UP Elections 2022: ಹಿಂದುಳಿದ ಜಾತಿಗಳು ಮತ್ತು ದಲಿತರ ಮತ ಸೆಳೆಯಲು ಪ್ರಿಯಾಂಕ ತಂತ್ರ?

UP Elections 2022: ಹಿಂದುಳಿದ ಜಾತಿಗಳು ಮತ್ತು ದಲಿತರ ಮತ ಸೆಳೆಯಲು ಪ್ರಿಯಾಂಕ ತಂತ್ರ?

Published : Mar 04, 2022, 04:16 PM IST

ಉತ್ತರ ಪ್ರದೇಶ ಚುನಾವಣೆಯ ಇನ್ನೊಂದು ಹಂತದ ಮತದಾನ ಬಾಕಿಯಿದೆ. ಎಲ್ಲಾ ರಾಜಕೀಯ ಪಕ್ಷಗಳ ನಾಯಕರು ಉತ್ತರ ಪ್ರದೇಶದಲ್ಲೇ ಬೀಡುಬಿಟ್ಟಿದ್ದಾರೆ. ಮತದಾರರನ್ನು ಸೆಳೆಯಲು ಕೊನೆಕ್ಷಣದ ಎಲ್ಲಾ ಕಸರತ್ತುಗಳನ್ನು ನಡೆಸುತ್ತಿದ್ದಾರೆ.
 

ಉತ್ತರ ಪ್ರದೇಶ ಚುನಾವಣೆಯ ಇನ್ನೊಂದು ಹಂತದ ಮತದಾನ ಬಾಕಿಯಿದೆ.  ಎಲ್ಲಾ ರಾಜಕೀಯ ಪಕ್ಷಗಳ ನಾಯಕರು ಉತ್ತರ ಪ್ರದೇಶದಲ್ಲೇ ಬೀಡುಬಿಟ್ಟಿದ್ದಾರೆ. ಮತದಾರರನ್ನು ಸೆಳೆಯಲು ಕೊನೆಕ್ಷಣದ ಎಲ್ಲಾ ಕಸರತ್ತುಗಳನ್ನು ನಡೆಸುತ್ತಿದ್ದಾರೆ.

ಉತ್ತರ ಪ್ರದೇಶದಲ್ಲಿರುವ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ, ಸಂತ ಕಬೀರದಾಸರ ಮಠಕ್ಕೆ ಭೇಟಿ ನೀಡಿದ್ದಾರೆ. ಮಹಂತ್ ವಿವೇಕದಾಸ್ ಅವರೊಂದಿಗೆ ಮಠಕ್ಕೆ ತೆರಳಿದ ಪ್ರಿಯಾಂಕಾ ಗಾಂಧಿ ಇಲ್ಲಿನ ಸಂಪೂರ್ಣ ಇತಿಹಾಸವನ್ನು ತಿಳಿದುಕೊಂಡರು. 

ಇಲ್ಲಿನ ಬಗ್ಗೆ ಪ್ರಿಯಾಕಾ ಗಾಂಧಿಗೆ ಮಾಹಿತಿ ನೀಡಿದ ಮಹಂತ್ ವಿವೇಕದಾಸ್ ಕಬೀರಪಂಥಿಗಳಿಗೆ ಮತ್ತು ದೇಶಾದ್ಯಂತ ಕಬೀರದಾಸ್‌ರನ್ನು ಮೇಲೆ ನಂಬಿಕೆ ಇರಿಸುವ ಭಕ್ತರಿಗೆ ಕಬೀರಚೌರ ಮಠವು ಒಂದು ಪವಿತ್ರ ಸ್ಥಳವಾಗಿದೆ ಎಂದಿದ್ದಾರೆ. 1934ರಲ್ಲಿ ಮಹಾತ್ಮ ಗಾಂಧಿ ಕೂಡ ಈ ಮಠಕ್ಕೆ ಭೇಟಿ ನೀಡಿದ್ದರು. ದೇಶದ ಮೊದಲ ಪ್ರಧಾನಿ ಪಂಡಿತ್ ಜವಾಹರಲಾಲ್ ನೆಹರೂ ಕೂಡ ಇಲ್ಲಿಗೆ ಹಲವು ಬಾರಿ ಬಂದಿದ್ದಾರೆ. ರಾಷ್ಟ್ರಕವಿ ರವೀಂದ್ರನಾಥ ಠಾಗೋರ್ ಕೂಡ ಇಲ್ಲಿಯೇ ಇರುತ್ತಿದ್ದರು ಎಂದು ತಿಳಿಸಿದರು.

1934ರಲ್ಲಿ ಗಾಂಧೀಜಿ ಜನರನ್ನುದ್ದೇಶಿಸಿ ಮಾತನಾಡಿದ್ದ ಸ್ಥಳದಲ್ಲಿರುವ ಮರವನ್ನೂ ಮಹಂತ್ ವಿವೇಕದಾಸ್ ಅವರು ಪ್ರಿಯಾಂಕಾ ಗಾಂಧಿಗೆ ತೋರಿಸಿದರು. ಇದಾದ ಬಳಿಕ ಪ್ರಿಯಾಂಕಾ ಮಠದಲ್ಲಿರುವ ದೇವಸ್ಥಾನಕ್ಕೆ ಭೇಟಿ ನೀಡಿ, ದರ್ಶನ ಪಡೆದರು. ಬಳಿಕದ ನಂತರ ಪ್ರಿಯಾಂಕಾ ದೇವಸ್ಥಾನದ ಪ್ರಾಂಗಣದಲ್ಲಿಯೇ ಕೆಲಕಾಲ ಕುಳಿತು ಅಲ್ಲಿದ್ದವರೊಂದಿಗೆ ಭಜನೆ ಆಲಿಸಿದರು.

ಸಂತ ಕಬೀರದಾಸರ ಸಾಮಾಜಿಕ ನ್ಯಾಯ ಮತ್ತು ಸಮಾನತೆಯ ಸಂದೇಶದಿಂದ ಉತ್ತರ ಪ್ರದೇಶದ ದಲಿತ ಮತ್ತು ಅತ್ಯಂತ ಹಿಂದುಳಿದ ವರ್ಗಗಳು ಬಹಳಷ್ಟು ಪ್ರಭಾವಿತರಾಗಿದ್ದಾರೆ. ಸಂತ ಕಬೀರದಾಸ್‌ಗೆ ಸಾಕಷ್ಟು ಸಾಂಸ್ಕೃತಿಕ ಮಹತ್ವವಿದೆ.  ಇನ್ನು ಏಳನೇ ಹಂತದ ಚುನಾವಣೆಯಲ್ಲಿ ಹಿಂದುಳಿದ ಜಾತಿಗಳು ಮತ್ತು ದಲಿತರ ಸಂಖ್ಯೆ ಗಣನೀಯವಾಗಿದೆ. ಈ ವರ್ಗದ ಮತದಾರರನ್ನು ಪ್ರಿಯಾಂಕಾ ತನ್ನ ಕಡೆಗೆ ಆಕರ್ಷಿಸಲು ಪ್ರಯತ್ನಿಸುತ್ತಿದ್ದಾರೆ. ಕಬೀರಮಠಕ್ಕೆ ಭೇಟಿ ನೀಡುವ ಮೂಲಕ ಪ್ರಿಯಾಂಕಾ ದೊಡ್ಡ ಸಂದೇಶ ನೀಡಿದ್ದಾರೆ.

24:25ಭಾರತದ ಬಳಿಯೂ ಇದೆ ಮಲಕ್ಕಾ ಜಲಸಂಧಿ ಮುಚ್ಚಿದ್ರೆ ಕೆಲ ದೇಶದ ಕತೆ ಗೋವಿಂದ
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
23:34ಕೇರಳ ಎಲೆಕ್ಷನ್ ಗ್ರೌಂಡ್ ರಿಪೋರ್ಟ್: ಕನ್ನಡಿಗರೇ ಹೆಚ್ಚಿರುವ ಮಂಜೇಶ್ವರದ ಜನ ಹೇಳೋದೇನು?
20:04Suvarna Focus: ಕೆಂಪು ರಕ್ಕಸ ಕೋಟೆ ಧೂಳಿಪಟ, ಭಾರತ ಈಗ ನಕ್ಸಲ್ ಮುಕ್ತ! 59 ವರ್ಷಗಳ ರಕ್ಕಸನಿಗೆ ಶಾಶ್ವತ ಅಂತ್ಯಕ್ರಿಯೆ
53:2759 ವರ್ಷಗಳ ನಕ್ಸಲ್ ಯುಗಾಂತ್ಯ? ಅಮಿತ್ ಶಾ ಮಹತ್ವದ ಘೋಷಣೆ! 59 ವರ್ಷದ ಬಳಿಕ ಭಾರತ ನಿರಾಳ!
16:00ನೆತನ್ಯಾಹು ಹೆಣೆದ 'ಹೆಕ್ಸಾಗನ್' ವ್ಯೂಹಕ್ಕೆ ಮೋದಿ ಸಾರಥಿ: ಇಸ್ರೇಲ್ ಭೇಟಿಯಿಂದ ಜಾಗತಿಕ ರಾಜಕಾರಣದಲ್ಲಿ ಹೊಸ ಸಂಚಲನ!
18:19ಸರ್ಕಾರಿ ನೌಕರರ ಮೇಲೆ ಯೋಗಿ ಕಟ್ಟು ನಿಟ್ಟಿನ ಆಕ್ಷನ್​: ವೇತನ ಬೇಕಿದ್ದವರು ನಿಯಮ ಪಾಲಿಸಿ.. ಏನಿದು ರೂಲ್ಸ್..?
18:27ಒಂದೇ ಒಂದು ಫೋನ್ ಕಾಲ್. ಬದಲಾಯ್ತು ಭಾರತ-ಅಮೆರಿಕ ನಂಟು! ಚೀನಾಕ್ಕೆ ಶಾಕ್, ಭಾರತಕ್ಕೆ ಲಕ್!
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
Read more