ಕಾಶ್ಮೀರದಲ್ಲಿ  ಶುರವಾಗಿದೆಯಾ ಮುಸ್ಲಿಂ VS ಮುಸ್ಲಿಂ ಸಂಘರ್ಷ..? ಕಣಿವೆ ರಾಜ್ಯದಲ್ಲಿ ಏನಾಗುತ್ತಿದೆ..?

ಕಾಶ್ಮೀರದಲ್ಲಿ ಶುರವಾಗಿದೆಯಾ ಮುಸ್ಲಿಂ VS ಮುಸ್ಲಿಂ ಸಂಘರ್ಷ..? ಕಣಿವೆ ರಾಜ್ಯದಲ್ಲಿ ಏನಾಗುತ್ತಿದೆ..?

Published : Dec 26, 2023, 02:55 PM IST

ಶಾಂತವಾಗಿದ್ದ ಕಣಿವೆಯಲ್ಲಿ ಮತ್ತೆ ಉಗ್ರರ ಕಂಟಕ..!
ಕಣಿವೆ ನಾಡಲ್ಲಿ ಸಂಭವಿಸಿವೆ ಸಾಲು ಸಾಲು ಉಗ್ರದಾಳಿ!
ಉಗ್ರದಾಳಿಯ ಹಿಂದೆ ಕಾಣುತ್ತಿದೆ ಅದೊಂದು ಕಾರಣ!

ಆರ್ಟಿಕಲ್ 370 ಹಾಗೂ 35ಎ, ಈ ಎರಡೂ ಕಂಟಕಗಳನ್ನೂ ತೆಗೆದು ಹಾಕಿದ ಮೇಲೆ, ಕಣಿವೆ ರಾಜ್ಯ ಶಾಂತವಾಗಿತ್ತು. ಜಮ್ಮು ಹಾಗೂ ಕಾಶ್ಮೀರದ(Jammu and Kashmir) ಜನಕ್ಕೆ, ಅಭಿವೃದ್ಧಿ ಅಂದ್ರೆ ಹೇಗಿರುತ್ತೆ, ಅಭಿವೃದ್ಧಿ ಹೊಂದಿದರೆ ಏನಾಗುತ್ತೆ ಅನ್ನೋದು ಅರ್ಥವಾಗ್ತಾ ಇತ್ತು. ಪಾಕಿಸ್ತಾನವಂತೂ(Pakistan) ಕಾಶ್ಮೀರದ ವಿಷಯದಲ್ಲಿ ಕೈಹಾಕೋದಕ್ಕಾಗದೆ ವಿಲವಿಲ ಅಂತ ವದ್ದಾಡಿತ್ತು. ಉಗ್ರವಾದ ಅನ್ನೋ ಕಾಶ್ಮೀರದಲ್ಲಿ ಅಕ್ಷರಶಃ ಹಿಮಸಮಾಧಿ ಹೊಂದಿತ್ತು. ಆದ್ರೆ ಈಗ ಕಾಶ್ಮೀರದಲ್ಲಿ ಮತ್ತೆ ಕೋಲಾಹಲ ಶುರುವಾಗಿದೆ. ಉಗ್ರರು ಮತ್ತೆ ಉಪಟಳ ಕೊಡೋಕೆ ಆರಂಭಿಸಿದ್ದಾರೆ. ಉಗ್ರಕೃತ್ಯಕ್ಕೆ ಭಾರತ ಸೇನೆ ಸಂಹಾರದ ಪ್ರತ್ಯುತ್ತರವನ್ನೇ ಕೊಡೋದು ಅಂತ ಗೊತ್ತಿದ್ದಾಗಲೂ ಹುಚ್ಚು ಸಾಹಸಕ್ಕೆ ಪಾಕಿಸ್ತಾನದ ಉಗ್ರರು ಸನ್ನದ್ಧರಾಗ್ತಾ ಇದಾರೆ. ಇಲ್ಲಿ ಚಿರನಿದ್ರೆಗೆ ಜಾರಿರೋ ವ್ಯಕ್ತಿ, ನಿವೃತ್ತ ಪೊಲೀಸ್ ಅಧಿಕಾರಿ. ಹೆಸರು ಮಹಮ್ಮದ್ ಶಫಿ. ಇದೇ ಭಾನುವಾರ ಜಮ್ಮು-ಕಾಶ್ಮೀರದ ಬಾರಾಮುಲ್ಲಾದ ಮಸೀಯೊಂದರಲ್ಲಿ ಪ್ರಾರ್ಥನೆ ಸಲ್ಲಿಸ್ತಾ ಇದ್ದಾಗಲೇ ಇವರ ಮೇಲೆ ಉಗ್ರರ ದಾಳಿ ನಡೆದಿತ್ತು. ಉಗ್ರರು ಹಾರಿಸಿದ ಗುಂಡು, ಶಫಿ ಅವರ ಮೃತ್ಯುವಿಗೆ ಕಾರಣವಾಗಿತ್ತು. ಈ ದಾಳಿ ಇದ್ಯಲ್ಲಾ, ಇದು ಮೇಲ್ನೋಟಕ್ಕೆ ಭಾರತೀಯ(Indian army) ಸೇನೆಯ ಮೇಲೆ ಉಗ್ರರು ಕೈಗೊಂಡ ಪ್ರತೀಕಾರದ ಹಾಗೆ ಕಾಣ್ತಾ ಇದೆ. ಯಾಕಂದ್ರೆ ಕಳೆದೊಂದು ವಾರದಿಂದ, ಸೇನೆ ಉಗ್ರರ ತಲಾಷ್ ಮಾಡ್ತಾ ಇತ್ತು. ಅಷ್ಟೇ ಅಲ್ಲ, ಈ ಘಟನೆ ನಡೆಯೋ ಒಂದು ದಿನ ಮುಂಚೆ, ಅಂದ್ರೆ ಕಳೆದ ಶನಿವಾರ ಭಾರತೀಯ ಸೇನೆ ಪಾಕಿಸ್ತಾನದ ಉಗ್ರರ ದೊಡ್ಡ ಸಂಚೊಂದನ್ನ ದಮನಗೊಳಿಸಿತ್ತು.

ಇದನ್ನೂ ವೀಕ್ಷಿಸಿ:  ಬಂಟ್ವಾಳದ ತುಂಬೆ ಡ್ಯಾಂಗೆ ರೈತರ ಮುತ್ತಿಗೆ: ಕೃಷಿ ಭೂಮಿ ನೀರು ಪಾಲು.. 9 ಕುಟುಂಬಗಳು ಕಂಗಾಲು

24:25ಭಾರತದ ಬಳಿಯೂ ಇದೆ ಮಲಕ್ಕಾ ಜಲಸಂಧಿ ಮುಚ್ಚಿದ್ರೆ ಕೆಲ ದೇಶದ ಕತೆ ಗೋವಿಂದ
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
23:34ಕೇರಳ ಎಲೆಕ್ಷನ್ ಗ್ರೌಂಡ್ ರಿಪೋರ್ಟ್: ಕನ್ನಡಿಗರೇ ಹೆಚ್ಚಿರುವ ಮಂಜೇಶ್ವರದ ಜನ ಹೇಳೋದೇನು?
20:04Suvarna Focus: ಕೆಂಪು ರಕ್ಕಸ ಕೋಟೆ ಧೂಳಿಪಟ, ಭಾರತ ಈಗ ನಕ್ಸಲ್ ಮುಕ್ತ! 59 ವರ್ಷಗಳ ರಕ್ಕಸನಿಗೆ ಶಾಶ್ವತ ಅಂತ್ಯಕ್ರಿಯೆ
53:2759 ವರ್ಷಗಳ ನಕ್ಸಲ್ ಯುಗಾಂತ್ಯ? ಅಮಿತ್ ಶಾ ಮಹತ್ವದ ಘೋಷಣೆ! 59 ವರ್ಷದ ಬಳಿಕ ಭಾರತ ನಿರಾಳ!
16:00ನೆತನ್ಯಾಹು ಹೆಣೆದ 'ಹೆಕ್ಸಾಗನ್' ವ್ಯೂಹಕ್ಕೆ ಮೋದಿ ಸಾರಥಿ: ಇಸ್ರೇಲ್ ಭೇಟಿಯಿಂದ ಜಾಗತಿಕ ರಾಜಕಾರಣದಲ್ಲಿ ಹೊಸ ಸಂಚಲನ!
18:19ಸರ್ಕಾರಿ ನೌಕರರ ಮೇಲೆ ಯೋಗಿ ಕಟ್ಟು ನಿಟ್ಟಿನ ಆಕ್ಷನ್​: ವೇತನ ಬೇಕಿದ್ದವರು ನಿಯಮ ಪಾಲಿಸಿ.. ಏನಿದು ರೂಲ್ಸ್..?
18:27ಒಂದೇ ಒಂದು ಫೋನ್ ಕಾಲ್. ಬದಲಾಯ್ತು ಭಾರತ-ಅಮೆರಿಕ ನಂಟು! ಚೀನಾಕ್ಕೆ ಶಾಕ್, ಭಾರತಕ್ಕೆ ಲಕ್!
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್