UP Elections 2022: ವಾರಾಣಸಿಯಲ್ಲಿ 2 ದಿನ ಪ್ರಧಾನಿ ಮೋದಿ ಪ್ರಚಾರ, ರೋಡ್‌ ಶೋ

UP Elections 2022: ವಾರಾಣಸಿಯಲ್ಲಿ 2 ದಿನ ಪ್ರಧಾನಿ ಮೋದಿ ಪ್ರಚಾರ, ರೋಡ್‌ ಶೋ

Published : Mar 04, 2022, 01:35 PM IST

ಉತ್ತರ ಪ್ರದೇಶದಲ್ಲಿ (Uttar Pradesh)  ಇಂದು 6ನೇ ಹಂತದ ಮತದಾನ ನಡೆದಿದೆ. ಇನ್ನೇನು ಒಂದು ಹಂತದ ಮತದಾನ ಬಾಕಿಯಿದೆಯಷ್ಟೇ. ಮಾ.7ಕ್ಕೆ ಕೊನೆಯ, 7ನೇ ಹಂತದ ಮತದಾನ ನಡೆದರೆ, ಮಾರ್ಚ್ 10ಕ್ಕೆ ಮತ ಎಣಿಕೆ ನಡೆಯಲಿದೆ.

ಲಕ್ನೋ (ಮಾ. 04):  ಉತ್ತರ ಪ್ರದೇಶದಲ್ಲಿ (Uttar Pradesh)  7ನೇ ಹಂತದಲ್ಲಿ 54 ವಿಧಾನಸಭಾ ಕ್ಷೇತ್ರಗಳಿಗೆ ಮತದಾನ ನಡೆಯಲಿದ್ದು, ಹಿಂದೂ ಧಾರ್ಮಿಕ ಶ್ರದ್ಧಾಕೇಂದ್ರವಾದ ವಾರಾಣಾಸಿ (varanasi)ಬಿಜೆಪಿ ಪಾಲಿಗೆ ಪ್ರತಿಷ್ಠೆಯ ಕಣವಾಗಿದೆ. ಅಷ್ಟೇ ಅಲ್ಲ  ಲೋಕಸಭೆಯಲ್ಲಿ ವಾರಾಣಸಿಯನ್ನು ಪ್ರಧಾನಿ ಮೋದಿ ಪ್ರತಿನಿಧಿಸುತ್ತಿರುವುದು ಬಿಜೆಪಿಯ ನಿರೀಕ್ಷೆಗಳನ್ನು ಹೆಚ್ಚಿಸಿದೆ.

ಹಾಗಾಗಿ ಪ್ರಧಾನಿ ಮೋದಿಯವರೇ ಖುದ್ದು ವಾರಾಣಾಸಿಯಲ್ಲಿ ಬೀಡು ಬಿಟ್ಟು ಮುಂದಿನೆರಡು ದಿನ ಪ್ರಚಾರ ಕೈಗೊಳ್ಳಲಿದ್ದಾರೆ. ಮಾರ್ಚ್ 4 ಮತ್ತು 5ರಂದು ಮೋದಿ ವಾರಾಣಸಿಗೆ ಬಂದು ಭರ್ಜರಿ ಮಯತಾಚನೆ ನಡೆಸಲಿದ್ದಾರೆ. ಮೊದಲ ದಿನ, ಸರ್ದಾರ್ ವಲ್ಲಭಬಾಯಿ ಪಟೇಲ್‌ ಪ್ರತಿಮೆಗೆ ಮಾಲಾರ್ಪಣೆ ಮಾಡುವ ಮೂಲಕ ಪ್ರಧಾನಿ ಮೋದಿ ರೋಡ್‌ ಶೋ ಆರಂಭಿಸಲಿದ್ದಾರೆ. ಬಳಿಕ ಕಾಶಿ ವಿಶ್ವನಾಥ್ ದೇಗುಲಕ್ಕೂ ಭೇಟಿ ನೀಡಿ ವಿಶೇಷ ಪೂಜೆ ನಡೆಸಲಿದ್ದಾರೆ. ಎರಡನೇ ದಿನ ಸಾರ್ವಜನಿಕ ಸಭೆಗಳನ್ನುದ್ದೇಶಿಸಿ ಮಾತನಾಡಲಿದ್ದಾರೆ.

ಈಗಾಗಲೇ ಅಮಿತ್ ಶಾ ಇಲ್ಲಿ ಪ್ರಚಾರ ನಡೆಸಿದ್ದಾರೆ. ಮುಂದಿನ ಎರಡು ದಿನ ಇತರ ಪಕ್ಷದ ನಾಯಕರು ಕೂಡಾ ವಾರಾಣಸಿಯಲ್ಲಿ  ಪ್ರಚಾರ ನಡೆಸಲಿದ್ದಾರೆ.  ಸಮಾಜವಾದಿ ಪಕ್ಷದ ನಾಯಕ ಅಖಿಲೇಶ್ ಯಾದವ್, ಮಮತಾ ಬ್ಯಾನರ್ಜಿ ಕೂಡಾ ಇಲ್ಲಿ ಪ್ರಚಾರ ನಡೆಸುತ್ತಿದ್ದಾರೆ. ಕಾಂಗ್ರೆಸ್‌, ಆಮ್ ಆದ್ಮಿ ಪಾರ್ಟಿ ಯ ನಾಯಕರೂ ಪ್ರಚಾರ ಕಣದಲ್ಲಿದ್ದಾರೆ.

ವಾರಾಣಸಿಯಲ್ಲಿಒಟ್ಟು 8 ವಿಧಾನಸಭಾ ಕ್ಷೇತ್ರಗಳಿದ್ದು,  ಕಳೆದ 2017ರ ಚುನಾವಣೆಯಲ್ಲಿ ಎಲ್ಲಾ 8 ಸೀಟುಗಳನ್ನು ಬಿಜೆಪಿ ಹಾಗೂ ಮಿತ್ರಪಕ್ಷಗಳು ಬಾಚಿಕೊಂಡಿದ್ದುವು. ವಾರಾಣಾಸಿ ದಕ್ಷಿಣ ಕ್ಷೇತ್ರ ಕೇಸರಿ ಪಡೆಯ ಭದ್ರಕೋಟೆಯಾಗಿದ್ದು, ಕಳೆದೆರಡೂವರೆ ದಶಕಗಳಿಂದ ಸತತವಾಗಿ ಬಿಜೆಪಿಯ ಅಭ್ಯರ್ಥಿಯೇ ಜಯಗಳಿಸುತ್ತಿದ್ದಾರೆ.

22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
23:34ಕೇರಳ ಎಲೆಕ್ಷನ್ ಗ್ರೌಂಡ್ ರಿಪೋರ್ಟ್: ಕನ್ನಡಿಗರೇ ಹೆಚ್ಚಿರುವ ಮಂಜೇಶ್ವರದ ಜನ ಹೇಳೋದೇನು?
20:04Suvarna Focus: ಕೆಂಪು ರಕ್ಕಸ ಕೋಟೆ ಧೂಳಿಪಟ, ಭಾರತ ಈಗ ನಕ್ಸಲ್ ಮುಕ್ತ! 59 ವರ್ಷಗಳ ರಕ್ಕಸನಿಗೆ ಶಾಶ್ವತ ಅಂತ್ಯಕ್ರಿಯೆ
53:2759 ವರ್ಷಗಳ ನಕ್ಸಲ್ ಯುಗಾಂತ್ಯ? ಅಮಿತ್ ಶಾ ಮಹತ್ವದ ಘೋಷಣೆ! 59 ವರ್ಷದ ಬಳಿಕ ಭಾರತ ನಿರಾಳ!
16:00ನೆತನ್ಯಾಹು ಹೆಣೆದ 'ಹೆಕ್ಸಾಗನ್' ವ್ಯೂಹಕ್ಕೆ ಮೋದಿ ಸಾರಥಿ: ಇಸ್ರೇಲ್ ಭೇಟಿಯಿಂದ ಜಾಗತಿಕ ರಾಜಕಾರಣದಲ್ಲಿ ಹೊಸ ಸಂಚಲನ!
18:19ಸರ್ಕಾರಿ ನೌಕರರ ಮೇಲೆ ಯೋಗಿ ಕಟ್ಟು ನಿಟ್ಟಿನ ಆಕ್ಷನ್​: ವೇತನ ಬೇಕಿದ್ದವರು ನಿಯಮ ಪಾಲಿಸಿ.. ಏನಿದು ರೂಲ್ಸ್..?
18:27ಒಂದೇ ಒಂದು ಫೋನ್ ಕಾಲ್. ಬದಲಾಯ್ತು ಭಾರತ-ಅಮೆರಿಕ ನಂಟು! ಚೀನಾಕ್ಕೆ ಶಾಕ್, ಭಾರತಕ್ಕೆ ಲಕ್!
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
Read more