ಧರ್ಮಶಾಲಾದಲ್ಲಿ ಮೇಘಸ್ಫೋಟ, ನೀರಿನ ರಭಸಕ್ಕೆ ಕೊಚ್ಚಿ ಹೋದ ಕಾರುಗಳು!

ಧರ್ಮಶಾಲಾದಲ್ಲಿ ಮೇಘಸ್ಫೋಟ, ನೀರಿನ ರಭಸಕ್ಕೆ ಕೊಚ್ಚಿ ಹೋದ ಕಾರುಗಳು!

Published : Jul 12, 2021, 02:16 PM ISTUpdated : Jul 12, 2021, 03:08 PM IST

ಉತ್ತರ ಭಾರತದಲ್ಲಿ ಮತ್ತೆ ಪ್ರವಾಹ ಉಂಟಾಗಿದ್ದು, ಅನೇಕ ಜಿಲ್ಲೆಗಳು ಸಂಪೂರ್ಣ ನೀರಿನಿಂದ ಆವೃತವಾಗಿವೆ. ಭಾರತದ ಪ್ರಮುಖ ಪ್ರವಾಸಿ ತಾಣಗಳಿರುವ ಘಟ್ಟ ಪ್ರದೇಶದ ರಾಜ್ಯವಾದ ಹಿಮಾಚಲಪ್ರದೇಶದಲ್ಲಿ  ಕಳೆದ ವಾರದಿಂದ ಭಾರೀ ಮಳೆಯಾಗುತ್ತಿದೆ. ಈ ನಡುವೆ ಧರ್ಮಶಾಲಾದಲ್ಲಿ ಸಂಭವಿಸಿದ ಮೇಘಸ್ಫೋಟದಿಂದ ಪ್ರವಾಹ ನಿರ್ಮಾಣವಾಗಿದ್ದು, ನೀರಿನ ರಭಸಕ್ಕೆ ಮನೆಗಳು, ಕಾರು, ಸೇತುವೆಗಳು ಕೊಚ್ಚಿಹೋಗಿರುವ ವಿಡಿಯೋಗಳು ಭಾರೀ ವೈರಲ್ ಆಗಿವೆ

ಧರ್ಮಶಾಲಾ(ಜು.12): ಉತ್ತರ ಭಾರತದಲ್ಲಿ ಮತ್ತೆ ಪ್ರವಾಹ ಉಂಟಾಗಿದ್ದು, ಅನೇಕ ಜಿಲ್ಲೆಗಳು ಸಂಪೂರ್ಣ ನೀರಿನಿಂದ ಆವೃತವಾಗಿವೆ. ಭಾರತದ ಪ್ರಮುಖ ಪ್ರವಾಸಿ ತಾಣಗಳಿರುವ ಘಟ್ಟ ಪ್ರದೇಶದ ರಾಜ್ಯವಾದ ಹಿಮಾಚಲಪ್ರದೇಶದಲ್ಲಿ  ಕಳೆದ ವಾರದಿಂದ ಭಾರೀ ಮಳೆಯಾಗುತ್ತಿದೆ. ಈ ನಡುವೆ ಧರ್ಮಶಾಲಾದಲ್ಲಿ ಸಂಭವಿಸಿದ ಮೇಘಸ್ಫೋಟದಿಂದ ಪ್ರವಾಹ ನಿರ್ಮಾಣವಾಗಿದ್ದು, ನೀರಿನ ರಭಸಕ್ಕೆ ಮನೆಗಳು, ಕಾರು, ಸೇತುವೆಗಳು ಕೊಚ್ಚಿಹೋಗಿರುವ ವಿಡಿಯೋಗಳು ಭಾರೀ ವೈರಲ್ ಆಗಿವೆ.

ಮಹಾರಾಷ್ಟ್ರ, ಬೆಳಗಾವಿಯಲ್ಲಿ ಭಾರೀ ಮಳೆ, ತೀರ ಪ್ರದೇಶಗಳಲ್ಲಿ ಪ್ರವಾಹಾತಂಕ

ಹಿಮಾಚಲ ಪ್ರದೇಶ ರಾಜ್ಯದ ಧರ್ಮಶಾಲಾ ಬಳಿ ಇರುವ ಭಾಗ್ಸು ನಾಗ್ ಗ್ರಾಮದಲ್ಲಿ ಪ್ರವಾಹದಿಂದ ಹತ್ತಾರು ಕಾರುಗಳು ರಸ್ತೆಯಲ್ಲಿ ಕೊಚ್ಚಿಕೊಂಡು ಹೋಗುತ್ತಿರುವ ವಿಡಿಯೋಗಳು ವೈರಲ್ ಆಗಿವೆ. ಹಾಗೇ, ಶಿಮ್ಲಾದ ರಾಂಪುರ ಪ್ರದೇಶದ ಬಳಿ ಇರುವ ಝಕ್ರಿಯಲ್ಲಿ ರಾಷ್ಟ್ರೀಯ ಹೆದ್ದಾರಿ ಬಂದ್ ಆಗಿದೆ. ಹೈವೇಯಲ್ಲಿ ಕುಸಿದಿರುವ ಮಣ್ಣು, ಬಿದ್ದಿರುವ ಮರಗಳನ್ನು ತೆರವುಗೊಳಿಸಿ, ರಸ್ತೆಯನ್ನು ಸ್ವಚ್ಛಗೊಳಿಸುವ ಕಾರ್ಯ ನಡೆಯುತ್ತಿದೆ.

ಭಾರಿ ಮಳೆಗೆ ಉತ್ತರಖಂಡದಲ್ಲಿ ಪ್ರವಾಹ ಭೀತಿ: ಮುಳುಗಡೆಯಾದ ರಿಷಿಕೇಶ್!

ಎಎನ್​ಐ ವಿಡಿಯೋವೊಂದನ್ನು ಶೇರ್ ಮಾಡಿಕೊಂಡಿದ್ದು, ಹಿಮಾಚಲಪ್ರದೇಶದ ಮಂಝಿ ನದಿ ಉಕ್ಕಿ ಹರಿಯುತ್ತಿದ್ದು, ನದಿ ತೀರದ ಗ್ರಾಮಗಳ ಜನರನ್ನು ಸುರಕ್ಷಿತ ಸ್ಥಳಗಳಿಗೆ ಶಿಫ್ಟ್ ಮಾಡಲಾಗಿದೆ. ಇಂದು ಮಾತ್ರವಲ್ಲದೆ ನಾಳೆ ಕೂಡ ಹಿಮಾಚಲಪ್ರದೇಶದ ಬಹುತೇಕ ಎಲ್ಲ ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.

18:19ಸರ್ಕಾರಿ ನೌಕರರ ಮೇಲೆ ಯೋಗಿ ಕಟ್ಟು ನಿಟ್ಟಿನ ಆಕ್ಷನ್​: ವೇತನ ಬೇಕಿದ್ದವರು ನಿಯಮ ಪಾಲಿಸಿ.. ಏನಿದು ರೂಲ್ಸ್..?
18:27ಒಂದೇ ಒಂದು ಫೋನ್ ಕಾಲ್. ಬದಲಾಯ್ತು ಭಾರತ-ಅಮೆರಿಕ ನಂಟು! ಚೀನಾಕ್ಕೆ ಶಾಕ್, ಭಾರತಕ್ಕೆ ಲಕ್!
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
22:38ನೀನೆ ನನ್ನ ಬೆಳ್ಳಿ ಅನ್ನೋ ದಿನವೂ ಬಂತು ನೋಡಿ: ಬೆಳ್ಳಿ ಬೆಲೆ ಏರಿಕೆಗೆ ಕಾರಣ ಏನು?
18:51ಡಾಲರ್ ಸಾಮ್ರಾಜ್ಯ ಪತನ? ಚಿನ್ನದ ಅಧಿಪತ್ಯ ಶುರು, ಡಾಲರ್ ಕಂಗಾಲು! ಬಂಗಾರ ರಾಶಿ ಹಾಕ್ತಿರೋ ರಿಸರ್ವ್ ಬ್ಯಾಂಕ್‌
21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
21:07ಅಸ್ಸಾಂ ಅಖಾಡದಲ್ಲಿ ಡಿಕೆ–ಪ್ರಿಯಾಂಕ ಹಿಮಾಗ್ನಿ ಯಜ್ಞ! ಕಮಲ ಸಾಮ್ರಾಜ್ಯಕ್ಕೆ ಡೆಡ್ಲಿ ಸವಾಲು