EXCLUSIVE! ಏಕರೂಪ ನಾಗರೀಕ ಸಂಹಿತೆ ಈ ಸಮಯದ ಅಗತ್ಯ: ಉತ್ತರಾಖಂಡ ಸ್ಪೀಕರ್‌ ರಿತು ಖಂಡೂರಿ ಭೂಷಣ್‌!

EXCLUSIVE! ಏಕರೂಪ ನಾಗರೀಕ ಸಂಹಿತೆ ಈ ಸಮಯದ ಅಗತ್ಯ: ಉತ್ತರಾಖಂಡ ಸ್ಪೀಕರ್‌ ರಿತು ಖಂಡೂರಿ ಭೂಷಣ್‌!

Published : Apr 06, 2024, 07:39 PM IST

ಏಕರೂಪ ನಾಗರೀಕ ಸಂಹಿತೆ ಪರವಾಗಿ ಮಾತನಾಡಿರುವ ಉತ್ತರಾಖಂಡದ ಸ್ಪೀಕರ್‌ ರಿತು ಖಂಡೂರಿ ಭೂಷಣ್‌, ಕಾಯ್ದೆ ಈ ಸಮಯದ ಅಗತ್ಯ ಎಂದು ಹೇಳಿದ್ದಾರೆ.

ನವದೆಹಲಿ (ಏ.6): ಉತ್ತರಾಖಂಡ ಸ್ಪೀಕರ್ ರಿತು ಖಂಡೂರಿ ಭೂಷಣ್ ಅವರು ಏಷ್ಯಾನೆಟ್ ನ್ಯೂಸ್‌ಬಲ್‌ನ ಅನೀಶ್ ಕುಮಾರ್ ಜೊತೆಗಿನ ಎಕ್ಸ್‌ಕ್ಲೂಸಿವ್‌ ಸಂದರ್ಶನದಲ್ಲಿ ಮಾತನಾಡಿದ್ದು, ಉತ್ತರಾಖಂಡದಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅನುಷ್ಠಾನವು ಇಂದಿನ ಅಗತ್ಯವಾಗಿದೆ ಮತ್ತು ಮಹಿಳೆಯರು ಮತ್ತು ಸಮಾಜವನ್ನು ಇದು  ಸಶಕ್ತಗೊಳಿಸುತ್ತದೆ ಎಂದಿದ್ದಾರೆ.

ಉತ್ತರಾಖಂಡ ಇತ್ತೀಚೆಗೆ ಸ್ವಾತಂತ್ರ್ಯದ ನಂತರ ಏಕರೂಪ ನಾಗರಿಕ ಸಂಹಿತೆ ಕಾನೂನನ್ನು ಜಾರಿಗೊಳಿಸಿದ ಭಾರತದ ಮೊದಲ ರಾಜ್ಯ ಎನಿಸಿಕೊಂಡಿದೆ. ಏಕರೂಪ ನಾಗರಿಕ ಸಂಹಿತೆ ಮಸೂದೆ 2024 ರ ಅಂಗೀಕಾರ -- ಭಾರತೀಯ ಜನತಾ ಪಕ್ಷ (ಬಿಜೆಪಿ) ಮತ್ತು ಉತ್ತರಾಖಂಡದ ಅದರ ಸರ್ಕಾರದ ದೀರ್ಘಕಾಲದ ಬದ್ಧತೆಯನ್ನು ಪೂರೈಸುವುದಾಗಿದೆ. ರಾಷ್ಟ್ರಪತಿ ದ್ರೌಪದಿ ಮುರ್ಮು ಅವರ ಅನುಮೋದನೆಯೂ ಇದಕ್ಕೆ ಸಿಕ್ಕಿದೆ.

ಲೋಕಸಭೆ ಚುನಾವಣೆ ಪ್ರಕ್ರಿಯೆ ಆರಂಭವಾಗಿದ್ದು, ಏಕರೂಪ ನಾಗರಿಕ ಸಂಹಿತೆ ಇಂದು ದೇಶದ ರಾಜಕೀಯ ಚರ್ಚೆಯ ಕೇಂದ್ರಬಿಂದುವಾಗಿದೆ. ಯುಸಿಸಿ ಹಿಂದೂ ಕೇಂದ್ರಿತ ಹೇರಿಕೆ ಎಂಬ ಟೀಕೆಗಳನ್ನು ತಳ್ಳಿಹಾಕಿದ ಉತ್ತರಾಖಂಡ ವಿಧಾನಸಭೆ ಸ್ಪೀಕರ್ ರಿತು ಖಂಡೂರಿ ಭೂಷಣ್, ಈ ಕಾಯ್ದೆ ಇಂದಿನ ಅಗತ್ಯ ಎಂದು ಹೇಳಿದ್ದಾರೆ.
 

18:27ಒಂದೇ ಒಂದು ಫೋನ್ ಕಾಲ್. ಬದಲಾಯ್ತು ಭಾರತ-ಅಮೆರಿಕ ನಂಟು! ಚೀನಾಕ್ಕೆ ಶಾಕ್, ಭಾರತಕ್ಕೆ ಲಕ್!
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
22:38ನೀನೆ ನನ್ನ ಬೆಳ್ಳಿ ಅನ್ನೋ ದಿನವೂ ಬಂತು ನೋಡಿ: ಬೆಳ್ಳಿ ಬೆಲೆ ಏರಿಕೆಗೆ ಕಾರಣ ಏನು?
18:51ಡಾಲರ್ ಸಾಮ್ರಾಜ್ಯ ಪತನ? ಚಿನ್ನದ ಅಧಿಪತ್ಯ ಶುರು, ಡಾಲರ್ ಕಂಗಾಲು! ಬಂಗಾರ ರಾಶಿ ಹಾಕ್ತಿರೋ ರಿಸರ್ವ್ ಬ್ಯಾಂಕ್‌
21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
21:07ಅಸ್ಸಾಂ ಅಖಾಡದಲ್ಲಿ ಡಿಕೆ–ಪ್ರಿಯಾಂಕ ಹಿಮಾಗ್ನಿ ಯಜ್ಞ! ಕಮಲ ಸಾಮ್ರಾಜ್ಯಕ್ಕೆ ಡೆಡ್ಲಿ ಸವಾಲು
23:42ಭರತ ಭೂಮಿಯ ಮೇಲೆ ಕೋಪಿಸಿಕೊಂಡನಾ ಭಾಸ್ಕರ..? ನೆತ್ತಿ ಸುಡುವ ಸೂರ್ಯ ಬೆಳಕು ಚೆಲ್ಲುತ್ತಿಲ್ಲವೇಕೆ..?
Read more