Supreme court on EVM: ಇವಿಎಂ ಬಂದು 20 ವರ್ಷಗಳಾದ್ರು ಅನುಮಾನವೇಕೆ? ಕೆಲ ಪಕ್ಷಗಳು ಸೋತಾಗ ಇದರ ಮೇಲೆ ಸಂದೇಹವೇಕೆ..?

Supreme court on EVM: ಇವಿಎಂ ಬಂದು 20 ವರ್ಷಗಳಾದ್ರು ಅನುಮಾನವೇಕೆ? ಕೆಲ ಪಕ್ಷಗಳು ಸೋತಾಗ ಇದರ ಮೇಲೆ ಸಂದೇಹವೇಕೆ..?

Published : Apr 27, 2024, 05:26 PM IST

ಇವಿಎಂ ಅನುಮಾನಿಸಿ ಅರ್ಜಿ ಹಾಕಿದವರಿಗೆ ಬುದ್ದಿ ಹೇಳಿದ ಸುಪ್ರೀಂ
ಇವಿಎಂ ಬೇಡ..ಬ್ಯಾಲೆಟ್ ಪೇಪರ್ ಬೇಕು ಅಂದವರಿಗೆ ಸುಪ್ರೀಂ ಚಾಟಿ
ಕೇವಲ ಅನುಮಾನ ಪಟ್ಟರೆ ಕೋರ್ಟ್ ಒಪ್ಪುವುದಿಲ್ಲವೆಂದ ಸುಪ್ರೀಂ
ಚುನಾವಣಾ ಆಯೋಗಕ್ಕೆ ಎರಡು ಸಲಹೆ ಕೊಟ್ಟ ಸುಪ್ರೀಂ ಕೋರ್ಟ್


ಇವಿಎಂ ಮಷಿನ್ ಜೊತೆ ಜೊತೆಗೆ ವಿವಿ ಪ್ಯಾಟ್‌ನ ಚೀಟಿಗಳನ್ನೂ ಲೆಕ್ಕ ಹಾಕಬೇಕೆಂದು ಸುಪ್ರೀಂ ಕೋರ್ಟ್(Supreme Court) ಮೊರೆ ಹೋಗಲಾಗಿತ್ತು. ಹಾಗೆನೇ ಎಲೆಕ್ಷನ್ ವೋಟಿಂಗ್ ಸಂದರ್ಭದಲ್ಲಿ ಇವಿಎಂ ಮಷಿನ್(EVM machine) ಬದಲಾಗಿ, ಹಳೇ ಪದ್ಧತಿಯಾದ ಬ್ಯಾಲೆಟ್ ಪೇಪರ್(Ballot Paper) ವೋಟಿಂಗ್ ಅನ್ನೇ ಮರಳಿ ತರಬೇಕು ಅನ್ನೋ ಅರ್ಜಿ ಸಹ ಸುಪ್ರೀಂ ಕೋರ್ಟ್‌ನಲ್ಲಿತ್ತು. ನಿನ್ನೆ ಆ ಎಲ್ಲ ಅರ್ಜಿಗಳಿಗೆ ಸುಪ್ರೀಂ ಕೋರ್ಟ್ ಖಡಕ್ ಜವಾಬ್ ಕೊಟ್ಟಿದೆ. ದೇಶದಲ್ಲಿ ಮೊದಲ್ಲೆಲ್ಲ ಬ್ಯಾಲೆಟ್ ಪೇಪರ್ ಮೇಲೆ ದೇಶ ಮತ್ತು ರಾಜ್ಯಗಳ ವೋಟಿಂಗ್ ನಡೆಯುತ್ತಿತ್ತು. ಆದ್ರೆ 2004ರ ಲೋಕಸಭಾ ಚುಣಾವಣೆಯಲ್ಲಿ(Lok Sabha elections 2024) ಸಂಪೂರ್ಣ ಬ್ಯಾಲೆಟ್ ಪೇಪರ್ ಬ್ಯಾನ್ ಮಾಡಲಾಯ್ತು. ಬ್ಯಾಲೆಟ್ ಪೇಪರ್ ಬದಲಾಗಿ ಇವಿಎಂ ಮಷಿನ್ ಮುಖೇನ ವೋಟಿಂಗ್ ಪದ್ಧತಿ ದೇಶದಲ್ಲಿ ಜಾರಿಗೆ ಬಂತು. ದೇಶದಲ್ಲಿ ಇವಿಎಂ ಮಷಿನ್ ಪರಿಚಯವಾಗಿ 20 ವರ್ಷಗಳೇ ಕಳೆದಿವೆ. ಈ 20 ವರ್ಷಗಳಲ್ಲಿ ಹಲವು ಚುಣಾವಣೆಗಳು ನಡೆದಿವೆ. ಆದರು ಸಹ ಈಗಲೂ ಕೆಲವೊಂದಿಷ್ಟು ರಾಜಕೀಯ ಪಕ್ಷಗಳಿಗೆ ಇವಿಎಂ ಮಷಿನ್ ಮೇಲೆ ನಂಬಿಕೆ ಬಂದಂತಿಲ್ಲ. ತಮ್ಮ ಪಕ್ಷಕ್ಕೆ ಗೆಲುವು ಸಿಕ್ಕ ಸಂದರ್ಭದಲ್ಲಿ ಬಾಯಿ ಮುಚ್ಕೊಂಡು ಇರ್ತಾರೆ. ಸೋಲಾಗುತ್ತಿದ್ದಂತೆ ಸೋಲಿನ ಆರೋಪವನ್ನು ಇವಿಎಂ ಮಷಿನ್ ಮೇಲೆ ಹಾಕ್ತಾರೆ. ದೇಶದೆಲ್ಲೆಡೆ ಈಗ ಲೋಕಸಭಾ ಚುನಾವಣೆ ನಡೆಯುತ್ತಿದೆ. ಈ ಸಂದರ್ಭದಲ್ಲಿ, ಅಸೋಷಿಯೇಷನ್ ಫಾರ್  ಡೆಮಾಕ್ರಾಟಿಕ್  ರಿಫಾರ್ಮ್ಸ್ ಎಂಬ ಸಂಸ್ಥೆಯು ಇವಿಎಂ ವಿರುದ್ಧ ಸುಪ್ರೀಂ ಕೋರ್ಟ್ ಮೆಟ್ಟಿಲೇರಿತ್ತು. ತಮ್ಮ ಸಂಸ್ಥೆಗೆ ಇವಿಎಂ ಮಷಿನ್ ಕೌಂಟ್ ಮಾಡುವ ವೋಟ್ಗಳ ಬಗ್ಗೆ ಅನುಮಾನವಿದೆ. ಹೀಗಾಗಿ ಮುಂದೆ ಬರುವ ಎಲ್ಲ ಚುನಾವಣೆಗಳಲ್ಲೂ ಇವಿಎಂ ಮಷಿನ್ ವೋಟ್ ಕೌಂಟ್ಗಳ ಜೊತೆಗೆ ವಿವಿ ಪ್ಯಾಟ್ನ ಚೀಟಿಗಳನ್ನು ಲೆಕ್ಕ ಹಾಕಬೇಬೇಕು ಎಂಬ ಅರ್ಜಿಯನ್ನು ಹಾಕಿತ್ತು ಈ ಸಂಸ್ಥೆ.

ಇದನ್ನೂ ವೀಕ್ಷಿಸಿ:  Siddaramaiah: ಮುಸ್ಲಿಮರಿಗೆ ಹಿಂದುಳಿದ ವರ್ಗದ ಮೀಸಲು ನೀಡಿರುವುದು ನೂರಕ್ಕೆ ನೂರು ಸುಳ್ಳು: ಸಿಎಂ ಸಿದ್ದರಾಮಯ್ಯ

24:50ಮಹಾರಾಕ್ಷಸ El Nino ಜನ್ಮ ರಹಸ್ಯ ; 2027ರ ಬೇಸಿಗೆಯ ಎಚ್ಚರಿಕೆ ನೀಡದ ವಿಜ್ಞಾನಿಗಳು
20:322029ರ ಮಹಾಭಾರತ: ಜಿರಳೆಗಳೇ ಕಿಂಗ್ ಮೇಕರ್..! Gen Zಗಳಿಗೆ ಕನೆಕ್ಟ್ ಆಗಲು ಹೇಗಿದೆ ರಾಜಕೀಯ ನಾಯಕರ ಪ್ರಯತ್ನ..?
23:17ಪ್ಲಾಸ್ಟಿಕ್ ನೋಟ್‌ಗೆ ಹಣಕಾಸು ಸಚಿವಾಲಯ ಗ್ರೀನ್​​ ಸಿಗ್ನಲ್​​​ ! ಹರಿಯಲ್ಲ, ನೆನೆಯಲ್ಲ, ಕಳ್ಳನೋಟು ಸಾಧ್ಯವಿಲ್ಲ, ಹೇಗಿರುತ್ತೆ ಹೊಸ ಕರೆನ್ಸಿ..?
20:56Suvarna Focus: ಜಂತರ್ ಮಂತರ್‌ನಲ್ಲಿ ನಡೆದಿದ್ದೇನು? ಬೆಚ್ಚಿಬೀಳಿಸಿದ ರಿಪೋರ್ಟ್! ಆಪರೇಷನ್ 2873 ಅಸಲಿ ಸೀಕ್ರೆಟ್?
50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
Read more