UP Elections 2022:  ಹಿಂದುಳಿದ ವರ್ಗವನ್ನು ಸೆಳೆಯಲು ಅಖಿಲೇಶ್ ತಂತ್ರ, ಯೋಗಿಗೆ ಸವಾಲು.?

UP Elections 2022: ಹಿಂದುಳಿದ ವರ್ಗವನ್ನು ಸೆಳೆಯಲು ಅಖಿಲೇಶ್ ತಂತ್ರ, ಯೋಗಿಗೆ ಸವಾಲು.?

Published : Jan 19, 2022, 10:05 AM ISTUpdated : Jan 19, 2022, 10:31 AM IST

- ಉತ್ತರ ಪ್ರದೇಶದಲ್ಲಿ ಅತೀ ಹಿಂದುಳಿದ ಜಾತಿಗಳೇ ನಿರ್ಣಾಯಕ 

- ಮೋದಿಗೆ ಬೆಂಬಲ ನೀಡಿದ್ದ ಯಾದವೇತರ ಹಿಂದುಳಿದ ವರ್ಗಗಳು 

- ರಾಜಕೀಯ ಭವಿಷ್ಯ ನಿರ್ಧರಿಸುವವರು ಇದೇ 35% ಮತದಾರರು

- ಬಿಜೆಪಿ ಕಡೆ ವಾಲಿದ್ದ ಹಿಂದುಳಿದ ವರ್ಗವನ್ನು ಸೆಳೆಯಲು ಅಖಿಲೇಶ್ ತಂತ್ರ

ಲಕ್ನೋ (ಜ. 19):  2014 ರಲ್ಲಿ ನರೇಂದ್ರ ಮೋದಿ (Narendra Modi) ಕಾರಣದಿಂದ ಬಿಜೆಪಿ ಉಚ್ಚಾಯ ಶುರು ಆದ ಮೇಲೆ ಗಮನಿಸಬೇಕಾದ ಒಂದು ಅಂಶ ಎಂದರೆ ಕರ್ನಾಟಕ, ಯುಪಿ ಸೇರಿದಂತೆ ಪೂರ್ತಿ ದೇಶದಲ್ಲಿ ಅತೀ ಹಿಂದುಳಿದ ಸಮುದಾಯಗಳು ಹಿಂದುತ್ವದ ಅಡಿಯಲ್ಲಿ ಬಿಜೆಪಿ ಜೊತೆ ಬಂದಿದ್ದು. ಯುಪಿಯಲ್ಲಿ ಕೂಡ ಆಗಿದ್ದು ಅದೇ.

90ರ ದಶಕದಲ್ಲಿ ಒಂದು ಕಡೆ ಅಯೋಧ್ಯೆಯ ಮಂದಿರ (Ayodhya Mandir) ಆಂದೋಲನದಿಂದ ಯುಪಿಯಲ್ಲಿ ಮಜಬೂತ ಆದರೆ, ಮಂಡಲ್ ವರದಿ ಹೋರಾಟದ ಫಲಾನುಭವಿ ಎಂದರೆ ಮುಲಾಯಂ ಸಿಂಗ್ ಯಾದವ್ (Mulayam Singh Yadav) ಆದರೆ ಮುಲಾಯಂ ಆಡಳಿತದಲ್ಲಿ ಪ್ರಾತಿನಿಧ್ಯ ಮತ್ತು ಅಧಿಕಾರ ಎರಡು ಕೂಡ ಯಾದವರಿಗೆ ದಂಡಿಯಾಗಿ ಸಿಕ್ಕಿದ್ದರಿಂದ ಮುನಿಸಿಕೊಂಡಿದ್ದ ಯಾದವೇತರ ಹಿಂದುಳಿದ ವರ್ಗಗಳು ಮೋದಿ ಕೂಡ ಹಿಂದುಳಿದ ಸಮುದಾಯ ದವರು ಎಂಬ ಕಾರಣಕ್ಕೆ ಬಿಜೆಪಿ ಕಡೆ ವಾಲಿದ್ದವು.

ಒಂದು ಅಂದಾಜಿನ ಪ್ರಕಾರ   ಯುಪಿಯಲ್ಲಿ ಲೋಧ್, ನಿಶಾದ, ಕುರ್ಮಿ, ಸೈನಿ, ಚೌಹಾಣ್, ರಾಜಭರ್, ಮೌರ್ಯ, ಕುಶ್ವಾಹ್, ಹೀಗೆ ನೂರಾರು ಸಣ್ಣ ಜಾತಿಗಳು ಸೇರಿ ಸುಮಾರು 35 ಪ್ರತಿಶತದಷ್ಟು ಇದ್ದಾರೆ. 5 ವರ್ಷ ಬಿಜೆಪಿ ಜೊತೆಗಿದ್ದ ಈ ಸಣ್ಣ ಸಮುದಾಯಗಳ ನಾಯಕರು ಹೊಯ್ದಾಡುತ್ತಿರುವುದು ಯುಪಿ ಚುನಾವಣೆಯನ್ನು ಇನ್ನಷ್ಟು ಕುತೂಹಲಕ್ಕೆ ದೂಡಿದೆ.

ಒಂದು ಅಂದಾಜಿನ ಪ್ರಕಾರ ಯುಪಿಯಲ್ಲಿ ಬ್ರಾಹ್ಮಣರು ಸೇರಿದಂತೆ 20 ಪ್ರತಿಶತ ಮೇಲ್ಜಾತಿಗಳಿದ್ದು ಅವರು ಹೆಚ್ಚಾಗಿ ಬಿಜೆಪಿ ಜೊತೆಗಿದ್ದಾರೆ. ಹೆಚ್ಚು ಕಡಿಮೆ ಜೊತೆಗೂಡಿದರೆ  25 ಪ್ರತಿಶತ ಇರುವ ಯಾದವ ಮತ್ತು ಮುಸ್ಲಿಮರು ಕಟ್ಟಾ ಅಖಿಲೇಶ್ ಯಾದವ್ ಮತದಾರರು. ಸುಮಾರು 14 ಪ್ರತಿಶತ ಇರುವ ದಲಿತ, ಜಾಟವರು ಪಕ್ಕಾ ಮಾಯಾವತಿ ಮತದಾರರು. ಆದರೆ  ಕಾಂಗ್ರೆಸ್‌ಗೆ ಮಾತ್ರ  ಪಕ್ಕಾ ವೋಟ್ ಬ್ಯಾಂಕ್ ಕಾಣುತ್ತಿಲ್ಲ. ಒಂದು ಕಾಲದಲ್ಲಿ ಕಾಂಗ್ರೆಸ್ ಜೊತೆಗಿದ್ದ  ಮುಸ್ಲಿಮರು ಅಖಿಲೇಶ್ ಕಡೆ, ಬ್ರಾಹ್ಮಣರು ಬಿಜೆಪಿ ಕಡೆ ವಾಲಿದ್ದಾರೆ

ಹೀಗಾಗಿ ಯುಪಿ ರಾಜಕೀಯ ಭವಿಷ್ಯವನ್ನು ನಿರ್ಧರಿಸುವವರು ಉಳಿದ 35 ಪ್ರತಿಶತ ಇರುವ ಇದೇ ಅತೀ ಹಿಂದುಳಿದ ಮತದಾರರು. ಕಳೆದ ಬಾರಿ ಬಿಜೆಪಿ ಕಡೆ ವಾಲಿದ್ದಅತೀ ಹಿಂದುಳಿದ ಮತದಾರರನ್ನು ಸೆಳೆಯಲು ಅಖಿಲೇಶ್ ಒಬ್ಬೊಬ್ಬರೇ ನಾಯಕರನ್ನು ಪಕ್ಷಕ್ಕೆ ಸೇರ್ಪಡೆ ಮಾಡಿಕೊಳ್ಳುತ್ತಿದ್ದಾರೆ. ಸ್ವಾಮಿ ಪ್ರಸಾದ ಮೌರ್ಯ, ದಾರಾ ಸಿಂಗ್ ಚೌಹಾನ, ಮುಖೇಶ್ ಸೈನಿ ಹೀಗೆ ಯೋಗಿ ಸಂಪುಟದಲ್ಲಿ ಮಂತ್ರಿ ಆಗಿದ್ದವರೆಲ್ಲ ಸಮಾಜವಾದಿ ತೆಕ್ಕೆಗೆ ಮರಳಿದ್ದಾರೆ.

ಒಂದು ವೇಳೆ ಯಾದವ ಮುಸ್ಲಿಮರ ಜೊತೆ ಅತೀ ಹಿಂದುಳಿದ ಸಮುದಾಯ ಗಳು ಅಖಿಲೇಶ್ ಯಾದವ್ ಜೊತೆ ಇನ್ನಷ್ಟು ವಾಲಿದರೆ ಯುಪಿ ಕುಸ್ತಿ ಯೋಗಿ ಮತ್ತು ಮೋದಿ ಗೆ ಇನ್ನಷ್ಟು ಕಠಿಣ ಆಗಬಹುದು.

- ಪ್ರಶಾಂತ್ ನಾತು, ಸುವರ್ಣ ನ್ಯೂಸ್ ಕನ್ನಡ ಪ್ರಭ ವಿಶೇಷ ಪ್ರತಿನಿಧಿ

46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
23:56ಹಾರ್ಮುಜ್ ಬಿಕ್ಕಟ್ಟಿನ ನಂತರ ಭಾರತದ ಭವಿಷ್ಯವೇನು? ಬಂಗಾರ ₹50,000 ಕುಸಿತ..! ಅಗ್ಗವಾಗುತ್ತಾ ಪೆಟ್ರೋಲ್ ದರ? ಮೋದಿ ಹೊಸ ಲೆಕ್ಕಾಚಾರ!
39:28ಅಯೋಧ್ಯೆ ರಾಮಮಂದಿರ: ಪ್ರಾಜೆಕ್ಟ್ ಚೀಫ್ ನೃಪೇಂದ್ರ ಮಿಶ್ರಾ ಜೊತೆ ಎಕ್ಸ್‌ಕ್ಲೂಸಿವ್ ಸಂದರ್ಶನ
22:49ವಿಧಾನಸಭೆಯಲ್ಲೂ ಸಿಎಂ ವಿಜಯ್ ಪಂಚಿಂಗ್ ಡೈಲಾಗ್, ದ್ರಾವಿಡ ನಾಡಿನಲ್ಲಿ ರಾಜಕೀಯ ರಂಗು ಬದಲು
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
19:59Suvarna Focus: ರುದ್ರಪ್ರಯಾಗದಲ್ಲಿ ನಿಹಾಂಗ್ ಯೋಧರ ರಣಕಹಳೆ; ಮತ್ತೆ ಕಾಡುತ್ತಿದೆ 1984ರ ‘ಆಪರೇಷನ್ ಬ್ಲ್ಯೂ ಸ್ಟಾರ್’ ಕರಾಳ ನೆನಪು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
22:58ಉಗ್ರನಾಗಲು ಪಾಕಿಸ್ತಾನಕ್ಕೆ ತೆರಳಿ ರಿಯಲ್ ಧುರಂಧರ್ ಆದ ಕಾಶ್ಮೀರ ಯುವಕ, ಬೆಚ್ಚಿ ಬೀಳಿಸೋ ಘಟನೆ
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್
Read more