2024ರಲ್ಲಿ ದೇಶದ ಗದ್ದುಗೆ ಏರೋದು ಯಾರು? ಲೋಕಸಭೆಯ ಭವಿಷ್ಯ ಬಿಚ್ಚಿಟ್ಟ 2 ಮಹಾ ಸಮೀಕ್ಷೆ!

2024ರಲ್ಲಿ ದೇಶದ ಗದ್ದುಗೆ ಏರೋದು ಯಾರು? ಲೋಕಸಭೆಯ ಭವಿಷ್ಯ ಬಿಚ್ಚಿಟ್ಟ 2 ಮಹಾ ಸಮೀಕ್ಷೆ!

Published : Oct 09, 2023, 09:32 AM IST

2024ರ ಚುನಾವಣೆಯಲ್ಲಿ ನರೇಂದ್ರ ಮೋದಿ ಗೆದ್ದು ಮತ್ತೆ ಪ್ರಧಾನಿಯಾಗ್ತಾರಾ..? ನೆಹರು ನಂತರ ಈವರೆಗೆ ಯಾವ ಪ್ರಧಾನಿಯೂ 3ನೇ ಬಾರಿಗೆ ಆಯ್ಕೆಯಾದ ಉದಾಹರಣೆಯಿಲ್ಲ. 3 ಬಾರಿ ಪ್ರಧಾನಿಯಾಗಿದ್ದ ಇಂದಿರಾ ಗಾಂಧಿ ಗೆದ್ದಿದ್ದು ಸತತ 2 ಚುನಾವಣೆಗಳನ್ನಷ್ಟೇ. ಮೂರನೇ ಚುನಾವಣೆಯನ್ನ ಸೋತಿದ್ದರು ಇಂದಿರಾ. ಈಗ ಮೋದಿ ಮತ್ತೆ ನಾನೇ ಪ್ರಧಾನಿ ಅಂತಿದ್ದಾರೆ.. ಇತ್ತೀಚೆಗೆ 2 ಸಂಸ್ಥೆಗಳು ಲೋಕಸಭಾ ಚುನಾವಣೆಯ ಸಮೀಕ್ಷೆಗಳನ್ನ ಮಾಡಿವೆ.

2024ರ ಲೋಕಸಭಾ ಚುನಾವಣೆಗೆ ಉಳಿದಿರೋದು ಕೇವಲ 5 ತಿಂಗಳಷ್ಟೇ ಈಗಾಗಲೇ ರಾಜಕೀಯ ಪಕ್ಷಗಳು ಅಧಿಕಾರದ ಗದ್ದುಗೆ ಹಿಡಿಯೋಕೆ  ತಮ್ಮದೇ ಆದ ರಣತಂತ್ರ ಹೆಣೆಯುತ್ತಿವೆ. ಈ ಮಧ್ಯೆ ಲೋಕಸಭೆ ಚುನಾವಣೆ(Loksabha) ಬಗ್ಗೆ  2 ಸಮೀಕ್ಷೆಗಳು ಹೊರಬಿದ್ದಿದ್ದು. ಇವರೇ ಮುಂದೆ ಅಧಿಕಾರ ಹಿಡಿಯೋದು ಎಂದು ಹೇಳ್ತಿವೆ. ಇಂಡಿಯಾ ಟಿವಿ ಹಾಗೂ ಟೈಮ್ಸ್ ನೌ ಸಮೀಕ್ಷೆಗಳ(Survey) ಪ್ರಕಾರ ಆಡಳಿತರೂಢ ಎನ್ಡಿಎ ಮತ್ತೆ ಅಧಿಕಾರ ಹಿಡಿಯೋದು ಫಿಕ್ಸ್ ಎಂದು ಭವಿಷ್ಯ ನುಡಿದಿವೆ. ಇಂಡಿಯಾ ಮೈತ್ರಿಕೂಟ ಸ್ವಲ್ಪ ಉತ್ತಮ ಸಾಧನೆ ಮಾಡಿದ್ರೂ ಅಧಿಕಾರ ಹಿಡಿಯೋದು ಕನಸಾಗಿಯೇ ಉಳಿಯಲಿದೆ ಎಂದಿದೆ ಸಮೀಕ್ಷೆ. ಇಂಡಿಯಾ ಟಿವಿ ಸಮೀಕ್ಷೆ ಪ್ರಕಾರ 2024ರ ಚುನಾವಣೆಯಲ್ಲಿ ಎನ್ಡಿಎ ಮೈತ್ರಿಕೂಟ(NDA) 543 ಸ್ಥಾನಗಳ ಪೈಕಿ 318 ಸ್ಥಾನ ಗೆಲ್ಲಲಿದೆ ಎಂದು ಸಮೀಕ್ಷೆ ಹೇಳಿದೆ. ಇನ್ನೂ ಇಂಡಿಯಾ ಮೈತ್ರಿಕೂಟ 175 ಸ್ಥಾನ ಗೆಲ್ಲಬಹುದು ಎನ್ನಲಾಗಿದೆ. ಟೈಮ್ಸ್ ನೌ ಸಮೀಕ್ಷೆ(Times Now survey) ಪ್ರಕಾರ ಎನ್ಡಿಎ ಮೈತ್ರಿಕೂಟ 2024ರ ಚುನಾವಣೆಯಲ್ಲಿ ಶೇಕಡ 42.6ರಷ್ಟು ಮತಗಳೊಂದಿಗೆ 297 ರಿಂದ 317 ಸ್ಥಾನ,  ಇಂಡಿಯಾ ಮೈತ್ರಿಕೂಟ ಶೇಕಡ 40.2ರಷ್ಟು ಮತಗಳೊಂದಿಗೆ 165 ರಿಂದ 185 ರ ಸ್ಥಾನ, ಯಾವುದೇ ಬಣ ಸೇರದೇ ತಟಸ್ಥವಾಗಿರೋ ವೈಎಸ್ಆರ್ಸಿಪಿ 24 ರಿಂದ 25 ಸ್ಥಾನ ಗೆಲ್ಲುವ ಸಾಧ್ಯತೆ ಇದೆ. ಇನ್ನೂ ಬಿಜೆಡಿ 13 ರಿಂದ 15 ಸ್ಥಾನ ಗೆಲ್ಲಬಹುದು, ಬಿಆರ್ಎಸ್ 9 ರಿಂದ 11 ಸ್ಥಾನ ಗೆಲ್ಲುವ ಸಾಧ್ಯತೆ ಇದೆ.. ಪಕ್ಷೇತರರು 11 ರಿಂದ 14 ಸ್ಥಾನಗಳಲ್ಲಿ ಜಯಗಳಿಸುವ ಸಾಧ್ಯತೆ ಇದೆ. ಇಂಡಿಯಾ ಟಿವಿ, ಟೈಮ್ಸ್ ನೌ ಸಮೀಕ್ಷೆಗಳು ಪಕ್ಷಗಳ ಸ್ಥಾನಗಳ ಬಗ್ಗೆಯೂ ಭವಿಷ್ಯ ನುಡಿದಿದ್ದು, ಮತ್ತೆ ಆಡಳಿತರೂಢ ಬಿಜೆಪಿ ಪಕ್ಷ ಸ್ವಂತ ಬಲದ ಮೇಲೆಯೇ ಅಧಿಕಾರದ ಗದ್ದುಗೆ ಏರಲಿದೆ ಎಂದು ಹೇಳಿದೆ.

ಇದನ್ನೂ ವೀಕ್ಷಿಸಿ:  Today Horoscope: ಇಂದಿನ ನಿಮ್ಮ ರಾಶಿ ಭವಿಷ್ಯ ಹೇಗಿದೆ ? ವೃಶ್ಚಿಕ ರಾಶಿಯವರಿಗೆ ವೃತ್ತಿಯಲ್ಲಿ ಇಂದು ಅನುಕೂಲ

18:27ಒಂದೇ ಒಂದು ಫೋನ್ ಕಾಲ್. ಬದಲಾಯ್ತು ಭಾರತ-ಅಮೆರಿಕ ನಂಟು! ಚೀನಾಕ್ಕೆ ಶಾಕ್, ಭಾರತಕ್ಕೆ ಲಕ್!
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
22:38ನೀನೆ ನನ್ನ ಬೆಳ್ಳಿ ಅನ್ನೋ ದಿನವೂ ಬಂತು ನೋಡಿ: ಬೆಳ್ಳಿ ಬೆಲೆ ಏರಿಕೆಗೆ ಕಾರಣ ಏನು?
18:51ಡಾಲರ್ ಸಾಮ್ರಾಜ್ಯ ಪತನ? ಚಿನ್ನದ ಅಧಿಪತ್ಯ ಶುರು, ಡಾಲರ್ ಕಂಗಾಲು! ಬಂಗಾರ ರಾಶಿ ಹಾಕ್ತಿರೋ ರಿಸರ್ವ್ ಬ್ಯಾಂಕ್‌
21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
21:07ಅಸ್ಸಾಂ ಅಖಾಡದಲ್ಲಿ ಡಿಕೆ–ಪ್ರಿಯಾಂಕ ಹಿಮಾಗ್ನಿ ಯಜ್ಞ! ಕಮಲ ಸಾಮ್ರಾಜ್ಯಕ್ಕೆ ಡೆಡ್ಲಿ ಸವಾಲು
23:42ಭರತ ಭೂಮಿಯ ಮೇಲೆ ಕೋಪಿಸಿಕೊಂಡನಾ ಭಾಸ್ಕರ..? ನೆತ್ತಿ ಸುಡುವ ಸೂರ್ಯ ಬೆಳಕು ಚೆಲ್ಲುತ್ತಿಲ್ಲವೇಕೆ..?
Read more