UP Elections 2022:  ಹಿಂದುಳಿದ ವರ್ಗವನ್ನು ಸೆಳೆಯಲು ಅಖಿಲೇಶ್ ತಂತ್ರ, ಯೋಗಿಗೆ ಸವಾಲು.?

UP Elections 2022: ಹಿಂದುಳಿದ ವರ್ಗವನ್ನು ಸೆಳೆಯಲು ಅಖಿಲೇಶ್ ತಂತ್ರ, ಯೋಗಿಗೆ ಸವಾಲು.?

Published : Jan 19, 2022, 10:05 AM ISTUpdated : Jan 19, 2022, 10:31 AM IST

- ಉತ್ತರ ಪ್ರದೇಶದಲ್ಲಿ ಅತೀ ಹಿಂದುಳಿದ ಜಾತಿಗಳೇ ನಿರ್ಣಾಯಕ 

- ಮೋದಿಗೆ ಬೆಂಬಲ ನೀಡಿದ್ದ ಯಾದವೇತರ ಹಿಂದುಳಿದ ವರ್ಗಗಳು 

- ರಾಜಕೀಯ ಭವಿಷ್ಯ ನಿರ್ಧರಿಸುವವರು ಇದೇ 35% ಮತದಾರರು

- ಬಿಜೆಪಿ ಕಡೆ ವಾಲಿದ್ದ ಹಿಂದುಳಿದ ವರ್ಗವನ್ನು ಸೆಳೆಯಲು ಅಖಿಲೇಶ್ ತಂತ್ರ

ಲಕ್ನೋ (ಜ. 19):  2014 ರಲ್ಲಿ ನರೇಂದ್ರ ಮೋದಿ (Narendra Modi) ಕಾರಣದಿಂದ ಬಿಜೆಪಿ ಉಚ್ಚಾಯ ಶುರು ಆದ ಮೇಲೆ ಗಮನಿಸಬೇಕಾದ ಒಂದು ಅಂಶ ಎಂದರೆ ಕರ್ನಾಟಕ, ಯುಪಿ ಸೇರಿದಂತೆ ಪೂರ್ತಿ ದೇಶದಲ್ಲಿ ಅತೀ ಹಿಂದುಳಿದ ಸಮುದಾಯಗಳು ಹಿಂದುತ್ವದ ಅಡಿಯಲ್ಲಿ ಬಿಜೆಪಿ ಜೊತೆ ಬಂದಿದ್ದು. ಯುಪಿಯಲ್ಲಿ ಕೂಡ ಆಗಿದ್ದು ಅದೇ.

90ರ ದಶಕದಲ್ಲಿ ಒಂದು ಕಡೆ ಅಯೋಧ್ಯೆಯ ಮಂದಿರ (Ayodhya Mandir) ಆಂದೋಲನದಿಂದ ಯುಪಿಯಲ್ಲಿ ಮಜಬೂತ ಆದರೆ, ಮಂಡಲ್ ವರದಿ ಹೋರಾಟದ ಫಲಾನುಭವಿ ಎಂದರೆ ಮುಲಾಯಂ ಸಿಂಗ್ ಯಾದವ್ (Mulayam Singh Yadav) ಆದರೆ ಮುಲಾಯಂ ಆಡಳಿತದಲ್ಲಿ ಪ್ರಾತಿನಿಧ್ಯ ಮತ್ತು ಅಧಿಕಾರ ಎರಡು ಕೂಡ ಯಾದವರಿಗೆ ದಂಡಿಯಾಗಿ ಸಿಕ್ಕಿದ್ದರಿಂದ ಮುನಿಸಿಕೊಂಡಿದ್ದ ಯಾದವೇತರ ಹಿಂದುಳಿದ ವರ್ಗಗಳು ಮೋದಿ ಕೂಡ ಹಿಂದುಳಿದ ಸಮುದಾಯ ದವರು ಎಂಬ ಕಾರಣಕ್ಕೆ ಬಿಜೆಪಿ ಕಡೆ ವಾಲಿದ್ದವು.

ಒಂದು ಅಂದಾಜಿನ ಪ್ರಕಾರ   ಯುಪಿಯಲ್ಲಿ ಲೋಧ್, ನಿಶಾದ, ಕುರ್ಮಿ, ಸೈನಿ, ಚೌಹಾಣ್, ರಾಜಭರ್, ಮೌರ್ಯ, ಕುಶ್ವಾಹ್, ಹೀಗೆ ನೂರಾರು ಸಣ್ಣ ಜಾತಿಗಳು ಸೇರಿ ಸುಮಾರು 35 ಪ್ರತಿಶತದಷ್ಟು ಇದ್ದಾರೆ. 5 ವರ್ಷ ಬಿಜೆಪಿ ಜೊತೆಗಿದ್ದ ಈ ಸಣ್ಣ ಸಮುದಾಯಗಳ ನಾಯಕರು ಹೊಯ್ದಾಡುತ್ತಿರುವುದು ಯುಪಿ ಚುನಾವಣೆಯನ್ನು ಇನ್ನಷ್ಟು ಕುತೂಹಲಕ್ಕೆ ದೂಡಿದೆ.

ಒಂದು ಅಂದಾಜಿನ ಪ್ರಕಾರ ಯುಪಿಯಲ್ಲಿ ಬ್ರಾಹ್ಮಣರು ಸೇರಿದಂತೆ 20 ಪ್ರತಿಶತ ಮೇಲ್ಜಾತಿಗಳಿದ್ದು ಅವರು ಹೆಚ್ಚಾಗಿ ಬಿಜೆಪಿ ಜೊತೆಗಿದ್ದಾರೆ. ಹೆಚ್ಚು ಕಡಿಮೆ ಜೊತೆಗೂಡಿದರೆ  25 ಪ್ರತಿಶತ ಇರುವ ಯಾದವ ಮತ್ತು ಮುಸ್ಲಿಮರು ಕಟ್ಟಾ ಅಖಿಲೇಶ್ ಯಾದವ್ ಮತದಾರರು. ಸುಮಾರು 14 ಪ್ರತಿಶತ ಇರುವ ದಲಿತ, ಜಾಟವರು ಪಕ್ಕಾ ಮಾಯಾವತಿ ಮತದಾರರು. ಆದರೆ  ಕಾಂಗ್ರೆಸ್‌ಗೆ ಮಾತ್ರ  ಪಕ್ಕಾ ವೋಟ್ ಬ್ಯಾಂಕ್ ಕಾಣುತ್ತಿಲ್ಲ. ಒಂದು ಕಾಲದಲ್ಲಿ ಕಾಂಗ್ರೆಸ್ ಜೊತೆಗಿದ್ದ  ಮುಸ್ಲಿಮರು ಅಖಿಲೇಶ್ ಕಡೆ, ಬ್ರಾಹ್ಮಣರು ಬಿಜೆಪಿ ಕಡೆ ವಾಲಿದ್ದಾರೆ

ಹೀಗಾಗಿ ಯುಪಿ ರಾಜಕೀಯ ಭವಿಷ್ಯವನ್ನು ನಿರ್ಧರಿಸುವವರು ಉಳಿದ 35 ಪ್ರತಿಶತ ಇರುವ ಇದೇ ಅತೀ ಹಿಂದುಳಿದ ಮತದಾರರು. ಕಳೆದ ಬಾರಿ ಬಿಜೆಪಿ ಕಡೆ ವಾಲಿದ್ದಅತೀ ಹಿಂದುಳಿದ ಮತದಾರರನ್ನು ಸೆಳೆಯಲು ಅಖಿಲೇಶ್ ಒಬ್ಬೊಬ್ಬರೇ ನಾಯಕರನ್ನು ಪಕ್ಷಕ್ಕೆ ಸೇರ್ಪಡೆ ಮಾಡಿಕೊಳ್ಳುತ್ತಿದ್ದಾರೆ. ಸ್ವಾಮಿ ಪ್ರಸಾದ ಮೌರ್ಯ, ದಾರಾ ಸಿಂಗ್ ಚೌಹಾನ, ಮುಖೇಶ್ ಸೈನಿ ಹೀಗೆ ಯೋಗಿ ಸಂಪುಟದಲ್ಲಿ ಮಂತ್ರಿ ಆಗಿದ್ದವರೆಲ್ಲ ಸಮಾಜವಾದಿ ತೆಕ್ಕೆಗೆ ಮರಳಿದ್ದಾರೆ.

ಒಂದು ವೇಳೆ ಯಾದವ ಮುಸ್ಲಿಮರ ಜೊತೆ ಅತೀ ಹಿಂದುಳಿದ ಸಮುದಾಯ ಗಳು ಅಖಿಲೇಶ್ ಯಾದವ್ ಜೊತೆ ಇನ್ನಷ್ಟು ವಾಲಿದರೆ ಯುಪಿ ಕುಸ್ತಿ ಯೋಗಿ ಮತ್ತು ಮೋದಿ ಗೆ ಇನ್ನಷ್ಟು ಕಠಿಣ ಆಗಬಹುದು.

- ಪ್ರಶಾಂತ್ ನಾತು, ಸುವರ್ಣ ನ್ಯೂಸ್ ಕನ್ನಡ ಪ್ರಭ ವಿಶೇಷ ಪ್ರತಿನಿಧಿ

24:50ಮಹಾರಾಕ್ಷಸ El Nino ಜನ್ಮ ರಹಸ್ಯ ; 2027ರ ಬೇಸಿಗೆಯ ಎಚ್ಚರಿಕೆ ನೀಡದ ವಿಜ್ಞಾನಿಗಳು
20:322029ರ ಮಹಾಭಾರತ: ಜಿರಳೆಗಳೇ ಕಿಂಗ್ ಮೇಕರ್..! Gen Zಗಳಿಗೆ ಕನೆಕ್ಟ್ ಆಗಲು ಹೇಗಿದೆ ರಾಜಕೀಯ ನಾಯಕರ ಪ್ರಯತ್ನ..?
23:17ಪ್ಲಾಸ್ಟಿಕ್ ನೋಟ್‌ಗೆ ಹಣಕಾಸು ಸಚಿವಾಲಯ ಗ್ರೀನ್​​ ಸಿಗ್ನಲ್​​​ ! ಹರಿಯಲ್ಲ, ನೆನೆಯಲ್ಲ, ಕಳ್ಳನೋಟು ಸಾಧ್ಯವಿಲ್ಲ, ಹೇಗಿರುತ್ತೆ ಹೊಸ ಕರೆನ್ಸಿ..?
20:56Suvarna Focus: ಜಂತರ್ ಮಂತರ್‌ನಲ್ಲಿ ನಡೆದಿದ್ದೇನು? ಬೆಚ್ಚಿಬೀಳಿಸಿದ ರಿಪೋರ್ಟ್! ಆಪರೇಷನ್ 2873 ಅಸಲಿ ಸೀಕ್ರೆಟ್?
50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
Read more