Rajeev Chandrasekhar:ಭಯೋತ್ಪಾದಕರಿಗೆ ಪಿಣರಾಯಿ ವಿಜಯನ್‌ರಿಂದ ಕೇರಳಕ್ಕೆ ರೆಡ್‌ ಕಾರ್ಪೆಟ್‌ ಸ್ವಾಗತ!

Rajeev Chandrasekhar:ಭಯೋತ್ಪಾದಕರಿಗೆ ಪಿಣರಾಯಿ ವಿಜಯನ್‌ರಿಂದ ಕೇರಳಕ್ಕೆ ರೆಡ್‌ ಕಾರ್ಪೆಟ್‌ ಸ್ವಾಗತ!

Published : Oct 30, 2023, 08:19 PM IST

ಕಲಮಸ್ಸೆರಿ  ಸ್ಫೋಟಕ್ಕೆ ಸಂಬಂಧಿಸಿದಂತೆ ಕೇರಳ ಸರ್ಕಾರದ ವಿರುದ್ಧ ಮತ್ತೊಮ್ಮೆ ಕಿಡಿಕಾರಿರುವ ಕೇಂದ್ರ ಸಚಿವ ರಾಜೀವ್‌ ಚಂದ್ರಶೇಖರ್‌, ಕೇರಳ ಸಿಎಂ ಪಿಣರಾಯಿ ವಿಜಯನ್‌ ಭಯೋತ್ಪಾದಕರಿಗೆ ರೆಡ್‌ ಕಾರ್ಪೆಟ್‌ ಸ್ವಾಗತ ನೀಡಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
 


ಕೊಚ್ಚಿ (ಅ.30):  ಕೇಂದ್ರ ಸಚಿವ ರಾಜೀವ್ ಚಂದ್ರಶೇಖರ್ ಅವರು ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು ತಮ್ಮ ಭ್ರಷ್ಟಾಚಾರ, ಅಸಮರ್ಥತೆ ಮತ್ತು ಅದಕ್ಷತೆಯನ್ನು ಮುಚ್ಚಿಹಾಕಲು ಪ್ರಯತ್ನಿಸುತ್ತಿದ್ದಾರೆ ಎಂದು ಆರೋಪಿಸಿದ್ದಾರೆ. ಅಕ್ಟೋಬರ್ 30 ರಂದು ಕೇರಳದ ಕಲಮಸ್ಸೆರಿ ಸ್ಫೋಟದ ಸ್ಥಳ ಮತ್ತು ಘಟನೆಯಲ್ಲಿ ಗಾಯಗೊಂಡವರನ್ನು ಭೇಟಿ ಮಾಡಿದ ಬಳಿಕ ಕೊಚ್ಚಿಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ರಾಜೀವ್‌ ಚಂದ್ರಶೇಖರ್, ಕೇರಳ ಸರ್ಕಾರವು "ರಾಜ್ಯದಲ್ಲಿ ಉಗ್ರಗಾಮಿ ಅಂಶಗಳಿಗೆ ಕೆಂಪು ರತ್ನಗಂಬಳಿ ಹಾಸಿದೆ" ಎಂದು ಆರೋಪಿಸಿದರು.

ಎಡಪಕ್ಷಗಳು ಭಯೋತ್ಪಾದಕರ ಕುರಿತಾಗಿ ಮೃದು ಧೋರಣೆ ತೋರಿಸುತ್ತಿದೆ. ಕೇರಳದಲ್ಲಿ ಭಯೋತ್ಪಾದಕ ಘಟನೆಗಳು ಹೆಚ್ಚಾದಾಗ ಅಲ್ಲಿನ ಘಟನೆಗಳ ಬಗ್ಗೆ ಸರ್ಕಾರ ಗಮನ ನೀಡೋದೇ ಇಲ್ಲ. ಮುಸ್ಲಿಂ ಲೀಗ್‌ನ ಮುನೀರ್ ಮತ್ತು ಸಿಪಿಎಂನ ಸ್ವರಾಜ್ ಹಮಾಸ್ ಅನ್ನು ಸಮರ್ಥಿಸುತ್ತಿದ್ದಾರೆ. ಆದರೆ ಭಯೋತ್ಪಾದನೆಯನ್ನು ವಿರೋಧಿಸುವವರನ್ನು ಕೋಮುವಾದಿಗಳು ಎಂದು ಕರೆಯುತ್ತಾರೆ. ಕೋಮು ತುಷ್ಟೀಕರಣ ಉಗ್ರವಾದವನ್ನು ಹುಟ್ಟು ಹಾಕುತ್ತದೆ. ಈ ಹಿಂದೆಯೂ ಇದೇ ನೀತಿಯನ್ನು ಕಾಂಗ್ರೆಸ್ ಅಳವಡಿಸಿಕೊಂಡಿತ್ತು ಎಂದು ರಾಜೀವ್ ಚಂದ್ರಶೇಖರ್ ಹೇಳಿದ್ದಾರೆ. 

ಕೇರಳದ ಪ್ಯಾಲಿಸ್ತೇನ್‌ ಪರ ಸಮಾವೇಶದಲ್ಲಿ ವರ್ಚುವಲ್‌ ಆಗಿ ಮಾತನಾಡಿದ ಹಮಾಸ್‌ ಭಯೋತ್ಪಾದಕ Khaled Mashal

ಇದೇ ವೇಳೆ ತಮ್ಮನ್ನು ಕೋಮುವಾದಿ ಎಂದು ಕರೆಯಲು ಮುಖ್ಯಮಂತ್ರಿಗೆ ಯಾವ ಅಧಿಕಾರವಿದೆ ಎಂದು ಪ್ರಶ್ನಿಸಿದರು. ಪಿಣರಾಯಿ ದೆಹಲಿಯಲ್ಲಿ ರಾಜಕೀಯ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿದ್ದ ವೇಳೆ ಕೇರಳದಲ್ಲಿ ಬಾಂಬ್ ಸ್ಫೋಟಗೊಂಡಿತ್ತು. ಪತ್ರಕರ್ತರಿಗೆ ನಿಷೇಧ ಹೇರಿದ್ದು ಇದೇ ಮುಖ್ಯಮಂತ್ರಿ. ಹಮಾಸ್ ನಾಯಕನಿಗೆ ಕೇರಳದಲ್ಲಿ ಕಾರ್ಯಕ್ರಮದಲ್ಲಿ ಭಾಗವಹಿಸಲು ಸರ್ಕಾರ ಅನುಮತಿ ನೀಡಿರುವುದು ಕೂಡ ಟೀಕೆಗೆ ಗುರಿಯಾಗಿದೆ.

18:19ಸರ್ಕಾರಿ ನೌಕರರ ಮೇಲೆ ಯೋಗಿ ಕಟ್ಟು ನಿಟ್ಟಿನ ಆಕ್ಷನ್​: ವೇತನ ಬೇಕಿದ್ದವರು ನಿಯಮ ಪಾಲಿಸಿ.. ಏನಿದು ರೂಲ್ಸ್..?
18:27ಒಂದೇ ಒಂದು ಫೋನ್ ಕಾಲ್. ಬದಲಾಯ್ತು ಭಾರತ-ಅಮೆರಿಕ ನಂಟು! ಚೀನಾಕ್ಕೆ ಶಾಕ್, ಭಾರತಕ್ಕೆ ಲಕ್!
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
22:38ನೀನೆ ನನ್ನ ಬೆಳ್ಳಿ ಅನ್ನೋ ದಿನವೂ ಬಂತು ನೋಡಿ: ಬೆಳ್ಳಿ ಬೆಲೆ ಏರಿಕೆಗೆ ಕಾರಣ ಏನು?
18:51ಡಾಲರ್ ಸಾಮ್ರಾಜ್ಯ ಪತನ? ಚಿನ್ನದ ಅಧಿಪತ್ಯ ಶುರು, ಡಾಲರ್ ಕಂಗಾಲು! ಬಂಗಾರ ರಾಶಿ ಹಾಕ್ತಿರೋ ರಿಸರ್ವ್ ಬ್ಯಾಂಕ್‌
21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
21:07ಅಸ್ಸಾಂ ಅಖಾಡದಲ್ಲಿ ಡಿಕೆ–ಪ್ರಿಯಾಂಕ ಹಿಮಾಗ್ನಿ ಯಜ್ಞ! ಕಮಲ ಸಾಮ್ರಾಜ್ಯಕ್ಕೆ ಡೆಡ್ಲಿ ಸವಾಲು
Read more