ಕಾಶ್ಮೀರದಲ್ಲಿ  ಶುರವಾಗಿದೆಯಾ ಮುಸ್ಲಿಂ VS ಮುಸ್ಲಿಂ ಸಂಘರ್ಷ..? ಕಣಿವೆ ರಾಜ್ಯದಲ್ಲಿ ಏನಾಗುತ್ತಿದೆ..?

ಕಾಶ್ಮೀರದಲ್ಲಿ ಶುರವಾಗಿದೆಯಾ ಮುಸ್ಲಿಂ VS ಮುಸ್ಲಿಂ ಸಂಘರ್ಷ..? ಕಣಿವೆ ರಾಜ್ಯದಲ್ಲಿ ಏನಾಗುತ್ತಿದೆ..?

Published : Dec 26, 2023, 02:55 PM IST

ಶಾಂತವಾಗಿದ್ದ ಕಣಿವೆಯಲ್ಲಿ ಮತ್ತೆ ಉಗ್ರರ ಕಂಟಕ..!
ಕಣಿವೆ ನಾಡಲ್ಲಿ ಸಂಭವಿಸಿವೆ ಸಾಲು ಸಾಲು ಉಗ್ರದಾಳಿ!
ಉಗ್ರದಾಳಿಯ ಹಿಂದೆ ಕಾಣುತ್ತಿದೆ ಅದೊಂದು ಕಾರಣ!

ಆರ್ಟಿಕಲ್ 370 ಹಾಗೂ 35ಎ, ಈ ಎರಡೂ ಕಂಟಕಗಳನ್ನೂ ತೆಗೆದು ಹಾಕಿದ ಮೇಲೆ, ಕಣಿವೆ ರಾಜ್ಯ ಶಾಂತವಾಗಿತ್ತು. ಜಮ್ಮು ಹಾಗೂ ಕಾಶ್ಮೀರದ(Jammu and Kashmir) ಜನಕ್ಕೆ, ಅಭಿವೃದ್ಧಿ ಅಂದ್ರೆ ಹೇಗಿರುತ್ತೆ, ಅಭಿವೃದ್ಧಿ ಹೊಂದಿದರೆ ಏನಾಗುತ್ತೆ ಅನ್ನೋದು ಅರ್ಥವಾಗ್ತಾ ಇತ್ತು. ಪಾಕಿಸ್ತಾನವಂತೂ(Pakistan) ಕಾಶ್ಮೀರದ ವಿಷಯದಲ್ಲಿ ಕೈಹಾಕೋದಕ್ಕಾಗದೆ ವಿಲವಿಲ ಅಂತ ವದ್ದಾಡಿತ್ತು. ಉಗ್ರವಾದ ಅನ್ನೋ ಕಾಶ್ಮೀರದಲ್ಲಿ ಅಕ್ಷರಶಃ ಹಿಮಸಮಾಧಿ ಹೊಂದಿತ್ತು. ಆದ್ರೆ ಈಗ ಕಾಶ್ಮೀರದಲ್ಲಿ ಮತ್ತೆ ಕೋಲಾಹಲ ಶುರುವಾಗಿದೆ. ಉಗ್ರರು ಮತ್ತೆ ಉಪಟಳ ಕೊಡೋಕೆ ಆರಂಭಿಸಿದ್ದಾರೆ. ಉಗ್ರಕೃತ್ಯಕ್ಕೆ ಭಾರತ ಸೇನೆ ಸಂಹಾರದ ಪ್ರತ್ಯುತ್ತರವನ್ನೇ ಕೊಡೋದು ಅಂತ ಗೊತ್ತಿದ್ದಾಗಲೂ ಹುಚ್ಚು ಸಾಹಸಕ್ಕೆ ಪಾಕಿಸ್ತಾನದ ಉಗ್ರರು ಸನ್ನದ್ಧರಾಗ್ತಾ ಇದಾರೆ. ಇಲ್ಲಿ ಚಿರನಿದ್ರೆಗೆ ಜಾರಿರೋ ವ್ಯಕ್ತಿ, ನಿವೃತ್ತ ಪೊಲೀಸ್ ಅಧಿಕಾರಿ. ಹೆಸರು ಮಹಮ್ಮದ್ ಶಫಿ. ಇದೇ ಭಾನುವಾರ ಜಮ್ಮು-ಕಾಶ್ಮೀರದ ಬಾರಾಮುಲ್ಲಾದ ಮಸೀಯೊಂದರಲ್ಲಿ ಪ್ರಾರ್ಥನೆ ಸಲ್ಲಿಸ್ತಾ ಇದ್ದಾಗಲೇ ಇವರ ಮೇಲೆ ಉಗ್ರರ ದಾಳಿ ನಡೆದಿತ್ತು. ಉಗ್ರರು ಹಾರಿಸಿದ ಗುಂಡು, ಶಫಿ ಅವರ ಮೃತ್ಯುವಿಗೆ ಕಾರಣವಾಗಿತ್ತು. ಈ ದಾಳಿ ಇದ್ಯಲ್ಲಾ, ಇದು ಮೇಲ್ನೋಟಕ್ಕೆ ಭಾರತೀಯ(Indian army) ಸೇನೆಯ ಮೇಲೆ ಉಗ್ರರು ಕೈಗೊಂಡ ಪ್ರತೀಕಾರದ ಹಾಗೆ ಕಾಣ್ತಾ ಇದೆ. ಯಾಕಂದ್ರೆ ಕಳೆದೊಂದು ವಾರದಿಂದ, ಸೇನೆ ಉಗ್ರರ ತಲಾಷ್ ಮಾಡ್ತಾ ಇತ್ತು. ಅಷ್ಟೇ ಅಲ್ಲ, ಈ ಘಟನೆ ನಡೆಯೋ ಒಂದು ದಿನ ಮುಂಚೆ, ಅಂದ್ರೆ ಕಳೆದ ಶನಿವಾರ ಭಾರತೀಯ ಸೇನೆ ಪಾಕಿಸ್ತಾನದ ಉಗ್ರರ ದೊಡ್ಡ ಸಂಚೊಂದನ್ನ ದಮನಗೊಳಿಸಿತ್ತು.

ಇದನ್ನೂ ವೀಕ್ಷಿಸಿ:  ಬಂಟ್ವಾಳದ ತುಂಬೆ ಡ್ಯಾಂಗೆ ರೈತರ ಮುತ್ತಿಗೆ: ಕೃಷಿ ಭೂಮಿ ನೀರು ಪಾಲು.. 9 ಕುಟುಂಬಗಳು ಕಂಗಾಲು

19:50Suvarna Special: ನನ್ನವರು ಯಾರೂ ಇಲ್ಲ, ದೀದಿ ಕಟ್ಟಿದ ದಶಕದ ಕೋಟೆ ಒಂದೇ ಏಟಿಗೆ ಛಿದ್ರ
21:25ಮಧ್ಯಪ್ರಾಚ್ಯ ಯುದ್ಧ ನಡುವೆ ಭಾರತ ಟಾರ್ಗೆಟ್, ಟ್ರಂಪ್ ಎಡವಟ್ಟಿಗೆ ಮೋದಿ ಸರ್ಕಾರ ಮಾಡಿದ್ದೇನು?
24:27ನೆಹರು ದಾಖಲೆ ಮುರಿದ ಮೋದಿ ಸುದೀರ್ಘ ಆಡಳಿತ, 3 ಬಾರಿ ಜನಾದೇಶ, ಕದಲದ ಮೋದಿ ಸಿಂಹಾಸನ, ಹೇಗಿತ್ತು 4398 ದಿನಗಳ ಆಡಳಿತ?
24:09ದೀದಿ ಕೋಟೆಯಲ್ಲಿ ಮಹಾಬಿರುಕು.. ಏನು ಕಾರಣ? ಗಜಕೇಸರಿ ವ್ಯೂಹ.. ದೀದಿ ದಿಗ್ಬಂಧನ.. ಏನಿದರ ಗುಟ್ಟು?
24:26ಪ್ಲಾಸ್ಟಿಕ್ ನೋಟು... ಕರೆನ್ಸಿ ಕ್ರಾಂತಿ! ಕಾಗದದ ನೋಟುಗಳ ಆಯಸ್ಸು ಖತಂ, ಮತ್ತೆ ಡಿಮಾನಟೈಸೇಶನ್..?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
24:48ಬೆಂಗಳೂರಲ್ಲೂ ಮೊಳಗುತ್ತಾ ವಿಜಯ್ ವಿಸಿಲ್ ಸದ್ದು? ತಮಿಳು ಮತದಾರರು ಹೆಚ್ಚಿರುವ ವಾರ್ಡ್​ಗಳಲ್ಲಿ ಸ್ಪರ್ಧಿಸುತ್ತಾ ಟಿವಿಕೆ?
18:54ಐದೇ ದಿನಕ್ಕೆ 2 ಕೋಟಿ ಜಿರಳೆ ಸೈನಿಕರು, ಜೆನ್‌ಝೀ ಅಕ್ರೋಶವೋ, ಕ್ರಾಂತಿಯ ಕಿಚ್ಚೋ?
30:39‘ದೇಶಕ್ಕೆ ಆರ್ಥಿಕ ತೂಫಾನ್ ಬರಲಿದೆ.. ದೇಶ ಮಾರಿದ್ದಾರೆ’ ಪ್ರಧಾನಿ ಮೋದಿ ದೇಶದ್ರೋಹಿ ಎಂದು ರಾಹುಲ್ ವಿವಾದ!
21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?