Hijab Row: ಹಿಜಾಬ್‌ ವಿವಾದಕ್ಕೆ ಮೋದಿ ಸರ್ಕಾರದ ಏಕರೂಪ ನಾಗರಿಕ ಸಂಹಿತೆ ಮದ್ದು?

Hijab Row: ಹಿಜಾಬ್‌ ವಿವಾದಕ್ಕೆ ಮೋದಿ ಸರ್ಕಾರದ ಏಕರೂಪ ನಾಗರಿಕ ಸಂಹಿತೆ ಮದ್ದು?

Published : Feb 13, 2022, 11:40 AM IST

ದೇಶಾದ್ಯಂತ ಹಿಜಾಬ್‌ ಕುರಿತ ವಿವಾದ ಹೆಚ್ಚಾಗುತ್ತಿದ್ದಂತೆ ಏಕರೂಪ ನಾಗರಿಕ ಸಂಹಿತೆ ಸದ್ಯದ ತುರ್ತು. ಇದರ ಕುರಿತು ಸಂಸತ್ತಿನಲ್ಲಿ ಚರ್ಚೆಯಾಗಬೇಕು ಎಂದು ಕೇಂದ್ರ ಸಚಿವ, ಬಿಜೆಪಿ ನಾಯಕ ಗಿರಿರಾಜ್‌ ಸಿಂಗ್‌ ಆಗ್ರಹಿಸಿದ್ದಾರೆ
 

ನವದೆಹಲಿ (ಫೆ. 13): ಕರ್ನಾಟಕದಲ್ಲಿ ಭುಗಿಲೆದ್ದ ಹಿಜಾಬ್‌ ವಿವಾದ (Hijab Row) ದೇಶಾದ್ಯಂತ ಹರಡಿ ಈಗ ಅಂತಾರಾಷ್ಟ್ರೀಯ ಮಟ್ಟದಲ್ಲೂ ಭಾರೀ ಸದ್ದು ಮಾಡುತ್ತಿದೆ. ಕರ್ನಾಟಕ ಹೈಕೋರ್ಟ್‌ನಲ್ಲಿ ಈಗಾಗಲೇ ನಡೆದಿರುವ ಹಿಜಾಬ್‌ ವಿವಾದದ ವಿಚಾರಣೆಯಲ್ಲಿ ಸದ್ಯಕ್ಕೆ ಮಧ್ಯಪ್ರವೇಶಿಸಲು ಸುಪ್ರೀಂಕೋರ್ಟ್‌ ನಿರಾಕರಿಸಿದೆ. ಆದರೆ ಈ ಪ್ರಕರಣಕ್ಕೆ ಸಂಬಂಧಿಸಿದ ಅರ್ಜಿಯನ್ನು ತನ್ನ ವಿಚಾರಣಾ ಪಟ್ಟಿಗೆ ಸೇರಿಸಿಕೊಳ್ಳುವ ಬಗ್ಗೆ ಪರಿಶೀಲನೆ ನಡೆಸಲಾಗುವುದು ಎಂದು ತಿಳಿಸಿದೆ. ಈ ಮಧ್ಯೆ ಇಂತಹ ಯಾವುದೇ ಸಂಘರ್ಷಗಳಿಗೆ, ಧರ್ಮಸಂಕಟಗಳಿಗೆ ಭಾರತ ಮತ್ತೆ ಸಾಕ್ಷಿಯಾಗದ ಹಾಗೆ ಮಾಡೋಕೆ ಮೋದಿ ಸರ್ಕಾರ ಸಜ್ಜಾದ ಹಾಗೆ ಕಾಣಿಸುತ್ತಿದೆ. 

ಇದನ್ನೂ ಓದಿ: Global remarks on hijab row: ನಮ್ಮ ಆಂತರಿಕ ವಿಚಾರದಲ್ಲಿ ಮೂಗು ತೂರಿಸಬೇಡಿ, ವಿದೇಶಗಳಿಗೆ ಭಾರತದ ಖಡಕ್ ಎಚ್ಚರಿಕೆ

ದೇಶಾದ್ಯಂತ ಹಿಜಾಬ್‌ ಕುರಿತ ವಿವಾದ ಹೆಚ್ಚಾಗುತ್ತಿದ್ದಂತೆ ಏಕರೂಪ ನಾಗರಿಕ ಸಂಹಿತೆ ಸದ್ಯದ ತುರ್ತು. ಇದರ ಕುರಿತು ಸಂಸತ್ತಿನಲ್ಲಿ ಚರ್ಚೆಯಾಗಬೇಕು ಎಂದು ಕೇಂದ್ರ ಸಚಿವ, ಬಿಜೆಪಿ ನಾಯಕ ಗಿರಿರಾಜ್‌ ಸಿಂಗ್‌ ಆಗ್ರಹಿಸಿದ್ದಾರೆ. ಹಿಜಾಬ್‌ ವಿವಾದ ದೇಶಕ್ಕೆ ಶಾಂತಿಯುತ ವಾತಾವರಣವನ್ನು ಹಾಳು ಮಾಡುತ್ತಿದೆ ಎಂದಿರುವ ಅವರು, ಈ ವಿವಾದವನ್ನು ಹಲವರು ತಮ್ಮ ರಾಜಕೀಯ ಲಾಭಕ್ಕಾಗಿ ಬಳಸಿಕೊಳ್ಳುತ್ತಿದ್ದಾರೆ. ಶಾಲೆಗಳಲ್ಲಿ ಹಿಜಾಬ್‌ ಧರಿಸುವ ಕುರಿತಾಗಿ ತರ್ಕರಹಿತ ವಾದಗಳನ್ನು ಮಾಡುತ್ತಿದ್ದಾರೆ. ಇಂತಹ ಜನರು ಮುಗ್ಧ ಬಾಲಕಿಯರನ್ನು ಮತಕ್ಕಾಗಿ ಬಲಿ ಕೊಡುತ್ತಿದ್ದಾರೆ. ಹಾಗಾಗಿ ಈ ಸಂದರ್ಭದಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು ತುರ್ತಾಗಿ ಜಾರಿಗೆ ತರಬೇಕಿದೆ. ಹಾಗಾಗಿ ಸಂಸತ್ತಿನ ಉಭಯ ಸದನಗಳಲ್ಲಿ ಈ ಕುರಿತು ಚರ್ಚೆ ನಡೆಸಬೇಕು’ ಎಂದು ಹೇಳಿದ್ದಾರೆ.

ಇನ್ನು ಉತ್ತರಾಖಂಡ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಮರಳಿ ಗೆದ್ದು ಅಧಿಕಾರಕ್ಕೆ ಬಂದಲ್ಲಿ, ರಾಜ್ಯದಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ ಮಾಡಲಾಗುವುದು ಎಂದು ಮುಖ್ಯಮಂತ್ರಿ ಪುಷ್ಕರ್‌ ಸಿಂಗ್‌ ಧಮಿ ಭರವಸೆ ನೀಡಿದ್ದಾರೆ. ಹಿಜಾಬ್‌ ವಿವಾದದ ಹಿನ್ನೆಲೆಯಲ್ಲಿ ದೇಶದಲ್ಲಿ ಏಕರೂಪ ನಾಗರಿಕ ಸಂಹಿತೆಗೆ ಬೇಡಿಕೆ ವ್ಯಕ್ತವಾಗುತ್ತಿರುವಾಗಲೇ ಬಿಜೆಪಿ ಆಡಳಿತದ ರಾಜ್ಯದ ಮುಖ್ಯಮಂತ್ರಿಯಿಂದಲೇ ಇಂಥದ್ದೊಂದು ಆಶ್ವಾಸನೆ ನೀಡಲಾಗಿದೆ. ಈ ಕುರಿತ ವರದಿ ಇಲ್ಲಿದೆ.

24:50ಮಹಾರಾಕ್ಷಸ El Nino ಜನ್ಮ ರಹಸ್ಯ ; 2027ರ ಬೇಸಿಗೆಯ ಎಚ್ಚರಿಕೆ ನೀಡದ ವಿಜ್ಞಾನಿಗಳು
20:322029ರ ಮಹಾಭಾರತ: ಜಿರಳೆಗಳೇ ಕಿಂಗ್ ಮೇಕರ್..! Gen Zಗಳಿಗೆ ಕನೆಕ್ಟ್ ಆಗಲು ಹೇಗಿದೆ ರಾಜಕೀಯ ನಾಯಕರ ಪ್ರಯತ್ನ..?
23:17ಪ್ಲಾಸ್ಟಿಕ್ ನೋಟ್‌ಗೆ ಹಣಕಾಸು ಸಚಿವಾಲಯ ಗ್ರೀನ್​​ ಸಿಗ್ನಲ್​​​ ! ಹರಿಯಲ್ಲ, ನೆನೆಯಲ್ಲ, ಕಳ್ಳನೋಟು ಸಾಧ್ಯವಿಲ್ಲ, ಹೇಗಿರುತ್ತೆ ಹೊಸ ಕರೆನ್ಸಿ..?
20:56Suvarna Focus: ಜಂತರ್ ಮಂತರ್‌ನಲ್ಲಿ ನಡೆದಿದ್ದೇನು? ಬೆಚ್ಚಿಬೀಳಿಸಿದ ರಿಪೋರ್ಟ್! ಆಪರೇಷನ್ 2873 ಅಸಲಿ ಸೀಕ್ರೆಟ್?
50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
Read more