UP Elections 2022: ಹಿಂದುಳಿದ ಜಾತಿಗಳು ಮತ್ತು ದಲಿತರ ಮತ ಸೆಳೆಯಲು ಪ್ರಿಯಾಂಕ ತಂತ್ರ?

UP Elections 2022: ಹಿಂದುಳಿದ ಜಾತಿಗಳು ಮತ್ತು ದಲಿತರ ಮತ ಸೆಳೆಯಲು ಪ್ರಿಯಾಂಕ ತಂತ್ರ?

Published : Mar 04, 2022, 04:16 PM IST

ಉತ್ತರ ಪ್ರದೇಶ ಚುನಾವಣೆಯ ಇನ್ನೊಂದು ಹಂತದ ಮತದಾನ ಬಾಕಿಯಿದೆ. ಎಲ್ಲಾ ರಾಜಕೀಯ ಪಕ್ಷಗಳ ನಾಯಕರು ಉತ್ತರ ಪ್ರದೇಶದಲ್ಲೇ ಬೀಡುಬಿಟ್ಟಿದ್ದಾರೆ. ಮತದಾರರನ್ನು ಸೆಳೆಯಲು ಕೊನೆಕ್ಷಣದ ಎಲ್ಲಾ ಕಸರತ್ತುಗಳನ್ನು ನಡೆಸುತ್ತಿದ್ದಾರೆ.
 

ಉತ್ತರ ಪ್ರದೇಶ ಚುನಾವಣೆಯ ಇನ್ನೊಂದು ಹಂತದ ಮತದಾನ ಬಾಕಿಯಿದೆ.  ಎಲ್ಲಾ ರಾಜಕೀಯ ಪಕ್ಷಗಳ ನಾಯಕರು ಉತ್ತರ ಪ್ರದೇಶದಲ್ಲೇ ಬೀಡುಬಿಟ್ಟಿದ್ದಾರೆ. ಮತದಾರರನ್ನು ಸೆಳೆಯಲು ಕೊನೆಕ್ಷಣದ ಎಲ್ಲಾ ಕಸರತ್ತುಗಳನ್ನು ನಡೆಸುತ್ತಿದ್ದಾರೆ.

ಉತ್ತರ ಪ್ರದೇಶದಲ್ಲಿರುವ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ, ಸಂತ ಕಬೀರದಾಸರ ಮಠಕ್ಕೆ ಭೇಟಿ ನೀಡಿದ್ದಾರೆ. ಮಹಂತ್ ವಿವೇಕದಾಸ್ ಅವರೊಂದಿಗೆ ಮಠಕ್ಕೆ ತೆರಳಿದ ಪ್ರಿಯಾಂಕಾ ಗಾಂಧಿ ಇಲ್ಲಿನ ಸಂಪೂರ್ಣ ಇತಿಹಾಸವನ್ನು ತಿಳಿದುಕೊಂಡರು. 

ಇಲ್ಲಿನ ಬಗ್ಗೆ ಪ್ರಿಯಾಕಾ ಗಾಂಧಿಗೆ ಮಾಹಿತಿ ನೀಡಿದ ಮಹಂತ್ ವಿವೇಕದಾಸ್ ಕಬೀರಪಂಥಿಗಳಿಗೆ ಮತ್ತು ದೇಶಾದ್ಯಂತ ಕಬೀರದಾಸ್‌ರನ್ನು ಮೇಲೆ ನಂಬಿಕೆ ಇರಿಸುವ ಭಕ್ತರಿಗೆ ಕಬೀರಚೌರ ಮಠವು ಒಂದು ಪವಿತ್ರ ಸ್ಥಳವಾಗಿದೆ ಎಂದಿದ್ದಾರೆ. 1934ರಲ್ಲಿ ಮಹಾತ್ಮ ಗಾಂಧಿ ಕೂಡ ಈ ಮಠಕ್ಕೆ ಭೇಟಿ ನೀಡಿದ್ದರು. ದೇಶದ ಮೊದಲ ಪ್ರಧಾನಿ ಪಂಡಿತ್ ಜವಾಹರಲಾಲ್ ನೆಹರೂ ಕೂಡ ಇಲ್ಲಿಗೆ ಹಲವು ಬಾರಿ ಬಂದಿದ್ದಾರೆ. ರಾಷ್ಟ್ರಕವಿ ರವೀಂದ್ರನಾಥ ಠಾಗೋರ್ ಕೂಡ ಇಲ್ಲಿಯೇ ಇರುತ್ತಿದ್ದರು ಎಂದು ತಿಳಿಸಿದರು.

1934ರಲ್ಲಿ ಗಾಂಧೀಜಿ ಜನರನ್ನುದ್ದೇಶಿಸಿ ಮಾತನಾಡಿದ್ದ ಸ್ಥಳದಲ್ಲಿರುವ ಮರವನ್ನೂ ಮಹಂತ್ ವಿವೇಕದಾಸ್ ಅವರು ಪ್ರಿಯಾಂಕಾ ಗಾಂಧಿಗೆ ತೋರಿಸಿದರು. ಇದಾದ ಬಳಿಕ ಪ್ರಿಯಾಂಕಾ ಮಠದಲ್ಲಿರುವ ದೇವಸ್ಥಾನಕ್ಕೆ ಭೇಟಿ ನೀಡಿ, ದರ್ಶನ ಪಡೆದರು. ಬಳಿಕದ ನಂತರ ಪ್ರಿಯಾಂಕಾ ದೇವಸ್ಥಾನದ ಪ್ರಾಂಗಣದಲ್ಲಿಯೇ ಕೆಲಕಾಲ ಕುಳಿತು ಅಲ್ಲಿದ್ದವರೊಂದಿಗೆ ಭಜನೆ ಆಲಿಸಿದರು.

ಸಂತ ಕಬೀರದಾಸರ ಸಾಮಾಜಿಕ ನ್ಯಾಯ ಮತ್ತು ಸಮಾನತೆಯ ಸಂದೇಶದಿಂದ ಉತ್ತರ ಪ್ರದೇಶದ ದಲಿತ ಮತ್ತು ಅತ್ಯಂತ ಹಿಂದುಳಿದ ವರ್ಗಗಳು ಬಹಳಷ್ಟು ಪ್ರಭಾವಿತರಾಗಿದ್ದಾರೆ. ಸಂತ ಕಬೀರದಾಸ್‌ಗೆ ಸಾಕಷ್ಟು ಸಾಂಸ್ಕೃತಿಕ ಮಹತ್ವವಿದೆ.  ಇನ್ನು ಏಳನೇ ಹಂತದ ಚುನಾವಣೆಯಲ್ಲಿ ಹಿಂದುಳಿದ ಜಾತಿಗಳು ಮತ್ತು ದಲಿತರ ಸಂಖ್ಯೆ ಗಣನೀಯವಾಗಿದೆ. ಈ ವರ್ಗದ ಮತದಾರರನ್ನು ಪ್ರಿಯಾಂಕಾ ತನ್ನ ಕಡೆಗೆ ಆಕರ್ಷಿಸಲು ಪ್ರಯತ್ನಿಸುತ್ತಿದ್ದಾರೆ. ಕಬೀರಮಠಕ್ಕೆ ಭೇಟಿ ನೀಡುವ ಮೂಲಕ ಪ್ರಿಯಾಂಕಾ ದೊಡ್ಡ ಸಂದೇಶ ನೀಡಿದ್ದಾರೆ.

46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
23:56ಹಾರ್ಮುಜ್ ಬಿಕ್ಕಟ್ಟಿನ ನಂತರ ಭಾರತದ ಭವಿಷ್ಯವೇನು? ಬಂಗಾರ ₹50,000 ಕುಸಿತ..! ಅಗ್ಗವಾಗುತ್ತಾ ಪೆಟ್ರೋಲ್ ದರ? ಮೋದಿ ಹೊಸ ಲೆಕ್ಕಾಚಾರ!
39:28ಅಯೋಧ್ಯೆ ರಾಮಮಂದಿರ: ಪ್ರಾಜೆಕ್ಟ್ ಚೀಫ್ ನೃಪೇಂದ್ರ ಮಿಶ್ರಾ ಜೊತೆ ಎಕ್ಸ್‌ಕ್ಲೂಸಿವ್ ಸಂದರ್ಶನ
22:49ವಿಧಾನಸಭೆಯಲ್ಲೂ ಸಿಎಂ ವಿಜಯ್ ಪಂಚಿಂಗ್ ಡೈಲಾಗ್, ದ್ರಾವಿಡ ನಾಡಿನಲ್ಲಿ ರಾಜಕೀಯ ರಂಗು ಬದಲು
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
19:59Suvarna Focus: ರುದ್ರಪ್ರಯಾಗದಲ್ಲಿ ನಿಹಾಂಗ್ ಯೋಧರ ರಣಕಹಳೆ; ಮತ್ತೆ ಕಾಡುತ್ತಿದೆ 1984ರ ‘ಆಪರೇಷನ್ ಬ್ಲ್ಯೂ ಸ್ಟಾರ್’ ಕರಾಳ ನೆನಪು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
22:58ಉಗ್ರನಾಗಲು ಪಾಕಿಸ್ತಾನಕ್ಕೆ ತೆರಳಿ ರಿಯಲ್ ಧುರಂಧರ್ ಆದ ಕಾಶ್ಮೀರ ಯುವಕ, ಬೆಚ್ಚಿ ಬೀಳಿಸೋ ಘಟನೆ
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್
Read more