Hijab Row: ಹಿಜಾಬ್‌ ವಿವಾದಕ್ಕೆ ಮೋದಿ ಸರ್ಕಾರದ ಏಕರೂಪ ನಾಗರಿಕ ಸಂಹಿತೆ ಮದ್ದು?

Hijab Row: ಹಿಜಾಬ್‌ ವಿವಾದಕ್ಕೆ ಮೋದಿ ಸರ್ಕಾರದ ಏಕರೂಪ ನಾಗರಿಕ ಸಂಹಿತೆ ಮದ್ದು?

Published : Feb 13, 2022, 11:40 AM IST

ದೇಶಾದ್ಯಂತ ಹಿಜಾಬ್‌ ಕುರಿತ ವಿವಾದ ಹೆಚ್ಚಾಗುತ್ತಿದ್ದಂತೆ ಏಕರೂಪ ನಾಗರಿಕ ಸಂಹಿತೆ ಸದ್ಯದ ತುರ್ತು. ಇದರ ಕುರಿತು ಸಂಸತ್ತಿನಲ್ಲಿ ಚರ್ಚೆಯಾಗಬೇಕು ಎಂದು ಕೇಂದ್ರ ಸಚಿವ, ಬಿಜೆಪಿ ನಾಯಕ ಗಿರಿರಾಜ್‌ ಸಿಂಗ್‌ ಆಗ್ರಹಿಸಿದ್ದಾರೆ
 

ನವದೆಹಲಿ (ಫೆ. 13): ಕರ್ನಾಟಕದಲ್ಲಿ ಭುಗಿಲೆದ್ದ ಹಿಜಾಬ್‌ ವಿವಾದ (Hijab Row) ದೇಶಾದ್ಯಂತ ಹರಡಿ ಈಗ ಅಂತಾರಾಷ್ಟ್ರೀಯ ಮಟ್ಟದಲ್ಲೂ ಭಾರೀ ಸದ್ದು ಮಾಡುತ್ತಿದೆ. ಕರ್ನಾಟಕ ಹೈಕೋರ್ಟ್‌ನಲ್ಲಿ ಈಗಾಗಲೇ ನಡೆದಿರುವ ಹಿಜಾಬ್‌ ವಿವಾದದ ವಿಚಾರಣೆಯಲ್ಲಿ ಸದ್ಯಕ್ಕೆ ಮಧ್ಯಪ್ರವೇಶಿಸಲು ಸುಪ್ರೀಂಕೋರ್ಟ್‌ ನಿರಾಕರಿಸಿದೆ. ಆದರೆ ಈ ಪ್ರಕರಣಕ್ಕೆ ಸಂಬಂಧಿಸಿದ ಅರ್ಜಿಯನ್ನು ತನ್ನ ವಿಚಾರಣಾ ಪಟ್ಟಿಗೆ ಸೇರಿಸಿಕೊಳ್ಳುವ ಬಗ್ಗೆ ಪರಿಶೀಲನೆ ನಡೆಸಲಾಗುವುದು ಎಂದು ತಿಳಿಸಿದೆ. ಈ ಮಧ್ಯೆ ಇಂತಹ ಯಾವುದೇ ಸಂಘರ್ಷಗಳಿಗೆ, ಧರ್ಮಸಂಕಟಗಳಿಗೆ ಭಾರತ ಮತ್ತೆ ಸಾಕ್ಷಿಯಾಗದ ಹಾಗೆ ಮಾಡೋಕೆ ಮೋದಿ ಸರ್ಕಾರ ಸಜ್ಜಾದ ಹಾಗೆ ಕಾಣಿಸುತ್ತಿದೆ. 

ಇದನ್ನೂ ಓದಿ: Global remarks on hijab row: ನಮ್ಮ ಆಂತರಿಕ ವಿಚಾರದಲ್ಲಿ ಮೂಗು ತೂರಿಸಬೇಡಿ, ವಿದೇಶಗಳಿಗೆ ಭಾರತದ ಖಡಕ್ ಎಚ್ಚರಿಕೆ

ದೇಶಾದ್ಯಂತ ಹಿಜಾಬ್‌ ಕುರಿತ ವಿವಾದ ಹೆಚ್ಚಾಗುತ್ತಿದ್ದಂತೆ ಏಕರೂಪ ನಾಗರಿಕ ಸಂಹಿತೆ ಸದ್ಯದ ತುರ್ತು. ಇದರ ಕುರಿತು ಸಂಸತ್ತಿನಲ್ಲಿ ಚರ್ಚೆಯಾಗಬೇಕು ಎಂದು ಕೇಂದ್ರ ಸಚಿವ, ಬಿಜೆಪಿ ನಾಯಕ ಗಿರಿರಾಜ್‌ ಸಿಂಗ್‌ ಆಗ್ರಹಿಸಿದ್ದಾರೆ. ಹಿಜಾಬ್‌ ವಿವಾದ ದೇಶಕ್ಕೆ ಶಾಂತಿಯುತ ವಾತಾವರಣವನ್ನು ಹಾಳು ಮಾಡುತ್ತಿದೆ ಎಂದಿರುವ ಅವರು, ಈ ವಿವಾದವನ್ನು ಹಲವರು ತಮ್ಮ ರಾಜಕೀಯ ಲಾಭಕ್ಕಾಗಿ ಬಳಸಿಕೊಳ್ಳುತ್ತಿದ್ದಾರೆ. ಶಾಲೆಗಳಲ್ಲಿ ಹಿಜಾಬ್‌ ಧರಿಸುವ ಕುರಿತಾಗಿ ತರ್ಕರಹಿತ ವಾದಗಳನ್ನು ಮಾಡುತ್ತಿದ್ದಾರೆ. ಇಂತಹ ಜನರು ಮುಗ್ಧ ಬಾಲಕಿಯರನ್ನು ಮತಕ್ಕಾಗಿ ಬಲಿ ಕೊಡುತ್ತಿದ್ದಾರೆ. ಹಾಗಾಗಿ ಈ ಸಂದರ್ಭದಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು ತುರ್ತಾಗಿ ಜಾರಿಗೆ ತರಬೇಕಿದೆ. ಹಾಗಾಗಿ ಸಂಸತ್ತಿನ ಉಭಯ ಸದನಗಳಲ್ಲಿ ಈ ಕುರಿತು ಚರ್ಚೆ ನಡೆಸಬೇಕು’ ಎಂದು ಹೇಳಿದ್ದಾರೆ.

ಇನ್ನು ಉತ್ತರಾಖಂಡ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಮರಳಿ ಗೆದ್ದು ಅಧಿಕಾರಕ್ಕೆ ಬಂದಲ್ಲಿ, ರಾಜ್ಯದಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ ಮಾಡಲಾಗುವುದು ಎಂದು ಮುಖ್ಯಮಂತ್ರಿ ಪುಷ್ಕರ್‌ ಸಿಂಗ್‌ ಧಮಿ ಭರವಸೆ ನೀಡಿದ್ದಾರೆ. ಹಿಜಾಬ್‌ ವಿವಾದದ ಹಿನ್ನೆಲೆಯಲ್ಲಿ ದೇಶದಲ್ಲಿ ಏಕರೂಪ ನಾಗರಿಕ ಸಂಹಿತೆಗೆ ಬೇಡಿಕೆ ವ್ಯಕ್ತವಾಗುತ್ತಿರುವಾಗಲೇ ಬಿಜೆಪಿ ಆಡಳಿತದ ರಾಜ್ಯದ ಮುಖ್ಯಮಂತ್ರಿಯಿಂದಲೇ ಇಂಥದ್ದೊಂದು ಆಶ್ವಾಸನೆ ನೀಡಲಾಗಿದೆ. ಈ ಕುರಿತ ವರದಿ ಇಲ್ಲಿದೆ.

24:25ಭಾರತದ ಬಳಿಯೂ ಇದೆ ಮಲಕ್ಕಾ ಜಲಸಂಧಿ ಮುಚ್ಚಿದ್ರೆ ಕೆಲ ದೇಶದ ಕತೆ ಗೋವಿಂದ
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
23:34ಕೇರಳ ಎಲೆಕ್ಷನ್ ಗ್ರೌಂಡ್ ರಿಪೋರ್ಟ್: ಕನ್ನಡಿಗರೇ ಹೆಚ್ಚಿರುವ ಮಂಜೇಶ್ವರದ ಜನ ಹೇಳೋದೇನು?
20:04Suvarna Focus: ಕೆಂಪು ರಕ್ಕಸ ಕೋಟೆ ಧೂಳಿಪಟ, ಭಾರತ ಈಗ ನಕ್ಸಲ್ ಮುಕ್ತ! 59 ವರ್ಷಗಳ ರಕ್ಕಸನಿಗೆ ಶಾಶ್ವತ ಅಂತ್ಯಕ್ರಿಯೆ
53:2759 ವರ್ಷಗಳ ನಕ್ಸಲ್ ಯುಗಾಂತ್ಯ? ಅಮಿತ್ ಶಾ ಮಹತ್ವದ ಘೋಷಣೆ! 59 ವರ್ಷದ ಬಳಿಕ ಭಾರತ ನಿರಾಳ!
16:00ನೆತನ್ಯಾಹು ಹೆಣೆದ 'ಹೆಕ್ಸಾಗನ್' ವ್ಯೂಹಕ್ಕೆ ಮೋದಿ ಸಾರಥಿ: ಇಸ್ರೇಲ್ ಭೇಟಿಯಿಂದ ಜಾಗತಿಕ ರಾಜಕಾರಣದಲ್ಲಿ ಹೊಸ ಸಂಚಲನ!
18:19ಸರ್ಕಾರಿ ನೌಕರರ ಮೇಲೆ ಯೋಗಿ ಕಟ್ಟು ನಿಟ್ಟಿನ ಆಕ್ಷನ್​: ವೇತನ ಬೇಕಿದ್ದವರು ನಿಯಮ ಪಾಲಿಸಿ.. ಏನಿದು ರೂಲ್ಸ್..?
18:27ಒಂದೇ ಒಂದು ಫೋನ್ ಕಾಲ್. ಬದಲಾಯ್ತು ಭಾರತ-ಅಮೆರಿಕ ನಂಟು! ಚೀನಾಕ್ಕೆ ಶಾಕ್, ಭಾರತಕ್ಕೆ ಲಕ್!
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
Read more