UP Elections 2022: ವಾರಾಣಸಿಯಲ್ಲಿ 2 ದಿನ ಪ್ರಧಾನಿ ಮೋದಿ ಪ್ರಚಾರ, ರೋಡ್‌ ಶೋ

UP Elections 2022: ವಾರಾಣಸಿಯಲ್ಲಿ 2 ದಿನ ಪ್ರಧಾನಿ ಮೋದಿ ಪ್ರಚಾರ, ರೋಡ್‌ ಶೋ

Published : Mar 04, 2022, 01:35 PM IST

ಉತ್ತರ ಪ್ರದೇಶದಲ್ಲಿ (Uttar Pradesh)  ಇಂದು 6ನೇ ಹಂತದ ಮತದಾನ ನಡೆದಿದೆ. ಇನ್ನೇನು ಒಂದು ಹಂತದ ಮತದಾನ ಬಾಕಿಯಿದೆಯಷ್ಟೇ. ಮಾ.7ಕ್ಕೆ ಕೊನೆಯ, 7ನೇ ಹಂತದ ಮತದಾನ ನಡೆದರೆ, ಮಾರ್ಚ್ 10ಕ್ಕೆ ಮತ ಎಣಿಕೆ ನಡೆಯಲಿದೆ.

ಲಕ್ನೋ (ಮಾ. 04):  ಉತ್ತರ ಪ್ರದೇಶದಲ್ಲಿ (Uttar Pradesh)  7ನೇ ಹಂತದಲ್ಲಿ 54 ವಿಧಾನಸಭಾ ಕ್ಷೇತ್ರಗಳಿಗೆ ಮತದಾನ ನಡೆಯಲಿದ್ದು, ಹಿಂದೂ ಧಾರ್ಮಿಕ ಶ್ರದ್ಧಾಕೇಂದ್ರವಾದ ವಾರಾಣಾಸಿ (varanasi)ಬಿಜೆಪಿ ಪಾಲಿಗೆ ಪ್ರತಿಷ್ಠೆಯ ಕಣವಾಗಿದೆ. ಅಷ್ಟೇ ಅಲ್ಲ  ಲೋಕಸಭೆಯಲ್ಲಿ ವಾರಾಣಸಿಯನ್ನು ಪ್ರಧಾನಿ ಮೋದಿ ಪ್ರತಿನಿಧಿಸುತ್ತಿರುವುದು ಬಿಜೆಪಿಯ ನಿರೀಕ್ಷೆಗಳನ್ನು ಹೆಚ್ಚಿಸಿದೆ.

ಹಾಗಾಗಿ ಪ್ರಧಾನಿ ಮೋದಿಯವರೇ ಖುದ್ದು ವಾರಾಣಾಸಿಯಲ್ಲಿ ಬೀಡು ಬಿಟ್ಟು ಮುಂದಿನೆರಡು ದಿನ ಪ್ರಚಾರ ಕೈಗೊಳ್ಳಲಿದ್ದಾರೆ. ಮಾರ್ಚ್ 4 ಮತ್ತು 5ರಂದು ಮೋದಿ ವಾರಾಣಸಿಗೆ ಬಂದು ಭರ್ಜರಿ ಮಯತಾಚನೆ ನಡೆಸಲಿದ್ದಾರೆ. ಮೊದಲ ದಿನ, ಸರ್ದಾರ್ ವಲ್ಲಭಬಾಯಿ ಪಟೇಲ್‌ ಪ್ರತಿಮೆಗೆ ಮಾಲಾರ್ಪಣೆ ಮಾಡುವ ಮೂಲಕ ಪ್ರಧಾನಿ ಮೋದಿ ರೋಡ್‌ ಶೋ ಆರಂಭಿಸಲಿದ್ದಾರೆ. ಬಳಿಕ ಕಾಶಿ ವಿಶ್ವನಾಥ್ ದೇಗುಲಕ್ಕೂ ಭೇಟಿ ನೀಡಿ ವಿಶೇಷ ಪೂಜೆ ನಡೆಸಲಿದ್ದಾರೆ. ಎರಡನೇ ದಿನ ಸಾರ್ವಜನಿಕ ಸಭೆಗಳನ್ನುದ್ದೇಶಿಸಿ ಮಾತನಾಡಲಿದ್ದಾರೆ.

ಈಗಾಗಲೇ ಅಮಿತ್ ಶಾ ಇಲ್ಲಿ ಪ್ರಚಾರ ನಡೆಸಿದ್ದಾರೆ. ಮುಂದಿನ ಎರಡು ದಿನ ಇತರ ಪಕ್ಷದ ನಾಯಕರು ಕೂಡಾ ವಾರಾಣಸಿಯಲ್ಲಿ  ಪ್ರಚಾರ ನಡೆಸಲಿದ್ದಾರೆ.  ಸಮಾಜವಾದಿ ಪಕ್ಷದ ನಾಯಕ ಅಖಿಲೇಶ್ ಯಾದವ್, ಮಮತಾ ಬ್ಯಾನರ್ಜಿ ಕೂಡಾ ಇಲ್ಲಿ ಪ್ರಚಾರ ನಡೆಸುತ್ತಿದ್ದಾರೆ. ಕಾಂಗ್ರೆಸ್‌, ಆಮ್ ಆದ್ಮಿ ಪಾರ್ಟಿ ಯ ನಾಯಕರೂ ಪ್ರಚಾರ ಕಣದಲ್ಲಿದ್ದಾರೆ.

ವಾರಾಣಸಿಯಲ್ಲಿಒಟ್ಟು 8 ವಿಧಾನಸಭಾ ಕ್ಷೇತ್ರಗಳಿದ್ದು,  ಕಳೆದ 2017ರ ಚುನಾವಣೆಯಲ್ಲಿ ಎಲ್ಲಾ 8 ಸೀಟುಗಳನ್ನು ಬಿಜೆಪಿ ಹಾಗೂ ಮಿತ್ರಪಕ್ಷಗಳು ಬಾಚಿಕೊಂಡಿದ್ದುವು. ವಾರಾಣಾಸಿ ದಕ್ಷಿಣ ಕ್ಷೇತ್ರ ಕೇಸರಿ ಪಡೆಯ ಭದ್ರಕೋಟೆಯಾಗಿದ್ದು, ಕಳೆದೆರಡೂವರೆ ದಶಕಗಳಿಂದ ಸತತವಾಗಿ ಬಿಜೆಪಿಯ ಅಭ್ಯರ್ಥಿಯೇ ಜಯಗಳಿಸುತ್ತಿದ್ದಾರೆ.

24:50ಮಹಾರಾಕ್ಷಸ El Nino ಜನ್ಮ ರಹಸ್ಯ ; 2027ರ ಬೇಸಿಗೆಯ ಎಚ್ಚರಿಕೆ ನೀಡದ ವಿಜ್ಞಾನಿಗಳು
20:322029ರ ಮಹಾಭಾರತ: ಜಿರಳೆಗಳೇ ಕಿಂಗ್ ಮೇಕರ್..! Gen Zಗಳಿಗೆ ಕನೆಕ್ಟ್ ಆಗಲು ಹೇಗಿದೆ ರಾಜಕೀಯ ನಾಯಕರ ಪ್ರಯತ್ನ..?
23:17ಪ್ಲಾಸ್ಟಿಕ್ ನೋಟ್‌ಗೆ ಹಣಕಾಸು ಸಚಿವಾಲಯ ಗ್ರೀನ್​​ ಸಿಗ್ನಲ್​​​ ! ಹರಿಯಲ್ಲ, ನೆನೆಯಲ್ಲ, ಕಳ್ಳನೋಟು ಸಾಧ್ಯವಿಲ್ಲ, ಹೇಗಿರುತ್ತೆ ಹೊಸ ಕರೆನ್ಸಿ..?
20:56Suvarna Focus: ಜಂತರ್ ಮಂತರ್‌ನಲ್ಲಿ ನಡೆದಿದ್ದೇನು? ಬೆಚ್ಚಿಬೀಳಿಸಿದ ರಿಪೋರ್ಟ್! ಆಪರೇಷನ್ 2873 ಅಸಲಿ ಸೀಕ್ರೆಟ್?
50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
Read more