UP Elections 2022: ಹಿಂದುಳಿದ ಜಾತಿಗಳು ಮತ್ತು ದಲಿತರ ಮತ ಸೆಳೆಯಲು ಪ್ರಿಯಾಂಕ ತಂತ್ರ?

UP Elections 2022: ಹಿಂದುಳಿದ ಜಾತಿಗಳು ಮತ್ತು ದಲಿತರ ಮತ ಸೆಳೆಯಲು ಪ್ರಿಯಾಂಕ ತಂತ್ರ?

Published : Mar 04, 2022, 04:16 PM IST

ಉತ್ತರ ಪ್ರದೇಶ ಚುನಾವಣೆಯ ಇನ್ನೊಂದು ಹಂತದ ಮತದಾನ ಬಾಕಿಯಿದೆ. ಎಲ್ಲಾ ರಾಜಕೀಯ ಪಕ್ಷಗಳ ನಾಯಕರು ಉತ್ತರ ಪ್ರದೇಶದಲ್ಲೇ ಬೀಡುಬಿಟ್ಟಿದ್ದಾರೆ. ಮತದಾರರನ್ನು ಸೆಳೆಯಲು ಕೊನೆಕ್ಷಣದ ಎಲ್ಲಾ ಕಸರತ್ತುಗಳನ್ನು ನಡೆಸುತ್ತಿದ್ದಾರೆ.
 

ಉತ್ತರ ಪ್ರದೇಶ ಚುನಾವಣೆಯ ಇನ್ನೊಂದು ಹಂತದ ಮತದಾನ ಬಾಕಿಯಿದೆ.  ಎಲ್ಲಾ ರಾಜಕೀಯ ಪಕ್ಷಗಳ ನಾಯಕರು ಉತ್ತರ ಪ್ರದೇಶದಲ್ಲೇ ಬೀಡುಬಿಟ್ಟಿದ್ದಾರೆ. ಮತದಾರರನ್ನು ಸೆಳೆಯಲು ಕೊನೆಕ್ಷಣದ ಎಲ್ಲಾ ಕಸರತ್ತುಗಳನ್ನು ನಡೆಸುತ್ತಿದ್ದಾರೆ.

ಉತ್ತರ ಪ್ರದೇಶದಲ್ಲಿರುವ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ, ಸಂತ ಕಬೀರದಾಸರ ಮಠಕ್ಕೆ ಭೇಟಿ ನೀಡಿದ್ದಾರೆ. ಮಹಂತ್ ವಿವೇಕದಾಸ್ ಅವರೊಂದಿಗೆ ಮಠಕ್ಕೆ ತೆರಳಿದ ಪ್ರಿಯಾಂಕಾ ಗಾಂಧಿ ಇಲ್ಲಿನ ಸಂಪೂರ್ಣ ಇತಿಹಾಸವನ್ನು ತಿಳಿದುಕೊಂಡರು. 

ಇಲ್ಲಿನ ಬಗ್ಗೆ ಪ್ರಿಯಾಕಾ ಗಾಂಧಿಗೆ ಮಾಹಿತಿ ನೀಡಿದ ಮಹಂತ್ ವಿವೇಕದಾಸ್ ಕಬೀರಪಂಥಿಗಳಿಗೆ ಮತ್ತು ದೇಶಾದ್ಯಂತ ಕಬೀರದಾಸ್‌ರನ್ನು ಮೇಲೆ ನಂಬಿಕೆ ಇರಿಸುವ ಭಕ್ತರಿಗೆ ಕಬೀರಚೌರ ಮಠವು ಒಂದು ಪವಿತ್ರ ಸ್ಥಳವಾಗಿದೆ ಎಂದಿದ್ದಾರೆ. 1934ರಲ್ಲಿ ಮಹಾತ್ಮ ಗಾಂಧಿ ಕೂಡ ಈ ಮಠಕ್ಕೆ ಭೇಟಿ ನೀಡಿದ್ದರು. ದೇಶದ ಮೊದಲ ಪ್ರಧಾನಿ ಪಂಡಿತ್ ಜವಾಹರಲಾಲ್ ನೆಹರೂ ಕೂಡ ಇಲ್ಲಿಗೆ ಹಲವು ಬಾರಿ ಬಂದಿದ್ದಾರೆ. ರಾಷ್ಟ್ರಕವಿ ರವೀಂದ್ರನಾಥ ಠಾಗೋರ್ ಕೂಡ ಇಲ್ಲಿಯೇ ಇರುತ್ತಿದ್ದರು ಎಂದು ತಿಳಿಸಿದರು.

1934ರಲ್ಲಿ ಗಾಂಧೀಜಿ ಜನರನ್ನುದ್ದೇಶಿಸಿ ಮಾತನಾಡಿದ್ದ ಸ್ಥಳದಲ್ಲಿರುವ ಮರವನ್ನೂ ಮಹಂತ್ ವಿವೇಕದಾಸ್ ಅವರು ಪ್ರಿಯಾಂಕಾ ಗಾಂಧಿಗೆ ತೋರಿಸಿದರು. ಇದಾದ ಬಳಿಕ ಪ್ರಿಯಾಂಕಾ ಮಠದಲ್ಲಿರುವ ದೇವಸ್ಥಾನಕ್ಕೆ ಭೇಟಿ ನೀಡಿ, ದರ್ಶನ ಪಡೆದರು. ಬಳಿಕದ ನಂತರ ಪ್ರಿಯಾಂಕಾ ದೇವಸ್ಥಾನದ ಪ್ರಾಂಗಣದಲ್ಲಿಯೇ ಕೆಲಕಾಲ ಕುಳಿತು ಅಲ್ಲಿದ್ದವರೊಂದಿಗೆ ಭಜನೆ ಆಲಿಸಿದರು.

ಸಂತ ಕಬೀರದಾಸರ ಸಾಮಾಜಿಕ ನ್ಯಾಯ ಮತ್ತು ಸಮಾನತೆಯ ಸಂದೇಶದಿಂದ ಉತ್ತರ ಪ್ರದೇಶದ ದಲಿತ ಮತ್ತು ಅತ್ಯಂತ ಹಿಂದುಳಿದ ವರ್ಗಗಳು ಬಹಳಷ್ಟು ಪ್ರಭಾವಿತರಾಗಿದ್ದಾರೆ. ಸಂತ ಕಬೀರದಾಸ್‌ಗೆ ಸಾಕಷ್ಟು ಸಾಂಸ್ಕೃತಿಕ ಮಹತ್ವವಿದೆ.  ಇನ್ನು ಏಳನೇ ಹಂತದ ಚುನಾವಣೆಯಲ್ಲಿ ಹಿಂದುಳಿದ ಜಾತಿಗಳು ಮತ್ತು ದಲಿತರ ಸಂಖ್ಯೆ ಗಣನೀಯವಾಗಿದೆ. ಈ ವರ್ಗದ ಮತದಾರರನ್ನು ಪ್ರಿಯಾಂಕಾ ತನ್ನ ಕಡೆಗೆ ಆಕರ್ಷಿಸಲು ಪ್ರಯತ್ನಿಸುತ್ತಿದ್ದಾರೆ. ಕಬೀರಮಠಕ್ಕೆ ಭೇಟಿ ನೀಡುವ ಮೂಲಕ ಪ್ರಿಯಾಂಕಾ ದೊಡ್ಡ ಸಂದೇಶ ನೀಡಿದ್ದಾರೆ.

24:50ಮಹಾರಾಕ್ಷಸ El Nino ಜನ್ಮ ರಹಸ್ಯ ; 2027ರ ಬೇಸಿಗೆಯ ಎಚ್ಚರಿಕೆ ನೀಡದ ವಿಜ್ಞಾನಿಗಳು
20:322029ರ ಮಹಾಭಾರತ: ಜಿರಳೆಗಳೇ ಕಿಂಗ್ ಮೇಕರ್..! Gen Zಗಳಿಗೆ ಕನೆಕ್ಟ್ ಆಗಲು ಹೇಗಿದೆ ರಾಜಕೀಯ ನಾಯಕರ ಪ್ರಯತ್ನ..?
23:17ಪ್ಲಾಸ್ಟಿಕ್ ನೋಟ್‌ಗೆ ಹಣಕಾಸು ಸಚಿವಾಲಯ ಗ್ರೀನ್​​ ಸಿಗ್ನಲ್​​​ ! ಹರಿಯಲ್ಲ, ನೆನೆಯಲ್ಲ, ಕಳ್ಳನೋಟು ಸಾಧ್ಯವಿಲ್ಲ, ಹೇಗಿರುತ್ತೆ ಹೊಸ ಕರೆನ್ಸಿ..?
20:56Suvarna Focus: ಜಂತರ್ ಮಂತರ್‌ನಲ್ಲಿ ನಡೆದಿದ್ದೇನು? ಬೆಚ್ಚಿಬೀಳಿಸಿದ ರಿಪೋರ್ಟ್! ಆಪರೇಷನ್ 2873 ಅಸಲಿ ಸೀಕ್ರೆಟ್?
50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
Read more