ಧರ್ಮಶಾಲಾದಲ್ಲಿ ಮೇಘಸ್ಫೋಟ, ನೀರಿನ ರಭಸಕ್ಕೆ ಕೊಚ್ಚಿ ಹೋದ ಕಾರುಗಳು!

ಧರ್ಮಶಾಲಾದಲ್ಲಿ ಮೇಘಸ್ಫೋಟ, ನೀರಿನ ರಭಸಕ್ಕೆ ಕೊಚ್ಚಿ ಹೋದ ಕಾರುಗಳು!

Published : Jul 12, 2021, 02:16 PM ISTUpdated : Jul 12, 2021, 03:08 PM IST

ಉತ್ತರ ಭಾರತದಲ್ಲಿ ಮತ್ತೆ ಪ್ರವಾಹ ಉಂಟಾಗಿದ್ದು, ಅನೇಕ ಜಿಲ್ಲೆಗಳು ಸಂಪೂರ್ಣ ನೀರಿನಿಂದ ಆವೃತವಾಗಿವೆ. ಭಾರತದ ಪ್ರಮುಖ ಪ್ರವಾಸಿ ತಾಣಗಳಿರುವ ಘಟ್ಟ ಪ್ರದೇಶದ ರಾಜ್ಯವಾದ ಹಿಮಾಚಲಪ್ರದೇಶದಲ್ಲಿ  ಕಳೆದ ವಾರದಿಂದ ಭಾರೀ ಮಳೆಯಾಗುತ್ತಿದೆ. ಈ ನಡುವೆ ಧರ್ಮಶಾಲಾದಲ್ಲಿ ಸಂಭವಿಸಿದ ಮೇಘಸ್ಫೋಟದಿಂದ ಪ್ರವಾಹ ನಿರ್ಮಾಣವಾಗಿದ್ದು, ನೀರಿನ ರಭಸಕ್ಕೆ ಮನೆಗಳು, ಕಾರು, ಸೇತುವೆಗಳು ಕೊಚ್ಚಿಹೋಗಿರುವ ವಿಡಿಯೋಗಳು ಭಾರೀ ವೈರಲ್ ಆಗಿವೆ

ಧರ್ಮಶಾಲಾ(ಜು.12): ಉತ್ತರ ಭಾರತದಲ್ಲಿ ಮತ್ತೆ ಪ್ರವಾಹ ಉಂಟಾಗಿದ್ದು, ಅನೇಕ ಜಿಲ್ಲೆಗಳು ಸಂಪೂರ್ಣ ನೀರಿನಿಂದ ಆವೃತವಾಗಿವೆ. ಭಾರತದ ಪ್ರಮುಖ ಪ್ರವಾಸಿ ತಾಣಗಳಿರುವ ಘಟ್ಟ ಪ್ರದೇಶದ ರಾಜ್ಯವಾದ ಹಿಮಾಚಲಪ್ರದೇಶದಲ್ಲಿ  ಕಳೆದ ವಾರದಿಂದ ಭಾರೀ ಮಳೆಯಾಗುತ್ತಿದೆ. ಈ ನಡುವೆ ಧರ್ಮಶಾಲಾದಲ್ಲಿ ಸಂಭವಿಸಿದ ಮೇಘಸ್ಫೋಟದಿಂದ ಪ್ರವಾಹ ನಿರ್ಮಾಣವಾಗಿದ್ದು, ನೀರಿನ ರಭಸಕ್ಕೆ ಮನೆಗಳು, ಕಾರು, ಸೇತುವೆಗಳು ಕೊಚ್ಚಿಹೋಗಿರುವ ವಿಡಿಯೋಗಳು ಭಾರೀ ವೈರಲ್ ಆಗಿವೆ.

ಮಹಾರಾಷ್ಟ್ರ, ಬೆಳಗಾವಿಯಲ್ಲಿ ಭಾರೀ ಮಳೆ, ತೀರ ಪ್ರದೇಶಗಳಲ್ಲಿ ಪ್ರವಾಹಾತಂಕ

ಹಿಮಾಚಲ ಪ್ರದೇಶ ರಾಜ್ಯದ ಧರ್ಮಶಾಲಾ ಬಳಿ ಇರುವ ಭಾಗ್ಸು ನಾಗ್ ಗ್ರಾಮದಲ್ಲಿ ಪ್ರವಾಹದಿಂದ ಹತ್ತಾರು ಕಾರುಗಳು ರಸ್ತೆಯಲ್ಲಿ ಕೊಚ್ಚಿಕೊಂಡು ಹೋಗುತ್ತಿರುವ ವಿಡಿಯೋಗಳು ವೈರಲ್ ಆಗಿವೆ. ಹಾಗೇ, ಶಿಮ್ಲಾದ ರಾಂಪುರ ಪ್ರದೇಶದ ಬಳಿ ಇರುವ ಝಕ್ರಿಯಲ್ಲಿ ರಾಷ್ಟ್ರೀಯ ಹೆದ್ದಾರಿ ಬಂದ್ ಆಗಿದೆ. ಹೈವೇಯಲ್ಲಿ ಕುಸಿದಿರುವ ಮಣ್ಣು, ಬಿದ್ದಿರುವ ಮರಗಳನ್ನು ತೆರವುಗೊಳಿಸಿ, ರಸ್ತೆಯನ್ನು ಸ್ವಚ್ಛಗೊಳಿಸುವ ಕಾರ್ಯ ನಡೆಯುತ್ತಿದೆ.

ಭಾರಿ ಮಳೆಗೆ ಉತ್ತರಖಂಡದಲ್ಲಿ ಪ್ರವಾಹ ಭೀತಿ: ಮುಳುಗಡೆಯಾದ ರಿಷಿಕೇಶ್!

ಎಎನ್​ಐ ವಿಡಿಯೋವೊಂದನ್ನು ಶೇರ್ ಮಾಡಿಕೊಂಡಿದ್ದು, ಹಿಮಾಚಲಪ್ರದೇಶದ ಮಂಝಿ ನದಿ ಉಕ್ಕಿ ಹರಿಯುತ್ತಿದ್ದು, ನದಿ ತೀರದ ಗ್ರಾಮಗಳ ಜನರನ್ನು ಸುರಕ್ಷಿತ ಸ್ಥಳಗಳಿಗೆ ಶಿಫ್ಟ್ ಮಾಡಲಾಗಿದೆ. ಇಂದು ಮಾತ್ರವಲ್ಲದೆ ನಾಳೆ ಕೂಡ ಹಿಮಾಚಲಪ್ರದೇಶದ ಬಹುತೇಕ ಎಲ್ಲ ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.

50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
23:56ಹಾರ್ಮುಜ್ ಬಿಕ್ಕಟ್ಟಿನ ನಂತರ ಭಾರತದ ಭವಿಷ್ಯವೇನು? ಬಂಗಾರ ₹50,000 ಕುಸಿತ..! ಅಗ್ಗವಾಗುತ್ತಾ ಪೆಟ್ರೋಲ್ ದರ? ಮೋದಿ ಹೊಸ ಲೆಕ್ಕಾಚಾರ!
39:28ಅಯೋಧ್ಯೆ ರಾಮಮಂದಿರ: ಪ್ರಾಜೆಕ್ಟ್ ಚೀಫ್ ನೃಪೇಂದ್ರ ಮಿಶ್ರಾ ಜೊತೆ ಎಕ್ಸ್‌ಕ್ಲೂಸಿವ್ ಸಂದರ್ಶನ
22:49ವಿಧಾನಸಭೆಯಲ್ಲೂ ಸಿಎಂ ವಿಜಯ್ ಪಂಚಿಂಗ್ ಡೈಲಾಗ್, ದ್ರಾವಿಡ ನಾಡಿನಲ್ಲಿ ರಾಜಕೀಯ ರಂಗು ಬದಲು
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?