UP Elections 2022:  ಹಿಂದುಳಿದ ವರ್ಗವನ್ನು ಸೆಳೆಯಲು ಅಖಿಲೇಶ್ ತಂತ್ರ, ಯೋಗಿಗೆ ಸವಾಲು.?

UP Elections 2022: ಹಿಂದುಳಿದ ವರ್ಗವನ್ನು ಸೆಳೆಯಲು ಅಖಿಲೇಶ್ ತಂತ್ರ, ಯೋಗಿಗೆ ಸವಾಲು.?

Published : Jan 19, 2022, 10:05 AM ISTUpdated : Jan 19, 2022, 10:31 AM IST

- ಉತ್ತರ ಪ್ರದೇಶದಲ್ಲಿ ಅತೀ ಹಿಂದುಳಿದ ಜಾತಿಗಳೇ ನಿರ್ಣಾಯಕ 

- ಮೋದಿಗೆ ಬೆಂಬಲ ನೀಡಿದ್ದ ಯಾದವೇತರ ಹಿಂದುಳಿದ ವರ್ಗಗಳು 

- ರಾಜಕೀಯ ಭವಿಷ್ಯ ನಿರ್ಧರಿಸುವವರು ಇದೇ 35% ಮತದಾರರು

- ಬಿಜೆಪಿ ಕಡೆ ವಾಲಿದ್ದ ಹಿಂದುಳಿದ ವರ್ಗವನ್ನು ಸೆಳೆಯಲು ಅಖಿಲೇಶ್ ತಂತ್ರ

ಲಕ್ನೋ (ಜ. 19):  2014 ರಲ್ಲಿ ನರೇಂದ್ರ ಮೋದಿ (Narendra Modi) ಕಾರಣದಿಂದ ಬಿಜೆಪಿ ಉಚ್ಚಾಯ ಶುರು ಆದ ಮೇಲೆ ಗಮನಿಸಬೇಕಾದ ಒಂದು ಅಂಶ ಎಂದರೆ ಕರ್ನಾಟಕ, ಯುಪಿ ಸೇರಿದಂತೆ ಪೂರ್ತಿ ದೇಶದಲ್ಲಿ ಅತೀ ಹಿಂದುಳಿದ ಸಮುದಾಯಗಳು ಹಿಂದುತ್ವದ ಅಡಿಯಲ್ಲಿ ಬಿಜೆಪಿ ಜೊತೆ ಬಂದಿದ್ದು. ಯುಪಿಯಲ್ಲಿ ಕೂಡ ಆಗಿದ್ದು ಅದೇ.

90ರ ದಶಕದಲ್ಲಿ ಒಂದು ಕಡೆ ಅಯೋಧ್ಯೆಯ ಮಂದಿರ (Ayodhya Mandir) ಆಂದೋಲನದಿಂದ ಯುಪಿಯಲ್ಲಿ ಮಜಬೂತ ಆದರೆ, ಮಂಡಲ್ ವರದಿ ಹೋರಾಟದ ಫಲಾನುಭವಿ ಎಂದರೆ ಮುಲಾಯಂ ಸಿಂಗ್ ಯಾದವ್ (Mulayam Singh Yadav) ಆದರೆ ಮುಲಾಯಂ ಆಡಳಿತದಲ್ಲಿ ಪ್ರಾತಿನಿಧ್ಯ ಮತ್ತು ಅಧಿಕಾರ ಎರಡು ಕೂಡ ಯಾದವರಿಗೆ ದಂಡಿಯಾಗಿ ಸಿಕ್ಕಿದ್ದರಿಂದ ಮುನಿಸಿಕೊಂಡಿದ್ದ ಯಾದವೇತರ ಹಿಂದುಳಿದ ವರ್ಗಗಳು ಮೋದಿ ಕೂಡ ಹಿಂದುಳಿದ ಸಮುದಾಯ ದವರು ಎಂಬ ಕಾರಣಕ್ಕೆ ಬಿಜೆಪಿ ಕಡೆ ವಾಲಿದ್ದವು.

ಒಂದು ಅಂದಾಜಿನ ಪ್ರಕಾರ   ಯುಪಿಯಲ್ಲಿ ಲೋಧ್, ನಿಶಾದ, ಕುರ್ಮಿ, ಸೈನಿ, ಚೌಹಾಣ್, ರಾಜಭರ್, ಮೌರ್ಯ, ಕುಶ್ವಾಹ್, ಹೀಗೆ ನೂರಾರು ಸಣ್ಣ ಜಾತಿಗಳು ಸೇರಿ ಸುಮಾರು 35 ಪ್ರತಿಶತದಷ್ಟು ಇದ್ದಾರೆ. 5 ವರ್ಷ ಬಿಜೆಪಿ ಜೊತೆಗಿದ್ದ ಈ ಸಣ್ಣ ಸಮುದಾಯಗಳ ನಾಯಕರು ಹೊಯ್ದಾಡುತ್ತಿರುವುದು ಯುಪಿ ಚುನಾವಣೆಯನ್ನು ಇನ್ನಷ್ಟು ಕುತೂಹಲಕ್ಕೆ ದೂಡಿದೆ.

ಒಂದು ಅಂದಾಜಿನ ಪ್ರಕಾರ ಯುಪಿಯಲ್ಲಿ ಬ್ರಾಹ್ಮಣರು ಸೇರಿದಂತೆ 20 ಪ್ರತಿಶತ ಮೇಲ್ಜಾತಿಗಳಿದ್ದು ಅವರು ಹೆಚ್ಚಾಗಿ ಬಿಜೆಪಿ ಜೊತೆಗಿದ್ದಾರೆ. ಹೆಚ್ಚು ಕಡಿಮೆ ಜೊತೆಗೂಡಿದರೆ  25 ಪ್ರತಿಶತ ಇರುವ ಯಾದವ ಮತ್ತು ಮುಸ್ಲಿಮರು ಕಟ್ಟಾ ಅಖಿಲೇಶ್ ಯಾದವ್ ಮತದಾರರು. ಸುಮಾರು 14 ಪ್ರತಿಶತ ಇರುವ ದಲಿತ, ಜಾಟವರು ಪಕ್ಕಾ ಮಾಯಾವತಿ ಮತದಾರರು. ಆದರೆ  ಕಾಂಗ್ರೆಸ್‌ಗೆ ಮಾತ್ರ  ಪಕ್ಕಾ ವೋಟ್ ಬ್ಯಾಂಕ್ ಕಾಣುತ್ತಿಲ್ಲ. ಒಂದು ಕಾಲದಲ್ಲಿ ಕಾಂಗ್ರೆಸ್ ಜೊತೆಗಿದ್ದ  ಮುಸ್ಲಿಮರು ಅಖಿಲೇಶ್ ಕಡೆ, ಬ್ರಾಹ್ಮಣರು ಬಿಜೆಪಿ ಕಡೆ ವಾಲಿದ್ದಾರೆ

ಹೀಗಾಗಿ ಯುಪಿ ರಾಜಕೀಯ ಭವಿಷ್ಯವನ್ನು ನಿರ್ಧರಿಸುವವರು ಉಳಿದ 35 ಪ್ರತಿಶತ ಇರುವ ಇದೇ ಅತೀ ಹಿಂದುಳಿದ ಮತದಾರರು. ಕಳೆದ ಬಾರಿ ಬಿಜೆಪಿ ಕಡೆ ವಾಲಿದ್ದಅತೀ ಹಿಂದುಳಿದ ಮತದಾರರನ್ನು ಸೆಳೆಯಲು ಅಖಿಲೇಶ್ ಒಬ್ಬೊಬ್ಬರೇ ನಾಯಕರನ್ನು ಪಕ್ಷಕ್ಕೆ ಸೇರ್ಪಡೆ ಮಾಡಿಕೊಳ್ಳುತ್ತಿದ್ದಾರೆ. ಸ್ವಾಮಿ ಪ್ರಸಾದ ಮೌರ್ಯ, ದಾರಾ ಸಿಂಗ್ ಚೌಹಾನ, ಮುಖೇಶ್ ಸೈನಿ ಹೀಗೆ ಯೋಗಿ ಸಂಪುಟದಲ್ಲಿ ಮಂತ್ರಿ ಆಗಿದ್ದವರೆಲ್ಲ ಸಮಾಜವಾದಿ ತೆಕ್ಕೆಗೆ ಮರಳಿದ್ದಾರೆ.

ಒಂದು ವೇಳೆ ಯಾದವ ಮುಸ್ಲಿಮರ ಜೊತೆ ಅತೀ ಹಿಂದುಳಿದ ಸಮುದಾಯ ಗಳು ಅಖಿಲೇಶ್ ಯಾದವ್ ಜೊತೆ ಇನ್ನಷ್ಟು ವಾಲಿದರೆ ಯುಪಿ ಕುಸ್ತಿ ಯೋಗಿ ಮತ್ತು ಮೋದಿ ಗೆ ಇನ್ನಷ್ಟು ಕಠಿಣ ಆಗಬಹುದು.

- ಪ್ರಶಾಂತ್ ನಾತು, ಸುವರ್ಣ ನ್ಯೂಸ್ ಕನ್ನಡ ಪ್ರಭ ವಿಶೇಷ ಪ್ರತಿನಿಧಿ

24:25ಭಾರತದ ಬಳಿಯೂ ಇದೆ ಮಲಕ್ಕಾ ಜಲಸಂಧಿ ಮುಚ್ಚಿದ್ರೆ ಕೆಲ ದೇಶದ ಕತೆ ಗೋವಿಂದ
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
23:34ಕೇರಳ ಎಲೆಕ್ಷನ್ ಗ್ರೌಂಡ್ ರಿಪೋರ್ಟ್: ಕನ್ನಡಿಗರೇ ಹೆಚ್ಚಿರುವ ಮಂಜೇಶ್ವರದ ಜನ ಹೇಳೋದೇನು?
20:04Suvarna Focus: ಕೆಂಪು ರಕ್ಕಸ ಕೋಟೆ ಧೂಳಿಪಟ, ಭಾರತ ಈಗ ನಕ್ಸಲ್ ಮುಕ್ತ! 59 ವರ್ಷಗಳ ರಕ್ಕಸನಿಗೆ ಶಾಶ್ವತ ಅಂತ್ಯಕ್ರಿಯೆ
53:2759 ವರ್ಷಗಳ ನಕ್ಸಲ್ ಯುಗಾಂತ್ಯ? ಅಮಿತ್ ಶಾ ಮಹತ್ವದ ಘೋಷಣೆ! 59 ವರ್ಷದ ಬಳಿಕ ಭಾರತ ನಿರಾಳ!
16:00ನೆತನ್ಯಾಹು ಹೆಣೆದ 'ಹೆಕ್ಸಾಗನ್' ವ್ಯೂಹಕ್ಕೆ ಮೋದಿ ಸಾರಥಿ: ಇಸ್ರೇಲ್ ಭೇಟಿಯಿಂದ ಜಾಗತಿಕ ರಾಜಕಾರಣದಲ್ಲಿ ಹೊಸ ಸಂಚಲನ!
18:19ಸರ್ಕಾರಿ ನೌಕರರ ಮೇಲೆ ಯೋಗಿ ಕಟ್ಟು ನಿಟ್ಟಿನ ಆಕ್ಷನ್​: ವೇತನ ಬೇಕಿದ್ದವರು ನಿಯಮ ಪಾಲಿಸಿ.. ಏನಿದು ರೂಲ್ಸ್..?
18:27ಒಂದೇ ಒಂದು ಫೋನ್ ಕಾಲ್. ಬದಲಾಯ್ತು ಭಾರತ-ಅಮೆರಿಕ ನಂಟು! ಚೀನಾಕ್ಕೆ ಶಾಕ್, ಭಾರತಕ್ಕೆ ಲಕ್!
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
Read more