರಿ ವಾಹನವನ್ನು ಹುಲಿಯೊಂದು ಹಿಂದಿನಿಂದ ಎಳೆದ ರೋಚಕ ವಿಡಿಯೋ ಕೂಡ ಈ ವಾರ ಭಾರಿ ವೈರಲ್ ಆಗಿತ್ತು. 

18:19ಸರ್ಕಾರಿ ನೌಕರರ ಮೇಲೆ ಯೋಗಿ ಕಟ್ಟು ನಿಟ್ಟಿನ ಆಕ್ಷನ್​: ವೇತನ ಬೇಕಿದ್ದವರು ನಿಯಮ ಪಾಲಿಸಿ.. ಏನಿದು ರೂಲ್ಸ್..?
18:27ಒಂದೇ ಒಂದು ಫೋನ್ ಕಾಲ್. ಬದಲಾಯ್ತು ಭಾರತ-ಅಮೆರಿಕ ನಂಟು! ಚೀನಾಕ್ಕೆ ಶಾಕ್, ಭಾರತಕ್ಕೆ ಲಕ್!
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
22:38ನೀನೆ ನನ್ನ ಬೆಳ್ಳಿ ಅನ್ನೋ ದಿನವೂ ಬಂತು ನೋಡಿ: ಬೆಳ್ಳಿ ಬೆಲೆ ಏರಿಕೆಗೆ ಕಾರಣ ಏನು?
18:51ಡಾಲರ್ ಸಾಮ್ರಾಜ್ಯ ಪತನ? ಚಿನ್ನದ ಅಧಿಪತ್ಯ ಶುರು, ಡಾಲರ್ ಕಂಗಾಲು! ಬಂಗಾರ ರಾಶಿ ಹಾಕ್ತಿರೋ ರಿಸರ್ವ್ ಬ್ಯಾಂಕ್‌
21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
21:07ಅಸ್ಸಾಂ ಅಖಾಡದಲ್ಲಿ ಡಿಕೆ–ಪ್ರಿಯಾಂಕ ಹಿಮಾಗ್ನಿ ಯಜ್ಞ! ಕಮಲ ಸಾಮ್ರಾಜ್ಯಕ್ಕೆ ಡೆಡ್ಲಿ ಸವಾಲು
Read more