ಭೋಪಾಲ್ನಲ್ಲಿ ಮಾತನಾಡುವಾಗ ಪ್ರಧಾನಿ ನರೇಂದ್ರ ಮೋದಿ ಏಕರೂಪ ನಾಗರಿಕ ಸಂಹಿತೆ ಪರ ಮಾತನಾಡಿದ್ದಾರೆ.
ಭೋಪಾಲ್ನಲ್ಲಿ ಏಕರೂಪ ನಾಗರಿಕ ಸಂಹಿತೆ ಪರ ಪ್ರಧಾನಿ ನರೇಂದ್ರ ಮೋದಿ ಬ್ಯಾಟ್ ಬೀಸಿದ್ದಾರೆ. ಅಲ್ಲದೇ ಈ ಬಗ್ಗೆ ಅಭಿಪ್ರಾಯವನ್ನು ಸಹ ಸಂಗ್ರಹಿಸಲಾಗುತ್ತಿದೆ. ಆದ್ರೆ ಇದಕ್ಕೆ ವಿರೋಧ ಪಕ್ಷಗಳು ವಿರೋಧವನ್ನು ವ್ಯಕ್ತಪಡಿಸುತ್ತಿವೆ. ಆಮ್ ಆದ್ಮಿ ಪಕ್ಷ ಇದಕ್ಕೆ ಬೆಂಬಲವನ್ನು ನೀಡಿದ್ದು, ಮುಸ್ಲಿಮರು ಸಹ ಇದನ್ನು ವಿರೋಧಿಸುತ್ತಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರು ಇತ್ತೀಚೆಗೆ ದೇಶವು ಎರಡು ಕಾನೂನುಗಳ ಮೇಲೆ ನಡೆಯಲು ಸಾಧ್ಯವಿಲ್ಲ ಮತ್ತು ಏಕರೂಪ ನಾಗರಿಕ ಸಂಹಿತೆ ಸಂವಿಧಾನದ ಒಂದು ಭಾಗವಾಗಿದೆ ಎಂದು ಹೇಳುವ ಮೂಲಕ ರಾಷ್ಟ್ರವ್ಯಾಪಿ ಚರ್ಚೆಯನ್ನು ಹುಟ್ಟುಹಾಕಿದ್ದಾರೆ.
ಇದನ್ನೂ ವೀಕ್ಷಿಸಿ: ಪ್ರವೀಣ್ ನೆಟ್ಟಾರು ಹತ್ಯೆ ಆರೋಪಿಗಳಿಗೆ ಡೆಡ್ಲೈನ್: ನಾಳೆಯೊಳಗೆ ಶರಣಾಗುವಂತೆ ನ್ಯಾಯಾಧೀಶರ ಖಡಕ್ ಆದೇಶ