ಸೋಶಿಯಲ್‌ ಮೀಡಿಯಾದಲ್ಲಿ ವೈರಲ್‌ ಆದ ರೋಚಕ ಸ್ಟೋರಿಗಳಿವು

ಸೋಶಿಯಲ್‌ ಮೀಡಿಯಾದಲ್ಲಿ ವೈರಲ್‌ ಆದ ರೋಚಕ ಸ್ಟೋರಿಗಳಿವು

Published : Jan 06, 2022, 03:49 PM IST

ವೀಲಿಂಗ್‌ ಮಾಡಲು ಹೋಗಿ ಮುಗ್ಗರಿಸಿ ಬಿದ್ದ ಯುವಕ
ಸಾಯಲು ಹೊರಟವನ ಪ್ರಾಣ ಉಳಿಸಿದ ರೈಲ್ವೆ ಸಿಬ್ಬಂದಿ

ಬೆಂಗಳೂರು(ಜ.6) ಜಗತ್ತಿನಲ್ಲಿ ಏನೇನೋ ವಿಚಿತ್ರಗಳು, ಅನಾಹುತಗಳು ನಡೆಯುತ್ತಲ್ಲೇ ಇರುತ್ತವೆ. ಆದರೆ ಇತ್ತೀಚೆಗೆ ಪ್ರತಿಯೊಬ್ಬರ ಕೈಯಲ್ಲೂ  ಸ್ಮಾರ್ಟ್‌ ಫೋನ್‌ ಇರುವುದರಿಂದ ಇವು ವೈರಲ್‌ ಆಗುತ್ತಿವೆ.  ಹೀಗೆ ವೈರಲ್‌ ಆದ ಕೆಲವು ರೋಚಕ ಸ್ಟೋರಿಗಳ ವಿವರ ಇಲ್ಲಿದೆ ನೋಡಿ... 

ಬೈಕ್‌ ವೀಲಿಂಗ್‌ ಸೋಕಿಗೆ ಬಿದ್ದ ಯುವಕರಿಬ್ಬರು ವ್ಹೀಲಿಂಗ್‌ ಮಾಡಲು ಹೋಗಿ ನೋಡ ನೋಡುತ್ತಿದ್ದಂತೆ ರಸ್ತೆಯಿಂದ ಗದ್ದೆಗೆ ಬಿದ್ದಿದ್ದಾರೆ.  ಈ ವೇಳೆ ಬೈಕ್‌ ಹಿಂದೆ ಕುಳಿತಿದ್ದ ಯುವಕ ಕೆಳಗೆ ಬಿದ್ದಿದ್ದಾನೆ.  ಸದ್ಯ ಈ ವಿಡಿಯೋ ಸೋಶಿಯಲ್‌ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ವೈರಲ್‌ ಆಗಿದೆ. 

ಬೈಕ್‌ನಲ್ಲಿ ತೆರಳುತ್ತಿದ್ದ ಮೂರು ಜನರಿದ್ದ ಪುಟ್ಟ ಕುಟುಂಬವೊಂದಕ್ಕೆ ಎತ್ತಲಿಂದಲೋ ಬಂದ ಮದವೇರಿದ್ದ ಗೂಳಿಯೊಂದು ಗುದ್ದಿದ್ದು, ಗೂಳಿ ಗುದ್ದಿದ್ದ ರಭಸಕ್ಕೆ ಬೈಕ್ ಹಿಂಬದಿ ಕುಳಿತಿದ್ದ ಮಹಿಳೆ ರಸ್ತೆಗೆ ಬಿದ್ದಿದ್ದಾರೆ. ಈ ಭಯನಾಕ ವಿಡಿಯೋ ನೋಡುಗರ ಎದೆ ಝಲ್‌ ಎನಿಸುವಂತಿದೆ. ತಮಿಳುನಾಡಿನ ಕನ್ನಮಂಗಲಂನಲ್ಲಿ ಈ ಘಟನೆ ನಡೆದಿದೆ. 

ಆತ್ಮಹತ್ಯೆಗೆ ಯತ್ನಿಸಿದ್ದ ವ್ಯಕ್ತಿಯೊಬ್ಬ ರೈಲು ಬರುವುದನ್ನೇ ಕಾದು  ರೈಲು ಬರುತ್ತಿದ್ದಂತೆ ಹಳಿಯ ಮೇಲೆ ಮಲಗಿದ್ದಾನೆ. ಆದರೆ ಆತನ ಅದೃಷ್ಟ ಚೆನ್ನಾಗಿತ್ತೇನೋ ಇದನ್ನು ನೋಡಿದ ರೈಲಿನ ಲೋಕೋಪೈಲೆಟ್‌ ಕೂಡಲೇ ರೈಲಿನ ತುರ್ತು ಬ್ರೇಕ್‌ ಎಳೆದು ರೈಲು ನಿಲ್ಲಿಸಿದ್ದಾರೆ. ನಂತರ ರೈಲ್ವೆ ಸಿಬ್ಬಂದಿ ಬಂದು ಈತನನ್ನು ಎಬ್ಬಿಸಿ ರಕ್ಷಿಸಿದ್ದಾರೆ.  ಮುಂಬೈನ ಶಿವ್ಡಿ ರೈಲು ನಿಲ್ದಾಣದ ಸಮೀಪ ಈ ಘಡನೆ ನಡೆದಿತ್ತು. 

ಇನ್ನು ತಮಿಳುನಾಡಿನಲ್ಲಿ  ಕುಟುಂಬವೊಂದು ಎರಡು ಸಾಕು ಬೆಕ್ಕುಗಳಿಗೆ ಸೀಮಂತ ಮಾಡಿದ ವಿಚಿತ್ರ ಘಟನೆ ನಡೆದಿತ್ತು. ಇದು ಅಲ್ಲದೇ ನಮ್ಮ ಬೆಂಗಳೂರಿನ ಬನ್ನೇರುಘಟ್ಟ ರಾಷ್ಟ್ರೀಯ ಉದ್ಯಾನದಲ್ಲಿ ಕೆಟ್ಟು ನಿಂತಿದ್ದ ಪ್ರವಾಸಿಗರಿದ್ದ ಕ್ಸೈಲೋ ಮಹೀಂದ್ರಾ ಸಫಾರಿ ವಾಹನವನ್ನು ಹುಲಿಯೊಂದು ಹಿಂದಿನಿಂದ ಎಳೆದ ರೋಚಕ ವಿಡಿಯೋ ಕೂಡ ಈ ವಾರ ಭಾರಿ ವೈರಲ್ ಆಗಿತ್ತು. 

24:50ಮಹಾರಾಕ್ಷಸ El Nino ಜನ್ಮ ರಹಸ್ಯ ; 2027ರ ಬೇಸಿಗೆಯ ಎಚ್ಚರಿಕೆ ನೀಡದ ವಿಜ್ಞಾನಿಗಳು
20:322029ರ ಮಹಾಭಾರತ: ಜಿರಳೆಗಳೇ ಕಿಂಗ್ ಮೇಕರ್..! Gen Zಗಳಿಗೆ ಕನೆಕ್ಟ್ ಆಗಲು ಹೇಗಿದೆ ರಾಜಕೀಯ ನಾಯಕರ ಪ್ರಯತ್ನ..?
23:17ಪ್ಲಾಸ್ಟಿಕ್ ನೋಟ್‌ಗೆ ಹಣಕಾಸು ಸಚಿವಾಲಯ ಗ್ರೀನ್​​ ಸಿಗ್ನಲ್​​​ ! ಹರಿಯಲ್ಲ, ನೆನೆಯಲ್ಲ, ಕಳ್ಳನೋಟು ಸಾಧ್ಯವಿಲ್ಲ, ಹೇಗಿರುತ್ತೆ ಹೊಸ ಕರೆನ್ಸಿ..?
20:56Suvarna Focus: ಜಂತರ್ ಮಂತರ್‌ನಲ್ಲಿ ನಡೆದಿದ್ದೇನು? ಬೆಚ್ಚಿಬೀಳಿಸಿದ ರಿಪೋರ್ಟ್! ಆಪರೇಷನ್ 2873 ಅಸಲಿ ಸೀಕ್ರೆಟ್?
50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
Read more