Union Budget 2022: ವಾಜಪೇಯಿ ಸಂಕಲ್ಪ, ಮೋದಿ ಸಿದ್ದಿ, ಕಾವೇರಿ, ಕೃಷ್ಣಾ ಸೇರಿ 6 ನದಿಗಳ ಜೋಡಣೆ

Union Budget 2022: ವಾಜಪೇಯಿ ಸಂಕಲ್ಪ, ಮೋದಿ ಸಿದ್ದಿ, ಕಾವೇರಿ, ಕೃಷ್ಣಾ ಸೇರಿ 6 ನದಿಗಳ ಜೋಡಣೆ

Published : Feb 02, 2022, 03:18 PM ISTUpdated : Feb 02, 2022, 05:34 PM IST

ಈ ಬಾರಿಯ ಬಜೆಟ್‌ನಲ್ಲಿ ಕೃಷಿ ಪ್ರದೇಶ ವಿಸ್ತರಣೆ, ನೀರಿನ ಲಭ್ಯತೆ ಹೆಚ್ಚಳ, ನೀರಿನ ಸದ್ಬಳಕೆ, ಅಂತರ್ಜಲ ಮರುಪೂರಣ ಮತ್ತು ವರ್ಷವಿಡೀ ಕುಡಿಯುವ ನೀರು ಪೂರೈಕೆಗೆ ಕೇಂದ್ರ ಸರ್ಕಾರ ಹೆಚ್ಚಿನ ಆದ್ಯತೆ ನೀಡಿದೆ. ಕಾವೇರಿ, ಕೃಷ್ಣಾ ಸೇರಿ 6 ನದಿ ಜೋಡಣೆಗೆ ಕೇಂದ್ರದ ನೆರವು ನೀಡಿದೆ. 

 

ನವದೆಹಲಿ (ಫೆ. 02): ಈ ಬಾರಿಯ ಬಜೆಟ್‌ನಲ್ಲಿ (Union Budget 2022) ಕೃಷಿ ಪ್ರದೇಶ ವಿಸ್ತರಣೆ, ನೀರಿನ ಲಭ್ಯತೆ ಹೆಚ್ಚಳ, ನೀರಿನ ಸದ್ಬಳಕೆ, ಅಂತರ್ಜಲ ಮರುಪೂರಣ ಮತ್ತು ವರ್ಷವಿಡೀ ಕುಡಿಯುವ ನೀರು ಪೂರೈಕೆಗೆ ಕೇಂದ್ರ ಸರ್ಕಾರ ಹೆಚ್ಚಿನ ಆದ್ಯತೆ ನೀಡಿದೆ. ಕಾವೇರಿ, ಕೃಷ್ಣಾ ಸೇರಿ 6 ನದಿ ಜೋಡಣೆಗೆ ಕೇಂದ್ರದ ನೆರವು ನೀಡಿದೆ. 

ದಮನ್‌ಗಂಗಾ- ಪಿಂಜಾಲ್‌, ಪರ್‌-ತಾಪಿ, ನರ್ಮದಾ, ಗೋದಾವರಿ-ಕೃಷ್ಣಾ, ಕೃಷ್ಣಾ-ಪೆನ್ನಾರ್‌ ಮತ್ತು ಪೆನ್ನಾರ್‌- ಕಾವೇರಿ ನದಿ ಜೋಡಣೆ ಯೋಜನೆಯ ವಿಸ್ತೃತ ಕರಡು ವರದಿ ಸಿದ್ದವಾಗಿದೆ. ಯೋಜನೆ ಜಾರಿ ಸಂಬಂಧ ರಾಜ್ಯಗಳ ನಡುವೆ ಸಹಮತಿ ವ್ಯಕ್ತವಾಗುತ್ತಲೇ ಕೇಂದ್ರ ತನ್ನ ಪಾಲಿನ ಎಲ್ಲಾ ನೆರವುಗಳನ್ನು ನೀಡಲಿದೆ ಎಂದು ಹೇಳಿದೆ.

ಆಂಧ್ರಪ್ರದೇಶದ ಗೋದಾವರಿ ನದಿಯ ಹೆಚ್ಚುವರಿ ನೀರನ್ನು 124 ಕಿ.ಮೀ ದೂರದಲ್ಲಿರುವ ಕೃಷ್ಣಾ ನದಿಗೆ ಕಟ್ಟಲಾಗಿರುವ ಪ್ರಕಾಶಂ ಬ್ಯಾರೇಜ್‌ಗೆ ವರ್ಗಾಯಿಸುವ ಮೂಲಕ ಹೆಚ್ಚುವರಿ ನೀರನ್ನು ಸದ್ಭಳಕೆ ಮಾಡುವ ಉದ್ದೇಶವಿದೆ. ಆಂಧ್ರಪ್ರದೇಶದ ಕೃಷ್ಣಾ ನದಿಯ ಹೆಚ್ಚುವರಿ ನೀರನ್ನು 393 ಕಿ.ಮೀ ಕಾಲುವೆ ಮೂಲಕ ಪೆನ್ನಾರ್‌ ನದಿಗೆ ಪೂರೈಸುವ ಉದ್ದೇಶವಿದೆ.

 

21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
21:07ಅಸ್ಸಾಂ ಅಖಾಡದಲ್ಲಿ ಡಿಕೆ–ಪ್ರಿಯಾಂಕ ಹಿಮಾಗ್ನಿ ಯಜ್ಞ! ಕಮಲ ಸಾಮ್ರಾಜ್ಯಕ್ಕೆ ಡೆಡ್ಲಿ ಸವಾಲು
23:42ಭರತ ಭೂಮಿಯ ಮೇಲೆ ಕೋಪಿಸಿಕೊಂಡನಾ ಭಾಸ್ಕರ..? ನೆತ್ತಿ ಸುಡುವ ಸೂರ್ಯ ಬೆಳಕು ಚೆಲ್ಲುತ್ತಿಲ್ಲವೇಕೆ..?
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
20:56ಮೂರು ದಶಕದ ಬಳಿಕ ಗಾಂಧಿ ಕುಟುಂಬದಲ್ಲಿ ಮದುವೆ ಸಂಭ್ರಮ: ರೈಹಾನ್ ವಾದ್ರಾ–ಅವಿವಾ ಬೇಗ್ ಲವ್ ಸ್ಟೋರಿ
23:19Bullet Train: ಸಮುದ್ರದಡಿ 7 ಕಿ.ಮೀ ಸುರಂಗ, ದೇಶದ ಮೊದಲ ಅದ್ಭುತ! ಬಂದ ಬಂದ ಬುಲೆಟ್‌ ಬಾಬಾ!
21:52ಖಗ ಮೃಗಗಳ ಮೂಲಕ ಗೂಢಚರ್ಯೆ: ಪ್ರಾಣಿ, ಪಕ್ಷಿ, ಕೀಟಗಳಿಂದ ಹೇಗೆ ನಡೆಯುತ್ತೆ ಗೂಢಚರ್ಯೆ
21:11ಮೋದಿ ಓಮನ್ ಭೇಟಿ.. ಪಾಕ್ ಚೀನಾ ಪತರಗುಟ್ಟಿದ್ದೇಕೆ? ಶತಕೋಟಿ ಒಡೆಯನ ಸಾಮ್ರಾಜ್ಯ ಹೇಗಿದೆ ಗೊತ್ತಾ..!
19:21ಆರ್ಥಿಕತೆ ಬಾಹುಬಲಿಯ ರೂಪಾಯಿ ಮೌಲ್ಯ ICUನಲ್ಲಿ; ಅಂದುಕೊಂಡಂಗಿಲ್ಲ ಭವಿಷ್ಯ!
Read more