ಸೋಶಿಯಲ್‌ ಮೀಡಿಯಾದಲ್ಲಿ ವೈರಲ್‌ ಆದ ರೋಚಕ ಸ್ಟೋರಿಗಳಿವು

ಸೋಶಿಯಲ್‌ ಮೀಡಿಯಾದಲ್ಲಿ ವೈರಲ್‌ ಆದ ರೋಚಕ ಸ್ಟೋರಿಗಳಿವು

Suvarna News   | Asianet News
Published : Jan 06, 2022, 03:49 PM IST

ವೀಲಿಂಗ್‌ ಮಾಡಲು ಹೋಗಿ ಮುಗ್ಗರಿಸಿ ಬಿದ್ದ ಯುವಕ
ಸಾಯಲು ಹೊರಟವನ ಪ್ರಾಣ ಉಳಿಸಿದ ರೈಲ್ವೆ ಸಿಬ್ಬಂದಿ

ಬೆಂಗಳೂರು(ಜ.6) ಜಗತ್ತಿನಲ್ಲಿ ಏನೇನೋ ವಿಚಿತ್ರಗಳು, ಅನಾಹುತಗಳು ನಡೆಯುತ್ತಲ್ಲೇ ಇರುತ್ತವೆ. ಆದರೆ ಇತ್ತೀಚೆಗೆ ಪ್ರತಿಯೊಬ್ಬರ ಕೈಯಲ್ಲೂ  ಸ್ಮಾರ್ಟ್‌ ಫೋನ್‌ ಇರುವುದರಿಂದ ಇವು ವೈರಲ್‌ ಆಗುತ್ತಿವೆ.  ಹೀಗೆ ವೈರಲ್‌ ಆದ ಕೆಲವು ರೋಚಕ ಸ್ಟೋರಿಗಳ ವಿವರ ಇಲ್ಲಿದೆ ನೋಡಿ... 

ಬೈಕ್‌ ವೀಲಿಂಗ್‌ ಸೋಕಿಗೆ ಬಿದ್ದ ಯುವಕರಿಬ್ಬರು ವ್ಹೀಲಿಂಗ್‌ ಮಾಡಲು ಹೋಗಿ ನೋಡ ನೋಡುತ್ತಿದ್ದಂತೆ ರಸ್ತೆಯಿಂದ ಗದ್ದೆಗೆ ಬಿದ್ದಿದ್ದಾರೆ.  ಈ ವೇಳೆ ಬೈಕ್‌ ಹಿಂದೆ ಕುಳಿತಿದ್ದ ಯುವಕ ಕೆಳಗೆ ಬಿದ್ದಿದ್ದಾನೆ.  ಸದ್ಯ ಈ ವಿಡಿಯೋ ಸೋಶಿಯಲ್‌ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ವೈರಲ್‌ ಆಗಿದೆ. 

ಬೈಕ್‌ನಲ್ಲಿ ತೆರಳುತ್ತಿದ್ದ ಮೂರು ಜನರಿದ್ದ ಪುಟ್ಟ ಕುಟುಂಬವೊಂದಕ್ಕೆ ಎತ್ತಲಿಂದಲೋ ಬಂದ ಮದವೇರಿದ್ದ ಗೂಳಿಯೊಂದು ಗುದ್ದಿದ್ದು, ಗೂಳಿ ಗುದ್ದಿದ್ದ ರಭಸಕ್ಕೆ ಬೈಕ್ ಹಿಂಬದಿ ಕುಳಿತಿದ್ದ ಮಹಿಳೆ ರಸ್ತೆಗೆ ಬಿದ್ದಿದ್ದಾರೆ. ಈ ಭಯನಾಕ ವಿಡಿಯೋ ನೋಡುಗರ ಎದೆ ಝಲ್‌ ಎನಿಸುವಂತಿದೆ. ತಮಿಳುನಾಡಿನ ಕನ್ನಮಂಗಲಂನಲ್ಲಿ ಈ ಘಟನೆ ನಡೆದಿದೆ. 

ಆತ್ಮಹತ್ಯೆಗೆ ಯತ್ನಿಸಿದ್ದ ವ್ಯಕ್ತಿಯೊಬ್ಬ ರೈಲು ಬರುವುದನ್ನೇ ಕಾದು  ರೈಲು ಬರುತ್ತಿದ್ದಂತೆ ಹಳಿಯ ಮೇಲೆ ಮಲಗಿದ್ದಾನೆ. ಆದರೆ ಆತನ ಅದೃಷ್ಟ ಚೆನ್ನಾಗಿತ್ತೇನೋ ಇದನ್ನು ನೋಡಿದ ರೈಲಿನ ಲೋಕೋಪೈಲೆಟ್‌ ಕೂಡಲೇ ರೈಲಿನ ತುರ್ತು ಬ್ರೇಕ್‌ ಎಳೆದು ರೈಲು ನಿಲ್ಲಿಸಿದ್ದಾರೆ. ನಂತರ ರೈಲ್ವೆ ಸಿಬ್ಬಂದಿ ಬಂದು ಈತನನ್ನು ಎಬ್ಬಿಸಿ ರಕ್ಷಿಸಿದ್ದಾರೆ.  ಮುಂಬೈನ ಶಿವ್ಡಿ ರೈಲು ನಿಲ್ದಾಣದ ಸಮೀಪ ಈ ಘಡನೆ ನಡೆದಿತ್ತು. 

ಇನ್ನು ತಮಿಳುನಾಡಿನಲ್ಲಿ  ಕುಟುಂಬವೊಂದು ಎರಡು ಸಾಕು ಬೆಕ್ಕುಗಳಿಗೆ ಸೀಮಂತ ಮಾಡಿದ ವಿಚಿತ್ರ ಘಟನೆ ನಡೆದಿತ್ತು. ಇದು ಅಲ್ಲದೇ ನಮ್ಮ ಬೆಂಗಳೂರಿನ ಬನ್ನೇರುಘಟ್ಟ ರಾಷ್ಟ್ರೀಯ ಉದ್ಯಾನದಲ್ಲಿ ಕೆಟ್ಟು ನಿಂತಿದ್ದ ಪ್ರವಾಸಿಗರಿದ್ದ ಕ್ಸೈಲೋ ಮಹೀಂದ್ರಾ ಸಫಾರಿ ವಾಹನವನ್ನು ಹುಲಿಯೊಂದು ಹಿಂದಿನಿಂದ ಎಳೆದ ರೋಚಕ ವಿಡಿಯೋ ಕೂಡ ಈ ವಾರ ಭಾರಿ ವೈರಲ್ ಆಗಿತ್ತು. 

39:28ಅಯೋಧ್ಯೆ ರಾಮಮಂದಿರ: ಪ್ರಾಜೆಕ್ಟ್ ಚೀಫ್ ನೃಪೇಂದ್ರ ಮಿಶ್ರಾ ಜೊತೆ ಎಕ್ಸ್‌ಕ್ಲೂಸಿವ್ ಸಂದರ್ಶನ
22:49ವಿಧಾನಸಭೆಯಲ್ಲೂ ಸಿಎಂ ವಿಜಯ್ ಪಂಚಿಂಗ್ ಡೈಲಾಗ್, ದ್ರಾವಿಡ ನಾಡಿನಲ್ಲಿ ರಾಜಕೀಯ ರಂಗು ಬದಲು
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
19:59Suvarna Focus: ರುದ್ರಪ್ರಯಾಗದಲ್ಲಿ ನಿಹಾಂಗ್ ಯೋಧರ ರಣಕಹಳೆ; ಮತ್ತೆ ಕಾಡುತ್ತಿದೆ 1984ರ ‘ಆಪರೇಷನ್ ಬ್ಲ್ಯೂ ಸ್ಟಾರ್’ ಕರಾಳ ನೆನಪು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
22:58ಉಗ್ರನಾಗಲು ಪಾಕಿಸ್ತಾನಕ್ಕೆ ತೆರಳಿ ರಿಯಲ್ ಧುರಂಧರ್ ಆದ ಕಾಶ್ಮೀರ ಯುವಕ, ಬೆಚ್ಚಿ ಬೀಳಿಸೋ ಘಟನೆ
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್
20:58ಮುಂಗಾರು ಮಳೆಯನ್ನೇ ನುಂಗಿ ಹಾಕ್ತಾನಾ ಪುಟ್ಟ ಹುಡುಗ? ಭಾರತಕ್ಕೆ ಶೇ.60ರಷ್ಟು ಬರಗಾಲ ಎಚ್ಚರಿಕೆ
19:36ಯುಪಿ ಕದನ 2027: ‘ಲೋಕ’ ಪಾಠ, ಕಮಲ ಪಡೆಯ ಪ್ರತೀಕಾರ! ವಿಪಕ್ಷಗಳ ನಿದ್ದೆಗೆಡಿಸಿದ ಬಿಜೆಪಿಯ ಮಹಾ ಚಾಣಕ್ಯ ತಂತ್ರ!
Read more